ಮಂಗಳೂರು ಲೇಡಿಗೋಷನ್‌ನಲ್ಲಿ ಅಕ್ಸಿಜನ್ ಘಟಕ ಸ್ಥಾಪನೆಗೆ ಕ್ರೆಡಾಯ್ ನೆರವು


ಮಂಗಳೂರು: ಮಂಗಳೂರಿನ ಲೇಡಿಗೋಷನ್ ಆಸ್ಪತ್ರೆಯಲ್ಲಿ ಸ್ಥಾಪನೆ ಮಾಡಲು ಉದ್ದೇಶಿಸಿರುವ ಸುಮಾರು 84 ಲಕ್ಷ ರೂ. ವೆಚ್ಚದ ಆಕ್ಸಿಜನ್ ಘಟಕದ ಪೂರ್ಣ ವೆಚ್ಚವನ್ನು ಮಂಗಳೂರು ಕ್ರೆಡಾಯ್ ನೇತೃತ್ವದಲ್ಲಿ ಭರಿಸಲು ಉದ್ದೇಶಿಸಿದ್ದು, ಇಂದು 41.86 ಲಕ್ಷ ರೂ. ಮೊತ್ತದ ಚೆಕ್ ಅನ್ನು ಜಿಲ್ಲಾಡಳಿತಕ್ಕೆ ಹಸ್ತಾಂತರಿಸಲಾಯಿತು.
ಗುರುವಾರ ಸಂಜೆ ಜಿಲ್ಲಾಧಿಕಾರಿ ಕಚೇರಿಯಲ್ಲಿ ಘಟಕದ ಶೇ. 50ರಷ್ಟು ಮೊತ್ತದ ಚೆಕ್ ಅನ್ನು ಮುಂಗಡವಾಗಿ ಕ್ರೆಡಾಯ್ ಅಧ್ಯಕ್ಷ ಪುಷ್ಪರಾಜ್ ಜೈನ್ ಅವರು ಜಿಲ್ಲಾಧಿಕಾರಿಗಳಿಗೆ ಹಸ್ತಾಂತರಿಸಿದರು.

ಬಿಜೆಪಿ ರಾಜ್ಯಾಧ್ಯಕ್ಷ, ಸಂಸದ ನಳಿನ್ ಕುಮಾರ್ ಕಟೀಲ್, ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಮಂಗಳೂರು ದಕ್ಷಿಣ ಶಾಸಕ ವೇದವ್ಯಾಸ ಕಾಮತ್, ಮಂಗಳೂರು ಉತ್ತರ ಶಾಸಕ ಡಾ. ವೈ ಭರತ್ ಶೆಟ್ಟಿ, ಮೇಯರ್ ಪ್ರೇಮಾನಂದ ಶೆಟ್ಟಿ, ಮೂಡಾ ಅಧ್ಯಕ್ಷ ರವಿಶಂಕರ್ ಮಿಜಾರ್, ಬಿಜೆಪಿ ಜಿಲ್ಲಾಧ್ಯಕ್ಷ ಸುದರ್ಶನ್ ಅವರ ಸಮಕ್ಷಮದಲ್ಲಿ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕುಮಾರ್ ಅವರಿಗೆ ಚೆಕ್ ಹಸ್ತಾಂತರಿಸಲಾಯಿತು.

ಕೋವಿಡ್ 19 ವೈರಸ್‌ನಿಂದ ದೇಶದಲ್ಲಿ ಅಕ್ಸಿಜನ್ ಅಭಾವ ಸೃಷ್ಟಿಯಾಗಿದೆ. ಹಲವು ಮಂದಿಯ ಸಾವಿಗೂ ಅಕ್ಸಿಜನ್ ಕೊರತೆ ಕಾರಣವಾಗಿದೆ. ಈ ಹಿನ್ನೆಲೆಯಲ್ಲಿ ಅಕ್ಸಿಜನ್ ಘಟಕ ತೆರೆಯಲು ಸರಕಾರವೂ ಯೋಜನೆ ಹಾಕಿಕೊಂಡಿದೆ. ಈ ಹಿನ್ನೆಲೆಯಲ್ಲಿ ಲೇಡಿಗೋಷನ್ ಆಸ್ಪತ್ರೆಯಲ್ಲಿ ಹಾಕಲು ಉದ್ದೇಶಿಸಿದ ಅಕ್ಸಿಜನ್ ಘಟಕದ ಮೊತ್ತದ ಜವಾಬ್ದಾರಿಯನ್ನು ಕ್ರೆಡಾಯ್ ಮಂಗಳೂರು ಘಟಕ ತೆಗೆದುಕೊಂಡಿದೆ. ಶೇ.50ರಷ್ಟು ಮೊತ್ತವನ್ನು ಇಂದು ಪಾವತಿಸಿದರೆ, ಬಾಕಿ ಉಳಿದ ಶೇ. 50ರಷ್ಟು ಮೊತ್ತವನ್ನು ತಿಂಗಳಿನೊಳಗೆ ಹಸ್ತಾಂತರಿಸಲಾಗುವುದು ಎಂದು ಪುಷ್ಪರಾಜ್ ಜೈನ್‌ಹೇಳಿದರು.

ಕ್ರೆಡಾಯ್ ನೇತೃತ್ವದ ಈ ಯೋಜನೆಗೆ ಕೆನರಾ ಚೇಂಬರ್ ಆಫ್ ಕಾಮರ್ಸ್ 15 ಲಕ್ಷ ರೂ., ಮಂಗಳೂರಿನ ನಿರ್ಮಾಣಕಾರರ ಅಸೋಸಿಯೇಷನ್ 15 ಲಕ್ಷ ರೂ., ಅಸೋಸಿಯೇಷನ್ ಆಫ್ ಕನ್‌ಸಲ್ಟಿಂಗ್ ಸಿವಿಲ್ ಎಂಜಿನಿಯರ‍್ಸ್ ಮಂಗಳೂರು ಘಟಕ ವತಿಯಿಂದ 8 ಲಕ್ಷ ರೂ. ನೀಡಿದೆ. ಬಾಕಿ ಉಳಿದ ಮೊತ್ತವನ್ನು ಕ್ರೆಡಾಯ್ ಭರಿಸಲಿದೆ ಎಂದು ಪುಷ್ಪರಾಜ್ ತಿಳಿಸಿದರು.

ಮೇ. ಸುಮ್ಮಿತ್ಸ್ ಮೆಡಿಕಲ್ ಅಕ್ಸಿಜನ್ ಸಿಸ್ಟಮ್ ಸುಮಾರು 84 ಲಕ್ಷ ರೂ. ವೆಚ್ಚದಲ್ಲಿ ಲೇಡಿಗೋಷನ್‌ನಲ್ಲಿ ಅಕ್ಸಿಜನ್ ಘಟಕ ಸ್ಥಾಪಿಸಲಿದೆ.

ಕ್ರೆಡೈ ಮಂಗಳೂರು ವತಿಯಿಂದ ಕೊರೊನಾ ಸಂಕಷ್ಟದಲ್ಲಿರುವವರಿಗೆ ಸ್ಪಂದಿಸುವ ನಿಟ್ಟಿನಲ್ಲಿ ಕೋವಿಡ್ ಸಹಾಯ ಕೇಂದ್ರವನ್ನು ಆರಂಭಿಸಿರುವುದನ್ನು ಇಲ್ಲಿ ನೆನಪಿಸಿಕೊಳ್ಳಬಹುದಾಗಿದೆ.

ಈ ಸಂದರ್ಭದಲ್ಲಿ ಮೀನುಗಾರಿಕ ಅಭಿವೃದ್ಧಿ ನಿಗಮದ ಅಧ್ಯಕ್ಷ ನಿತಿನ್ ಕುಮಾರ್, ಪಾಲಿಕೆ ಆಯುಕ್ತ ಅಕ್ಷಯ್, ಕ್ರೆಡಾಯ್‌ನ ಕಾರ‍್ಯದರ್ಶಿ ಪ್ರಶಾಂತ್ ಸನಿಲ್, ಕೋಶಾಧಿಕಾರಿ ಗುರುಮೂರ್ತಿ, ಕಾರ‍್ಯಕಾರಿ ಸಮಿತಿ ಸದಸ್ಯ ಜಿತೇಂದ್ರ ಕೊಟ್ಟಾರಿ, ಎಂಜಿನಿಯರ್ಸ್ ಅಸೋಸಿಯೇಷನ್‌ನ ಅಧ್ಯಕ್ಷ ಅರುಣ ಪ್ರಭಾ, ಕಾರ‍್ಯದರ್ಶಿ ಅನಿಲ್ ಬಾಳಿಗಾ, ಕೆನರಾ ವಾಣಿಜ್ಯ ಮಂಡಳಿ ಅಧ್ಯಕ್ಷ ಐಸಾಕ್ ವಾಸ್, ಕಾರ‍್ಯದರ್ಶಿ ಶಶಿಧರ ಪೈ, ನಿರ್ಮಾಣಗಾರರ ಅಸೋಸಿಯೇಶನ್‌ನ ಅಧ್ಯಕ್ಷ ಮಹಾಬಲ ಕೊಟ್ಟಾರಿ ಉಪಸ್ಥಿತರಿದ್ದರು.

Spread the love
  • Related Posts

    ಪ್ರಾಣಕ್ಕೆ ಎರವಾಗಲಿದೆ ಈ ಜಂಕ್ಷನ್ – ತಕ್ಷಣ ಕ್ರಮ ಕೈಗೊಳ್ಳುವಂತೆ ಸಾರ್ವಜನಿಕರ ಆಗ್ರಹ

    ಅಪಾಯದ ತಿರುವು: ಕ್ರಮಕ್ಕೆ ಕಾಯುತ್ತಿರುವ ಸೋಮಂತಡ್ಕ ರಸ್ತೆ ಸೋಮಂತಡ್ಕ: ಮುಂಡಾಜೆ ಗ್ರಾಮದ ಸೋಮಂತಡ್ಕದಿಂದ ಹಾಸ್ಟೆಲ್ ರಸ್ತೆಗೆ ಸೇರುವ ತಿರುವು ವಾಹನ ಸವಾರರ ಜೀವಕ್ಕೆ ಅಪಾಯಕಾರಿಯಾಗಿ ಪರಿಣಮಿಸಿದೆ. ಕಳೆದ ಕೆಲವು ತಿಂಗಳಿಂದ ಈ ಜಂಕ್ಷನ್‌ನಲ್ಲಿ ಅನೇಕ ಸಣ್ಣಪುಟ್ಟ ಅಪಘಾತಗಳು ಸಂಭವಿಸುತ್ತಿದ್ದು, ದೈವದ ಕೃಪೆಯಿಂದ…

    Spread the love

    ಶೃಂಗೇರಿ ಅಂಚೆ ಮತ ಮರುಎಣಿಕೆ: T. D. Rajegowda ಗೆ ಮತ್ತೆ ಜಯಭೇರಿ

    ಚಿಕ್ಕಮಗಳೂರು: ಸಾಕಷ್ಟು ಕುತೂಹಲಕ್ಕೆ ಕಾರಣವಾಗಿದ್ದ ಶೃಂಗೇರಿ ವಿಧಾನಸಭಾ ಕ್ಷೇತ್ರದ ಅಂಚೆ ಮತಗಳ ಮರು ಮತ‌ಎಣಿಕೆಯಲ್ಲಿ (Sringeri Postal Ballot Recount) ಕೊನೆಗೂ ಕಾಂಗ್ರೆಸ್​​ ಶಾಸಕ ಟಿ.ಡಿ.ರಾಜೇಗೌಡ (MLA TD Rajegowda) ಗೆಲುವು ಸಾಧಿಸಿದ್ದಾರೆ. ಚುನಾವಣಾ ಅಧಿಕಾರಿಗಳಿಂದ ಅಧಿಕೃತ ಘೋಷಣೆಯೊಂದೇ ಬಾಕಿ ಇದೆ.…

    Spread the love

    You Missed

    ಪ್ರಾಣಕ್ಕೆ ಎರವಾಗಲಿದೆ ಈ ಜಂಕ್ಷನ್ – ತಕ್ಷಣ ಕ್ರಮ ಕೈಗೊಳ್ಳುವಂತೆ ಸಾರ್ವಜನಿಕರ ಆಗ್ರಹ

    • By admin
    • May 3, 2026
    • 10 views
    ಪ್ರಾಣಕ್ಕೆ ಎರವಾಗಲಿದೆ ಈ ಜಂಕ್ಷನ್ – ತಕ್ಷಣ ಕ್ರಮ ಕೈಗೊಳ್ಳುವಂತೆ ಸಾರ್ವಜನಿಕರ ಆಗ್ರಹ

    ಶೃಂಗೇರಿ ಅಂಚೆ ಮತ ಮರುಎಣಿಕೆ: T. D. Rajegowda ಗೆ ಮತ್ತೆ ಜಯಭೇರಿ

    • By admin
    • May 2, 2026
    • 24 views
    ಶೃಂಗೇರಿ ಅಂಚೆ ಮತ ಮರುಎಣಿಕೆ: T. D. Rajegowda ಗೆ ಮತ್ತೆ ಜಯಭೇರಿ

    ಶಿರಾಡಿ ಘಾಟಿಯಲ್ಲಿ ಪ್ಲೈವುಡ್ ಸಾಗಾಟ ಮಾಡುತ್ತಿದ್ದ ಲಾರಿ ಪಲ್ಟಿ ಸಂಚಾರದಲ್ಲಿ ವ್ಯತ್ಯಯ

    • By admin
    • May 1, 2026
    • 30 views
    ಶಿರಾಡಿ ಘಾಟಿಯಲ್ಲಿ ಪ್ಲೈವುಡ್ ಸಾಗಾಟ ಮಾಡುತ್ತಿದ್ದ ಲಾರಿ ಪಲ್ಟಿ ಸಂಚಾರದಲ್ಲಿ ವ್ಯತ್ಯಯ

    ಅಧಿಸೂಚನೆ ಇದ್ದರೂ ನಿಲುಗಡೆ ಇಲ್ಲ, ಸ್ಟೇಜ್ ಗೊಂದಲದಿಂದ ಪ್ರಯಾಣಿಕರ ಸಂಕಷ್ಟ: ಮುಂಡಾಜೆ–ಸೋಮಂತಡ್ಕದಲ್ಲಿ ಸಾರಿಗೆ ವ್ಯವಸ್ಥೆಗೆ ಪ್ರಶ್ನೆ??

    • By admin
    • April 30, 2026
    • 67 views
    ಅಧಿಸೂಚನೆ ಇದ್ದರೂ ನಿಲುಗಡೆ ಇಲ್ಲ, ಸ್ಟೇಜ್ ಗೊಂದಲದಿಂದ ಪ್ರಯಾಣಿಕರ ಸಂಕಷ್ಟ: ಮುಂಡಾಜೆ–ಸೋಮಂತಡ್ಕದಲ್ಲಿ ಸಾರಿಗೆ ವ್ಯವಸ್ಥೆಗೆ ಪ್ರಶ್ನೆ??

    ನ್ಯಾಯವಾದಿಗಳ ಸೌಹಾರ್ದ ಸಹಕಾರಿ ಸಂಘ ನಿಯಮಿತ ಇದರ ಬಂಟ್ವಾಳದ ನೂತನ ಶಾಖೆ ಉದ್ಘಾಟನೆ

    • By admin
    • April 30, 2026
    • 236 views
    ನ್ಯಾಯವಾದಿಗಳ ಸೌಹಾರ್ದ ಸಹಕಾರಿ ಸಂಘ ನಿಯಮಿತ ಇದರ ಬಂಟ್ವಾಳದ ನೂತನ ಶಾಖೆ ಉದ್ಘಾಟನೆ

    ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ 54ನೇ ವರ್ಷದ ಉಚಿತ ಸಾಮೂಹಿಕ ವಿವಾಹ ಸಮಾರಂಭದ ವೈಭವ,106ಜೋಡಿ ಸಪ್ತಪದಿ ತುಳಿದು ದಾಂಪತ್ಯ ಜೀವನಕ್ಕೆ ಪಾದಾರ್ಪಣೆ

    • By admin
    • April 29, 2026
    • 65 views
    ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ 54ನೇ ವರ್ಷದ ಉಚಿತ ಸಾಮೂಹಿಕ ವಿವಾಹ ಸಮಾರಂಭದ ವೈಭವ,106ಜೋಡಿ ಸಪ್ತಪದಿ ತುಳಿದು ದಾಂಪತ್ಯ ಜೀವನಕ್ಕೆ ಪಾದಾರ್ಪಣೆ