ಕಡಲತಡಿ ಮಂಗಳೂರಿನಲ್ಲಿ ಅಕ್ರಮವಾಗಿ ವಾಸವಾಗಿದ್ದ 38 ಶ್ರೀಲಂಕಾ ಪ್ರಜೆಗಳ ಬಂಧನ!

ಮಂಗಳೂರು: ನಗರದಲ್ಲಿ ಅಕ್ರಮವಾಗಿ ವಾಸವಿದ್ದ 38 ಮಂದಿ ಶ್ರೀಲಂಕಾದ ಪ್ರಜೆಗಳನ್ನು ಪೊಲೀಸರು ಬಂಧಿಸಿದ್ದಾರೆ. ಈ ಬಗ್ಗೆ ಮಂಗಳೂರು ಪೊಲೀಸ್ ಕಮೀಷನರ್ ಶಶಿಕುಮಾರ್ ಮಾಹಿತಿ ನೀಡಿದ್ದಾರೆ.

ಶ್ರೀಲಂಕಾದಿಂದ ತಮಿಳುನಾಡಿನ ತೂತುಕುಡಿಗೆ ಬಂದ ಇವರೆಲ್ಲಾ ಅಲ್ಲಿಂದ ಕೆನಡಾಗೆ ಹೋಗುವವರಿದ್ದರು. ಆದರೆ ತಮಿಳುನಾಡು ಚುನಾವಣೆ ಹಿನ್ನೆಲೆ ಅವರನ್ನ ಮಂಗಳೂರಿಗೆ ತಂದು ಬಿಡಲಾಗಿತ್ತು.ಅಲ್ಲಿ ಚುನಾವಣೆ ಹಿನ್ನೆಲೆ ತಪಾಸಣೆ ಕಾರ್ಯ ಚುರುಕಾಗಿದ್ದ ಹಿನ್ನೆಲೆ ಮಂಗಳೂರಿಗೆ ಎಂಟ್ರಿ ಕೊಟ್ಟಿದ್ದರು. ಮಂಗಳೂರಿಗೆ ಬಂದು ಇಲ್ಲಿನ ಲಾಡ್ಜ್ ಗಳಲ್ಲಿ ತಿಂಗಳಿನಿಂದ ವಾಸ್ತವ್ಯ ಹೂಡಿದ್ದರು. ಸದ್ಯ 38 ಜನರನ್ನ ಪೊಲೀಸರು ವಶಕ್ಕೆ ಪಡೆದಿದ್ದು, ಉಳಿದವರ ಹುಡುಕಾಟ ಮುಂದುವರೆದಿದೆ

ಇನ್ನು ಮಂಗಳೂರಿನಲ್ಲಿ ಇವರಿಗೆ ಆಶ್ರಯ ಕೊಡಲು ನೆರವು ನೀಡಿದವರ ಬಗ್ಗೆಯೂ ತನಿಖೆ ಆರಂಭವಾಗಿದೆ. ಬೇರೆ ದೇಶದ ವ್ಯಕ್ತಿಗಳು ಮಂಗಳೂರಿಗೆ ಆಗಮಿಸಿ ಅಕ್ರಮ ಆಶ್ರಯ ಪಡೆದಿರುವ ಬಗ್ಗೆ ತನಿಖೆ ಮುಂದುವರೆದಿದೆ. ಇವರಿಗೆ ಆಶ್ರಯ ಕೊಟ್ಟ ಕಾರಣ ಮತ್ತು ನೆರವು ನೀಡಿದ ಕಾರಣ ಇಲ್ಲಿನ ಆರು ಜನರನ್ನ ವಶಕ್ಕೆ ಪಡೆಯಲಾಗಿದೆ. ಅವರಲ್ಲಿ ಕೆಲವರು ಇಂಗ್ಲೀಷ್ ಮಾತನಾಡ್ತಿದಾರೆ, ಬಹುತೇಕ ತಮಿಳು ‌ಮಾತನಾಡುವವರಿದ್ದಾರೆ. ಶ್ರೀಲಂಕಾದಿಂದ ಮಾರ್ಚ್ 17ಕ್ಕೆ ಹೊರಟು ಇವರು ತಮಿಳುನಾಡಿಗೆ ಬಂದಿದ್ದಾರೆ. ಇವರಲ್ಲಿ ಬಹುತೇಕ ಮಂದಿ ಶ್ರೀಲಂಕಾದ ಉತ್ತರ ಭಾಗದವರು ಎನ್ನಲಾಗಿದೆ.

ಮಂಗಳೂರಿನ ಎರಡು ಲಾಡ್ಜ್ ಮತ್ತು ಎರಡು ಮನೆಗಳಲ್ಲಿ ಇವರು ವಾಸ್ತವ್ತ ಹೂಡಿದ್ದರು. ಇನ್ನು ಕೆನಡಾದಲ್ಲಿ ಉದ್ಯೋಗ ನೀಡುವ ಭರವಸೆ ನೀಡಿದ ಏಜೆಂಟರೊಬ್ಬರು ಅವರನ್ನು ಭಾರತಕ್ಕೆ ಕರೆ ತಂದರು ಮತ್ತು ಅವರಿಂದ 5 ಲಕ್ಷ ರೂ.ಗಳಿಂದ 10 ಲಕ್ಷ ರೂ. ಪಡೆದುಕೊಂಡಿದ್ದರು ಎಂದು ಹೇಳಲಾಗುತ್ತಿದೆ.

ತಮಿಳುನಾಡು ಗುಪ್ತಚರ ಬ್ಯೂರೋದಿಂದ ಸುಳಿವು ಪಡೆದು, ಪೊಲೀಸ್ ಆಯುಕ್ತ ಶಶಿ ಕುಮಾರ್ ಮತ್ತು ಪೊಲೀಸ್ ಉಪ ಆಯುಕ್ತ (ಕಾನೂನು ಮತ್ತು ಸುವ್ಯವಸ್ಥೆ) ಹರಿರಾಮ್ ಶಂಕರ್ ನೇತೃತ್ವದ ತಂಡ ತನಿಖೆ ನಡೆಸಿ ಆರೋಪಿಗಳನ್ನು ಬಂಧಿಸಿದೆ. ಈ ಸಂಬಂಧ ಪಾಂಡೇಶ್ವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Spread the love
  • Related Posts

    ಕ್ಯಾನ್ಸರ್ ಪೀಡಿತ ರೋಗಿಗಳ ಪರವಾಗಿ ಸದನದಲ್ಲಿ ಧ್ವನಿಯಾದ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ

    ಬೆಂಗಳೂರು: ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಇಂದು ಸದನದಲ್ಲಿ ಕ್ಯಾನ್ಸರ್ ರೋಗಿಗಳಿಗೆ ಅನುಕೂಲ ಆಗುವಂತೆ ಕೆಲವು ನಿಯಮಾವಳಿಗಳನ್ನು ತರುವಂತೆ ಆಗ್ರಹಿಸಿದರು ಕೇಂದ್ರ ಸರ್ಕಾರವು ಬಡವರಿಗೋಸ್ಕರ ಯೋಜಿಸಿರುವ ಆಯುಷ್ಮಾನ್ ಭಾರತ್ ಯೋಜನೆಯಡಿಯಲ್ಲಿ ಕ್ಯಾನ್ಸರ್ ರೋಗಿಗಳಿಗೆ ಚಿಕಿತ್ಸೆಯನ್ನು ಪಡೆಯಲು ಮಂಗಳೂರಿನಲ್ಲಿರುವ ಪ್ರಸಿದ್ಧ ಕ್ಯಾನ್ಸರ್ ಆಸ್ಪತ್ರೆ…

    Spread the love

    ಮಳೆಗಾಳಿ ಲೆಕ್ಕಿಸದೆ ತಡರಾತ್ರಿಯಲ್ಲೂ ಕಾರ್ಯಪ್ರವೃತ್ತರಾದ ಮೇಸ್ಕಾಂ ಸಿಬ್ಬಂದಿ

    ಬೆಳ್ತಂಗಡಿ: ಮೆಸ್ಕಾಂ ಎಂದರೆ ದೂರುವರೇ ಹೆಚ್ಚು ದಿನಬೇಳಗಾದ್ರೆ ಮನೆ ಮನೆಗಳಲ್ಲಿ ನಿರಂತರ ಬೆಳಕು ಉರಿಯುತ್ತಲೆ ಇರಬೇಕು ಇಲ್ಲದಿದ್ದರೆ ಮನೆ ಮಾಲೀಕನಿಂದ ಹಿಡಿದು ಕುಟುಂಬದ ಎಲ್ಲಾ ಸದಸ್ಯರು ಹಿಡಿಶಾಪ ಹಾಕೋದು ಮಾತ್ರ ಮೆಸ್ಕಾಂ ಇಲಾಖೆ ಅಥವಾ ಅಧಿಕಾರಿಗಳು ಹಾಗೂ ಸಿಬ್ಬಂದಿಗಳಿಗೆ ಆದರೆ ಯಾವತ್ತೂ…

    Spread the love

    You Missed

    ಕ್ಯಾನ್ಸರ್ ಪೀಡಿತ ರೋಗಿಗಳ ಪರವಾಗಿ ಸದನದಲ್ಲಿ ಧ್ವನಿಯಾದ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ

    • By admin
    • July 23, 2024
    • 56 views
    ಕ್ಯಾನ್ಸರ್ ಪೀಡಿತ ರೋಗಿಗಳ ಪರವಾಗಿ ಸದನದಲ್ಲಿ ಧ್ವನಿಯಾದ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ

    ಮಳೆಗಾಳಿ ಲೆಕ್ಕಿಸದೆ ತಡರಾತ್ರಿಯಲ್ಲೂ ಕಾರ್ಯಪ್ರವೃತ್ತರಾದ ಮೇಸ್ಕಾಂ ಸಿಬ್ಬಂದಿ

    • By admin
    • July 22, 2024
    • 147 views
    ಮಳೆಗಾಳಿ ಲೆಕ್ಕಿಸದೆ ತಡರಾತ್ರಿಯಲ್ಲೂ ಕಾರ್ಯಪ್ರವೃತ್ತರಾದ ಮೇಸ್ಕಾಂ ಸಿಬ್ಬಂದಿ

    ಶಿರೂರು ಗುಡ್ಡ ಕುಸಿತ ಸ್ಥಳಕ್ಕೆ ಭೇಟಿ ನೀಡಿದ ಮುಖ್ಯಮಂತ್ರಿ ಸಿದ್ದರಾಮಯ್ಯರವರಿಂದ ರಕ್ಷಣಾ ಕಾರ್ಯಾಚರಣೆಯ ಪರಿಶೀಲನೆ

    • By admin
    • July 21, 2024
    • 65 views
    ಶಿರೂರು ಗುಡ್ಡ ಕುಸಿತ  ಸ್ಥಳಕ್ಕೆ ಭೇಟಿ ನೀಡಿದ ಮುಖ್ಯಮಂತ್ರಿ ಸಿದ್ದರಾಮಯ್ಯರವರಿಂದ  ರಕ್ಷಣಾ ಕಾರ್ಯಾಚರಣೆಯ ಪರಿಶೀಲನೆ

    ಮಾಣಿಯಲ್ಲಿ ಶ್ರೀಲಲಿತೆ ನಾಗರಿಕ ಸೇವಾ ಕೇಂದ್ರ ಉದ್ಘಾಟನೆ

    • By admin
    • July 21, 2024
    • 15 views
    ಮಾಣಿಯಲ್ಲಿ ಶ್ರೀಲಲಿತೆ ನಾಗರಿಕ ಸೇವಾ ಕೇಂದ್ರ ಉದ್ಘಾಟನೆ

    ಉಜಿರೆಯ ಕಿರಣ್ ಅಗ್ರೋಟೆಕ್ ನಿಂದ ಸೇವಾಭಾರತಿಗೆ ಸೂಪರ್ ಗೋಲ್ಡ್ ಸ್ಪ್ರೇಯರ್(ಫಾಗ್) ಯಂತ್ರದ ಕೊಡುಗೆ

    • By admin
    • July 21, 2024
    • 18 views
    ಉಜಿರೆಯ ಕಿರಣ್ ಅಗ್ರೋಟೆಕ್ ನಿಂದ ಸೇವಾಭಾರತಿಗೆ ಸೂಪರ್ ಗೋಲ್ಡ್ ಸ್ಪ್ರೇಯರ್(ಫಾಗ್) ಯಂತ್ರದ ಕೊಡುಗೆ

    ಮಂಗಳ ಲಕ್ಷದ್ವೀಪ ಸೂಪರ್ ಫಾಸ್ಟ್ ಎಕ್ಸ್ ಪ್ರೆಸ್ ರೈಲಿನಲ್ಲಿ ಸುರಿದ ನೀರು ಪ್ರಯಾಣಿಕರು ಕಂಗಾಲು

    • By admin
    • July 21, 2024
    • 148 views
    ಮಂಗಳ ಲಕ್ಷದ್ವೀಪ ಸೂಪರ್ ಫಾಸ್ಟ್ ಎಕ್ಸ್ ಪ್ರೆಸ್ ರೈಲಿನಲ್ಲಿ ಸುರಿದ ನೀರು ಪ್ರಯಾಣಿಕರು ಕಂಗಾಲು