ಮಂಗಳೂರು ಲೇಡಿಗೋಷನ್‌ನಲ್ಲಿ ಅಕ್ಸಿಜನ್ ಘಟಕ ಸ್ಥಾಪನೆಗೆ ಕ್ರೆಡಾಯ್ ನೆರವು


ಮಂಗಳೂರು: ಮಂಗಳೂರಿನ ಲೇಡಿಗೋಷನ್ ಆಸ್ಪತ್ರೆಯಲ್ಲಿ ಸ್ಥಾಪನೆ ಮಾಡಲು ಉದ್ದೇಶಿಸಿರುವ ಸುಮಾರು 84 ಲಕ್ಷ ರೂ. ವೆಚ್ಚದ ಆಕ್ಸಿಜನ್ ಘಟಕದ ಪೂರ್ಣ ವೆಚ್ಚವನ್ನು ಮಂಗಳೂರು ಕ್ರೆಡಾಯ್ ನೇತೃತ್ವದಲ್ಲಿ ಭರಿಸಲು ಉದ್ದೇಶಿಸಿದ್ದು, ಇಂದು 41.86 ಲಕ್ಷ ರೂ. ಮೊತ್ತದ ಚೆಕ್ ಅನ್ನು ಜಿಲ್ಲಾಡಳಿತಕ್ಕೆ ಹಸ್ತಾಂತರಿಸಲಾಯಿತು.
ಗುರುವಾರ ಸಂಜೆ ಜಿಲ್ಲಾಧಿಕಾರಿ ಕಚೇರಿಯಲ್ಲಿ ಘಟಕದ ಶೇ. 50ರಷ್ಟು ಮೊತ್ತದ ಚೆಕ್ ಅನ್ನು ಮುಂಗಡವಾಗಿ ಕ್ರೆಡಾಯ್ ಅಧ್ಯಕ್ಷ ಪುಷ್ಪರಾಜ್ ಜೈನ್ ಅವರು ಜಿಲ್ಲಾಧಿಕಾರಿಗಳಿಗೆ ಹಸ್ತಾಂತರಿಸಿದರು.

ಬಿಜೆಪಿ ರಾಜ್ಯಾಧ್ಯಕ್ಷ, ಸಂಸದ ನಳಿನ್ ಕುಮಾರ್ ಕಟೀಲ್, ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಮಂಗಳೂರು ದಕ್ಷಿಣ ಶಾಸಕ ವೇದವ್ಯಾಸ ಕಾಮತ್, ಮಂಗಳೂರು ಉತ್ತರ ಶಾಸಕ ಡಾ. ವೈ ಭರತ್ ಶೆಟ್ಟಿ, ಮೇಯರ್ ಪ್ರೇಮಾನಂದ ಶೆಟ್ಟಿ, ಮೂಡಾ ಅಧ್ಯಕ್ಷ ರವಿಶಂಕರ್ ಮಿಜಾರ್, ಬಿಜೆಪಿ ಜಿಲ್ಲಾಧ್ಯಕ್ಷ ಸುದರ್ಶನ್ ಅವರ ಸಮಕ್ಷಮದಲ್ಲಿ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕುಮಾರ್ ಅವರಿಗೆ ಚೆಕ್ ಹಸ್ತಾಂತರಿಸಲಾಯಿತು.

ಕೋವಿಡ್ 19 ವೈರಸ್‌ನಿಂದ ದೇಶದಲ್ಲಿ ಅಕ್ಸಿಜನ್ ಅಭಾವ ಸೃಷ್ಟಿಯಾಗಿದೆ. ಹಲವು ಮಂದಿಯ ಸಾವಿಗೂ ಅಕ್ಸಿಜನ್ ಕೊರತೆ ಕಾರಣವಾಗಿದೆ. ಈ ಹಿನ್ನೆಲೆಯಲ್ಲಿ ಅಕ್ಸಿಜನ್ ಘಟಕ ತೆರೆಯಲು ಸರಕಾರವೂ ಯೋಜನೆ ಹಾಕಿಕೊಂಡಿದೆ. ಈ ಹಿನ್ನೆಲೆಯಲ್ಲಿ ಲೇಡಿಗೋಷನ್ ಆಸ್ಪತ್ರೆಯಲ್ಲಿ ಹಾಕಲು ಉದ್ದೇಶಿಸಿದ ಅಕ್ಸಿಜನ್ ಘಟಕದ ಮೊತ್ತದ ಜವಾಬ್ದಾರಿಯನ್ನು ಕ್ರೆಡಾಯ್ ಮಂಗಳೂರು ಘಟಕ ತೆಗೆದುಕೊಂಡಿದೆ. ಶೇ.50ರಷ್ಟು ಮೊತ್ತವನ್ನು ಇಂದು ಪಾವತಿಸಿದರೆ, ಬಾಕಿ ಉಳಿದ ಶೇ. 50ರಷ್ಟು ಮೊತ್ತವನ್ನು ತಿಂಗಳಿನೊಳಗೆ ಹಸ್ತಾಂತರಿಸಲಾಗುವುದು ಎಂದು ಪುಷ್ಪರಾಜ್ ಜೈನ್‌ಹೇಳಿದರು.

ಕ್ರೆಡಾಯ್ ನೇತೃತ್ವದ ಈ ಯೋಜನೆಗೆ ಕೆನರಾ ಚೇಂಬರ್ ಆಫ್ ಕಾಮರ್ಸ್ 15 ಲಕ್ಷ ರೂ., ಮಂಗಳೂರಿನ ನಿರ್ಮಾಣಕಾರರ ಅಸೋಸಿಯೇಷನ್ 15 ಲಕ್ಷ ರೂ., ಅಸೋಸಿಯೇಷನ್ ಆಫ್ ಕನ್‌ಸಲ್ಟಿಂಗ್ ಸಿವಿಲ್ ಎಂಜಿನಿಯರ‍್ಸ್ ಮಂಗಳೂರು ಘಟಕ ವತಿಯಿಂದ 8 ಲಕ್ಷ ರೂ. ನೀಡಿದೆ. ಬಾಕಿ ಉಳಿದ ಮೊತ್ತವನ್ನು ಕ್ರೆಡಾಯ್ ಭರಿಸಲಿದೆ ಎಂದು ಪುಷ್ಪರಾಜ್ ತಿಳಿಸಿದರು.

ಮೇ. ಸುಮ್ಮಿತ್ಸ್ ಮೆಡಿಕಲ್ ಅಕ್ಸಿಜನ್ ಸಿಸ್ಟಮ್ ಸುಮಾರು 84 ಲಕ್ಷ ರೂ. ವೆಚ್ಚದಲ್ಲಿ ಲೇಡಿಗೋಷನ್‌ನಲ್ಲಿ ಅಕ್ಸಿಜನ್ ಘಟಕ ಸ್ಥಾಪಿಸಲಿದೆ.

ಕ್ರೆಡೈ ಮಂಗಳೂರು ವತಿಯಿಂದ ಕೊರೊನಾ ಸಂಕಷ್ಟದಲ್ಲಿರುವವರಿಗೆ ಸ್ಪಂದಿಸುವ ನಿಟ್ಟಿನಲ್ಲಿ ಕೋವಿಡ್ ಸಹಾಯ ಕೇಂದ್ರವನ್ನು ಆರಂಭಿಸಿರುವುದನ್ನು ಇಲ್ಲಿ ನೆನಪಿಸಿಕೊಳ್ಳಬಹುದಾಗಿದೆ.

ಈ ಸಂದರ್ಭದಲ್ಲಿ ಮೀನುಗಾರಿಕ ಅಭಿವೃದ್ಧಿ ನಿಗಮದ ಅಧ್ಯಕ್ಷ ನಿತಿನ್ ಕುಮಾರ್, ಪಾಲಿಕೆ ಆಯುಕ್ತ ಅಕ್ಷಯ್, ಕ್ರೆಡಾಯ್‌ನ ಕಾರ‍್ಯದರ್ಶಿ ಪ್ರಶಾಂತ್ ಸನಿಲ್, ಕೋಶಾಧಿಕಾರಿ ಗುರುಮೂರ್ತಿ, ಕಾರ‍್ಯಕಾರಿ ಸಮಿತಿ ಸದಸ್ಯ ಜಿತೇಂದ್ರ ಕೊಟ್ಟಾರಿ, ಎಂಜಿನಿಯರ್ಸ್ ಅಸೋಸಿಯೇಷನ್‌ನ ಅಧ್ಯಕ್ಷ ಅರುಣ ಪ್ರಭಾ, ಕಾರ‍್ಯದರ್ಶಿ ಅನಿಲ್ ಬಾಳಿಗಾ, ಕೆನರಾ ವಾಣಿಜ್ಯ ಮಂಡಳಿ ಅಧ್ಯಕ್ಷ ಐಸಾಕ್ ವಾಸ್, ಕಾರ‍್ಯದರ್ಶಿ ಶಶಿಧರ ಪೈ, ನಿರ್ಮಾಣಗಾರರ ಅಸೋಸಿಯೇಶನ್‌ನ ಅಧ್ಯಕ್ಷ ಮಹಾಬಲ ಕೊಟ್ಟಾರಿ ಉಪಸ್ಥಿತರಿದ್ದರು.

Spread the love
  • Related Posts

    ಧರ್ಮಸ್ಥಳದ ಶೌರ್ಯ ಪಡೆಗೆ NDRF ತರಬೇತಿ: ವಿಪತ್ತು ನಿರ್ವಹಣೆಯಲ್ಲಿ ಸಮಾಜಸೇವೆಗೆ ಸಜ್ಜು, ವಿಪತ್ತು ನಿರ್ವಹಣೆಯಲ್ಲಿ ಶೌರ್ಯ ತಂಡಗಳ ಸೇವೆ ಶ್ಲಾಘನೀಯ: ಉಪವಿಭಾಗಾಧಿಕಾರಿ ಹುಲ್ಲುಮನಿ ತಿಮ್ಮಣ್ಣ

    ಸಕಲೇಶಪುರ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್, ಸಕಲೇಶಪುರ ಹಾಗೂ ಜನಜಾಗೃತಿ ಪ್ರಾದೇಶಿಕ ವಿಭಾಗ, ಬೆಳ್ತಂಗಡಿ ಇವರ ಸಂಯುಕ್ತ ಆಶ್ರಯದಲ್ಲಿ ಸಕಲೇಶಪುರ ತಾಲೂಕಿನ ಶೌರ್ಯ ಶ್ರೀ ಧರ್ಮಸ್ಥಳ ವಿಪತ್ತು ನಿರ್ವಹಣಾ ಘಟಕದ ಸ್ವಯಂಸೇವಕರಿಗಾಗಿ ಒಂದು ದಿನದ ವಿಶೇಷ ತರಬೇತಿ…

    Spread the love

    ವಿದ್ಯುತ್ ಕಣ್ಣಾಮುಚ್ಚಾಲೆ! ⚡ಮಿತ್ತಬಾಗಿಲು–ಮಲವಂತಿಗೆ–ಕಡಿರುದ್ಯಾವರದಲ್ಲಿ ವಿದ್ಯುತ್ ಸಮಸ್ಯೆ: ಗ್ರಾಮಸ್ಥರ ಆಕ್ರೋಶ, ಮೆಸ್ಕಾಂ ವಿರುದ್ಧ ಅಸಮಾಧಾನ

    ಬೆಳ್ತಂಗಡಿ: ತಾಲೂಕಿನ ಪ್ರಮುಖ ಧಾರ್ಮಿಕ ಹಾಗೂ ಪ್ರವಾಸಿ ತಾಣಗಳನ್ನು ಹೊಂದಿರುವ ಮಿತ್ತಬಾಗಿಲು, ಮಲವಂತಿಗೆ ಮತ್ತು ಕಡಿರುದ್ಯಾವರ ಗ್ರಾಮಗಳಲ್ಲಿ ಪದೇಪದೇ ವಿದ್ಯುತ್ ವ್ಯತ್ಯಯ ಉಂಟಾಗುತ್ತಿರುವುದು ಗ್ರಾಮಸ್ಥರ ತೀವ್ರ ಅಸಮಾಧಾನಕ್ಕೆ ಕಾರಣವಾಗಿದೆ. ಕಾಜೂರು ದರ್ಗಾ ಶರೀಫ್, ಶ್ರೀ ಕ್ಷೇತ್ರ ಕೊಲ್ಲಿ ದುರ್ಗಾಪರಮೇಶ್ವರಿ ದೇವಸ್ಥಾನ ಸೇರಿದಂತೆ…

    Spread the love

    You Missed

    ಧರ್ಮಸ್ಥಳದ ಶೌರ್ಯ ಪಡೆಗೆ NDRF ತರಬೇತಿ: ವಿಪತ್ತು ನಿರ್ವಹಣೆಯಲ್ಲಿ ಸಮಾಜಸೇವೆಗೆ ಸಜ್ಜು, ವಿಪತ್ತು ನಿರ್ವಹಣೆಯಲ್ಲಿ ಶೌರ್ಯ ತಂಡಗಳ ಸೇವೆ ಶ್ಲಾಘನೀಯ: ಉಪವಿಭಾಗಾಧಿಕಾರಿ ಹುಲ್ಲುಮನಿ ತಿಮ್ಮಣ್ಣ

    • By admin
    • August 24, 2026
    • 5 views
    ಧರ್ಮಸ್ಥಳದ ಶೌರ್ಯ ಪಡೆಗೆ NDRF ತರಬೇತಿ: ವಿಪತ್ತು ನಿರ್ವಹಣೆಯಲ್ಲಿ ಸಮಾಜಸೇವೆಗೆ ಸಜ್ಜು, ವಿಪತ್ತು ನಿರ್ವಹಣೆಯಲ್ಲಿ ಶೌರ್ಯ ತಂಡಗಳ ಸೇವೆ ಶ್ಲಾಘನೀಯ: ಉಪವಿಭಾಗಾಧಿಕಾರಿ ಹುಲ್ಲುಮನಿ ತಿಮ್ಮಣ್ಣ

    ವಿದ್ಯುತ್ ಕಣ್ಣಾಮುಚ್ಚಾಲೆ! ⚡ಮಿತ್ತಬಾಗಿಲು–ಮಲವಂತಿಗೆ–ಕಡಿರುದ್ಯಾವರದಲ್ಲಿ ವಿದ್ಯುತ್ ಸಮಸ್ಯೆ: ಗ್ರಾಮಸ್ಥರ ಆಕ್ರೋಶ, ಮೆಸ್ಕಾಂ ವಿರುದ್ಧ ಅಸಮಾಧಾನ

    • By admin
    • August 24, 2026
    • 9 views
    ವಿದ್ಯುತ್ ಕಣ್ಣಾಮುಚ್ಚಾಲೆ! ⚡ಮಿತ್ತಬಾಗಿಲು–ಮಲವಂತಿಗೆ–ಕಡಿರುದ್ಯಾವರದಲ್ಲಿ ವಿದ್ಯುತ್ ಸಮಸ್ಯೆ: ಗ್ರಾಮಸ್ಥರ ಆಕ್ರೋಶ, ಮೆಸ್ಕಾಂ ವಿರುದ್ಧ ಅಸಮಾಧಾನ

    ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಕೆಸರ್‌ದ ಕಂಡೊಡೊಂಜಿ ದಿನ’ ಮುಂದಿನ ಪೀಳಿಗೆಗೆ ತುಳುನಾಡಿನ ಮೂಲ ಪರಂಪರೆ ಉಳಿಸುವ & ಪರಿಚಯಿಸುವ ಪ್ರಯತ್ನ: ಅನಿಲ್ ಕುಮಾರ್ ಎಸ್.ಎಸ್

    • By admin
    • August 23, 2026
    • 10 views
    ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಕೆಸರ್‌ದ ಕಂಡೊಡೊಂಜಿ ದಿನ’ ಮುಂದಿನ ಪೀಳಿಗೆಗೆ ತುಳುನಾಡಿನ ಮೂಲ ಪರಂಪರೆ ಉಳಿಸುವ & ಪರಿಚಯಿಸುವ ಪ್ರಯತ್ನ: ಅನಿಲ್ ಕುಮಾರ್ ಎಸ್.ಎಸ್

    ಅಪ್ರತಿಮ ದೇಶಪ್ರೇಮದ ಬಾಂಜಾರುಮಲೆ, ಕಾಡಿನ ಕತ್ತಲಲ್ಲೂ ಬೆಳಗಿದ ಸ್ವಾತಂತ್ರ್ಯದ ಜ್ಯೋತಿ — ಮತದಾನದಲ್ಲೂ ಶೇ.100, ದೇಶಭಕ್ತಿಯಲ್ಲೂ ಶೇ.100!

    • By admin
    • August 20, 2026
    • 9 views
    ಅಪ್ರತಿಮ ದೇಶಪ್ರೇಮದ ಬಾಂಜಾರುಮಲೆ, ಕಾಡಿನ ಕತ್ತಲಲ್ಲೂ ಬೆಳಗಿದ ಸ್ವಾತಂತ್ರ್ಯದ ಜ್ಯೋತಿ — ಮತದಾನದಲ್ಲೂ ಶೇ.100, ದೇಶಭಕ್ತಿಯಲ್ಲೂ ಶೇ.100!

    ಓ ಮಾನವರೇ, ಯಾವಾಗ ಬರುವುದೋ ಒಳ್ಳೆಯ ಬುದ್ಧಿ! “ಪ್ರಕೃತಿಯ ಮಡಿಲಲ್ಲಿ ಸ್ವಚ್ಛಂದವಾಗಿ ಬದುಕುವ ವಾನರಗಳಿಗೆ ಕುರುಕುರೆ ಏಕೆ?”

    • By admin
    • August 20, 2026
    • 15 views
    ಓ ಮಾನವರೇ, ಯಾವಾಗ ಬರುವುದೋ ಒಳ್ಳೆಯ ಬುದ್ಧಿ! “ಪ್ರಕೃತಿಯ ಮಡಿಲಲ್ಲಿ ಸ್ವಚ್ಛಂದವಾಗಿ ಬದುಕುವ ವಾನರಗಳಿಗೆ ಕುರುಕುರೆ ಏಕೆ?”

    ನಾಗರಪಂಚಮಿ ಪ್ರಯುಕ್ತ ಸೋಮವಾರ ದ.ಕ. ಜಿಲ್ಲೆಗೆ ಸಾರ್ವತ್ರಿಕ ರಜೆ

    • By admin
    • August 16, 2026
    • 11 views
    ನಾಗರಪಂಚಮಿ ಪ್ರಯುಕ್ತ ಸೋಮವಾರ ದ.ಕ. ಜಿಲ್ಲೆಗೆ ಸಾರ್ವತ್ರಿಕ ರಜೆ