ನಾಳೆ ನಿಮ್ಮ ಮೊಬೈಲ್ ನಲ್ಲಿ ಪ್ರತಿಧ್ವನಿಸಲಿದೆ ಎಚ್ಚರಿಕೆ ಕರೆಗಂಟೆ ಇದು ತುರ್ತು ಎಚ್ಚರಿಕೆ ವ್ಯವಸ್ಥೆಯ ಪರೀಕ್ಷೆ

ಬೆಂಗಳೂರು: ಮುಂಬರುವ ದಿನದಲ್ಲಿ ಸಂಭವಿಸುವ ವಿಕೋಪಗಳ ಕುರಿತು ಮುನ್ಸೂಚನೆ ನೀಡುವ ನಿಟ್ಟಿನಲ್ಲಿ ಟೆಲಿಕಮ್ಯುನಿಕೇಶನ್‌ ಇಲಾಖೆ ಹಾಗೂ ರಾಷ್ಟ್ರೀಯ ವಿಪತ್ತು ನಿರ್ವಹಣ ಪ್ರಾಧಿಕಾರದ ಸಹಯೋಗದಲ್ಲಿ ಸಕಾಲಿಕ ಮುನ್ನೆಚ್ಚರಿಕೆ (ವಿಭಿನ್ನ ಧ್ವನಿ ಮತ್ತು ಕಂಪನ) ನೀಡಲು ಮುಂದಾಗಿದೆ. ಅದರ ಭಾಗವಾಗಿ ರಾಜ್ಯದಲ್ಲಿ ಅ. 12ರಂದು ತುರ್ತು ಎಚ್ಚರಿಕೆ ವ್ಯವಸ್ಥೆಯ ಪರೀಕ್ಷೆ ನಡೆಯಲಿದೆ.

ರಾಜ್ಯದಲ್ಲಿ ದೂರಸಂಪರ್ಕ ಇಲಾಖೆ (ಸಿ-ಡಾಟ್‌) ಸೆಲ್‌ ಬ್ರಾಡ್‌ ಕಾಸ್ಟಿಂಗ್‌ ಮೂಲಕ ಸ್ಮಾರ್ಟ್‌ಫೋನ್‌ ಬಳಕೆದಾರರಿಗೆ ತುರ್ತು ಎಚ್ಚರಿಕೆ ವ್ಯವಸ್ಥೆಯ ಪರೀಕ್ಷೆ ನಡೆಯಲಿದೆ. ಈಗಾಗಲೇ ಮೊಬೈಲ್‌ ಬಳಕೆದಾರರಿಗೆ ಸಂದೇಶಗಳು ರವಾನೆಯಾಗಿದೆ. ಫೋನ್‌ ಜೋರಾಗಿ ಎಚ್ಚರಿಕೆಯ ರೀತಿಯ ಬೀಪ್‌ ಶಬ್ದದೊಂದಿಗೆ ಸಂದೇಶ ಫ್ಲಾಶ್‌ ಆಗಲಿದೆ. ಬಳಕೆದಾರರು ಸರಿ ಎಂದು ಒತ್ತುವವರೆಗೂ ಈ ಬೀಪ್‌ ಬರುತ್ತಲೇ ಇರುತ್ತದೆ. ಇದು ಎಚ್ಚರಿಕೆ ಸಂದೇಶವನ್ನು ಓದಲಾಗಿದೆಯೇ ಎಂದು ಖಚಿತಪಡಿಸಿಕೊಳ್ಳುವುದು ಇದರ ಉದ್ದೇಶವಾಗಿದೆ. ಆ ಮೂಲಕ ತುರ್ತು ಎಚ್ಚರಿಕೆ ವ್ಯವಸ್ಥೆಯನ್ನು ಪರೀಕ್ಷೆ ನಡೆಯಲಿದೆ.

ಸಂದೇಶದಲ್ಲಿ ದೂರಸಂಪರ್ಕ ಇಲಾಖೆಯ ಸೆಲ್‌ ಬ್ರಾಡ್‌ಕಾಸ್ಟಿಂಗ್‌ ಸಿಸ್ಟಮ್‌ ಮೂಲಕ ಕಳುಹಿಸಿದ ಸ್ಯಾಂಪಲ್‌ ಪರೀಕ್ಷಾ ಸಂದೇಶವಾಗಿದ್ದು, ಇದನ್ನು ನಿರ್ಲಕ್ಷಿಸಿ. ನೀವು ಯಾವುದೇ ಪ್ರತಿಕ್ರಿಯೆ ನೀಡುವ ಅಗತ್ಯವಿಲ್ಲ. ಈ ಸಂದೇಶವನ್ನು ರಾಷ್ಟ್ರೀಯ ವಿಪತ್ತು ನಿರ್ವಹಣ ಪ್ರಾಧಿಕಾರವು ಜಾರಿಗೆ ತರುತ್ತಿರುವ ಪ್ಯಾನ್‌ – ಇಂಡಿಯಾ ತುರ್ತು ಎಚ್ಚರಿಕೆ ವ್ಯವಸ್ಥೆಯನ್ನು ಪರೀಕ್ಷಿಸುವ ಸಲುವಾಗಿ ಕಳುಹಿಸಲಾಗಿದೆ. ಇದು ಸಾರ್ವಜನಿಕ ಸುರಕ್ಷತೆಯನ್ನು ಹೆಚ್ಚಿಸುವ ಮತ್ತು ತುರ್ತು ಸಂದರ್ಭಗಳಲ್ಲಿ ಸಮಯೋಚಿತ ಎಚ್ಚರಿಕೆಗಳನ್ನು ನೀಡುವ ಗುರಿಯನ್ನು ಹೊಂದಿದೆ ಎನ್ನುವುದಾಗಿ ಉಲ್ಲೇಖವಾಗಲಿದೆ.

ಭೂಕಂಪ, ಸುನಾಮಿ, ಅಗ್ನಿ ದುರಂತ ಮತ್ತು ಹಠಾತ್‌ ಪ್ರವಾಹ, ಯುದ್ಧಗಳಂತಹ ವಿಪತ್ತುಗಳ ಸಂದರ್ಭಗಳಲ್ಲಿ ವಿಪತ್ತು ನಿರ್ವಹಣ ಪ್ರಾಧಿಕಾರವನ್ನು ಸನ್ನದ್ಧರಾಗಿಸಲು ಹಾಗೂ ಸಾರ್ವಜನಿಕರಿಗೆ ಎಚ್ಚರಿಕೆ ನೀಡಲು ಈ ವ್ಯವಸ್ಥೆ ಸಹಕಾರ ನೀಡಲಿದೆ. ಮುಂದಿನ ದಿನದಲ್ಲಿ ವಿಕೋಪಗಳು ಸಂಭವಿಸಬಹುದಾದ ಸ್ಥಳಗಳಲ್ಲಿನ ಮೊಬೈಲ್‌ ಬಳಕೆದಾರರಿಗೆ ಈ ಫ್ಲಾಶ್‌ ಸಂದೇಶದ ಮೂಲಕ ಎಚ್ಚರಿಸಲಾಗುತ್ತದೆ.

ಬಳಕೆದಾರರಿಗೆ ತುರ್ತು ಎಚ್ಚರಿಕೆ ವ್ಯವಸ್ಥೆಯ ಪರೀಕ್ಷೆ ಅ. 12ರಂದು ರಾಜ್ಯದಲ್ಲಿ ನಡೆಯಲಿದೆ. ಸಾರ್ವಜನಿಕರು ಭಯಪಡುವ ಅಗತ್ಯವಿಲ್ಲ. ಮುಂದಿನ ದಿನದಲ್ಲಿ ವಿಕೋಪವನ್ನು ಮುಂಚಿತವಾಗಿ ಗ್ರಹಿಸಿ, ಮುನ್ನೆಚ್ಚರಿಕೆ ಕ್ರಮ ತೆಗೆದುಕೊಳ್ಳಲು ಅನುಕೂಲವಾಗಲಿದೆ. ಪ್ರವಾಹಗಳಂತ ವಿಕೋಪ ಘಟಿಸುವ ಮುನ್ಸೂಚನೆ ನೀಡಲಿದೆ.

Spread the love
  • Related Posts

    ಕಾಡಾನೆ ದಾಳಿಯಲ್ಲಿ ಮೃತಪಟ್ಟ ಬಾಲಕೃಷ್ಣ ಗೌಡರ ಕುಟುಂಬಕ್ಕೆ ಶಾಸಕ ಹರೀಶ್ ಪೂಂಜ ಸಾಂತ್ವನ – ರೂ.20 ಲಕ್ಷ ಪರಿಹಾರಕ್ಕೆ ಕ್ರಮ

    ಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿನ ರೆಖ್ಯಾ ಗ್ರಾಮದ ಕೃಷಿ ಕಾರ್ಮಿಕರಾದ ಶ್ರೀ ಬಾಲಕೃಷ್ಣ ಗೌಡ ಅವರು ಆಗಸ್ಟ್ 1, 2026ರಂದು ರಾತ್ರಿ ಕಾಡಾನೆ ದಾಳಿಯಲ್ಲಿ ಮೃತಪಟ್ಟ ಹಿನ್ನೆಲೆಯಲ್ಲಿ ಶಾಸಕ ಶ್ರೀ ಹರೀಶ್ ಪೂಂಜ ಅವರು ಇಂದು ಅವರ ನಿವಾಸಕ್ಕೆ ಭೇಟಿ ನೀಡಿ ಕುಟುಂಬದ…

    Spread the love

    ಕಾಡಾನೆ ದಾಳಿಗೆ ವ್ಯಕ್ತಿ ಬಲಿ: ಬೆಳ್ತಂಗಡಿ ತಾಲೂಕಿನ ರೆಖ್ಯ ಗ್ರಾಮದ ಮುಚ್ಚಿರಡ್ಕದಲ್ಲಿ ದಾರುಣ ಘಟನೆ

    ನೆಲ್ಯಾಡಿ: ಬೆಳ್ತಂಗಡಿ ತಾಲೂಕಿನ ರೆಖ್ಯ ಗ್ರಾಮದ ನೇಲಡ್ಕ ಸಮೀಪದ ಮುಚ್ಚಿರಡ್ಕದಲ್ಲಿ ಕಾಡಾನೆ ದಾಳಿಗೆ ವ್ಯಕ್ತಿಯೊಬ್ಬರು ಮೃತಪಟ್ಟಿರುವ ದಾರುಣ ಘಟನೆ ಶನಿವಾರ ಸಂಜೆ ಸಂಭವಿಸಿದೆ.ಮೃತರನ್ನು ಇಡ್ಯಾಲು ನಿವಾಸಿ ಬಾಲಕೃಷ್ಣ ಗೌಡ (55) ಎಂದು ಗುರುತಿಸಲಾಗಿದೆ. ಬಾಲಕೃಷ್ಣ ಗೌಡ ಅವರು ಎಂದಿನಂತೆ ಕೆಲಸಕ್ಕೆ ತೆರಳಿದ್ದು,…

    Spread the love

    You Missed

    ಕಾಡಾನೆ ದಾಳಿಯಲ್ಲಿ ಮೃತಪಟ್ಟ ಬಾಲಕೃಷ್ಣ ಗೌಡರ ಕುಟುಂಬಕ್ಕೆ ಶಾಸಕ ಹರೀಶ್ ಪೂಂಜ ಸಾಂತ್ವನ – ರೂ.20 ಲಕ್ಷ ಪರಿಹಾರಕ್ಕೆ ಕ್ರಮ

    • By admin
    • August 2, 2026
    • 5 views
    ಕಾಡಾನೆ ದಾಳಿಯಲ್ಲಿ ಮೃತಪಟ್ಟ ಬಾಲಕೃಷ್ಣ ಗೌಡರ ಕುಟುಂಬಕ್ಕೆ ಶಾಸಕ ಹರೀಶ್ ಪೂಂಜ ಸಾಂತ್ವನ – ರೂ.20 ಲಕ್ಷ ಪರಿಹಾರಕ್ಕೆ ಕ್ರಮ

    ಕಾಡಾನೆ ದಾಳಿಗೆ ವ್ಯಕ್ತಿ ಬಲಿ: ಬೆಳ್ತಂಗಡಿ ತಾಲೂಕಿನ ರೆಖ್ಯ ಗ್ರಾಮದ ಮುಚ್ಚಿರಡ್ಕದಲ್ಲಿ ದಾರುಣ ಘಟನೆ

    • By admin
    • August 1, 2026
    • 4 views
    ಕಾಡಾನೆ ದಾಳಿಗೆ ವ್ಯಕ್ತಿ ಬಲಿ: ಬೆಳ್ತಂಗಡಿ ತಾಲೂಕಿನ ರೆಖ್ಯ ಗ್ರಾಮದ ಮುಚ್ಚಿರಡ್ಕದಲ್ಲಿ ದಾರುಣ ಘಟನೆ

    ಬೆಳ್ತಂಗಡಿಯಲ್ಲಿ ಭಾರಿ ಮಾದಕವಸ್ತು ಬೇಟೆ: ₹15.41 ಲಕ್ಷ ಮೌಲ್ಯದ ಗಾಂಜಾ, ಎಂಡಿಎಂಎ ಜಪ್ತಿ – ದುಬೈಗೆ ತೆರಳಬೇಕಿದ್ದ ಯುವಕ ಜೈಲುಪಾಲು

    • By admin
    • July 30, 2026
    • 8 views
    ಬೆಳ್ತಂಗಡಿಯಲ್ಲಿ ಭಾರಿ ಮಾದಕವಸ್ತು ಬೇಟೆ: ₹15.41 ಲಕ್ಷ ಮೌಲ್ಯದ ಗಾಂಜಾ, ಎಂಡಿಎಂಎ ಜಪ್ತಿ – ದುಬೈಗೆ ತೆರಳಬೇಕಿದ್ದ ಯುವಕ ಜೈಲುಪಾಲು

    ಐಸಿಯುನಲ್ಲಿ ಜೀವನ್ಮರಣ ಹೋರಾಟ ನಡೆಸುತ್ತಿರುವ ವಸಂತ ಗೌಡರ ತುರ್ತು ಚಿಕಿತ್ಸೆಗೆ ನೆರವಿಗಾಗಿ ಮನವಿ

    • By admin
    • July 30, 2026
    • 14 views
    ಐಸಿಯುನಲ್ಲಿ ಜೀವನ್ಮರಣ ಹೋರಾಟ ನಡೆಸುತ್ತಿರುವ ವಸಂತ ಗೌಡರ ತುರ್ತು ಚಿಕಿತ್ಸೆಗೆ  ನೆರವಿಗಾಗಿ ಮನವಿ

    ಬೆಳ್ತಂಗಡಿ ಕ್ಷೇತ್ರದ ಧಾರ್ಮಿಕ-ಐತಿಹಾಸಿಕ ಕ್ಷೇತ್ರಗಳ ಸಮಗ್ರ ಅಭಿವೃದ್ಧಿಗೆ ಉಪಮುಖ್ಯಮಂತ್ರಿಗೆ ಶಾಸಕ ಹರೀಶ್ ಪೂಂಜಾರವರಿಂದ ಮನವಿ

    • By admin
    • July 30, 2026
    • 12 views
    ಬೆಳ್ತಂಗಡಿ ಕ್ಷೇತ್ರದ ಧಾರ್ಮಿಕ-ಐತಿಹಾಸಿಕ ಕ್ಷೇತ್ರಗಳ ಸಮಗ್ರ ಅಭಿವೃದ್ಧಿಗೆ ಉಪಮುಖ್ಯಮಂತ್ರಿಗೆ ಶಾಸಕ ಹರೀಶ್ ಪೂಂಜಾರವರಿಂದ ಮನವಿ

    ಬೆಳ್ತಂಗಡಿ: ಗುರುವಾಯನಕೆರೆ-ವೇಣೂರಿನ ಹದಗೆಟ್ಟ ರಸ್ತೆಯ ತುರ್ತು ದುರಸ್ತಿ ಕಾರ್ಯ, ಶಾಸಕರ ತುರ್ತು ಸ್ಪಂದನೆ

    • By admin
    • July 29, 2026
    • 13 views
    ಬೆಳ್ತಂಗಡಿ: ಗುರುವಾಯನಕೆರೆ-ವೇಣೂರಿನ  ಹದಗೆಟ್ಟ ರಸ್ತೆಯ ತುರ್ತು ದುರಸ್ತಿ ಕಾರ್ಯ, ಶಾಸಕರ ತುರ್ತು ಸ್ಪಂದನೆ