ಮಂಗಳೂರು ಲೇಡಿಗೋಷನ್‌ನಲ್ಲಿ ಅಕ್ಸಿಜನ್ ಘಟಕ ಸ್ಥಾಪನೆಗೆ ಕ್ರೆಡಾಯ್ ನೆರವು


ಮಂಗಳೂರು: ಮಂಗಳೂರಿನ ಲೇಡಿಗೋಷನ್ ಆಸ್ಪತ್ರೆಯಲ್ಲಿ ಸ್ಥಾಪನೆ ಮಾಡಲು ಉದ್ದೇಶಿಸಿರುವ ಸುಮಾರು 84 ಲಕ್ಷ ರೂ. ವೆಚ್ಚದ ಆಕ್ಸಿಜನ್ ಘಟಕದ ಪೂರ್ಣ ವೆಚ್ಚವನ್ನು ಮಂಗಳೂರು ಕ್ರೆಡಾಯ್ ನೇತೃತ್ವದಲ್ಲಿ ಭರಿಸಲು ಉದ್ದೇಶಿಸಿದ್ದು, ಇಂದು 41.86 ಲಕ್ಷ ರೂ. ಮೊತ್ತದ ಚೆಕ್ ಅನ್ನು ಜಿಲ್ಲಾಡಳಿತಕ್ಕೆ ಹಸ್ತಾಂತರಿಸಲಾಯಿತು.
ಗುರುವಾರ ಸಂಜೆ ಜಿಲ್ಲಾಧಿಕಾರಿ ಕಚೇರಿಯಲ್ಲಿ ಘಟಕದ ಶೇ. 50ರಷ್ಟು ಮೊತ್ತದ ಚೆಕ್ ಅನ್ನು ಮುಂಗಡವಾಗಿ ಕ್ರೆಡಾಯ್ ಅಧ್ಯಕ್ಷ ಪುಷ್ಪರಾಜ್ ಜೈನ್ ಅವರು ಜಿಲ್ಲಾಧಿಕಾರಿಗಳಿಗೆ ಹಸ್ತಾಂತರಿಸಿದರು.

ಬಿಜೆಪಿ ರಾಜ್ಯಾಧ್ಯಕ್ಷ, ಸಂಸದ ನಳಿನ್ ಕುಮಾರ್ ಕಟೀಲ್, ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಮಂಗಳೂರು ದಕ್ಷಿಣ ಶಾಸಕ ವೇದವ್ಯಾಸ ಕಾಮತ್, ಮಂಗಳೂರು ಉತ್ತರ ಶಾಸಕ ಡಾ. ವೈ ಭರತ್ ಶೆಟ್ಟಿ, ಮೇಯರ್ ಪ್ರೇಮಾನಂದ ಶೆಟ್ಟಿ, ಮೂಡಾ ಅಧ್ಯಕ್ಷ ರವಿಶಂಕರ್ ಮಿಜಾರ್, ಬಿಜೆಪಿ ಜಿಲ್ಲಾಧ್ಯಕ್ಷ ಸುದರ್ಶನ್ ಅವರ ಸಮಕ್ಷಮದಲ್ಲಿ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕುಮಾರ್ ಅವರಿಗೆ ಚೆಕ್ ಹಸ್ತಾಂತರಿಸಲಾಯಿತು.

ಕೋವಿಡ್ 19 ವೈರಸ್‌ನಿಂದ ದೇಶದಲ್ಲಿ ಅಕ್ಸಿಜನ್ ಅಭಾವ ಸೃಷ್ಟಿಯಾಗಿದೆ. ಹಲವು ಮಂದಿಯ ಸಾವಿಗೂ ಅಕ್ಸಿಜನ್ ಕೊರತೆ ಕಾರಣವಾಗಿದೆ. ಈ ಹಿನ್ನೆಲೆಯಲ್ಲಿ ಅಕ್ಸಿಜನ್ ಘಟಕ ತೆರೆಯಲು ಸರಕಾರವೂ ಯೋಜನೆ ಹಾಕಿಕೊಂಡಿದೆ. ಈ ಹಿನ್ನೆಲೆಯಲ್ಲಿ ಲೇಡಿಗೋಷನ್ ಆಸ್ಪತ್ರೆಯಲ್ಲಿ ಹಾಕಲು ಉದ್ದೇಶಿಸಿದ ಅಕ್ಸಿಜನ್ ಘಟಕದ ಮೊತ್ತದ ಜವಾಬ್ದಾರಿಯನ್ನು ಕ್ರೆಡಾಯ್ ಮಂಗಳೂರು ಘಟಕ ತೆಗೆದುಕೊಂಡಿದೆ. ಶೇ.50ರಷ್ಟು ಮೊತ್ತವನ್ನು ಇಂದು ಪಾವತಿಸಿದರೆ, ಬಾಕಿ ಉಳಿದ ಶೇ. 50ರಷ್ಟು ಮೊತ್ತವನ್ನು ತಿಂಗಳಿನೊಳಗೆ ಹಸ್ತಾಂತರಿಸಲಾಗುವುದು ಎಂದು ಪುಷ್ಪರಾಜ್ ಜೈನ್‌ಹೇಳಿದರು.

ಕ್ರೆಡಾಯ್ ನೇತೃತ್ವದ ಈ ಯೋಜನೆಗೆ ಕೆನರಾ ಚೇಂಬರ್ ಆಫ್ ಕಾಮರ್ಸ್ 15 ಲಕ್ಷ ರೂ., ಮಂಗಳೂರಿನ ನಿರ್ಮಾಣಕಾರರ ಅಸೋಸಿಯೇಷನ್ 15 ಲಕ್ಷ ರೂ., ಅಸೋಸಿಯೇಷನ್ ಆಫ್ ಕನ್‌ಸಲ್ಟಿಂಗ್ ಸಿವಿಲ್ ಎಂಜಿನಿಯರ‍್ಸ್ ಮಂಗಳೂರು ಘಟಕ ವತಿಯಿಂದ 8 ಲಕ್ಷ ರೂ. ನೀಡಿದೆ. ಬಾಕಿ ಉಳಿದ ಮೊತ್ತವನ್ನು ಕ್ರೆಡಾಯ್ ಭರಿಸಲಿದೆ ಎಂದು ಪುಷ್ಪರಾಜ್ ತಿಳಿಸಿದರು.

ಮೇ. ಸುಮ್ಮಿತ್ಸ್ ಮೆಡಿಕಲ್ ಅಕ್ಸಿಜನ್ ಸಿಸ್ಟಮ್ ಸುಮಾರು 84 ಲಕ್ಷ ರೂ. ವೆಚ್ಚದಲ್ಲಿ ಲೇಡಿಗೋಷನ್‌ನಲ್ಲಿ ಅಕ್ಸಿಜನ್ ಘಟಕ ಸ್ಥಾಪಿಸಲಿದೆ.

ಕ್ರೆಡೈ ಮಂಗಳೂರು ವತಿಯಿಂದ ಕೊರೊನಾ ಸಂಕಷ್ಟದಲ್ಲಿರುವವರಿಗೆ ಸ್ಪಂದಿಸುವ ನಿಟ್ಟಿನಲ್ಲಿ ಕೋವಿಡ್ ಸಹಾಯ ಕೇಂದ್ರವನ್ನು ಆರಂಭಿಸಿರುವುದನ್ನು ಇಲ್ಲಿ ನೆನಪಿಸಿಕೊಳ್ಳಬಹುದಾಗಿದೆ.

ಈ ಸಂದರ್ಭದಲ್ಲಿ ಮೀನುಗಾರಿಕ ಅಭಿವೃದ್ಧಿ ನಿಗಮದ ಅಧ್ಯಕ್ಷ ನಿತಿನ್ ಕುಮಾರ್, ಪಾಲಿಕೆ ಆಯುಕ್ತ ಅಕ್ಷಯ್, ಕ್ರೆಡಾಯ್‌ನ ಕಾರ‍್ಯದರ್ಶಿ ಪ್ರಶಾಂತ್ ಸನಿಲ್, ಕೋಶಾಧಿಕಾರಿ ಗುರುಮೂರ್ತಿ, ಕಾರ‍್ಯಕಾರಿ ಸಮಿತಿ ಸದಸ್ಯ ಜಿತೇಂದ್ರ ಕೊಟ್ಟಾರಿ, ಎಂಜಿನಿಯರ್ಸ್ ಅಸೋಸಿಯೇಷನ್‌ನ ಅಧ್ಯಕ್ಷ ಅರುಣ ಪ್ರಭಾ, ಕಾರ‍್ಯದರ್ಶಿ ಅನಿಲ್ ಬಾಳಿಗಾ, ಕೆನರಾ ವಾಣಿಜ್ಯ ಮಂಡಳಿ ಅಧ್ಯಕ್ಷ ಐಸಾಕ್ ವಾಸ್, ಕಾರ‍್ಯದರ್ಶಿ ಶಶಿಧರ ಪೈ, ನಿರ್ಮಾಣಗಾರರ ಅಸೋಸಿಯೇಶನ್‌ನ ಅಧ್ಯಕ್ಷ ಮಹಾಬಲ ಕೊಟ್ಟಾರಿ ಉಪಸ್ಥಿತರಿದ್ದರು.

Spread the love
  • Related Posts

    “ಜೀವನದ ಮೌಲ್ಯ ವರ್ಷಗಳಲ್ಲಿ ಅಲ್ಲ, ಬದುಕಿನ ರೀತಿಯಲ್ಲಿ” – ಡಾ. ಪದ್ಮಪ್ರಸಾದ ಅಜಿಲ

    ಬೆಳ್ತಂಗಡಿ: ತಾಲೂಕಿನ ಶ್ರೀ ಮಂಜುನಾಥ ಸ್ವಾಮಿ ಕಲಾಭವನದಲ್ಲಿ ತಾ.ಪಂ ನಿವೃತ್ತ ಅಧೀಕ್ಷಕ ಪ್ರಶಾಂತ್ ಬಳಂಜ ಅವರಿಂದ ಆಯೋಜಿಸಲಾದ ವಿಶಿಷ್ಟ ಕೃತಜ್ಞತಾ ಸಮಾರಂಭವು ಅರ್ಥಪೂರ್ಣವಾಗಿ ನಡೆಯಿತು. ತಮ್ಮ ದೀರ್ಘ ವೃತ್ತಿ ಜೀವನದಲ್ಲಿ ಸಹಕರಿಸಿದ ಎಲ್ಲರಿಗೂ ಕೃತಜ್ಞತೆ ಸಲ್ಲಿಸುವ ಉದ್ದೇಶದಿಂದ ಈ ಕಾರ್ಯಕ್ರಮವನ್ನು ವಿಭಿನ್ನವಾಗಿ…

    Spread the love

    ತೋಟಕ್ಕೆ ಅಕ್ರಮ ಪ್ರವೇಶಿಸಿ ಅಡಿಕೆ ಗಿಡ ನಾಶ ಯತ್ನ; ಮಹಿಳೆ ಮೇಲೆ ದೌರ್ಜನ್ಯ – ವಕೀಲೆಯೊಬ್ಬರು ₹50 ಸಾವಿರ ವಸೂಲಿ ಆರೋಪ: ಬೆಳ್ತಂಗಡಿ ಠಾಣೆಯಲ್ಲಿ ಐವರ ವಿರುದ್ಧ ಪ್ರಕರಣ ದಾಖಲು

    ಬೆಳ್ತಂಗಡಿ : ತೋಟಕ್ಕೆ ಅಕ್ರಮವಾಗಿ ಪ್ರವೇಶಿಸಿ ಅಡಿಕೆ ಗಿಡಗಳನ್ನು ನಾಶಪಡಿಸಲು ಯತ್ನಿಸಿದನ್ನು ಪ್ರಶ್ನಿಸಿದ್ದಕ್ಕೆಮಾನ ಭಂಗಕ್ಕೆ ಯತ್ನಿಸಿ ಹಲ್ಲೆ ನಡೆಸಿದ್ದಾರೆ ಎಂಬ ಆರೋಪ ಬೆಳ್ತಂಗಡಿ ತಾಲೂಕಿನ ಗರ್ಡಾಡಿ ಎಂಬಲ್ಲಿ ಕೇಳಿ ಬಂದಿದೆ. ಪ್ರಕರಣದ ಸಾರಾಂಶ: ದೂರುದಾರೆ ಮಹಿಳೆಗೆ ಗರ್ಡಾಡಿ ಗ್ರಾಮದಲ್ಲಿ ಗಂಡನ ಹೆಸರಿನಲ್ಲಿ…

    Spread the love

    You Missed

    “ಜೀವನದ ಮೌಲ್ಯ ವರ್ಷಗಳಲ್ಲಿ ಅಲ್ಲ, ಬದುಕಿನ ರೀತಿಯಲ್ಲಿ” – ಡಾ. ಪದ್ಮಪ್ರಸಾದ ಅಜಿಲ

    • By admin
    • April 5, 2026
    • 34 views
    “ಜೀವನದ ಮೌಲ್ಯ ವರ್ಷಗಳಲ್ಲಿ ಅಲ್ಲ, ಬದುಕಿನ ರೀತಿಯಲ್ಲಿ” – ಡಾ. ಪದ್ಮಪ್ರಸಾದ ಅಜಿಲ

    ತೋಟಕ್ಕೆ ಅಕ್ರಮ ಪ್ರವೇಶಿಸಿ ಅಡಿಕೆ ಗಿಡ ನಾಶ ಯತ್ನ; ಮಹಿಳೆ ಮೇಲೆ ದೌರ್ಜನ್ಯ – ವಕೀಲೆಯೊಬ್ಬರು ₹50 ಸಾವಿರ ವಸೂಲಿ ಆರೋಪ: ಬೆಳ್ತಂಗಡಿ ಠಾಣೆಯಲ್ಲಿ ಐವರ ವಿರುದ್ಧ ಪ್ರಕರಣ ದಾಖಲು

    • By admin
    • April 4, 2026
    • 62 views
    ತೋಟಕ್ಕೆ ಅಕ್ರಮ ಪ್ರವೇಶಿಸಿ ಅಡಿಕೆ ಗಿಡ ನಾಶ ಯತ್ನ; ಮಹಿಳೆ ಮೇಲೆ ದೌರ್ಜನ್ಯ – ವಕೀಲೆಯೊಬ್ಬರು ₹50 ಸಾವಿರ ವಸೂಲಿ ಆರೋಪ: ಬೆಳ್ತಂಗಡಿ ಠಾಣೆಯಲ್ಲಿ ಐವರ ವಿರುದ್ಧ ಪ್ರಕರಣ ದಾಖಲು

    ಉಜಿರೆಯ ಹೃದಯ ಭಾಗದಲ್ಲಿ ಎಂಪಿರಿಯಾ ಕಾರ್ಪೋರೇಷನ್ ಇದರ ಜಿ-ಮಾಲ್ ಉದ್ಘಾಟನೆಗೆ ಸಜ್ಜು

    • By admin
    • April 4, 2026
    • 231 views
    ಉಜಿರೆಯ ಹೃದಯ ಭಾಗದಲ್ಲಿ ಎಂಪಿರಿಯಾ ಕಾರ್ಪೋರೇಷನ್ ಇದರ ಜಿ-ಮಾಲ್ ಉದ್ಘಾಟನೆಗೆ ಸಜ್ಜು

    ಸುವರ್ಣ ನಿಲಯ ಬಳಂಜದಲ್ಲಿ “ಶ್ರೀ ದೇವಿ ಮಹಾತ್ಮೆ” ಯಕ್ಷಗಾನ

    • By admin
    • April 4, 2026
    • 46 views
    ಸುವರ್ಣ ನಿಲಯ ಬಳಂಜದಲ್ಲಿ “ಶ್ರೀ ದೇವಿ ಮಹಾತ್ಮೆ” ಯಕ್ಷಗಾನ

    ಕಡಬ ಸಮೀಪ ಅಕ್ರಮ ಗೋಸಾಗಾಟ ತಡೆ: 19 ಗೋವುಗಳ ರಕ್ಷಣೆ

    • By admin
    • April 3, 2026
    • 41 views
    ಕಡಬ ಸಮೀಪ ಅಕ್ರಮ ಗೋಸಾಗಾಟ ತಡೆ: 19 ಗೋವುಗಳ ರಕ್ಷಣೆ

    ಮಧ್ಯಪ್ರಾಚ್ಯ ಯುದ್ಧದ ಪರಿಣಾಮ: ಇವಿ ವಾಹನಗಳತ್ತ ರಾಜ್ಯದ ಜನರ ಓಟ, ಒಂದೇ ತಿಂಗಳಲ್ಲಿ 29 ಸಾವಿರ ಮಾರಾಟ!!!

    • By admin
    • April 3, 2026
    • 34 views
    ಮಧ್ಯಪ್ರಾಚ್ಯ ಯುದ್ಧದ ಪರಿಣಾಮ: ಇವಿ ವಾಹನಗಳತ್ತ ರಾಜ್ಯದ ಜನರ ಓಟ, ಒಂದೇ ತಿಂಗಳಲ್ಲಿ 29 ಸಾವಿರ ಮಾರಾಟ!!!