ಕರಾವಳಿಯ ಹಳ್ಳಿ ಹಳ್ಳಿಗಳಲ್ಲಿ ನೆಟ್ ವರ್ಕ್ ಸಮಸ್ಯೆಯ ಕೂಗು ಬಲು ಜೋರು! ಆನ್ ಲೈನ್ ಕ್ಲಾಸ್ ಗೂ ತಟ್ಟಿದ ನೆಟ್ ವರ್ಕ್ ಬ್ಯುಸಿ ಸಮಸ್ಯೆ

ಕರಾವಳಿಯ ಎಲ್ಲೆಡೆ ಹೋದರು ಅಲ್ಲಲ್ಲಿ ಕಾಣಸಿಗುವುದೇ ಟವರ್ ಗಳ ರಾಶಿ ರಾಶಿ, ಆದರೆ ಇವೆಲ್ಲವೂ ಯಾರಿಗೂ ಸಮಯಕ್ಕೆ ಸರಿಯಾಗಿ ಬಳಕೆ ಮಾಡಲು ಸಾಧ್ಯವಾಗದಷ್ಟು ಕಠಿಣವಾಗಿದೆ.

ಇತ್ತೀಚೆಗಂತೂ ಆನ್ ಲೈನ್ ಕ್ಲಾಸ್ ಗಳು ನಡೆಯುತ್ತಿದ್ದು ಮಕ್ಕಳ ಪರದಾಟಕ್ಕೆ ಕೊನೆಯೇ ಇಲ್ಲದಂತಾಗಿದೆ. ಮೊಬೈಲ್ ನಲ್ಲಿ ಸಿಗ್ನಲ್ ತೋರಿಸಿದರು ನೆಟ್ ಸರಿಯಾಗಿ ಸಿಗದೇ ತೊಂದರೆ ಪಡುವವರ ಸಂಕಷ್ಟ ಅಷ್ಟಿಷ್ಟಲ್ಲ.

ಮೂಲಭೂತ ಸೌಕರ್ಯಗಳ ಪಟ್ಟಿಯಲ್ಲಿ ಮೊಬೈಲ್ ನೆಟ್ ವರ್ಕ್ ಸೇರಿಸುವುದು ಸೂಕ್ತ:

ಮೂಲಭೂತ ಸೌಕರ್ಯದ ಕೊರತೆಯಲ್ಲಿ ಮೊಬೈಲ್ ನೆಟ್ ವರ್ಕ್ ನ್ನು ಸೇರಿಸಿದರೆ ಉತ್ತಮ ಇತ್ತೀಚಿನ ದಿನಗಳಲ್ಲಿ ಮೊಬೈಲ್ ಬಳಕೆ ಮಾಡದೇ ಇರುವ ವ್ಯಕ್ತಿಗಳಿಲ್ಲ ಪ್ರತಿ ಕ್ಷಣಕ್ಷಣಕ್ಕೂ ಎಲ್ಲಾ ವಿಚಾರಗಳಿಗೂ ಮೊಬೈಲ್ ಬಳಕೆ ಕಡೆಗೆ ಜನತೆಯ ಒಲವು ಹೆಚ್ಚಾಗುತ್ತಿದ್ದು ಕುಡಿಯುವ ನೀರು, ರಸ್ತೆ ಸಂಪರ್ಕದಂತೆ ಮೂಲಭೂತ ಸೌಕರ್ಯಗಳ ಪಟ್ಟಿಯಲ್ಲಿ ಮೊಬೈಲ್ ನೆಟ್ ವರ್ಕ್ ಗಳನ್ನು ಸೇರಿಸುವ ಅನಿವಾರ್ಯತೆ ಇದೆ.

ಕಣಿವೆ ಪ್ರದೇಶ – ಘಾಟ್ ರಸ್ತೆಗಳಲ್ಲಿಯೂ ನೆಟ್ ವರ್ಕ್ ಗೆ ಬರ!

ಕರಾವಳಿಯನ್ನು ಸಂದಿಸುವ ಚಾರ್ಮಾಡಿ ಘಾಟ್, ಶಿರಾಡಿ ಘಾಟ್ ರಸ್ತೆಗಳಲ್ಲೂ ಹಲವಾರು ಕಿ.ಮೀ ವರೆಗೆ ನೆಟ್ ವರ್ಕ್ ಮಾಯವಾಗಿದೆ. ಈ ಸ್ಥಳದಲ್ಲಿ ಅಫಘಾತಗಳು ಅಥವಾ ವಾಹನಗಳು ಕೆಟ್ಟು ನಿಂತರೇ ಅಲ್ಲಿ ಆಗುವ ನರಕ ವೇದನೆಯನ್ನು ಹೇಳ ತೀರದು. ವಾಸ್ತವಿಕವಾಗಿ ಈ ಪ್ರದೇಶದಲ್ಲಿ ಕಾನೂನಿನ ತೊಡಕು ಇದ್ದರೂ ಇಂತಹ ಸೂಕ್ಷ್ಮ ಪ್ರದೇಶದಲ್ಲಿ ನೆಟ್ ವರ್ಕ್ ಅನಿವಾರ್ಯವಾಗಿ ಬೇಕಾಗುತ್ತದೆ.

ಹಣ ಕೊಟ್ಟು ನದಿ ದಾಟಿದ ಗಾದೆಯಂತಾಗಿದೆ ಇಂದಿನ ನೆಟ್ ವರ್ಕ್ ಪರಿಸ್ಥಿತಿ:

ಹೌದು ಇತ್ತೀಚಿನ ಕೆಲವೋಂದು ನೆಟ್ ವರ್ಕ್ ಕಂಪೆನಿಗಳ ನಿಯಮ ನಿಬಂಧನೆಗಳನ್ನು ಮೊಬೈಲ್ ಬಳಕೆದಾರರು ಸರಿಯಾಗಿ ಪಾಲನೆ ಮಾಡಬೇಕಾದ ಅನಿವಾರ್ಯತೆ ಬಂದೊದಗಿದೆ. ಇಲ್ಲವಾದಲ್ಲಿ ಕ್ಷಣ ಮಾತ್ರದಲ್ಲಿ ಸಂಪರ್ಕ ಕಡಿತವಾಗುತ್ತದೆ. ಪ್ರತಿ ತಿಂಗಳು ಮೂರುತಿಂಗಳು, ಆರು ತಿಂಗಳು, ವರ್ಷದ ಆಫರ್ ಗಳ ಮೇಲೆ ರಿಚಾರ್ಜ್ ಮಾಡಿಸಿ ಕನಿಷ್ಠ ಮಾತನಾಡಲು ಆಗದಂತಹ ಪರಿಸ್ಥಿತಿಗಳು ಬಹುತೇಕರ  ಅನುಭವಕ್ಕೆ ಬಂದಿರಲೂ ಬಹುದು. ಗ್ರಾಮೀಣ ಪರಿಸರದಲ್ಲಂತೂ ಶೇ.90 ರಷ್ಟು ಮಂದಿ ರಿಚಾರ್ಜ್ ಮಾಡಿ ಮೊಬೈಲ್ ಬಳಕೆ ಮಾಡಲಾಗದೆ ಕಂಗೆಟ್ಟಿರೋದಂತು ಸ್ಪಷ್ಟ.

ನೆಟ್ ವರ್ಕ್ ಸಮಸ್ಯೆಗಳಿಗೆ ಮುಕ್ತಿ ಎಂದು: ಹಲವು ದಿನಗಳಿಂದ ಬಿಗಡಾಯಿಸಿದ ಈ ನೆಟ್ ವರ್ಕ್ ಸಮಸ್ಯೆಗೆ ಶಾಶ್ವತ ಮುಕ್ತಿ ಯಾವಾಗ ಎಂಬುದೇ ಯಕ್ಷ ಪ್ರಶ್ನೆಯಾಗಿ ಉಳಿದಿದೆ. ಶೀಘ್ರದಲ್ಲೇ ಈ ಸಮಸ್ಯೆಗೆ ಪರಿಹಾರ ಒದಗಿಸುವ ನಿಟ್ಟಿನಲ್ಲಿ ಇದಕ್ಕೆ ಸಂಬಂಧಿಸಿದ ಅಧಿಕಾರಿಗಳು ಶಾಶ್ವತ ಪರಿಹಾರಕ್ಕೆ ಕಾರ್ಯತಂತ್ರ ರೂಪಿಸುವಂತಾಗಲಿ.

Spread the love
  • Related Posts

    ಕಸ್ತೂರಿ ರಂಗನ್ ವರದಿ ಕುರಿತು ರೈತರ ಆತಂಕ ನಿವಾರಣೆಗೆ ಸರ್ಕಾರ ಬದ್ಧ: ಸಿ.ಎಂ ಡಿಕೆಶಿ

    ರೈತರ ಸಮಸ್ಯೆಗಳ ಕುರಿತು ಪ್ರತ್ಯೇಕವಾಗಿ ಚರ್ಚೆ; ಕರಾವಳಿ ಅಭಿವೃದ್ಧಿಗೆ ಸಂಪುಟ ಸಭೆಯಲ್ಲಿ ಮಹತ್ವದ ನಿರ್ಧಾರಗಳ ನಿರೀಕ್ಷೆ ಮಂಗಳೂರು: ಕಸ್ತೂರಿ ರಂಗನ್ ವರದಿಯನ್ನು ರಾಜ್ಯ ಸರ್ಕಾರ ಈ ಹಿಂದೆಯೇ ಸ್ಪಷ್ಟವಾಗಿ ತಿರಸ್ಕರಿಸಿದೆ. ಆದರೂ ಕೇಂದ್ರ ಸರ್ಕಾರದಿಂದ ಬಂದಿರುವ ನಿರ್ದೇಶನಗಳ ಹಿನ್ನೆಲೆಯಲ್ಲಿ ಸ್ಥಳೀಯ ರೈತರಲ್ಲಿ…

    Spread the love

    ನಾಡಿನೆಲ್ಲೆಡೆ ಗಣಪನ ಹಬ್ಬದ ಸಡಗರ ಸಂಭ್ರಮ ಬೆಳ್ತಂಗಡಿ ತಾಲೂಕಿನಾದ್ಯಂತ 2026ರಲ್ಲಿ ವಿವಿಧೆಡೆ ಆಚರಿಸಲ್ಪಟ ಗಣಪನ ನೋಡಬನ್ನಿ

    ನಾಡಿನೆಲ್ಲೆಡೆ ಗಣಪನ ಹಬ್ಬದ ಸಡಗರ ಸಂಭ್ರಮ 2026ರಲ್ಲಿ ವಿವಿಧ ಗಣಪನ ಅಲಂಕಾರ ನೋಡೋಣ ಬನ್ನಿ ಶ್ರೀ ಕ್ಷೇತ್ರ ಸೌತಡ್ಕ ಮಹಾಗಣಪತಿ ಸನ್ನಿಧಿಯಲ್ಲಿ ಗಣಪನ ಅಲಂಕಾರ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಮುಂಡಾಜೆ ಇದರ ವತಿಯಿಂದ ಮುಂಡಾಜೆ ದೇವಸ್ಥಾನದಲ್ಲಿ ಆರಾಧಿಸಲ್ಪಟ್ಟ ಸುವರ್ಣ ಸಂಭ್ರಮದ…

    Spread the love

    You Missed

    ನಾವೂರು–ಕುತ್ಲೂರು ದುರ್ಗಮ ಪ್ರದೇಶಗಳ ವಿದ್ಯುದೀಕರಣಕ್ಕೆ ವನ್ಯಜೀವಿ ಅನುಮತಿ11 ಕೆ.ವಿ. ಮಾರ್ಗವನ್ನು ಭೂಗತ ಕೇಬಲ್ ಮೂಲಕ ಅಳವಡಿಸಲು ಅವಕಾಶ – ಶಾಸಕ ಹರೀಶ್ ಪೂಂಜ

    • By admin
    • September 18, 2026
    • 7 views

    ಕಸ್ತೂರಿ ರಂಗನ್ ವರದಿ ಕುರಿತು ರೈತರ ಆತಂಕ ನಿವಾರಣೆಗೆ ಸರ್ಕಾರ ಬದ್ಧ: ಸಿ.ಎಂ ಡಿಕೆಶಿ

    • By admin
    • September 18, 2026
    • 8 views
    ಕಸ್ತೂರಿ ರಂಗನ್ ವರದಿ ಕುರಿತು ರೈತರ ಆತಂಕ ನಿವಾರಣೆಗೆ ಸರ್ಕಾರ ಬದ್ಧ: ಸಿ.ಎಂ ಡಿಕೆಶಿ

    ಆಟಿಡೊಂಜಿದಿನ ಧರ್ಮಸ್ಥಳ ಕನ್ಯಾಡಿ 2

    • By admin
    • September 15, 2026
    • 16 views

    ನಾಡಿನೆಲ್ಲೆಡೆ ಗಣಪನ ಹಬ್ಬದ ಸಡಗರ ಸಂಭ್ರಮ ಬೆಳ್ತಂಗಡಿ ತಾಲೂಕಿನಾದ್ಯಂತ 2026ರಲ್ಲಿ ವಿವಿಧೆಡೆ ಆಚರಿಸಲ್ಪಟ ಗಣಪನ ನೋಡಬನ್ನಿ

    • By admin
    • September 15, 2026
    • 28 views
    ನಾಡಿನೆಲ್ಲೆಡೆ ಗಣಪನ ಹಬ್ಬದ ಸಡಗರ ಸಂಭ್ರಮ ಬೆಳ್ತಂಗಡಿ ತಾಲೂಕಿನಾದ್ಯಂತ 2026ರಲ್ಲಿ ವಿವಿಧೆಡೆ ಆಚರಿಸಲ್ಪಟ ಗಣಪನ ನೋಡಬನ್ನಿ

    ಕಡಿರುದ್ಯಾವರ: ಗ್ರಾಮೀಣ ರಸ್ತೆಯಲ್ಲಿ ಮರ ಸಾಗಾಟದ ಲಾರಿಗಳ ಹಾವಳಿ — ರಸ್ತೆ ಹಾಳಾಗುತ್ತಿರುವ ಆರೋಪ

    • By admin
    • September 13, 2026
    • 14 views
    ಕಡಿರುದ್ಯಾವರ: ಗ್ರಾಮೀಣ ರಸ್ತೆಯಲ್ಲಿ ಮರ ಸಾಗಾಟದ ಲಾರಿಗಳ ಹಾವಳಿ — ರಸ್ತೆ ಹಾಳಾಗುತ್ತಿರುವ ಆರೋಪ

    ಪದ್ಮುಂಜ: ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣಾ ಸಮಿತಿ ವತಿಯಿಂದ ಮೊಸರು ಕುಡಿಕೆ ಉತ್ಸವ, ಸಾಧಕರಿಗೆ ಸನ್ಮಾನ,ಬಹುಮಾನ ವಿತರಣೆ ಕಾರ್ಯಕ್ರಮ

    • By admin
    • September 13, 2026
    • 18 views
    ಪದ್ಮುಂಜ: ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣಾ ಸಮಿತಿ ವತಿಯಿಂದ ಮೊಸರು ಕುಡಿಕೆ ಉತ್ಸವ, ಸಾಧಕರಿಗೆ ಸನ್ಮಾನ,ಬಹುಮಾನ ವಿತರಣೆ ಕಾರ್ಯಕ್ರಮ