74ನೇ ಸ್ವಾತಂತ್ರ್ಯೋತ್ಸವ ದಿನಾಚರಣೆ : ಪ್ರಧಾನಿ ನರೇಂದ್ರ ಮೋದಿ ಭಾಷಣದ ಮುಖ್ಯಾಂಶಗಳು

ಕಣ್ಣಿಗೆ ಕಾಣದ ರೋಗಾಣು ಕೋವಿಡ್19 ನಿಂದ ಸ್ವಾತಂತ್ರ್ಯ ಬಯಸುತ್ತಾ“,

ನವದೆಹಲಿ: ದೇಶದ 74ನೇ ಸ್ವಾತಂತ್ರೋತ್ಸವ ದಿನಾಚರಣೆ ಸಂದರ್ಭದಲ್ಲಿ ನರೇಂದ್ರ ಮೋದಿಯವರು ದೆಹಲಿಯ ಕೆಂಪುಕೋಟೆಯಲ್ಲಿ ಧ್ವಜಾರೋಹಣ ನೆರವೇರಿಸಿದರು.

ಬಳಿಕ ದೇಶದ ಜನತೆಯನ್ನು ಉದ್ದೇಶಿಸಿ ಮಾತನಾಡಿದ ಅವರು ‘ಆತ್ಮ ನಿರ್ಭರ ಭಾರತ’, ರಕ್ಷಣೆ, ಕೃಷಿ ಕ್ಷೇತ್ರಗಳಲ್ಲಿ ಸ್ವಾವಲಂಬನೆ, ಮಹಿಳಾ ಸಬಲೀಕರಣ, ಅಂತರರಾಷ್ಟ್ರೀಯ ಬಾಂಧವ್ಯ ಸೇರಿದಂತೆ ಹಲವು ವಿಚಾರಗಳನ್ನು ಪ್ರಸ್ತಾಪಿಸಿದರು.

ಮೋದಿ ಅವರು ಸ್ವಾತಂತ್ರ್ಯೋತ್ಸವ ದಿನದಂದು ರಾಷ್ಟ್ರವನ್ನುದ್ದೇಶಿಸಿ ಮಾತನಾಡಿರುವುದು ಇದು 7ನೇ ಬಾರಿ. ಭಾಷಣದ ಮುಖ್ಯಾಂಶಗಳು ಇಲ್ಲಿವೆ.

ದೇಶದ ಉಜ್ವಲ ಭವಿಷ್ಯಕ್ಕೆ ಕೊರೊನಾ ಅಡ್ಡಿಯಾಗಿದೆ. ಸಾಂಕ್ರಾಮಿಕದ ವಿರುದ್ಧದ ಹೋರಾಟದಲ್ಲಿ ಕೊರೊನಾ ಯೋಧರ ಕಾರ್ಯ ಶ್ಲಾಘನೀಯ.

ನಾವು ಸಂಕಷ್ಟದ ಸಮಯಗಳನ್ನು ಎದುರಿಸುತ್ತಿದ್ದೇವೆ ನಾನು ಇಂದು (ಕೆಂಪು ಕೋಟೆಯಲ್ಲಿ) ಚಿಕ್ಕ ಮಕ್ಕಳನ್ನು ನನ್ನ ಮುಂದೆ ನೋಡಲು ಸಾಧ್ಯವಾಗುತ್ತಿಲ್ಲ. ಕೊರೊನಾ ಎಲ್ಲರಿಗೂ ತಡೆಯೊಡ್ಡಿದೆ.

ಈ ಕೋವಿಡ್ ಕಾಲದಲ್ಲಿ, ಕೊರೊನಾ ಯೋಧರು ‘ಸೇವಾ ಪಾರ್ಮೋ ಧರ್ಮಃ’ ಮಂತ್ರವನ್ನು ಗಮನದಲ್ಲಿಟ್ಟುಕೊಂಡು ಭಾರತದ ಜನರಿಗೆ ಸೇವೆ ಸಲ್ಲಿಸಿದ್ದಾರೆ ಅವರಿಗೆ ಕೃತಜ್ಞತೆಗಳು.

ಸ್ವಾತಂತ್ರ್ಯ ಹೋರಾಟಗಾರರ ತ್ಯಾಗವನ್ನು ನೆನಪಿಸುವ ದಿನ ಇದು. ನಮ್ಮ ಭದ್ರತೆಯನ್ನು ಖಾತರಿಪಡಿಸುವ ಸೇನೆ, ಅರೆಸೈನಿಕ ಮತ್ತು ಪೊಲೀಸರು ಸೇರಿದಂತೆ ಭದ್ರತಾ ಸಿಬ್ಬಂದಿಗೆ ಕೃತಜ್ಞತೆ ಸಲ್ಲಿಸುವ ದಿನ ಇದು
ಭಾರತ ಯುವ ಶಕ್ತಿಯಿಂದ ತುಂಬಿದ ದೇಶ, ‘ಆತ್ಮ ನಿರ್ಭರ’ಕ್ಕೆ ಆತ್ಮವಿಶ್ವಾಸ ಹೊಂದಿರುವ ದೇಶ ಭಾರತ
ಸ್ವತಂತ್ರ ಭಾರತದ ಮನಸ್ಥಿತಿ ‘ವೋಕಲ್ ಫಾರ್ ಲೋಕಲ್ (ಸ್ಥಳೀಯ ಉತ್ಪನ್ನಗಳಿಗೆ ನಾವು ದನಿಯಾಗಬೇಕು)’ ಆಗಿರಬೇಕು. ಸ್ಥಳೀಯ ಉತ್ಪನ್ನಗಳನ್ನು ನಾವು ಇಷ್ಟಪಡಬೇಕು. ನಾವಿದನ್ನು ಮಾಡದಿದ್ದರೆ ಸ್ಥಳೀಯವಾಗಿ ಉತ್ತಮ ಉತ್ಪನ್ನಗಳ ತಯಾರಿಗೆ ಅವಕಾಶ ದೊರೆಯುವುದಿಲ್ಲ, ಪ್ರೋತ್ಸಾಹ ದೊರೆಯುವುದಿಲ್ಲ.

ಕಳೆದ ವರ್ಷ ವಿದೇಶಿ ನೇರ ಹೂಡಿಕೆಯಲ್ಲಿ ಶೇ 18ರ ದಾಖಲೆಯ ಹೆಚ್ಚಳವಾಗಿತ್ತು. ಜಗತ್ತು ಭಾರತದ ಮೇಲೆ ವಿಶ್ವಾಸವಿರಿಸಿದೆ. ನಮ್ಮ ಪ್ರಜಾಪ್ರಭುತ್ವ, ಆರ್ಥಿಕತೆಯ ತಳಹದಿ ಗಟ್ಟಿಗೊಳಿಸುವ ನಿಟ್ಟಿನಲ್ಲಿ ನೀತಿಗಳನ್ನು ರೂಪಿಸಿದ್ದೇವೆ.

‘ಆತ್ಮ ನಿರ್ಭರ ಭಾರತ’ ಸಾಧಿಸಲು ಕೃಷಿ ಕ್ಷೇತ್ರ, ಕೃಷಿಕರು ‘ಆತ್ಮ ನಿರ್ಭರ’ರಾಗಬೇಕಿದೆ. ಕೃಷಿಕರಿಗೆ ಹೆಚ್ಚು ಮೂಲಸೌಕರ್ಯ ಕಲ್ಪಿಸಲು ₹1 ಲಕ್ಷ ಕೋಟಿ ‘ಕೃಷಿ ಮೂಲಸೌಕರ್ಯ ನಿಧಿ’ ಸ್ಥಾಪಿಸಲಾಗಿದೆ: ಮೋದಿ

2014ಕ್ಕೂ ಮೊದಲು ಕೇವಲ 5 ಡಜನ್ ಹಳ್ಳಿಗಳಿಗೆ ಆಪ್ಟಿಕಲ್ ಫೈಬರ್ ಸಂಪರ್ಕವಿತ್ತು. ಕಳೆದ 5 ವರ್ಷಗಳಲ್ಲಿ 1.5 ಲಕ್ಷ ಗ್ರಾಮ ಪಂಚಾಯಿತಿಗಳಿಗೆ ಆಪ್ಟಿಕಲ್ ಫೈಬರ್ ಸಂಪರ್ಕ ಒದಗಿಸಲಾಗಿದೆ. ಮುಂದಿನ ಸಾವಿರ ದಿನಗಳಲ್ಲಿ ಎಲ್ಲ ಹಳ್ಳಿಗಳಿಗೆ ದೊರೆಯಲಿದೆ.

‘ಆತ್ಮ ನಿರ್ಭರ ಭಾರತ’ ಸಾಧಿಸಲು ಶಿಕ್ಷಣ ಬಹು ಮುಖ್ಯವಾದದ್ದು. ಅದಕ್ಕಾಗಿ ಹೊಸ ಶಿಕ್ಷಣ ನೀತಿ ರೂಪಿಸಿದ್ದೇವೆ.

ಮಹಿಳೆಯರು ಅವಕಾಶ ಸಿಕ್ಕಾಗಲೆಲ್ಲ ಭಾರತವನ್ನು ಗಟ್ಟಿಗೊಳಿಸಿದ್ದಾರೆ. ಹೆಮ್ಮೆಗೊಳ್ಳುವಂತೆ ಮಾಡಿದ್ದಾರೆ
ಸ್ತ್ರೀಯರ ವಿವಾಹದ ಕನಿಷ್ಠ ವಯೋಮಿತಿಯ ಪುನರ್ ಪರಿಶೀಲನೆಗೆ ಸಮಿತಿ ರಚಿಸಿದ್ದೇವೆ. ಸಮಿತಿ ವರದಿ ಸಲ್ಲಿಸಿದ ಬಳಿಕ ಸೂಕ್ತ ನಿರ್ಧಾರ ಕೈಗೊಳ್ಳಲಿದ್ದೇವೆ.

ಕೊರೊನಾಗೆ ಲಸಿಕೆ ಅಭಿವೃದ್ಧಿಪಡಿಸಲು ವಿಜ್ಞಾನಿಗಳು ಹಗಲಿರುಳು ಶ್ರಮಿಸುತ್ತಿದ್ದಾರೆ. ದೇಶದಲ್ಲಿ ಮೂರು ಲಸಿಕೆಗಳು ಪ್ರಾಯೋಗಿಕ ಹಂತದಲ್ಲಿವೆ. ವಿಜ್ಞಾನಿಗಳು ಸಮ್ಮತಿ ಸೂಚಿಸಿದ ಬೆನ್ನಲ್ಲೇ ಅಪಾರ ಪ್ರಮಾಣದ ಉತ್ಪಾದನೆ ಆರಂಭವಾಗಲಿದೆ.

ಜಮ್ಮು-ಕಾಶ್ಮೀರದಲ್ಲಿ ಅಭಿವೃದ್ಧಿಯ ಹೊಸ ಯುಗ ಶುರುವಾಗಿದೆ

ನಮ್ಮೊಂದಿಗೆ ಗಡಿ ಹಂಚಿಕೊಂಡಿರುವವರು ಮಾತ್ರ ನೆರೆಯವರಲ್ಲ. ಸಹೃದಯಿ ಬಾಂಧವ್ಯ ಹೊಂದಿಕೊಂಡಿರುವವರೂ ನೆರೆಯವರೇ. ಕಳೆದ ಕೆಲವು ಸಮಯಗಳಿಂದ ಭಾರತವು ಎಲ್ಲ ದೇಶಗಳೊಂದಿಗೆ ಬಾಂಧವ್ಯ ಹೆಚ್ಚಿಸಿಕೊಂಡಿದೆ

ಭಯೋತ್ಪಾದನೆ, ಭೂಪ್ರದೇಶ ವಿಸ್ತರಣಾ ವಾದವನ್ನು ಭಾರತ ಸೋಲಿಸುತ್ತಿದೆ. ಎಲ್‌ಒಸಿಯಿಂದ ಎಲ್‌ಎಸಿ ವರೆಗೆ ನಮ್ಮ ದೇಶದ ಸಾರ್ವಭೌಮತ್ವದ ಮೇಲೆ ಕಣ್ಣಿಟ್ಟವರಿಗೆ ನಮ್ಮ ಯೋಧರು ಅವರದ್ದೇ ರೀತಿಯಲ್ಲಿ ತಿರುಗೇಟು ನೀಡಿದ್ದಾರೆ.

Spread the love
  • Related Posts

    ಬೆಳ್ತಂಗಡಿ : ಅತಿ ಹಿಂದುಳಿದ ಮಠಾಧೀಶರ ಮಹಾಸಭಾವತಿಯಿಂದ ಡಾ.ಡಿ. ವೀರೇಂದ್ರ ಹೆಗ್ಗಡೆಯವರ ಭೇಟಿ

    ಬೆಳ್ತಂಗಡಿ: ಇತ್ತೀಚಿನ ದಿನಗಳಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಹಾಗೂ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರ ವಿರುದ್ಧ ಕೇಳಿಬರುತ್ತಿರುವ ಆರೋಪಗಳ ಹಿನ್ನೆಲೆಯಲ್ಲಿ ಅತಿ ಹಿಂದುಳಿದ ಮಠಾಧೀಶರ ಮಹಾಸಭೆ (ರಿ.) ಕೋರ್ ಕಮಿಟಿಯ ಸದಸ್ಯರಾದ ಸ್ವಾಮೀಜಿಗಳು ಧರ್ಮಸ್ಥಳಕ್ಕೆ ಜು.10 ರಂದು ಭೇಟಿ ನೀಡಿ,…

    Spread the love

    ಬೆಳ್ತಂಗಡಿ ತಹಶೀಲ್ದಾರ್ ಆಗಿ ಎಸ್.ಎನ್.ನರಗುಂದ ಅಧಿಕಾರ ಸ್ವೀಕಾರ

    ಬೆಳ್ತಂಗಡಿ : ತಹಶೀಲ್ದಾರ್ ಪೃಥ್ವಿ ಸಾನಿಕಂ ವರ್ಗಾವಣೆಯಾದ ಜಾಗಕ್ಕೆ ಹೊಸ ತಹಶೀಲ್ದಾರ್ ಆಗಿ ಎಸ್.ಎನ್.ನರಗುಂದ ಅವರನ್ನು ಸರಕಾರ ನೇಮಕ ಮಾಡಿ ಜು.2 ರಂದು ಆದೇಶ ಹೊರಡಿಸಿತ್ತು.‌ ಇದೀಗ ಮೈಸೂರು ಜಿಲ್ಲೆಯ ಅಭಿವೃದ್ಧಿ ಪ್ರಾಧಿಕಾರದ ವಿಶೇಷ ಗ್ರೇಡ್-1 ತಹಶೀಲ್ದಾರ್ ಆಗಿರುವ ಎಸ್.ಎನ್.ನರಗುಂದ ಅವರು…

    Spread the love

    You Missed

    ಬಿ.ಟಿ. ರಂಜನ್ ವಾರ್ಷಿಕ ಪ್ರಶಸ್ತಿಗೆ ಅರವಿಂದ ಹೆಬ್ಬಾರ್ ಮುಂಡಾಜೆ ಆಯ್ಕೆ

    • By admin
    • July 15, 2026
    • 3 views
    ಬಿ.ಟಿ. ರಂಜನ್ ವಾರ್ಷಿಕ ಪ್ರಶಸ್ತಿಗೆ ಅರವಿಂದ ಹೆಬ್ಬಾರ್ ಮುಂಡಾಜೆ ಆಯ್ಕೆ

    ಮಾರುವೇಷ ಯಾಕೆ ಸ್ವಾಮಿ.. ಇದು ಚಿಲ್ಲರೆ ಕಾಲವಲ್ಲ, ಕ್ಯೂಆರ್ ಕೋಡ್ ಕಾಲ: ಸಚಿವ ಸುರೇಶ್‌ಗೆ ಶಾಸಕ ಸುರೇಶ್ ಕುಮಾರ್ ಪಾಠ

    • By admin
    • July 13, 2026
    • 5 views
    ಮಾರುವೇಷ ಯಾಕೆ ಸ್ವಾಮಿ.. ಇದು ಚಿಲ್ಲರೆ ಕಾಲವಲ್ಲ, ಕ್ಯೂಆರ್ ಕೋಡ್ ಕಾಲ: ಸಚಿವ ಸುರೇಶ್‌ಗೆ ಶಾಸಕ ಸುರೇಶ್ ಕುಮಾರ್ ಪಾಠ

    ನಾರಾವಿ ಮಹರ್ಷಿ ವಾಲ್ಮೀಕಿ ಆದಿವಾಸಿ ಬುಡಕಟ್ಟು ವಸತಿ ಶಾಲೆ ಹಾಗೂ ಹಳೆಕೋಟೆ ಮೆಟ್ರಿಕ್ ಪೂರ್ವ ಬಾಲಕರ ವಸತಿ ನಿಲಯಕ್ಕೆ ತಲಾ ರೂ.2 ಕೋಟಿ; ಸರ್ಕಾರಕ್ಕೆ ಶಾಸಕ ಹರೀಶ್ ಪೂಂಜ ಕೃತಜ್ಞತೆ.

    • By admin
    • July 12, 2026
    • 10 views
    ನಾರಾವಿ ಮಹರ್ಷಿ ವಾಲ್ಮೀಕಿ ಆದಿವಾಸಿ ಬುಡಕಟ್ಟು ವಸತಿ ಶಾಲೆ ಹಾಗೂ ಹಳೆಕೋಟೆ ಮೆಟ್ರಿಕ್ ಪೂರ್ವ ಬಾಲಕರ ವಸತಿ ನಿಲಯಕ್ಕೆ ತಲಾ ರೂ.2 ಕೋಟಿ; ಸರ್ಕಾರಕ್ಕೆ ಶಾಸಕ ಹರೀಶ್ ಪೂಂಜ ಕೃತಜ್ಞತೆ.

    ಬಳಂಜ- ಸುದೆಗುಂಡಿ ಸಂಪರ್ಕ ರಸ್ತೆ ಕಾಂಕ್ರೀಟಿಕರಣ: ಶಾಸಕ ಹರೀಶ್ ಪೂಂಜಾರವರಿಂದ ಶಿಲಾನ್ಯಾಸ:

    • By admin
    • July 12, 2026
    • 19 views
    ಬಳಂಜ- ಸುದೆಗುಂಡಿ ಸಂಪರ್ಕ ರಸ್ತೆ ಕಾಂಕ್ರೀಟಿಕರಣ: ಶಾಸಕ ಹರೀಶ್ ಪೂಂಜಾರವರಿಂದ ಶಿಲಾನ್ಯಾಸ:

    ಎತ್ತಿನಹೊಳೆ ಯೋಜನೆಯ ಪೈಪ್‌ಲೈನ್ ಸ್ಫೋಟಗೊಂಡು ನೂರು ಅಡಿ ಎತ್ತರಕ್ಕೆ ಚಿಮ್ಮಿದ ನೀರು

    • By admin
    • July 12, 2026
    • 38 views
    ಎತ್ತಿನಹೊಳೆ ಯೋಜನೆಯ ಪೈಪ್‌ಲೈನ್ ಸ್ಫೋಟಗೊಂಡು ನೂರು ಅಡಿ ಎತ್ತರಕ್ಕೆ ಚಿಮ್ಮಿದ ನೀರು

    ವಿದ್ಯಾರ್ಥಿಗಳಿಗೆ ನೇಜಿ ನಾಟಿ ಪ್ರಾತ್ಯಕ್ಷಿಕೆ: ಕೃಷಿ ಬಗ್ಗೆ ಅರಿವು ಮೂಡಿಸುವ ಕಾರ್ಯಕ್ರಮ

    • By admin
    • July 12, 2026
    • 87 views
    ವಿದ್ಯಾರ್ಥಿಗಳಿಗೆ ನೇಜಿ ನಾಟಿ ಪ್ರಾತ್ಯಕ್ಷಿಕೆ: ಕೃಷಿ ಬಗ್ಗೆ ಅರಿವು ಮೂಡಿಸುವ ಕಾರ್ಯಕ್ರಮ