ಇಂದು ಪ್ರಧಾನಿ ನರೇಂದ್ರ ಮೋದಿಯವರು ದೇಶವನ್ನುದ್ದೇಶಿಸಿ ಮಾತನಾಡಿದರು.

ನವದೆಹಲಿ: ಕೊರೋನಾದ ಸಾಂಕ್ರಾಮಿಕ ರೋಗದ ಸಂಕಷ್ಟ ಸಮಯ ಆರಂಭವಾದ ನಂತರ ಕಳೆದ ಏಳು ತಿಂಗಳಲ್ಲಿ ಏಳನೇ ಬಾರಿ ದೇಶದ ಜನತೆಯನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿಯವರು, ಕೋವಿಡ್ 19 ಇನ್ನೂ ಕೊನೆಗೊಂಡಿಲ್ಲ. ಕಳೆದ 7ರಿಂದ 8 ತಿಂಗಳ ಅವಧಿಯಲ್ಲಿ ಪ್ರತಿಯೊಬ್ಬ ಭಾರತೀಯನ ಪ್ರಯತ್ನದ ಫಲವಾಗಿ ಭಾರತದಲ್ಲಿ ಸ್ಥಿರತೆ ಕಾಯ್ದುಕೊಳ್ಳಲಾಗಿದೆ. ಅದನ್ನು ಹಾಳುಗೆಡಹುವ ಕೆಲಸ ನಮ್ಮಿಂದ ಆಗದಂತೆ ಎಚ್ಚರಿಕೆಯಿಂದ ಇರಬೇಕು ಎಂದ ಅವರು, ಇದೇ ವೇಳೆ ನವರಾತ್ರಿ, ಈದ್​ ದೀಪಾವಳಿ, ಚಥ್​​​ ಪೂಜಾ ಶುಭಾಶಯ ತಿಳಿಸಿದರು.

ಜೀವನದ ಉದ್ದೇಶಕ್ಕಾಗಿ ನಾವು ಹೊರಬರುತ್ತಿದ್ದೇವೆ. ಲಾಕ್​ಡೌನ್​ ಮುಗಿಯಿತು ಎಂದ ಮಾತ್ರಕ್ಕೆ ವೈರಸ್​ ಕೊನೆಗೊಂಡಿಲ್ಲ ಎಂಬುದನ್ನು ಮರೆಯಬಾರದು.

ಹಬ್ಬದ ಸಮಯ ಎಂಬುದು ಜೀವನದ ಖುಷಿ. ಈ ವೇಳೆ ಬೇಜಾವಬ್ದಾರಿ ವಹಿಸಿದರೆ, ಭಾರೀ ದಂಡ ತೆರೆಬೇಕಾಗುತ್ತದೆ. ಈ ಸಮಯದಲ್ಲಿ ಎಚ್ಚರದಿಂದ ಇದ್ದರೆ, ಉತ್ತಮ ದಿನಗಳು ನಮ್ಮ ಮುಂದಿರಲಿದೆ.

ಅಮೆರಿಕ, ಯುರೋಪ್​ಗಳಲ್ಲಿ ಕೊರೋನಾ ಕಡಿಮೆಯಾಗುತ್ತಿದ್ದಂತೆ ಹೆಚ್ಚಾಗಿದ್ದನ್ನು ಜನರು ಮರೆಯಬಾರದು.

ಹಬ್ಬದ ಸಮಯಲ್ಲಿ ಜನರು ಜಾಗರುಕತೆಯಿಂದ ಮೂರು ಮಂತ್ರಗಳಾದ ಸ್ವಚ್ಛತೆ, ಮಾಸ್ಕ್​ಧಾರಣೆ, ಸಾಮಾಜಿಕ ಅಂತರಗಳನ್ನು ಅನುಸರಿಸಬೇಕು.

ನಿಮ್ಮನ್ನು ನೀವು ಕಾಪಾಡಿಕೊಳ್ಳುವ ಮೂಲಕ ಇದೇ ದೇಶಕ್ಕೆ ನೀಡುವ ಸೇವೆ. ಈ ವಿಷಯದಲ್ಲಿ ನೀವು ನಮಗೆ ಜೊತೆಯಾಗಬೇಕು.

ಇಂದು ದೇಶದಲ್ಲಿ ರಿಕವರಿ ರೇಟ್​ ಚೆನ್ನಾಗಿದೆ. ಮರಣ ಪ್ರಮಾಣ ಕಡಿಮೆ ಇದೆ. ಭಾರತದಲ್ಲಿ 10 ಲಕ್ಷ ಜನಸಂಖ್ಯೆಗೆ 5,500 ಜನರಷ್ಟೇ ಸೋಂಕಿತರಾಗಿದ್ದಾರೆ. ಅಮೆರಿಕ, ಬ್ರೆಜಿಲ್​ ಮುಂತಾದ ರಾಷ್ಟ್ರಗಳಲ್ಲಿ ಇದು 25,000 ಇದೆ. ಮರಣ ಪ್ರಮಾಣ ಪ್ರತಿ 10 ಲಕ್ಷಕ್ಕೆ ಭಾರತದಲ್ಲಿ 83 ಇದ್ದರೆ, ಅಮೆರಿಕ, ಬ್ರೆಜಿಲ್, ಸ್ಪೇನ್​, ಬ್ರಿಟನ್​ಗಳಲ್ಲಿ 600ಕ್ಕೂ ಹೆಚ್ಚಿದೆ ಎಂದು ಪ್ರಧಾನಿ ಮೋದಿಯವರು ತಮ್ಮ ಭಾಷಣದಲ್ಲಿ ತಿಳಿಸಿದ್ದಾರೆ

Spread the love
  • Related Posts

    ತೆಂಗಿನ ಮರ ಏರುವ ಕಾರ್ಮಿಕರಿಗೆ ‘ಕೇರಾ’ ಸುರಕ್ಷಾ ವಿಮಾ ಯೋಜನೆ ಜಾರಿಗೊಳಿಸಿದ ಕೇಂದ್ರ ಸರ್ಕಾರ

    ಮೈಸೂರು: ಕೇಂದ್ರ ಸರ್ಕಾರ ಜಾರಿಗೊಳಿಸಿರುವ ‘ಕೇರಾ’ ಸುರಕ್ಷಾ ವಿಮಾ ಯೋಜನೆಯು ತೆಂಗಿನ ಮರಗಳನ್ನು ಏರುವ ಕೆಲಸ ನಂಬಿರುವವರಿಗೆ ವರದಾನವಾಗಿದೆ. ತೆಂಗು ಅಭಿವೃದ್ಧಿ ಮಂಡಳಿ , ಕೃಷಿ ಮತ್ತು ರೈತ ಕಲ್ಯಾಣ ಇಲಾಖೆಯಿಂದ ದಿ ನ್ಯೂ ಇಂಡಿಯಾ ಅಶ್ಶೂರೆನ್ಸ್‌ ಕಂಪನಿ ಮೂಲಕ ಈ ವಿಮಾ…

    Spread the love

    ಬೆಳ್ತಂಗಡಿಗೆ ಹೊಸ ನ್ಯಾಯಾಲಯ ಕಟ್ಟಡ ಮಂಜೂರುಗೊಳಿಸುವಂತೆ ಉಸ್ತುವಾರಿ ಸಚಿವರಿಗೆ ವಕೀಲರ ನಿಯೋಗದಿಂದ ಮನವಿ

    ಬೆಳ್ತಂಗಡಿ: ಸುಮಾರು 60 ವರ್ಷ ಹಳೆಯದಾದ ಬೆಳ್ತಂಗಡಿಯ ನ್ಯಾಯಾಲಯದ ಕಟ್ಟಡನಾದುರಸ್ತಿಯಲ್ಲಿದ್ದು ಮುಂದಿನ ಬಜೆಟ್ ನಲ್ಲಿ ಹೊಸ ನ್ಯಾಯಾಲಯದ ಕಟ್ಟಡಕ್ಕೆ ಅನುದಾನ ಮಂಜೂರುಗೊಳಿಸುವಂತೆ ಬೆಳ್ತಂಗಡಿ ವಕೀಲರ ಸಂಘದ ನಿಯೋಗ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು ಮತ್ತು ಜಿಲ್ಲಾ ಉಸ್ತುವಾರಿ ಸಚಿವರಾದ ದಿನೇಶ್…

    Spread the love

    You Missed

    ತೆಂಗಿನ ಮರ ಏರುವ ಕಾರ್ಮಿಕರಿಗೆ ‘ಕೇರಾ’ ಸುರಕ್ಷಾ ವಿಮಾ ಯೋಜನೆ ಜಾರಿಗೊಳಿಸಿದ ಕೇಂದ್ರ ಸರ್ಕಾರ

    • By admin
    • January 19, 2025
    • 114 views
    ತೆಂಗಿನ ಮರ ಏರುವ ಕಾರ್ಮಿಕರಿಗೆ ‘ಕೇರಾ’ ಸುರಕ್ಷಾ ವಿಮಾ ಯೋಜನೆ ಜಾರಿಗೊಳಿಸಿದ ಕೇಂದ್ರ ಸರ್ಕಾರ

    ನಾಳ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ವಾರ್ಷಿಕ ಜಾತ್ರಾ ಮಹೋತ್ಸವ

    • By admin
    • January 19, 2025
    • 27 views
    ನಾಳ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ವಾರ್ಷಿಕ ಜಾತ್ರಾ ಮಹೋತ್ಸವ

    ಬೆಳ್ತಂಗಡಿಗೆ ಹೊಸ ನ್ಯಾಯಾಲಯ ಕಟ್ಟಡ ಮಂಜೂರುಗೊಳಿಸುವಂತೆ ಉಸ್ತುವಾರಿ ಸಚಿವರಿಗೆ ವಕೀಲರ ನಿಯೋಗದಿಂದ ಮನವಿ

    • By admin
    • January 18, 2025
    • 29 views
    ಬೆಳ್ತಂಗಡಿಗೆ ಹೊಸ ನ್ಯಾಯಾಲಯ ಕಟ್ಟಡ ಮಂಜೂರುಗೊಳಿಸುವಂತೆ ಉಸ್ತುವಾರಿ ಸಚಿವರಿಗೆ ವಕೀಲರ ನಿಯೋಗದಿಂದ ಮನವಿ

    ಬೆನಕ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯ ರಜತ ಸಂಭ್ರಮ ಕಾರ್ಯಕ್ರಮ ಹಾಗೂ ನೂತನ ವಿಸ್ತೃತ ಕಟ್ಟಡದ ಲೋಕಾರ್ಪಣೆ

    • By admin
    • January 18, 2025
    • 60 views
    ಬೆನಕ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯ ರಜತ ಸಂಭ್ರಮ ಕಾರ್ಯಕ್ರಮ ಹಾಗೂ ನೂತನ ವಿಸ್ತೃತ ಕಟ್ಟಡದ ಲೋಕಾರ್ಪಣೆ

    ಸಿ.ಸಿ ಟಿ.ವಿ ಕ್ಯಾಮೆರಾ ಅಳವಡಿಕೆ ಮತ್ತು ಸರ್ವಿಸ್‌ ಉಚಿತ ತರಬೇತಿ ಕಾರ್ಯಾಗಾರ

    • By admin
    • January 17, 2025
    • 34 views
    ಸಿ.ಸಿ ಟಿ.ವಿ ಕ್ಯಾಮೆರಾ ಅಳವಡಿಕೆ ಮತ್ತು ಸರ್ವಿಸ್‌ ಉಚಿತ ತರಬೇತಿ ಕಾರ್ಯಾಗಾರ

    ರಜತ ಮಹೋತ್ಸವದ ಹೊಸ್ತಿಲಲ್ಲಿ ಬೆನಕ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ, ನಾಳೆ ವಿಸ್ತ್ರತ ನೂತನ ಕಟ್ಟಡದ ಉದ್ಘಾಟನೆ

    • By admin
    • January 17, 2025
    • 35 views
    ರಜತ ಮಹೋತ್ಸವದ ಹೊಸ್ತಿಲಲ್ಲಿ ಬೆನಕ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ, ನಾಳೆ ವಿಸ್ತ್ರತ ನೂತನ ಕಟ್ಟಡದ ಉದ್ಘಾಟನೆ