74ನೇ ಸ್ವಾತಂತ್ರ್ಯೋತ್ಸವ ದಿನಾಚರಣೆ : ಪ್ರಧಾನಿ ನರೇಂದ್ರ ಮೋದಿ ಭಾಷಣದ ಮುಖ್ಯಾಂಶಗಳು

ಕಣ್ಣಿಗೆ ಕಾಣದ ರೋಗಾಣು ಕೋವಿಡ್19 ನಿಂದ ಸ್ವಾತಂತ್ರ್ಯ ಬಯಸುತ್ತಾ“,

ನವದೆಹಲಿ: ದೇಶದ 74ನೇ ಸ್ವಾತಂತ್ರೋತ್ಸವ ದಿನಾಚರಣೆ ಸಂದರ್ಭದಲ್ಲಿ ನರೇಂದ್ರ ಮೋದಿಯವರು ದೆಹಲಿಯ ಕೆಂಪುಕೋಟೆಯಲ್ಲಿ ಧ್ವಜಾರೋಹಣ ನೆರವೇರಿಸಿದರು.

ಬಳಿಕ ದೇಶದ ಜನತೆಯನ್ನು ಉದ್ದೇಶಿಸಿ ಮಾತನಾಡಿದ ಅವರು ‘ಆತ್ಮ ನಿರ್ಭರ ಭಾರತ’, ರಕ್ಷಣೆ, ಕೃಷಿ ಕ್ಷೇತ್ರಗಳಲ್ಲಿ ಸ್ವಾವಲಂಬನೆ, ಮಹಿಳಾ ಸಬಲೀಕರಣ, ಅಂತರರಾಷ್ಟ್ರೀಯ ಬಾಂಧವ್ಯ ಸೇರಿದಂತೆ ಹಲವು ವಿಚಾರಗಳನ್ನು ಪ್ರಸ್ತಾಪಿಸಿದರು.

ಮೋದಿ ಅವರು ಸ್ವಾತಂತ್ರ್ಯೋತ್ಸವ ದಿನದಂದು ರಾಷ್ಟ್ರವನ್ನುದ್ದೇಶಿಸಿ ಮಾತನಾಡಿರುವುದು ಇದು 7ನೇ ಬಾರಿ. ಭಾಷಣದ ಮುಖ್ಯಾಂಶಗಳು ಇಲ್ಲಿವೆ.

ದೇಶದ ಉಜ್ವಲ ಭವಿಷ್ಯಕ್ಕೆ ಕೊರೊನಾ ಅಡ್ಡಿಯಾಗಿದೆ. ಸಾಂಕ್ರಾಮಿಕದ ವಿರುದ್ಧದ ಹೋರಾಟದಲ್ಲಿ ಕೊರೊನಾ ಯೋಧರ ಕಾರ್ಯ ಶ್ಲಾಘನೀಯ.

ನಾವು ಸಂಕಷ್ಟದ ಸಮಯಗಳನ್ನು ಎದುರಿಸುತ್ತಿದ್ದೇವೆ ನಾನು ಇಂದು (ಕೆಂಪು ಕೋಟೆಯಲ್ಲಿ) ಚಿಕ್ಕ ಮಕ್ಕಳನ್ನು ನನ್ನ ಮುಂದೆ ನೋಡಲು ಸಾಧ್ಯವಾಗುತ್ತಿಲ್ಲ. ಕೊರೊನಾ ಎಲ್ಲರಿಗೂ ತಡೆಯೊಡ್ಡಿದೆ.

ಈ ಕೋವಿಡ್ ಕಾಲದಲ್ಲಿ, ಕೊರೊನಾ ಯೋಧರು ‘ಸೇವಾ ಪಾರ್ಮೋ ಧರ್ಮಃ’ ಮಂತ್ರವನ್ನು ಗಮನದಲ್ಲಿಟ್ಟುಕೊಂಡು ಭಾರತದ ಜನರಿಗೆ ಸೇವೆ ಸಲ್ಲಿಸಿದ್ದಾರೆ ಅವರಿಗೆ ಕೃತಜ್ಞತೆಗಳು.

ಸ್ವಾತಂತ್ರ್ಯ ಹೋರಾಟಗಾರರ ತ್ಯಾಗವನ್ನು ನೆನಪಿಸುವ ದಿನ ಇದು. ನಮ್ಮ ಭದ್ರತೆಯನ್ನು ಖಾತರಿಪಡಿಸುವ ಸೇನೆ, ಅರೆಸೈನಿಕ ಮತ್ತು ಪೊಲೀಸರು ಸೇರಿದಂತೆ ಭದ್ರತಾ ಸಿಬ್ಬಂದಿಗೆ ಕೃತಜ್ಞತೆ ಸಲ್ಲಿಸುವ ದಿನ ಇದು
ಭಾರತ ಯುವ ಶಕ್ತಿಯಿಂದ ತುಂಬಿದ ದೇಶ, ‘ಆತ್ಮ ನಿರ್ಭರ’ಕ್ಕೆ ಆತ್ಮವಿಶ್ವಾಸ ಹೊಂದಿರುವ ದೇಶ ಭಾರತ
ಸ್ವತಂತ್ರ ಭಾರತದ ಮನಸ್ಥಿತಿ ‘ವೋಕಲ್ ಫಾರ್ ಲೋಕಲ್ (ಸ್ಥಳೀಯ ಉತ್ಪನ್ನಗಳಿಗೆ ನಾವು ದನಿಯಾಗಬೇಕು)’ ಆಗಿರಬೇಕು. ಸ್ಥಳೀಯ ಉತ್ಪನ್ನಗಳನ್ನು ನಾವು ಇಷ್ಟಪಡಬೇಕು. ನಾವಿದನ್ನು ಮಾಡದಿದ್ದರೆ ಸ್ಥಳೀಯವಾಗಿ ಉತ್ತಮ ಉತ್ಪನ್ನಗಳ ತಯಾರಿಗೆ ಅವಕಾಶ ದೊರೆಯುವುದಿಲ್ಲ, ಪ್ರೋತ್ಸಾಹ ದೊರೆಯುವುದಿಲ್ಲ.

ಕಳೆದ ವರ್ಷ ವಿದೇಶಿ ನೇರ ಹೂಡಿಕೆಯಲ್ಲಿ ಶೇ 18ರ ದಾಖಲೆಯ ಹೆಚ್ಚಳವಾಗಿತ್ತು. ಜಗತ್ತು ಭಾರತದ ಮೇಲೆ ವಿಶ್ವಾಸವಿರಿಸಿದೆ. ನಮ್ಮ ಪ್ರಜಾಪ್ರಭುತ್ವ, ಆರ್ಥಿಕತೆಯ ತಳಹದಿ ಗಟ್ಟಿಗೊಳಿಸುವ ನಿಟ್ಟಿನಲ್ಲಿ ನೀತಿಗಳನ್ನು ರೂಪಿಸಿದ್ದೇವೆ.

‘ಆತ್ಮ ನಿರ್ಭರ ಭಾರತ’ ಸಾಧಿಸಲು ಕೃಷಿ ಕ್ಷೇತ್ರ, ಕೃಷಿಕರು ‘ಆತ್ಮ ನಿರ್ಭರ’ರಾಗಬೇಕಿದೆ. ಕೃಷಿಕರಿಗೆ ಹೆಚ್ಚು ಮೂಲಸೌಕರ್ಯ ಕಲ್ಪಿಸಲು ₹1 ಲಕ್ಷ ಕೋಟಿ ‘ಕೃಷಿ ಮೂಲಸೌಕರ್ಯ ನಿಧಿ’ ಸ್ಥಾಪಿಸಲಾಗಿದೆ: ಮೋದಿ

2014ಕ್ಕೂ ಮೊದಲು ಕೇವಲ 5 ಡಜನ್ ಹಳ್ಳಿಗಳಿಗೆ ಆಪ್ಟಿಕಲ್ ಫೈಬರ್ ಸಂಪರ್ಕವಿತ್ತು. ಕಳೆದ 5 ವರ್ಷಗಳಲ್ಲಿ 1.5 ಲಕ್ಷ ಗ್ರಾಮ ಪಂಚಾಯಿತಿಗಳಿಗೆ ಆಪ್ಟಿಕಲ್ ಫೈಬರ್ ಸಂಪರ್ಕ ಒದಗಿಸಲಾಗಿದೆ. ಮುಂದಿನ ಸಾವಿರ ದಿನಗಳಲ್ಲಿ ಎಲ್ಲ ಹಳ್ಳಿಗಳಿಗೆ ದೊರೆಯಲಿದೆ.

‘ಆತ್ಮ ನಿರ್ಭರ ಭಾರತ’ ಸಾಧಿಸಲು ಶಿಕ್ಷಣ ಬಹು ಮುಖ್ಯವಾದದ್ದು. ಅದಕ್ಕಾಗಿ ಹೊಸ ಶಿಕ್ಷಣ ನೀತಿ ರೂಪಿಸಿದ್ದೇವೆ.

ಮಹಿಳೆಯರು ಅವಕಾಶ ಸಿಕ್ಕಾಗಲೆಲ್ಲ ಭಾರತವನ್ನು ಗಟ್ಟಿಗೊಳಿಸಿದ್ದಾರೆ. ಹೆಮ್ಮೆಗೊಳ್ಳುವಂತೆ ಮಾಡಿದ್ದಾರೆ
ಸ್ತ್ರೀಯರ ವಿವಾಹದ ಕನಿಷ್ಠ ವಯೋಮಿತಿಯ ಪುನರ್ ಪರಿಶೀಲನೆಗೆ ಸಮಿತಿ ರಚಿಸಿದ್ದೇವೆ. ಸಮಿತಿ ವರದಿ ಸಲ್ಲಿಸಿದ ಬಳಿಕ ಸೂಕ್ತ ನಿರ್ಧಾರ ಕೈಗೊಳ್ಳಲಿದ್ದೇವೆ.

ಕೊರೊನಾಗೆ ಲಸಿಕೆ ಅಭಿವೃದ್ಧಿಪಡಿಸಲು ವಿಜ್ಞಾನಿಗಳು ಹಗಲಿರುಳು ಶ್ರಮಿಸುತ್ತಿದ್ದಾರೆ. ದೇಶದಲ್ಲಿ ಮೂರು ಲಸಿಕೆಗಳು ಪ್ರಾಯೋಗಿಕ ಹಂತದಲ್ಲಿವೆ. ವಿಜ್ಞಾನಿಗಳು ಸಮ್ಮತಿ ಸೂಚಿಸಿದ ಬೆನ್ನಲ್ಲೇ ಅಪಾರ ಪ್ರಮಾಣದ ಉತ್ಪಾದನೆ ಆರಂಭವಾಗಲಿದೆ.

ಜಮ್ಮು-ಕಾಶ್ಮೀರದಲ್ಲಿ ಅಭಿವೃದ್ಧಿಯ ಹೊಸ ಯುಗ ಶುರುವಾಗಿದೆ

ನಮ್ಮೊಂದಿಗೆ ಗಡಿ ಹಂಚಿಕೊಂಡಿರುವವರು ಮಾತ್ರ ನೆರೆಯವರಲ್ಲ. ಸಹೃದಯಿ ಬಾಂಧವ್ಯ ಹೊಂದಿಕೊಂಡಿರುವವರೂ ನೆರೆಯವರೇ. ಕಳೆದ ಕೆಲವು ಸಮಯಗಳಿಂದ ಭಾರತವು ಎಲ್ಲ ದೇಶಗಳೊಂದಿಗೆ ಬಾಂಧವ್ಯ ಹೆಚ್ಚಿಸಿಕೊಂಡಿದೆ

ಭಯೋತ್ಪಾದನೆ, ಭೂಪ್ರದೇಶ ವಿಸ್ತರಣಾ ವಾದವನ್ನು ಭಾರತ ಸೋಲಿಸುತ್ತಿದೆ. ಎಲ್‌ಒಸಿಯಿಂದ ಎಲ್‌ಎಸಿ ವರೆಗೆ ನಮ್ಮ ದೇಶದ ಸಾರ್ವಭೌಮತ್ವದ ಮೇಲೆ ಕಣ್ಣಿಟ್ಟವರಿಗೆ ನಮ್ಮ ಯೋಧರು ಅವರದ್ದೇ ರೀತಿಯಲ್ಲಿ ತಿರುಗೇಟು ನೀಡಿದ್ದಾರೆ.

Spread the love
  • Related Posts

    ಚಿರತೆ ದಾಳಿ ಕೂಲಿಕಾರ್ಮಿಕರಿಗೆ ಗಾಯ ಆನೆಹಾವಳಿಯ ಬಳಿಕ ಇದೀಗ ಚಿರತೆ ಕಾಟಕ್ಕೆ ಬೆಚ್ಚಿಬಿದ್ದ ಕಾರ್ಮಿಕರು

    ಬೇಲೂರು : ಬೇಲೂರು ತಾಲೂಕಿನ ಗೌತಹಳ್ಳಿಯಲ್ಲಿ ಸೋಮವಾರ ಬೆಳಿಗ್ಗೆ ಚಿರತೆ ದಾಳಿ ಸಂಭವಿಸಿ ಇಬ್ಬರು ಕೂಲಿ ಕಾರ್ಮಿಕರು ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ. ಗೌತವಳ್ಳಿ ಗ್ರಾಮವು ಬೇಲೂರು ತಾಲೂಕಿನ ಮಾಡ್ ಗೋಡು-ಚುಂಗನಹಳ್ಳಿ ಬಾರ್ಡರ್ ವ್ಯಾಪ್ತಿಗೆ ಸೇರಿದ್ದು, ಅರಣ್ಯ ಪ್ರದೇಶಕ್ಕೆ ಸಮೀಪದಲ್ಲಿರುವುದರಿಂದ ಚಿರತೆಗಳ…

    Spread the love

    ಶ್ರೀ ಕ್ಷೇತ್ರ ಮೊಂಟೆತ್ತಡ್ಕದಲ್ಲಿ ವಾರ್ಷಿಕ ಜಾತ್ರಾ ಮಹೋತ್ಸವ

    ಬೆಳ್ತಂಗಡಿ: ಶ್ರೀ ಕ್ಷೇತ್ರ ಮೊಂಟೇತ್ತಡ್ಕ ದೇವಸ್ಥಾನ ಶಿಬಾಜೆ ಇದರ ವಾರ್ಷಿಕ ಜಾತ್ರಾ ಮಹೋತ್ಸವವು ದಿನಾಂಕ 26/02/2026ನೇ ಗುರುವಾರದಿಂದ 28/02/2026ನೇ ಶನಿವಾರದ ವರೆಗೆ ನಡೆಯಲಿದೆ. ವೈದಿಕ ಕಾರ್ಯಕ್ರಮಗಳು ದಿನಾಂಕ 26-02-2026ನೇ ಗುರುವಾರದಂದುಸಂಜೆ ಗಂಟೆ 7.00ಕ್ಕೆ : ತೋರಣ ಮುಹೂರ್ತ ರಾತ್ರಿ ಗಂಟೆ 7.30ಕ್ಕೆ:…

    Spread the love

    You Missed

    ಚಿರತೆ ದಾಳಿ ಕೂಲಿಕಾರ್ಮಿಕರಿಗೆ ಗಾಯ ಆನೆಹಾವಳಿಯ ಬಳಿಕ ಇದೀಗ ಚಿರತೆ ಕಾಟಕ್ಕೆ ಬೆಚ್ಚಿಬಿದ್ದ ಕಾರ್ಮಿಕರು

    • By admin
    • February 9, 2026
    • 57 views
    ಚಿರತೆ ದಾಳಿ ಕೂಲಿಕಾರ್ಮಿಕರಿಗೆ ಗಾಯ ಆನೆಹಾವಳಿಯ ಬಳಿಕ ಇದೀಗ ಚಿರತೆ ಕಾಟಕ್ಕೆ ಬೆಚ್ಚಿಬಿದ್ದ ಕಾರ್ಮಿಕರು

    ಶ್ರೀ ಕ್ಷೇತ್ರ ಮೊಂಟೆತ್ತಡ್ಕದಲ್ಲಿ ವಾರ್ಷಿಕ ಜಾತ್ರಾ ಮಹೋತ್ಸವ

    • By admin
    • February 8, 2026
    • 42 views
    ಶ್ರೀ ಕ್ಷೇತ್ರ ಮೊಂಟೆತ್ತಡ್ಕದಲ್ಲಿ ವಾರ್ಷಿಕ ಜಾತ್ರಾ ಮಹೋತ್ಸವ

    ಮಕ್ಕಳಿಗೆ ಸಂಸ್ಕಾರಯುತ ಶಿಕ್ಷಣದ ಜೊತೆಗೆ ಧಾರ್ಮಿಕ ನಂಬಿಕೆ ಆಚಾರ ವಿಚಾರಗಳ ಬಗ್ಗೆ ಅರಿವು ಮೂಡಿಸುವ ಜವಾಬ್ದಾರಿ ತಾಯಂದಿರದ್ದು: ತೆಂಕಲಗೂಡು ಶ್ರೀ

    • By admin
    • February 7, 2026
    • 28 views
    ಮಕ್ಕಳಿಗೆ ಸಂಸ್ಕಾರಯುತ ಶಿಕ್ಷಣದ ಜೊತೆಗೆ ಧಾರ್ಮಿಕ ನಂಬಿಕೆ ಆಚಾರ ವಿಚಾರಗಳ ಬಗ್ಗೆ ಅರಿವು ಮೂಡಿಸುವ  ಜವಾಬ್ದಾರಿ ತಾಯಂದಿರದ್ದು: ತೆಂಕಲಗೂಡು ಶ್ರೀ

    ಗ್ರಾ.ಪಂ ಕಡಿರುದ್ಯಾವರ ಹಾಗೂ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಸಹಭಾಗಿತ್ವದಲ್ಲಿ ಕಾನರ್ಪದಲ್ಲಿ ನಿರ್ಮಾಣ ಗೊಂಡ ಮುಕ್ತಿದಾಮ ಲೋಕಾರ್ಪಣೆ

    • By admin
    • February 7, 2026
    • 233 views
    ಗ್ರಾ.ಪಂ ಕಡಿರುದ್ಯಾವರ ಹಾಗೂ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಸಹಭಾಗಿತ್ವದಲ್ಲಿ ಕಾನರ್ಪದಲ್ಲಿ  ನಿರ್ಮಾಣ ಗೊಂಡ ಮುಕ್ತಿದಾಮ ಲೋಕಾರ್ಪಣೆ

    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ವಾತ್ಸಲ್ಯ ಸೂರು ಹಸ್ತಾಂತರ

    • By admin
    • February 5, 2026
    • 65 views
    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ವಾತ್ಸಲ್ಯ ಸೂರು ಹಸ್ತಾಂತರ

    ಚಾರ್ಮಾಡಿ ಅರಣ್ಯದಲ್ಲಿ ಬಾರಿ ಪ್ರಮಾಣದಲ್ಲಿ ಹಬ್ಬಿದ ಬೆಂಕಿಯ ಕೆನ್ನಾಲಿಗೆ

    • By admin
    • February 2, 2026
    • 34 views
    ಚಾರ್ಮಾಡಿ ಅರಣ್ಯದಲ್ಲಿ  ಬಾರಿ ಪ್ರಮಾಣದಲ್ಲಿ ಹಬ್ಬಿದ ಬೆಂಕಿಯ ಕೆನ್ನಾಲಿಗೆ