ಮೊಬೈಲ್ ಕರೆಯಲ್ಲಿ ನಿರತವಾಗಿದ್ದ ನರ್ಸ್ ನಿಂದ ನಡೆಯಿತು ಮಹಾ ಎಡವಟ್ಟು! ಮಹಿಳೆಯೊಬ್ಬರಿಗೆ ಒಂದೇ ಸಲ ಎರಡು ಬಾರಿ ಕೋವಿಡ್ ಲಸಿಕೆ ನೀಡಿ ಅವಾಂತರ!

ಲಕ್ನೊ: ಮೊಬೈಲ್ ಕರೆಯಲ್ಲಿ ನಿರತವಾಗಿದ್ದ ದಾದಿಯೊಬ್ಬಳು ಮಹಿಳೆಯೊಬ್ಬರಿಗೆ ಒಂದೇ ಸಲ ಎರಡು ಬಾರಿ ಕೋವಿಡ್ -19 ಲಸಿಕೆಯ ಡೋಸ್ ನೀಡಿರುವ ಆಘಾತಕಾರಿ ಘಟನೆ ನಡೆದಿದೆ.

ಉತ್ತರ ಪ್ರದೇಶದ ಕಾನ್ಪುರ ದೇಹತ್ ಜಿಲ್ಲೆಯ ಅಕ್ಬರ್ ಪುರ ಪ್ರದೇಶದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ (ಪಿಎಚ್ ಸಿ) ಶನಿವಾರ ಈ ಘಟನೆ ನಡೆದಿದೆ.

ಎರಡು ಚುಚ್ಚುಮದ್ದು ನೀಡಿದ ಬಗ್ಗೆ ಮಹಿಳೆಯು ದಾದಿಯನ್ನು ವಿಚಾರಿಸಿದಾಗ,ಆಕೆ ಕ್ಷಮೆಯಾಚಿಸುವ ಬದಲು ಮಹಿಳೆಯನ್ನು ಗದರಿಸಿದ್ದಳು ಎಂದು ಸುದ್ದಿ ಸಂಸ್ಥೆ ಪಿಟಿಐ ವರದಿ ಮಾಡಿದೆ.

ಶನಿವಾರ 50 ರ ವಯಸ್ಸಿನ ಕಮಲೇಶ್ ಕುಮಾರಿ ಎಂಬ ಮಹಿಳೆ ಕೋವಿಡ್ -19 ವಿರುದ್ಧ ಲಸಿಕೆ ಪಡೆಯಲು ಸ್ಥಳೀಯ ಸರ್ಕಾರಿ ಆರೋಗ್ಯ ಕೇಂದ್ರಕ್ಕೆ ಹೋಗಿದ್ದರು.

ಶಿಷ್ಟಾಚಾರದ ಪ್ರಕಾರ, ಮಹಿಳೆಗೆ ಇಂದು ಲಸಿಕೆಯ ಒಂದು ಡೋಸ್ ನೀಡಬೇಕಾಗಿತ್ತು. ಕೆಲವು ವಾರಗಳ ನಂತರ, ಲಸಿಕೆಯನ್ನು ಆಧರಿಸಿ ಮುಂದಿನ ಡೋಸ್ ನೀಡಬೇಕಾಗಿತ್ತು.

ಆದರೆ, ದಾದಿಯ ನಿರ್ಲಕ್ಷ್ಯದಿಂದಾಗಿ ಕಮಲೇಶ್ ಕುಮಾರಿಗೆ ಒಂದೇ ದಿನದಲ್ಲಿ ಲಸಿಕೆಯ ಎರಡು ಡೋಸ್ ಗಳನ್ನು ನೀಡಲಾಗಿದೆ.

ಈ ಸುದ್ದಿ ಮಹಿಳೆಯ ಕುಟುಂಬ ಸದಸ್ಯರಿಗೆ ಗೊತ್ತಾಗುತ್ತಿದ್ದಂತೆ, ಅವರು ಆರೋಗ್ಯ ಕೇಂದ್ರದಲ್ಲಿ ಕೋಲಾಹಲವನ್ನು ಸೃಷ್ಟಿಸಿದರು. ನಂತರ ಜಿಲ್ಲಾ ಮ್ಯಾಜಿಸ್ಟ್ರೇಟ್ ಮತ್ತು ಮುಖ್ಯ ವೈದ್ಯಕೀಯ ಅಧಿಕಾರಿ ಸೇರಿದಂತೆ ಹಿರಿಯ ಅಧಿಕಾರಿಗಳಿಗೆ ದಾದಿಯ ನಿರ್ಲಕ್ಷ್ಯದ ಬಗ್ಗೆ ಮಾಹಿತಿ ನೀಡಿದರು.

ಲಸಿಕೆಯ ಎರಡು ಡೋಸ್ ನಿಂದಾಗಿ, ಕಮಲೇಶ್ ಕುಮಾರಿ ಅವರ ಕೈ ಸ್ವಲ್ಪ ಊದಿಕೊಂಡಿದೆ. ಆದರೆ ಯಾವುದೇ ಗಂಭೀರ ಲಕ್ಷಣಗಳು ವರದಿಯಾಗಿಲ್ಲ ಎಂದು ಪಿಟಿಐ ತಿಳಿಸಿದೆ.

ಜಿಲ್ಲಾ ಮ್ಯಾಜಿಸ್ಟ್ರೇಟ್ ಜಿತೇಂದ್ರ ಪ್ರತಾಪ್ ಸಿಂಗ್ ಅವರು ನಿರ್ಲಕ್ಷ್ಯವನ್ನು ಗಂಭೀರವಾಗಿ ತೆಗೆದುಕೊಂಡಿದ್ದು ಘಟನೆಯ ಬಗ್ಗೆ ತನಿಖೆ ಮಾಡಲು ಹಾಗೂ ಸತ್ಯ ಶೋಧನಾ ವರದಿಯನ್ನು ಸಲ್ಲಿಸುವಂತೆ ಜಿಲ್ಲೆಯ ಮುಖ್ಯ ವೈದ್ಯಾಧಿಕಾರಿಗೆ ತಿಳಿಸಿದ್ದಾರೆ ಎಂದು ಪಿಟಿಐ ವರದಿ ಮಾಡಿದೆ.

Spread the love
  • Related Posts

    ವಿವಿಧ ಬೇಡಿಕೆಗಳನ್ನು ಈಡೇರಿಸಲು ಆಗ್ರಹಿಸಿ ಕರ್ನಾಟಕದಲ್ಲಿ ಪ್ರತಿಭಟನೆ ನಡೆಸುತ್ತಿದ್ದ ಅಂಗನವಾಡಿ, ಅಕ್ಷರ ದಾಸೋಹ, ಆಶಾ ನೌಕರರ ಪ್ರಮುಖರ ಸಭೆ ಆಯೋಜಿಸಿದ ಕೇಂದ್ರ ಸಚಿವ ಎಚ್ ಡಿ ಕೆ

    ನವದೆಹಲಿ: ಕೇಂದ್ರ ಸಚಿವರಾದ ಎಚ್ ಡಿ ಕುಮಾರಸ್ವಾಮಿ ಮೂವರು ವಿವಿಧ ಬೇಡಿಕೆಗಳನ್ನು ಈಡೇರಿಸಲು ಆಗ್ರಹಿಸಿ ಕರ್ನಾಟಕದಲ್ಲಿ ಪ್ರತಿಭಟನೆ ನಡೆಸುತ್ತಿದ್ದ ಅಂಗನವಾಡಿ, ಅಕ್ಷರ ದಾಸೋಹ, ಆಶಾ ನೌಕರರ ಪ್ರಮುಖರನ್ನು ನವದೆಹಲಿಗೆ ಕರೆಸಿ, ಅವರ ಜತೆಯಲ್ಲಿ ಕೇಂದ್ರದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಖಾತೆಯ…

    Spread the love

    ಸಂಗಮ ಕ್ಷೇತ್ರ ಪಜಿರಡ್ಕ ಶ್ರೀ ಸದಾಶಿವೇಶ್ವರ ದೇವಸ್ಥಾನದ ನೂತನ ಧ್ವಜಸ್ತಂಭಕ್ಕೆ ಧರ್ಮಸ್ಥಳದಲ್ಲಿ ವಿಷೇಶ ಪೂಜೆ

    ಧರ್ಮಸ್ಥಳ: ಶ್ರೀ ಸದಾಶಿವೇಶ್ವರ ದೇವಸ್ಥಾನ ಸಂಗಮ ಕ್ಷೇತ್ರಕ್ಕೆ ಮುಂಚಾನ ಶ್ರೀ ಮಹಾದೇವಿಕೃಪಾ ಮನೆಯ ಸುಕನ್ಯಾ ಮತ್ತು ಜಯರಾಮ ರಾವ್ ಮತ್ತು ಮಕ್ಕಳು ಸಮರ್ಪಿಸಲಿರುವ ನೂತನ ಶಿಲಾಮಯ ಧ್ವಜಸ್ಥಂಭವು ಕಾರ್ಕಳದಿಂದ ಹೊರಟು ಬೆಳ್ತಂಗಡಿ ಮಾರ್ಗವಾಗಿ ಡಿ.4ರಂದು ಧರ್ಮಸ್ಥಳ ತಲುಪಿ ಧರ್ಮಸ್ಥಳ ಅಣ್ಣಪ್ಪ ಬೆಟ್ಟದಲ್ಲಿ…

    Spread the love

    You Missed

    ಜೇಸಿ ಉತ್ಸವ ತಾಲೂಕು ಮಟ್ಟದ ಚಿತ್ರಕಲಾ ಸ್ಪರ್ಧೆ: ಪುಷ್ಠಿ ಮುಂಡಾಜೆ ಪ್ರಥಮ

    • By admin
    • December 8, 2025
    • 16 views
    ಜೇಸಿ ಉತ್ಸವ ತಾಲೂಕು ಮಟ್ಟದ ಚಿತ್ರಕಲಾ ಸ್ಪರ್ಧೆ: ಪುಷ್ಠಿ ಮುಂಡಾಜೆ ಪ್ರಥಮ

    ವಿವಿಧ ಬೇಡಿಕೆಗಳನ್ನು ಈಡೇರಿಸಲು ಆಗ್ರಹಿಸಿ ಕರ್ನಾಟಕದಲ್ಲಿ ಪ್ರತಿಭಟನೆ ನಡೆಸುತ್ತಿದ್ದ ಅಂಗನವಾಡಿ, ಅಕ್ಷರ ದಾಸೋಹ, ಆಶಾ ನೌಕರರ ಪ್ರಮುಖರ ಸಭೆ ಆಯೋಜಿಸಿದ ಕೇಂದ್ರ ಸಚಿವ ಎಚ್ ಡಿ ಕೆ

    • By admin
    • December 4, 2025
    • 34 views
    ವಿವಿಧ ಬೇಡಿಕೆಗಳನ್ನು ಈಡೇರಿಸಲು ಆಗ್ರಹಿಸಿ ಕರ್ನಾಟಕದಲ್ಲಿ ಪ್ರತಿಭಟನೆ ನಡೆಸುತ್ತಿದ್ದ ಅಂಗನವಾಡಿ, ಅಕ್ಷರ ದಾಸೋಹ, ಆಶಾ ನೌಕರರ ಪ್ರಮುಖರ ಸಭೆ ಆಯೋಜಿಸಿದ ಕೇಂದ್ರ ಸಚಿವ ಎಚ್ ಡಿ ಕೆ

    ಸಂಗಮ ಕ್ಷೇತ್ರ ಪಜಿರಡ್ಕ ಶ್ರೀ ಸದಾಶಿವೇಶ್ವರ ದೇವಸ್ಥಾನದ ನೂತನ ಧ್ವಜಸ್ತಂಭಕ್ಕೆ ಧರ್ಮಸ್ಥಳದಲ್ಲಿ ವಿಷೇಶ ಪೂಜೆ

    • By admin
    • December 4, 2025
    • 53 views
    ಸಂಗಮ ಕ್ಷೇತ್ರ ಪಜಿರಡ್ಕ ಶ್ರೀ ಸದಾಶಿವೇಶ್ವರ ದೇವಸ್ಥಾನದ ನೂತನ ಧ್ವಜಸ್ತಂಭಕ್ಕೆ ಧರ್ಮಸ್ಥಳದಲ್ಲಿ ವಿಷೇಶ ಪೂಜೆ

    ಸೇವಾ ಭಾರತಿಯ ನೂತನ ಕಾರ್ಯಾಲಯ ಸೇವಾನಿಕೇತನ’ದ ಉದ್ಘಾಟನೆ ಹಾಗೂ 21ನೇ ವರ್ಷದ ಸಂಭ್ರಮ ಕಾರ್ಯಕ್ರಮ

    • By admin
    • December 4, 2025
    • 35 views
    ಸೇವಾ ಭಾರತಿಯ ನೂತನ ಕಾರ್ಯಾಲಯ ಸೇವಾನಿಕೇತನ’ದ ಉದ್ಘಾಟನೆ ಹಾಗೂ 21ನೇ ವರ್ಷದ ಸಂಭ್ರಮ ಕಾರ್ಯಕ್ರಮ

    ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ ವೀರೇಂದ್ರ ಹೆಗ್ಗಡೆಯವರಿಂದ ಉಪರಾಷ್ಟ್ರಪತಿ ಭೇಟಿ

    • By admin
    • December 4, 2025
    • 42 views
    ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ ವೀರೇಂದ್ರ ಹೆಗ್ಗಡೆಯವರಿಂದ ಉಪರಾಷ್ಟ್ರಪತಿ ಭೇಟಿ

    ಯುವಜನತೆ ದುಶ್ಚಟಗಳಿಂದ ದೂರವಿದ್ದು ಸ್ವಾಸ್ಥ್ಯ ಸಮಾಜ ನಿರ್ಮಾಣಕ್ಕೆ ಕೈಜೋಡಿಸಿ: ಡಾ.ನವೀನ್ ಚಂದ್ರ ಶೆಟ್ಟಿ

    • By admin
    • December 2, 2025
    • 71 views
    ಯುವಜನತೆ ದುಶ್ಚಟಗಳಿಂದ ದೂರವಿದ್ದು ಸ್ವಾಸ್ಥ್ಯ ಸಮಾಜ ನಿರ್ಮಾಣಕ್ಕೆ ಕೈಜೋಡಿಸಿ: ಡಾ.ನವೀನ್ ಚಂದ್ರ ಶೆಟ್ಟಿ