ಮೊಬೈಲ್ ಕರೆಯಲ್ಲಿ ನಿರತವಾಗಿದ್ದ ನರ್ಸ್ ನಿಂದ ನಡೆಯಿತು ಮಹಾ ಎಡವಟ್ಟು! ಮಹಿಳೆಯೊಬ್ಬರಿಗೆ ಒಂದೇ ಸಲ ಎರಡು ಬಾರಿ ಕೋವಿಡ್ ಲಸಿಕೆ ನೀಡಿ ಅವಾಂತರ!

ಲಕ್ನೊ: ಮೊಬೈಲ್ ಕರೆಯಲ್ಲಿ ನಿರತವಾಗಿದ್ದ ದಾದಿಯೊಬ್ಬಳು ಮಹಿಳೆಯೊಬ್ಬರಿಗೆ ಒಂದೇ ಸಲ ಎರಡು ಬಾರಿ ಕೋವಿಡ್ -19 ಲಸಿಕೆಯ ಡೋಸ್ ನೀಡಿರುವ ಆಘಾತಕಾರಿ ಘಟನೆ ನಡೆದಿದೆ.

ಉತ್ತರ ಪ್ರದೇಶದ ಕಾನ್ಪುರ ದೇಹತ್ ಜಿಲ್ಲೆಯ ಅಕ್ಬರ್ ಪುರ ಪ್ರದೇಶದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ (ಪಿಎಚ್ ಸಿ) ಶನಿವಾರ ಈ ಘಟನೆ ನಡೆದಿದೆ.

ಎರಡು ಚುಚ್ಚುಮದ್ದು ನೀಡಿದ ಬಗ್ಗೆ ಮಹಿಳೆಯು ದಾದಿಯನ್ನು ವಿಚಾರಿಸಿದಾಗ,ಆಕೆ ಕ್ಷಮೆಯಾಚಿಸುವ ಬದಲು ಮಹಿಳೆಯನ್ನು ಗದರಿಸಿದ್ದಳು ಎಂದು ಸುದ್ದಿ ಸಂಸ್ಥೆ ಪಿಟಿಐ ವರದಿ ಮಾಡಿದೆ.

ಶನಿವಾರ 50 ರ ವಯಸ್ಸಿನ ಕಮಲೇಶ್ ಕುಮಾರಿ ಎಂಬ ಮಹಿಳೆ ಕೋವಿಡ್ -19 ವಿರುದ್ಧ ಲಸಿಕೆ ಪಡೆಯಲು ಸ್ಥಳೀಯ ಸರ್ಕಾರಿ ಆರೋಗ್ಯ ಕೇಂದ್ರಕ್ಕೆ ಹೋಗಿದ್ದರು.

ಶಿಷ್ಟಾಚಾರದ ಪ್ರಕಾರ, ಮಹಿಳೆಗೆ ಇಂದು ಲಸಿಕೆಯ ಒಂದು ಡೋಸ್ ನೀಡಬೇಕಾಗಿತ್ತು. ಕೆಲವು ವಾರಗಳ ನಂತರ, ಲಸಿಕೆಯನ್ನು ಆಧರಿಸಿ ಮುಂದಿನ ಡೋಸ್ ನೀಡಬೇಕಾಗಿತ್ತು.

ಆದರೆ, ದಾದಿಯ ನಿರ್ಲಕ್ಷ್ಯದಿಂದಾಗಿ ಕಮಲೇಶ್ ಕುಮಾರಿಗೆ ಒಂದೇ ದಿನದಲ್ಲಿ ಲಸಿಕೆಯ ಎರಡು ಡೋಸ್ ಗಳನ್ನು ನೀಡಲಾಗಿದೆ.

ಈ ಸುದ್ದಿ ಮಹಿಳೆಯ ಕುಟುಂಬ ಸದಸ್ಯರಿಗೆ ಗೊತ್ತಾಗುತ್ತಿದ್ದಂತೆ, ಅವರು ಆರೋಗ್ಯ ಕೇಂದ್ರದಲ್ಲಿ ಕೋಲಾಹಲವನ್ನು ಸೃಷ್ಟಿಸಿದರು. ನಂತರ ಜಿಲ್ಲಾ ಮ್ಯಾಜಿಸ್ಟ್ರೇಟ್ ಮತ್ತು ಮುಖ್ಯ ವೈದ್ಯಕೀಯ ಅಧಿಕಾರಿ ಸೇರಿದಂತೆ ಹಿರಿಯ ಅಧಿಕಾರಿಗಳಿಗೆ ದಾದಿಯ ನಿರ್ಲಕ್ಷ್ಯದ ಬಗ್ಗೆ ಮಾಹಿತಿ ನೀಡಿದರು.

ಲಸಿಕೆಯ ಎರಡು ಡೋಸ್ ನಿಂದಾಗಿ, ಕಮಲೇಶ್ ಕುಮಾರಿ ಅವರ ಕೈ ಸ್ವಲ್ಪ ಊದಿಕೊಂಡಿದೆ. ಆದರೆ ಯಾವುದೇ ಗಂಭೀರ ಲಕ್ಷಣಗಳು ವರದಿಯಾಗಿಲ್ಲ ಎಂದು ಪಿಟಿಐ ತಿಳಿಸಿದೆ.

ಜಿಲ್ಲಾ ಮ್ಯಾಜಿಸ್ಟ್ರೇಟ್ ಜಿತೇಂದ್ರ ಪ್ರತಾಪ್ ಸಿಂಗ್ ಅವರು ನಿರ್ಲಕ್ಷ್ಯವನ್ನು ಗಂಭೀರವಾಗಿ ತೆಗೆದುಕೊಂಡಿದ್ದು ಘಟನೆಯ ಬಗ್ಗೆ ತನಿಖೆ ಮಾಡಲು ಹಾಗೂ ಸತ್ಯ ಶೋಧನಾ ವರದಿಯನ್ನು ಸಲ್ಲಿಸುವಂತೆ ಜಿಲ್ಲೆಯ ಮುಖ್ಯ ವೈದ್ಯಾಧಿಕಾರಿಗೆ ತಿಳಿಸಿದ್ದಾರೆ ಎಂದು ಪಿಟಿಐ ವರದಿ ಮಾಡಿದೆ.

Spread the love
  • Related Posts

    ಬೆಳ್ತಂಗಡಿ ಕ್ಷೇತ್ರದ ಧಾರ್ಮಿಕ-ಐತಿಹಾಸಿಕ ಕ್ಷೇತ್ರಗಳ ಸಮಗ್ರ ಅಭಿವೃದ್ಧಿಗೆ ಉಪಮುಖ್ಯಮಂತ್ರಿಗೆ ಶಾಸಕ ಹರೀಶ್ ಪೂಂಜಾರವರಿಂದ ಮನವಿ

    ಬೆಳ್ತಂಗಡಿ: ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಪ್ರಮುಖ ಧಾರ್ಮಿಕ ಹಾಗೂ ಐತಿಹಾಸಿಕ ಕ್ಷೇತ್ರಗಳ ಸಮಗ್ರ ಅಭಿವೃದ್ಧಿಗೆ ಅಗತ್ಯ ಕ್ರಮ ಕೈಗೊಳ್ಳುವಂತೆ ರಾಜ್ಯದ ಮಾನ್ಯ ಉಪಮುಖ್ಯಮಂತ್ರಿಗಳಾದ ಡಾ. ಜಿ. ಪರಮೇಶ್ವರ್ ಅವರಿಗೆ ಇಂದು ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದ ಶಾಸಕ ಹರೀಶ್ ಪೂಂಜಾ ಮನವಿ…

    Spread the love

    ಬೆಳ್ತಂಗಡಿ: ಗುರುವಾಯನಕೆರೆ-ವೇಣೂರಿನ ಹದಗೆಟ್ಟ ರಸ್ತೆಯ ತುರ್ತು ದುರಸ್ತಿ ಕಾರ್ಯ, ಶಾಸಕರ ತುರ್ತು ಸ್ಪಂದನೆ

    ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಗುರುವಾಯನಕೆರೆ–ವೇಣೂರು ಮುಖ್ಯರಸ್ತೆಯ ಪಡಂಗಡಿ ಭಾಗದಲ್ಲಿ ಇತ್ತೀಚಿನ ಭಾರೀ ಮಳೆಯಿಂದ ರಸ್ತೆ ಹದಗೆಟ್ಟು ಸಾರ್ವಜನಿಕರು ಹಾಗೂ ವಾಹನ ಸವಾರರು ಸಂಚಾರಕ್ಕೆ ತೊಂದರೆ ಅನುಭವಿಸುತ್ತಿದ್ದರು. ಈ ಕುರಿತು ಶಾಸಕ ಶ್ರೀ ಹರೀಶ್ ಪೂಂಜ ಅವರ ಮುತುವರ್ಜಿಯಿಂದ ಸ್ಥಳವನ್ನು ಪರಿಶೀಲಿಸಿ, ಸಾರ್ವಜನಿಕರ…

    Spread the love

    You Missed

    ಬೆಳ್ತಂಗಡಿ ಕ್ಷೇತ್ರದ ಧಾರ್ಮಿಕ-ಐತಿಹಾಸಿಕ ಕ್ಷೇತ್ರಗಳ ಸಮಗ್ರ ಅಭಿವೃದ್ಧಿಗೆ ಉಪಮುಖ್ಯಮಂತ್ರಿಗೆ ಶಾಸಕ ಹರೀಶ್ ಪೂಂಜಾರವರಿಂದ ಮನವಿ

    • By admin
    • July 30, 2026
    • 3 views
    ಬೆಳ್ತಂಗಡಿ ಕ್ಷೇತ್ರದ ಧಾರ್ಮಿಕ-ಐತಿಹಾಸಿಕ ಕ್ಷೇತ್ರಗಳ ಸಮಗ್ರ ಅಭಿವೃದ್ಧಿಗೆ ಉಪಮುಖ್ಯಮಂತ್ರಿಗೆ ಶಾಸಕ ಹರೀಶ್ ಪೂಂಜಾರವರಿಂದ ಮನವಿ

    ಬೆಳ್ತಂಗಡಿ: ಗುರುವಾಯನಕೆರೆ-ವೇಣೂರಿನ ಹದಗೆಟ್ಟ ರಸ್ತೆಯ ತುರ್ತು ದುರಸ್ತಿ ಕಾರ್ಯ, ಶಾಸಕರ ತುರ್ತು ಸ್ಪಂದನೆ

    • By admin
    • July 29, 2026
    • 8 views
    ಬೆಳ್ತಂಗಡಿ: ಗುರುವಾಯನಕೆರೆ-ವೇಣೂರಿನ  ಹದಗೆಟ್ಟ ರಸ್ತೆಯ ತುರ್ತು ದುರಸ್ತಿ ಕಾರ್ಯ, ಶಾಸಕರ ತುರ್ತು ಸ್ಪಂದನೆ

    30 ವರ್ಷಗಳಿಂದ ಶಾಪಗ್ರಸ್ತವಾಗಿರುವ ಮುಂಡಾಜೆ ಗ್ರಾಮದ ಸೀಟು–ಕಾಯರ್ತೋಡಿ–ಕೊಡಂಗೆ–ಮೂಲಾರು ಕುಡೆಂಚಿ ರಸ್ತೆ: ಚುನಾವಣೆ ಬಂದಾಗ ಶಿಲಾನ್ಯಾಸ, ಬಳಿಕ ಮರೆತುಬಿಡುವ ಆರೋಪ

    • By admin
    • July 29, 2026
    • 7 views
    30 ವರ್ಷಗಳಿಂದ ಶಾಪಗ್ರಸ್ತವಾಗಿರುವ ಮುಂಡಾಜೆ ಗ್ರಾಮದ ಸೀಟು–ಕಾಯರ್ತೋಡಿ–ಕೊಡಂಗೆ–ಮೂಲಾರು ಕುಡೆಂಚಿ ರಸ್ತೆ: ಚುನಾವಣೆ ಬಂದಾಗ ಶಿಲಾನ್ಯಾಸ, ಬಳಿಕ ಮರೆತುಬಿಡುವ ಆರೋಪ

    ಸಕಲೇಶಪುರ: ಅಕ್ರಮ ಭೂ ಮಂಜೂರಾತಿ ಹಗರಣ – ಬಂಧನ ಭೀತಿಯಿಂದ ನೂರಕ್ಕೂ ಹೆಚ್ಚು ಅಧಿಕಾರಿಗಳು ಸಾಮೂಹಿಕ ರಜೆ!

    • By admin
    • July 25, 2026
    • 12 views
    ಸಕಲೇಶಪುರ: ಅಕ್ರಮ ಭೂ ಮಂಜೂರಾತಿ ಹಗರಣ – ಬಂಧನ ಭೀತಿಯಿಂದ ನೂರಕ್ಕೂ ಹೆಚ್ಚು ಅಧಿಕಾರಿಗಳು ಸಾಮೂಹಿಕ ರಜೆ!

    ಕಲ್ಪವೃಕ್ಷ ಜ್ಞಾನ ವಿಕಾಸ ಕೇಂದ್ರದಲ್ಲಿ ಪೌಷ್ಟಿಕ ಆಹಾರ ಪ್ರಾತ್ಯಕ್ಷಿಕೆ: ಆರೋಗ್ಯಕರ ಜೀವನಕ್ಕೆ ಸಮತೋಲಿತ ಆಹಾರ ಹಾಗೂ ಸ್ವಚ್ಛತೆ ಅಗತ್ಯ – ಡಾ. ನಿಶ್ಚಯ್ ಎಚ್.ಎನ್.

    • By admin
    • July 24, 2026
    • 9 views
    ಕಲ್ಪವೃಕ್ಷ ಜ್ಞಾನ ವಿಕಾಸ ಕೇಂದ್ರದಲ್ಲಿ ಪೌಷ್ಟಿಕ ಆಹಾರ ಪ್ರಾತ್ಯಕ್ಷಿಕೆ: ಆರೋಗ್ಯಕರ ಜೀವನಕ್ಕೆ ಸಮತೋಲಿತ ಆಹಾರ ಹಾಗೂ ಸ್ವಚ್ಛತೆ ಅಗತ್ಯ – ಡಾ. ನಿಶ್ಚಯ್ ಎಚ್.ಎನ್.

    ಕರಾವಳಿಯಲ್ಲಿ ಮುಂದುವರಿದ ಮಳೆ, ಉಡುಪಿ ದಕ್ಷಿಣ ಕನ್ನಡ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ

    • By admin
    • July 24, 2026
    • 9 views
    ಕರಾವಳಿಯಲ್ಲಿ ಮುಂದುವರಿದ ಮಳೆ, ಉಡುಪಿ ದಕ್ಷಿಣ ಕನ್ನಡ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ