ಮೊಬೈಲ್ ಕರೆಯಲ್ಲಿ ನಿರತವಾಗಿದ್ದ ನರ್ಸ್ ನಿಂದ ನಡೆಯಿತು ಮಹಾ ಎಡವಟ್ಟು! ಮಹಿಳೆಯೊಬ್ಬರಿಗೆ ಒಂದೇ ಸಲ ಎರಡು ಬಾರಿ ಕೋವಿಡ್ ಲಸಿಕೆ ನೀಡಿ ಅವಾಂತರ!

ಲಕ್ನೊ: ಮೊಬೈಲ್ ಕರೆಯಲ್ಲಿ ನಿರತವಾಗಿದ್ದ ದಾದಿಯೊಬ್ಬಳು ಮಹಿಳೆಯೊಬ್ಬರಿಗೆ ಒಂದೇ ಸಲ ಎರಡು ಬಾರಿ ಕೋವಿಡ್ -19 ಲಸಿಕೆಯ ಡೋಸ್ ನೀಡಿರುವ ಆಘಾತಕಾರಿ ಘಟನೆ ನಡೆದಿದೆ.

ಉತ್ತರ ಪ್ರದೇಶದ ಕಾನ್ಪುರ ದೇಹತ್ ಜಿಲ್ಲೆಯ ಅಕ್ಬರ್ ಪುರ ಪ್ರದೇಶದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ (ಪಿಎಚ್ ಸಿ) ಶನಿವಾರ ಈ ಘಟನೆ ನಡೆದಿದೆ.

ಎರಡು ಚುಚ್ಚುಮದ್ದು ನೀಡಿದ ಬಗ್ಗೆ ಮಹಿಳೆಯು ದಾದಿಯನ್ನು ವಿಚಾರಿಸಿದಾಗ,ಆಕೆ ಕ್ಷಮೆಯಾಚಿಸುವ ಬದಲು ಮಹಿಳೆಯನ್ನು ಗದರಿಸಿದ್ದಳು ಎಂದು ಸುದ್ದಿ ಸಂಸ್ಥೆ ಪಿಟಿಐ ವರದಿ ಮಾಡಿದೆ.

ಶನಿವಾರ 50 ರ ವಯಸ್ಸಿನ ಕಮಲೇಶ್ ಕುಮಾರಿ ಎಂಬ ಮಹಿಳೆ ಕೋವಿಡ್ -19 ವಿರುದ್ಧ ಲಸಿಕೆ ಪಡೆಯಲು ಸ್ಥಳೀಯ ಸರ್ಕಾರಿ ಆರೋಗ್ಯ ಕೇಂದ್ರಕ್ಕೆ ಹೋಗಿದ್ದರು.

ಶಿಷ್ಟಾಚಾರದ ಪ್ರಕಾರ, ಮಹಿಳೆಗೆ ಇಂದು ಲಸಿಕೆಯ ಒಂದು ಡೋಸ್ ನೀಡಬೇಕಾಗಿತ್ತು. ಕೆಲವು ವಾರಗಳ ನಂತರ, ಲಸಿಕೆಯನ್ನು ಆಧರಿಸಿ ಮುಂದಿನ ಡೋಸ್ ನೀಡಬೇಕಾಗಿತ್ತು.

ಆದರೆ, ದಾದಿಯ ನಿರ್ಲಕ್ಷ್ಯದಿಂದಾಗಿ ಕಮಲೇಶ್ ಕುಮಾರಿಗೆ ಒಂದೇ ದಿನದಲ್ಲಿ ಲಸಿಕೆಯ ಎರಡು ಡೋಸ್ ಗಳನ್ನು ನೀಡಲಾಗಿದೆ.

ಈ ಸುದ್ದಿ ಮಹಿಳೆಯ ಕುಟುಂಬ ಸದಸ್ಯರಿಗೆ ಗೊತ್ತಾಗುತ್ತಿದ್ದಂತೆ, ಅವರು ಆರೋಗ್ಯ ಕೇಂದ್ರದಲ್ಲಿ ಕೋಲಾಹಲವನ್ನು ಸೃಷ್ಟಿಸಿದರು. ನಂತರ ಜಿಲ್ಲಾ ಮ್ಯಾಜಿಸ್ಟ್ರೇಟ್ ಮತ್ತು ಮುಖ್ಯ ವೈದ್ಯಕೀಯ ಅಧಿಕಾರಿ ಸೇರಿದಂತೆ ಹಿರಿಯ ಅಧಿಕಾರಿಗಳಿಗೆ ದಾದಿಯ ನಿರ್ಲಕ್ಷ್ಯದ ಬಗ್ಗೆ ಮಾಹಿತಿ ನೀಡಿದರು.

ಲಸಿಕೆಯ ಎರಡು ಡೋಸ್ ನಿಂದಾಗಿ, ಕಮಲೇಶ್ ಕುಮಾರಿ ಅವರ ಕೈ ಸ್ವಲ್ಪ ಊದಿಕೊಂಡಿದೆ. ಆದರೆ ಯಾವುದೇ ಗಂಭೀರ ಲಕ್ಷಣಗಳು ವರದಿಯಾಗಿಲ್ಲ ಎಂದು ಪಿಟಿಐ ತಿಳಿಸಿದೆ.

ಜಿಲ್ಲಾ ಮ್ಯಾಜಿಸ್ಟ್ರೇಟ್ ಜಿತೇಂದ್ರ ಪ್ರತಾಪ್ ಸಿಂಗ್ ಅವರು ನಿರ್ಲಕ್ಷ್ಯವನ್ನು ಗಂಭೀರವಾಗಿ ತೆಗೆದುಕೊಂಡಿದ್ದು ಘಟನೆಯ ಬಗ್ಗೆ ತನಿಖೆ ಮಾಡಲು ಹಾಗೂ ಸತ್ಯ ಶೋಧನಾ ವರದಿಯನ್ನು ಸಲ್ಲಿಸುವಂತೆ ಜಿಲ್ಲೆಯ ಮುಖ್ಯ ವೈದ್ಯಾಧಿಕಾರಿಗೆ ತಿಳಿಸಿದ್ದಾರೆ ಎಂದು ಪಿಟಿಐ ವರದಿ ಮಾಡಿದೆ.

Spread the love
  • Related Posts

    ಕಡಿರುದ್ಯಾವರ: ಗ್ರಾಮೀಣ ರಸ್ತೆಯಲ್ಲಿ ಮರ ಸಾಗಾಟದ ಲಾರಿಗಳ ಹಾವಳಿ — ರಸ್ತೆ ಹಾಳಾಗುತ್ತಿರುವ ಆರೋಪ

    ಕಾನರ್ಪ ನೂಜಿ ರಸ್ತೆಯಲ್ಲಿ ತಡರಾತ್ರಿ ರಸ್ತೆ ಮಧ್ಯೆ ಲಾರಿ ಬಾಕಿ; ಸ್ಥಳೀಯರಿಂದ ಪ್ರತಿಭಟನೆ ಕಡಿರುದ್ಯಾವರ: ಗ್ರಾಮೀಣ ಪ್ರದೇಶದ ರಸ್ತೆಗಳಲ್ಲಿ ನಿರಂತರವಾಗಿ ಮರ ಸಾಗಾಟದ ಲಾರಿಗಳು ಸಂಚರಿಸುತ್ತಿರುವುದರಿಂದ ರಸ್ತೆಗಳು ಸಂಪೂರ್ಣ ಹಾಳಾಗುತ್ತಿವೆ ಎಂದು ಸ್ಥಳೀಯರು ಆರೋಪಿಸಿದ್ದಾರೆ. ಕಾನರ್ಪದಲ್ಲಿ ತಡರಾತ್ರಿ ಮರ ಸಾಗಾಟ ಮಾಡುತ್ತಿದ್ದ…

    Spread the love

    ಪದ್ಮುಂಜ: ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣಾ ಸಮಿತಿ ವತಿಯಿಂದ ಮೊಸರು ಕುಡಿಕೆ ಉತ್ಸವ, ಸಾಧಕರಿಗೆ ಸನ್ಮಾನ,ಬಹುಮಾನ ವಿತರಣೆ ಕಾರ್ಯಕ್ರಮ

    ಪದ್ಮುಂಜ: ಸೆ 12 ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣಾ ಸಮಿತಿ ವತಿಯಿಂದ ಮೊಸರು ಕುಡಿಕೆ ಉತ್ಸವ, ಸಾಧಕರಿಗೆ ಸನ್ಮಾನ, ವಿಜೇತರಿಗೆ ಬಹುಮಾನ ವಿತರಣೆ ಕಾರ್ಯಕ್ರಮ ಪದ್ಮುಂಜ ಪ್ರಾಥಮಿಕ ಕೃಷಿಪತ್ತಿನ ಸಹಕಾರಿ ಸಂಘದ ವಠಾರದಲ್ಲಿ ವಿಜೃಂಭಣೆಯಿಂದ ನೆರವೇರಿತು.ಬೆಳಗ್ಗೆ ಉಮಾಮಹೇಶ್ವರ ಮಹಿಳಾ ಭಜನಾ ತಂಡ,…

    Spread the love

    You Missed

    ಕಡಿರುದ್ಯಾವರ: ಗ್ರಾಮೀಣ ರಸ್ತೆಯಲ್ಲಿ ಮರ ಸಾಗಾಟದ ಲಾರಿಗಳ ಹಾವಳಿ — ರಸ್ತೆ ಹಾಳಾಗುತ್ತಿರುವ ಆರೋಪ

    • By admin
    • September 13, 2026
    • 6 views
    ಕಡಿರುದ್ಯಾವರ: ಗ್ರಾಮೀಣ ರಸ್ತೆಯಲ್ಲಿ ಮರ ಸಾಗಾಟದ ಲಾರಿಗಳ ಹಾವಳಿ — ರಸ್ತೆ ಹಾಳಾಗುತ್ತಿರುವ ಆರೋಪ

    ಪದ್ಮುಂಜ: ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣಾ ಸಮಿತಿ ವತಿಯಿಂದ ಮೊಸರು ಕುಡಿಕೆ ಉತ್ಸವ, ಸಾಧಕರಿಗೆ ಸನ್ಮಾನ,ಬಹುಮಾನ ವಿತರಣೆ ಕಾರ್ಯಕ್ರಮ

    • By admin
    • September 13, 2026
    • 11 views
    ಪದ್ಮುಂಜ: ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣಾ ಸಮಿತಿ ವತಿಯಿಂದ ಮೊಸರು ಕುಡಿಕೆ ಉತ್ಸವ, ಸಾಧಕರಿಗೆ ಸನ್ಮಾನ,ಬಹುಮಾನ ವಿತರಣೆ ಕಾರ್ಯಕ್ರಮ

    ಕೊಕ್ಕಡ ಸಮೀಪ ಭೀಕರ ಅಪಘಾತ: ಸರ್ಕಾರಿ ಬಸ್–ಕಾರು ಡಿಕ್ಕಿ

    • By admin
    • September 12, 2026
    • 6 views
    ಕೊಕ್ಕಡ ಸಮೀಪ ಭೀಕರ ಅಪಘಾತ: ಸರ್ಕಾರಿ ಬಸ್–ಕಾರು ಡಿಕ್ಕಿ

    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಿರುದ್ಧ ದ ಆರೋಪ ಆಧಾರರಹಿತ: ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ವಜಾ

    • By admin
    • September 8, 2026
    • 12 views
    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಿರುದ್ಧ ದ ಆರೋಪ ಆಧಾರರಹಿತ: ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ವಜಾ

    ಧರ್ಮ–ಸಂಸ್ಕೃತಿಯ ಸಾರ ಹೊತ್ತು ವಿಜೃಂಭಿಸಿದ ಚಿರಂಜೀವಿಯ 35ನೇ ವರ್ಷದ ಶ್ರೀಕೃಷ್ಣ ಜನ್ಮಾಷ್ಟಮಿ

    • By admin
    • September 8, 2026
    • 18 views
    ಧರ್ಮ–ಸಂಸ್ಕೃತಿಯ ಸಾರ ಹೊತ್ತು ವಿಜೃಂಭಿಸಿದ ಚಿರಂಜೀವಿಯ 35ನೇ ವರ್ಷದ ಶ್ರೀಕೃಷ್ಣ ಜನ್ಮಾಷ್ಟಮಿ

    ಬೆಳಾಲಿನಲ್ಲಿ ರಸ್ತೆಯ ಮಧ್ಯೆ ಕಾಡಾನೆ ಪ್ರತ್ಯಕ್ಷ: ಬೈಕ್ ಸವಾರ ಕೂದಲೆಳೆ ಅಂತರದಲ್ಲಿ ಅಪಾಯದಿಂದ ಪಾರು

    • By admin
    • September 3, 2026
    • 15 views
    ಬೆಳಾಲಿನಲ್ಲಿ ರಸ್ತೆಯ ಮಧ್ಯೆ ಕಾಡಾನೆ ಪ್ರತ್ಯಕ್ಷ: ಬೈಕ್ ಸವಾರ ಕೂದಲೆಳೆ ಅಂತರದಲ್ಲಿ ಅಪಾಯದಿಂದ ಪಾರು