![](https://kalanirnayanews.com/wp-content/uploads/2021/03/IMG-20210317-WA0054-1.jpg)
ಮಂಗಳೂರು: ಜಿಲ್ಲಾ ಪೊಲೀಸ್ ಇಲಾಖೆ ಯ ಸಿಬ್ಬಂದಿಗಳ ವಾರ್ಷಿಕ ಕ್ರೀಡಾಕೂಟ ಇತ್ತಿಚೆಗೆ ಮಂಗಳೂರು ಪೊಲೀಸ್ ಕ್ರೀಡಾಂಗಣದಲ್ಲಿ ನಡೆಯಿತು.
![](https://kalanirnayanews.com/wp-content/uploads/2021/03/IMG-20210317-WA0053-1024x509.jpg)
ವಿವಿಧ ಆಟೋಟಗಳಲ್ಲಿ ಪುರುಷರ ವಿಭಾಗದ ಚಾಂಪಿಯನ್ ಆಗಿ ಜಿಲ್ಲಾ ಪೊಲೀಸ್ ನ ರಾಧಕೃಷ್ಣ ಗೌಡ, ಮಹಿಳಾ ವಿಭಾಗದಲ್ಲಿ ವನೀತಾ ಅವರು ಪ್ರಶಸ್ತಿ ಪಡೆದರು. ತಂಡ ಪ್ರಶಸ್ತಿ: ಡಿ.ಎ.ಆರ್/ಡಿ.ಪಿ.ಓ ತಂಡದ ಪಾಲಾಯಿತು.
![](https://103.180.45.14/kalanirnaya1/wp-content/uploads/2021/03/IMG_20210317_160434-1.jpg)
![](https://103.180.45.14/kalanirnaya1/wp-content/uploads/2021/03/IMG_20210317_160412-1.jpg)
ಸಮಾರೋಪ ಸಮಾರಂಭದಲ್ಲಿ ಪಶ್ಚಿಮ ವಲಯ ಪೊಲೀಸ್ ಮಹಾನಿರೀಕ್ಷಕರಾದ ದೇವಜ್ಯೋತಿ ರೇ ಮತ್ತು ಜಿಲ್ಲಾ ಪೊಲೀಸ್ ಅಧೀಕ್ಷಕರಾದ ಶ್ರೀ ಬಿ.ಎಂ.ಲಕ್ಷ್ಮೀಪ್ರಸಾದ್ ಅವರು ವಿಜೇತರಿಗೆ ಬಹುಮಾನ ವಿತರಿಸಿದರು.
![](https://kalanirnayanews.com/wp-content/uploads/2021/03/IMG-20210317-WA0056-1024x576.jpg)
ಡಿ.ಎ.ಆರ್ ಘಟಕದ ಪೊಲೀಸ್ ನಿರೀಕ್ಷಕರಾದ ನಾರಾಯಣ ಪೂಜಾರಿ, ಜಿಲ್ಲೆಯ ಪೊಲೀಸ್ ಉಪಾಧಿಕ್ಷಕರುಗಳು, ನಿರೀಕ್ಷಕರುಗಳು, ಉಪ ನಿರೀಕ್ಷಕರುಗಳು ಉಪಸ್ಥಿತರಿದ್ದರು.
![](https://kalanirnayanews.com/wp-content/uploads/2021/03/IMG-20210317-WA0051-1024x768.jpg)
ಸಮಾರೋಪ ಸಭೆಯ ನಂತರ ಮನರಂಜನೆಗಾಗಿ ಪೊಲೀಸ್ ಸಿಬ್ಬಂದಿಗಳಿಂದ ಕೊರೊನಾ ವಾರಿಯರ್ಸ್, ಕರ್ನಾಟಕ ವೈಭವ, ಶ್ವೇತಾ ಕುಮಾರ ಛದ್ಮವೇಶ ನಡೆಯಿತು.
![](https://kalanirnayanews.com/wp-content/uploads/2021/03/IMG-20210317-WA0052-768x1024.jpg)
ಡಿ.ಎ.ಆರ್ ತಂಡವು ಪ್ರಸ್ತುತ ಪಡಿಸಿದ ಕೊರೊನಾ ವಾರಿಯರ್ಸ್ ನ ಕೊರೊನಾಕ್ಕೆ ಧರ್ಮವಿಲ್ಲ ಎಂಬ ಉತ್ತಮ ಸಂದೇಶ ನೀಡಿದ ಛದ್ಮವೇಷ ಸೇರಿದವರ ವಿಶೇಷ ಪ್ರಶಂಸೆಗೆ ಪಾತ್ರವಾಯಿತು.