ಇಂದು ಪ್ರಧಾನಿ ನರೇಂದ್ರ ಮೋದಿಯವರು ದೇಶವನ್ನುದ್ದೇಶಿಸಿ ಮಾತನಾಡಿದರು.

ನವದೆಹಲಿ: ಕೊರೋನಾದ ಸಾಂಕ್ರಾಮಿಕ ರೋಗದ ಸಂಕಷ್ಟ ಸಮಯ ಆರಂಭವಾದ ನಂತರ ಕಳೆದ ಏಳು ತಿಂಗಳಲ್ಲಿ ಏಳನೇ ಬಾರಿ ದೇಶದ ಜನತೆಯನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿಯವರು, ಕೋವಿಡ್ 19 ಇನ್ನೂ ಕೊನೆಗೊಂಡಿಲ್ಲ. ಕಳೆದ 7ರಿಂದ 8 ತಿಂಗಳ ಅವಧಿಯಲ್ಲಿ ಪ್ರತಿಯೊಬ್ಬ ಭಾರತೀಯನ ಪ್ರಯತ್ನದ ಫಲವಾಗಿ ಭಾರತದಲ್ಲಿ ಸ್ಥಿರತೆ ಕಾಯ್ದುಕೊಳ್ಳಲಾಗಿದೆ. ಅದನ್ನು ಹಾಳುಗೆಡಹುವ ಕೆಲಸ ನಮ್ಮಿಂದ ಆಗದಂತೆ ಎಚ್ಚರಿಕೆಯಿಂದ ಇರಬೇಕು ಎಂದ ಅವರು, ಇದೇ ವೇಳೆ ನವರಾತ್ರಿ, ಈದ್​ ದೀಪಾವಳಿ, ಚಥ್​​​ ಪೂಜಾ ಶುಭಾಶಯ ತಿಳಿಸಿದರು.

ಜೀವನದ ಉದ್ದೇಶಕ್ಕಾಗಿ ನಾವು ಹೊರಬರುತ್ತಿದ್ದೇವೆ. ಲಾಕ್​ಡೌನ್​ ಮುಗಿಯಿತು ಎಂದ ಮಾತ್ರಕ್ಕೆ ವೈರಸ್​ ಕೊನೆಗೊಂಡಿಲ್ಲ ಎಂಬುದನ್ನು ಮರೆಯಬಾರದು.

ಹಬ್ಬದ ಸಮಯ ಎಂಬುದು ಜೀವನದ ಖುಷಿ. ಈ ವೇಳೆ ಬೇಜಾವಬ್ದಾರಿ ವಹಿಸಿದರೆ, ಭಾರೀ ದಂಡ ತೆರೆಬೇಕಾಗುತ್ತದೆ. ಈ ಸಮಯದಲ್ಲಿ ಎಚ್ಚರದಿಂದ ಇದ್ದರೆ, ಉತ್ತಮ ದಿನಗಳು ನಮ್ಮ ಮುಂದಿರಲಿದೆ.

ಅಮೆರಿಕ, ಯುರೋಪ್​ಗಳಲ್ಲಿ ಕೊರೋನಾ ಕಡಿಮೆಯಾಗುತ್ತಿದ್ದಂತೆ ಹೆಚ್ಚಾಗಿದ್ದನ್ನು ಜನರು ಮರೆಯಬಾರದು.

ಹಬ್ಬದ ಸಮಯಲ್ಲಿ ಜನರು ಜಾಗರುಕತೆಯಿಂದ ಮೂರು ಮಂತ್ರಗಳಾದ ಸ್ವಚ್ಛತೆ, ಮಾಸ್ಕ್​ಧಾರಣೆ, ಸಾಮಾಜಿಕ ಅಂತರಗಳನ್ನು ಅನುಸರಿಸಬೇಕು.

ನಿಮ್ಮನ್ನು ನೀವು ಕಾಪಾಡಿಕೊಳ್ಳುವ ಮೂಲಕ ಇದೇ ದೇಶಕ್ಕೆ ನೀಡುವ ಸೇವೆ. ಈ ವಿಷಯದಲ್ಲಿ ನೀವು ನಮಗೆ ಜೊತೆಯಾಗಬೇಕು.

ಇಂದು ದೇಶದಲ್ಲಿ ರಿಕವರಿ ರೇಟ್​ ಚೆನ್ನಾಗಿದೆ. ಮರಣ ಪ್ರಮಾಣ ಕಡಿಮೆ ಇದೆ. ಭಾರತದಲ್ಲಿ 10 ಲಕ್ಷ ಜನಸಂಖ್ಯೆಗೆ 5,500 ಜನರಷ್ಟೇ ಸೋಂಕಿತರಾಗಿದ್ದಾರೆ. ಅಮೆರಿಕ, ಬ್ರೆಜಿಲ್​ ಮುಂತಾದ ರಾಷ್ಟ್ರಗಳಲ್ಲಿ ಇದು 25,000 ಇದೆ. ಮರಣ ಪ್ರಮಾಣ ಪ್ರತಿ 10 ಲಕ್ಷಕ್ಕೆ ಭಾರತದಲ್ಲಿ 83 ಇದ್ದರೆ, ಅಮೆರಿಕ, ಬ್ರೆಜಿಲ್, ಸ್ಪೇನ್​, ಬ್ರಿಟನ್​ಗಳಲ್ಲಿ 600ಕ್ಕೂ ಹೆಚ್ಚಿದೆ ಎಂದು ಪ್ರಧಾನಿ ಮೋದಿಯವರು ತಮ್ಮ ಭಾಷಣದಲ್ಲಿ ತಿಳಿಸಿದ್ದಾರೆ

Spread the love
  • Related Posts

    ಬಂಗಾಡಿ ಸಹಕಾರಿ ವ್ಯವಸಾಯಿಕ ಸಂಘದ ವಾರ್ಷಿಕ ಮಹಾಸಭೆ ಆ.29ರಂದು ನಡೆಯಲಿದೆ. ಶೇ.70ಕ್ಕಿಂತ ಹೆಚ್ಚು ಅಂಕ ಪಡೆದ ಸದಸ್ಯರ ಮಕ್ಕಳಿಗೆ ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನ

    ಬಂಗಾಡಿ, ಆ.7: ಬಂಗಾಡಿ ಸಹಕಾರಿ ವ್ಯವಸಾಯಿಕ ಸಂಘ (ನಿ.) ಬಂಗಾಡಿಯ 2025–26ನೇ ಸಾಲಿನ ವಾರ್ಷಿಕ ಮಹಾಸಭೆಯು ಆಗಸ್ಟ್ 29, 2026ರ ಶನಿವಾರ ಬೆಳಿಗ್ಗೆ 9.30 ಗಂಟೆಗೆ ಕೊಲ್ಲಿ ಶ್ರೀ ದುರ್ಗಾದೇವಿ ದೇವಸ್ಥಾನದ ವಠಾರದಲ್ಲಿ ನಡೆಯಲಿದೆ. ಸಂಘದ ಅಧ್ಯಕ್ಷರು ಹಾಗೂ ಆಡಳಿತ ಮಂಡಳಿಯವರು…

    Spread the love

    “ಶಿಕ್ಷಣದ ಹೆಮ್ಮೆಗೆ ಡ್ರಗ್ಸ್ ಕರಿನೆರಳು: ಎಚ್ಚೆತ್ತುಕೊಳ್ಳಬೇಕಿದೆ ಬೆಳ್ತಂಗಡಿಯ ಜನತೆ!!!”

    🖊️• ವರದಿ: ರಾಜೇಶ್ ಎಂ ಕಾನರ್ಪ ಬೆಳ್ತಂಗಡಿಯ ಶೈಕ್ಷಣಿಕ ಘನತೆಗೆ ಕಪ್ಪುಚುಕ್ಕೆಯಾಗುತ್ತಿರುವ ಮಾದಕ ದ್ರವ್ಯ ಜಾಲ: ಈಗಲೇ ಎಚ್ಚೆತ್ತುಕೊಳ್ಳಬೇಕಾದ ಸಮಯ ಒಂದು ಕಾಲದಲ್ಲಿ ಶಿಕ್ಷಣ, ಸಂಸ್ಕಾರ ಮತ್ತು ಶಾಂತಿಯ ನೆಲವೆಂದು ಗುರುತಿಸಿಕೊಂಡಿದ್ದ ಬೆಳ್ತಂಗಡಿ ತಾಲೂಕು ಇಂದು ರಾಜ್ಯದ ಶೈಕ್ಷಣಿಕ ನಕ್ಷೆಯಲ್ಲಿ ತನ್ನದೇ…

    Spread the love

    You Missed

    ಬಂಗಾಡಿ ಸಹಕಾರಿ ವ್ಯವಸಾಯಿಕ ಸಂಘದ ವಾರ್ಷಿಕ ಮಹಾಸಭೆ ಆ.29ರಂದು ನಡೆಯಲಿದೆ. ಶೇ.70ಕ್ಕಿಂತ ಹೆಚ್ಚು ಅಂಕ ಪಡೆದ ಸದಸ್ಯರ ಮಕ್ಕಳಿಗೆ ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನ

    • By admin
    • August 7, 2026
    • 3 views
    ಬಂಗಾಡಿ ಸಹಕಾರಿ ವ್ಯವಸಾಯಿಕ ಸಂಘದ ವಾರ್ಷಿಕ ಮಹಾಸಭೆ ಆ.29ರಂದು ನಡೆಯಲಿದೆ. ಶೇ.70ಕ್ಕಿಂತ ಹೆಚ್ಚು ಅಂಕ ಪಡೆದ ಸದಸ್ಯರ ಮಕ್ಕಳಿಗೆ ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನ

    “ಶಿಕ್ಷಣದ ಹೆಮ್ಮೆಗೆ ಡ್ರಗ್ಸ್ ಕರಿನೆರಳು: ಎಚ್ಚೆತ್ತುಕೊಳ್ಳಬೇಕಿದೆ ಬೆಳ್ತಂಗಡಿಯ ಜನತೆ!!!”

    • By admin
    • August 6, 2026
    • 9 views
    “ಶಿಕ್ಷಣದ ಹೆಮ್ಮೆಗೆ ಡ್ರಗ್ಸ್ ಕರಿನೆರಳು: ಎಚ್ಚೆತ್ತುಕೊಳ್ಳಬೇಕಿದೆ ಬೆಳ್ತಂಗಡಿಯ ಜನತೆ!!!”

    ಸಕಲೇಶಪುರ: ಬಾಳುಪೇಟೆಯಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಉಚಿತ ಆರೋಗ್ಯ ತಪಾಸಣಾ ಶಿಬಿರ

    • By admin
    • August 6, 2026
    • 5 views
    ಸಕಲೇಶಪುರ: ಬಾಳುಪೇಟೆಯಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಉಚಿತ ಆರೋಗ್ಯ ತಪಾಸಣಾ ಶಿಬಿರ

    ಬೆಸ್ಟ್ ಎಂಎಲ್ಎ ಪ್ರಶಸ್ತಿ ಪುರಸ್ಕೃತ ಶಾಸಕ ಹರೀಶ್ ಪೂಂಜರಿಗೆ ಬಿಜೆಪಿ ಮೋರ್ಚಾಗಳಿಂದ ಅಭಿನಂದನೆ

    • By admin
    • August 6, 2026
    • 7 views
    ಬೆಸ್ಟ್ ಎಂಎಲ್ಎ ಪ್ರಶಸ್ತಿ ಪುರಸ್ಕೃತ ಶಾಸಕ ಹರೀಶ್ ಪೂಂಜರಿಗೆ ಬಿಜೆಪಿ ಮೋರ್ಚಾಗಳಿಂದ ಅಭಿನಂದನೆ

    ಪಶ್ಚಿಮ ಘಟ್ಟ ಪರಿಸರ ಸೂಕ್ಷ್ಮ ಪ್ರದೇಶ ಕರಡು ಅಧಿಸೂಚನೆಗೆ ಆಕ್ಷೇಪಣೆ ಸಲ್ಲಿಸಿ: ಶಾಸಕ ಹರೀಶ್ ಪೂಂಜ ಕರೆ

    • By admin
    • August 6, 2026
    • 5 views
    ಪಶ್ಚಿಮ ಘಟ್ಟ ಪರಿಸರ ಸೂಕ್ಷ್ಮ ಪ್ರದೇಶ ಕರಡು ಅಧಿಸೂಚನೆಗೆ ಆಕ್ಷೇಪಣೆ ಸಲ್ಲಿಸಿ: ಶಾಸಕ ಹರೀಶ್ ಪೂಂಜ ಕರೆ

    ಮೀನುಗಾರರ ಬದುಕಲ್ಲಿ ಪವಾಡ – ಧರ್ಮಸ್ಥಳ ಮಂಜುನಾಥ ಸ್ವಾಮಿಗೆ 770 ಗ್ರಾಂ ಬೆಳ್ಳಿಯ ಬೆಳ್ಳಿಯ ‘ರಾಣಿ ಮೀನು’ ಹಾರ ಅರ್ಪಣೆ

    • By admin
    • August 4, 2026
    • 6 views
    ಮೀನುಗಾರರ ಬದುಕಲ್ಲಿ ಪವಾಡ – ಧರ್ಮಸ್ಥಳ ಮಂಜುನಾಥ ಸ್ವಾಮಿಗೆ 770 ಗ್ರಾಂ ಬೆಳ್ಳಿಯ ಬೆಳ್ಳಿಯ ‘ರಾಣಿ ಮೀನು’ ಹಾರ ಅರ್ಪಣೆ