ಮಂಗಳೂರು ಮರವೂರಿನಲ್ಲಿ ಸೇತುವೆ ಕುಸಿತ! ಮಂಗಳೂರು- ಏರ್‌ಪೋರ್ಟ್ ರಸ್ತೆ ಬಂದ್!

ಮಂಗಳೂರು: ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ತೆರಳುವ ಮರವೂರು ಸೇತುವೆ ಮಂಗಳವಾರ (ಇಂದು) ಮುಂಜಾನೆ ಸುಮಾರು ಮೂರು ಗಂಟೆಗೆ ಕುಸಿತಗೊಂಡಿದ್ದು, ಸಂಚಾರ ನಿರ್ಬಂಧಿಸಲಾಗಿದೆ. ಮಂಗಳೂರು-ಬಜಪೆ-ಕಟೀಲು ಸಂಪರ್ಕ ರಸ್ತೆ ಇದಾಗಿದ್ದು, ಪಲ್ಗುಣಿ ನದಿಗೆ ಅಡ್ಡವಾಗಿ ನಿರ್ಮಿಸಲಾಗಿದೆ.

ಬಜಪೆಯಿಂದ ಮಂಗಳೂರು ಕಡೆಗೆ ಬರುವಾಗ ಸೇತುವೆಯ ಮೊದಲ ಅಂಕಣ ಸುಮಾರು ಮೂರು ಅಡಿ ಕೆಳಗೆ ಕುಸಿದು ನಿಂತಿದೆ. ಕರಾವಳಿಯಲ್ಲಿ ಮೂರು ದಿನದಿಂದ ನಿರಂತರವಾಗಿ ಮಳೆ ಸುರಿಯುತ್ತಿದ್ದು, ಮೇಲಿನ‌ ಡ್ಯಾಮ್‌ನಿಂದ ಒಂದೇ ಮಗ್ಗುಲಲ್ಲಿ ನೀರು ಹರಿದು ಬರುತ್ತಿತ್ತು.

ಮಂಗಳೂರು ನಗರದಿಂದ ವಿಮಾನ ನಿಲ್ದಾಣ ಬಜಪೆ, ಕಿನ್ನಿಗೋಳಿ, ಕಟೀಲು, ನೆಲ್ಲಿತೀರ್ಥ, ಅದ್ಯಪಾಡಿಗೆ ತೆರಳುವ ಪ್ರಮುಖ ರಸ್ತೆ ಇದಾಗಿದೆ. 

3 ವರ್ಷದಲ್ಲಿ ಕುಸಿದು ಬಿದ್ದ ಎರಡನೇ ಸೇತುವೆ!
2018ಜೂ.26ರಂದು ಬಂಟ್ಬಾಳ ತಾಲೂಕಿನ ಮುಲ್ಲರಪಟ್ನದಲ್ಲಿ ಮಂಗಳೂರು-ಸೋರ್ನಾಡು ಸಂಪರ್ಕಿಸುವ ರಸ್ತೆ ಕುಸಿದು ಬಿದ್ದಿತ್ತು. ಇದೀಗ ಮೂರೇ ವರ್ಷದ ಅಂತರದಲ್ಲಿ ಮತ್ತೊಂದು ಬೃಹತ್ ಸೇತುವೆಗೆ ಹಾನಿಯಾಗಿದೆ. 


ಹಲವು ವರ್ಷಗಳಿಂದ ಕರಾವಳಿ ಭಾಗದಲ್ಲಿ ನಡೆಯುತ್ತಿರುವ ಮರಳು ಗಾರಿಕೆ ದಂಧೆಯೇ ಸೇತುವೆ ಕುಸಿತಕ್ಕೆ ಕಾರಣವೆನ್ನಲಾಗುತ್ತಿದೆ. ಸೇತುವೆ ಕೆಳಭಾಗದಲ್ಲೇ ಮರಳು ತೆಗೆಯುತ್ತಿದ್ದ ಕಾರಣ ಪಿಲ್ಲರುಗಳು ದುರ್ಬಲವಾಗಿ‌ ಮೂಲರಪಟ್ನ‌ ಸೇತುವೆ ಕುಸಿದು ಬಿದ್ದಿತ್ತು. ಈಗ ಅದೇ ಸರದಿ ಮರವೂರು ಸೇತುವೆಯದ್ದಾಗಿದೆ. ಸ್ಥಳಕ್ಕೆ ಕಾವೂರು-ಬಜಪೆ ಪೊಲೀಸರು ತೆರಳಿದ್ದು, ಈ ರಸ್ತೆಯಲ್ಲಿ ಜನಸಂಚಾರ-ವಾಹನ ಸಂಚಾರ ಸಂಪೂರ್ಣ ನಿಷೇಧಿಸಲಾಗಿದೆ. 

ಮಂಗಳೂರು-ಬಜಪೆ-ಕಟೀಲು ಸಂಪರ್ಕ ರಸ್ತೆ ಇದಾಗಿದ್ದು, ಪಲ್ಗುಣಿ ನದಿಗೆ ಅಡ್ಡವಾಗಿ ನಿರ್ಮಿಸಲಾಗಿದೆ. ಮರವೂರು ಸೇತುವೆ ಬಿರುಕಿನಿಂದ ಸಂಚಾರಕ್ಕೆ ಎರಡು ಪರ್ಯಾಯ ಮಾರ್ಗಗಳನ್ನು ಗುರುತಿಸಲಾಗಿದೆ. ಕಾವೂರಿನಿಂದ ಮರವೂರು ಸೇತುವೆಯ ಇನ್ನೊಂದು ಬದಿಗೆ ಹೋಗಲು ಬಯಸುವವರು ಕಾವೂರು-ಕೂಳೂರು-ಕೆಬಿಎಸ್ ಜೋಕಟ್ಟೆ-ಪೋರ್ಕೊಡಿ-ಬಜ್ಪೆ ಮಾರ್ಗ ಅಥವಾ ಪಚ್ಚನಾಡಿ-ವಾಮಂಜೂರು-ಗುರುಪುರ-ಕೈಕಂಬ-ಬಜ್ಪೆ ಮಾರ್ಗವನ್ನು ಬಳಸಬಹುದಾಗಿದೆ.

Spread the love
  • Related Posts

    ಪಹಲ್ಗಾಮ್ ಭಯೋತ್ಪಾದಕ ದಾಳಿಗೆ ಪೂರಕವಾಗಿ ಅಟ್ಟಾರಿ ಗಡಿ ಮುಚ್ಚುವಿಕೆ, ಸಿಂಧೂ ಜಲ ಒಪ್ಪಂದಕ್ಕೆ ತಡೆ ಸೇರಿದಂತೆ ಕೇಂದ್ರ ಸರ್ಕಾರದಿಂದ 5 ಪ್ರಮುಖ ನಿರ್ಧಾರ

    ಹೊಸದಿಲ್ಲಿ: ಪಹಲ್ಗಾಮ್ ಭಯೋತ್ಪಾದಕ ದಾಳಿಯ ಕುರಿತು ಬುಧವಾರ ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ಭದ್ರತಾ ಸಂಪುಟ ಸಮಿತಿಯ (ಸಿಸಿಎಸ್) ಉನ್ನತ ಮಟ್ಟದ ಸಭೆ ನಡೆಯಿತು. ಅಟ್ಟಾರಿ ಗಡಿ ಮುಚ್ಚುವಿಕೆ, ಸಿಂಧೂ ಜಲ ಒಪ್ಪಂದಕ್ಕೆ ತಡೆ ಸೇರಿದಂತೆ 5 ಪ್ರಮುಖ ನಿರ್ಧಾರದೊಂದಿಗೆ ಪಹಲ್ಗಾಮ್…

    Spread the love

    ಬೆಳ್ತಂಗಡಿ : ಉಜಿರೆಯಲ್ಲಿ ರಾಮೋತ್ಸವ ಕಾರ್ಯಕ್ರಮ ಹಿನ್ನಲೆ ಕಾರ್ಯಕ್ರಮಕ್ಕೆ ಬರುತ್ತಿದ್ದ ಪುನೀತ್ ಕೆರೆಹಳ್ಳಿಯನ್ನು ತಡೆದ ಪೊಲೀಸರು!!!

    ಬೆಳ್ತಂಗಡಿ : ಉಜಿರೆ ಕೃಷ್ಣಾನುಗ್ರಹದ ಸಭಾಭವನದಲ್ಲಿ ವಿಶ್ವ ಹಿಂದೂ ಪರಿಷತ್ ಬೆಳ್ತಂಗಡಿ ಪ್ರಖಂಡ ಏ.19 ರಂದು ಸಂಜೆ ಆಯೋಜಿಸಲಾಗಿದ್ದ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ಚಕ್ರವರ್ತಿ ಸೂಲಿಬೆಲೆ ಆಗಮಿತಿ ಭಾಷಣ ಮಾಡಲಿದ್ದಾರೆ. ಈ ಕಾರ್ಯಕ್ರಮ ವೀಕ್ಷಿಸಲು ಹಿಂದೂ ಗೋ ರಕ್ಷಕ ಪುನೀತ್ ಕೆರೆಹಳ್ಳಿ…

    Spread the love

    You Missed

    ಪಹಲ್ಗಾಮ್ ಭಯೋತ್ಪಾದಕ ದಾಳಿಗೆ ಪೂರಕವಾಗಿ ಅಟ್ಟಾರಿ ಗಡಿ ಮುಚ್ಚುವಿಕೆ, ಸಿಂಧೂ ಜಲ ಒಪ್ಪಂದಕ್ಕೆ ತಡೆ ಸೇರಿದಂತೆ ಕೇಂದ್ರ ಸರ್ಕಾರದಿಂದ 5 ಪ್ರಮುಖ ನಿರ್ಧಾರ

    • By admin
    • April 23, 2025
    • 107 views
    ಪಹಲ್ಗಾಮ್ ಭಯೋತ್ಪಾದಕ ದಾಳಿಗೆ ಪೂರಕವಾಗಿ ಅಟ್ಟಾರಿ ಗಡಿ ಮುಚ್ಚುವಿಕೆ, ಸಿಂಧೂ ಜಲ ಒಪ್ಪಂದಕ್ಕೆ ತಡೆ ಸೇರಿದಂತೆ ಕೇಂದ್ರ ಸರ್ಕಾರದಿಂದ 5 ಪ್ರಮುಖ ನಿರ್ಧಾರ

    ಟೀಕೆಗಳು ಸಾಯುತ್ತದೆ ನಾವು ಮಾಡೋ ಕೆಲಸಗಳು ಶಾಶ್ವತವಾಗಿ ಉಳಿಯುತ್ತದೆ: ಡಿ.ಕೆ.ಶಿ

    • By admin
    • April 20, 2025
    • 67 views
    ಟೀಕೆಗಳು ಸಾಯುತ್ತದೆ ನಾವು ಮಾಡೋ ಕೆಲಸಗಳು ಶಾಶ್ವತವಾಗಿ ಉಳಿಯುತ್ತದೆ: ಡಿ.ಕೆ.ಶಿ

    ಬೆಳ್ತಂಗಡಿ : ಉಜಿರೆಯಲ್ಲಿ ರಾಮೋತ್ಸವ ಕಾರ್ಯಕ್ರಮ ಹಿನ್ನಲೆ ಕಾರ್ಯಕ್ರಮಕ್ಕೆ ಬರುತ್ತಿದ್ದ ಪುನೀತ್ ಕೆರೆಹಳ್ಳಿಯನ್ನು ತಡೆದ ಪೊಲೀಸರು!!!

    • By admin
    • April 19, 2025
    • 197 views
    ಬೆಳ್ತಂಗಡಿ : ಉಜಿರೆಯಲ್ಲಿ ರಾಮೋತ್ಸವ ಕಾರ್ಯಕ್ರಮ ಹಿನ್ನಲೆ ಕಾರ್ಯಕ್ರಮಕ್ಕೆ ಬರುತ್ತಿದ್ದ ಪುನೀತ್ ಕೆರೆಹಳ್ಳಿಯನ್ನು ತಡೆದ ಪೊಲೀಸರು!!!

    ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಕಾಮಗಾರಿ ನಡೆಯುತ್ತಿರುವ ಚರಂಡಿಗೆ ಬಿದ್ದ ಆಟೋ, ಚಾಲಕ ಪವಾಡ ಸದೃಶ ಪಾರು

    • By admin
    • April 18, 2025
    • 199 views
    ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಕಾಮಗಾರಿ ನಡೆಯುತ್ತಿರುವ ಚರಂಡಿಗೆ ಬಿದ್ದ ಆಟೋ, ಚಾಲಕ ಪವಾಡ ಸದೃಶ ಪಾರು

    ಮಂಗಳೂರಿನ ಹಳೇ ಬಂದರಿನಿಂದ ಲಕ್ಷದೀಪಕ್ಕೆ ಹೈ ಸ್ಪೀಡ್ ಫೇರೀ ಪ್ರಾಯೋಗಿಕ ಸಂಚಾರ ಪುನರಾರಂಭ

    • By admin
    • April 9, 2025
    • 101 views
    ಮಂಗಳೂರಿನ ಹಳೇ ಬಂದರಿನಿಂದ ಲಕ್ಷದೀಪಕ್ಕೆ ಹೈ ಸ್ಪೀಡ್ ಫೇರೀ ಪ್ರಾಯೋಗಿಕ ಸಂಚಾರ ಪುನರಾರಂಭ

    ಪಿಯುಸಿ ಫಲಿತಾಂಶ ಪ್ರಕಟ ಉಡುಪಿಗೆ ಮೊದಲ ಸ್ಥಾನ

    • By admin
    • April 8, 2025
    • 120 views
    ಪಿಯುಸಿ ಫಲಿತಾಂಶ ಪ್ರಕಟ ಉಡುಪಿಗೆ ಮೊದಲ ಸ್ಥಾನ