ಇಂದು ಪ್ರಧಾನಿ ನರೇಂದ್ರ ಮೋದಿಯವರು ದೇಶವನ್ನುದ್ದೇಶಿಸಿ ಮಾತನಾಡಿದರು.

ನವದೆಹಲಿ: ಕೊರೋನಾದ ಸಾಂಕ್ರಾಮಿಕ ರೋಗದ ಸಂಕಷ್ಟ ಸಮಯ ಆರಂಭವಾದ ನಂತರ ಕಳೆದ ಏಳು ತಿಂಗಳಲ್ಲಿ ಏಳನೇ ಬಾರಿ ದೇಶದ ಜನತೆಯನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿಯವರು, ಕೋವಿಡ್ 19 ಇನ್ನೂ ಕೊನೆಗೊಂಡಿಲ್ಲ. ಕಳೆದ 7ರಿಂದ 8 ತಿಂಗಳ ಅವಧಿಯಲ್ಲಿ ಪ್ರತಿಯೊಬ್ಬ ಭಾರತೀಯನ ಪ್ರಯತ್ನದ ಫಲವಾಗಿ ಭಾರತದಲ್ಲಿ ಸ್ಥಿರತೆ ಕಾಯ್ದುಕೊಳ್ಳಲಾಗಿದೆ. ಅದನ್ನು ಹಾಳುಗೆಡಹುವ ಕೆಲಸ ನಮ್ಮಿಂದ ಆಗದಂತೆ ಎಚ್ಚರಿಕೆಯಿಂದ ಇರಬೇಕು ಎಂದ ಅವರು, ಇದೇ ವೇಳೆ ನವರಾತ್ರಿ, ಈದ್​ ದೀಪಾವಳಿ, ಚಥ್​​​ ಪೂಜಾ ಶುಭಾಶಯ ತಿಳಿಸಿದರು.

ಜೀವನದ ಉದ್ದೇಶಕ್ಕಾಗಿ ನಾವು ಹೊರಬರುತ್ತಿದ್ದೇವೆ. ಲಾಕ್​ಡೌನ್​ ಮುಗಿಯಿತು ಎಂದ ಮಾತ್ರಕ್ಕೆ ವೈರಸ್​ ಕೊನೆಗೊಂಡಿಲ್ಲ ಎಂಬುದನ್ನು ಮರೆಯಬಾರದು.

ಹಬ್ಬದ ಸಮಯ ಎಂಬುದು ಜೀವನದ ಖುಷಿ. ಈ ವೇಳೆ ಬೇಜಾವಬ್ದಾರಿ ವಹಿಸಿದರೆ, ಭಾರೀ ದಂಡ ತೆರೆಬೇಕಾಗುತ್ತದೆ. ಈ ಸಮಯದಲ್ಲಿ ಎಚ್ಚರದಿಂದ ಇದ್ದರೆ, ಉತ್ತಮ ದಿನಗಳು ನಮ್ಮ ಮುಂದಿರಲಿದೆ.

ಅಮೆರಿಕ, ಯುರೋಪ್​ಗಳಲ್ಲಿ ಕೊರೋನಾ ಕಡಿಮೆಯಾಗುತ್ತಿದ್ದಂತೆ ಹೆಚ್ಚಾಗಿದ್ದನ್ನು ಜನರು ಮರೆಯಬಾರದು.

ಹಬ್ಬದ ಸಮಯಲ್ಲಿ ಜನರು ಜಾಗರುಕತೆಯಿಂದ ಮೂರು ಮಂತ್ರಗಳಾದ ಸ್ವಚ್ಛತೆ, ಮಾಸ್ಕ್​ಧಾರಣೆ, ಸಾಮಾಜಿಕ ಅಂತರಗಳನ್ನು ಅನುಸರಿಸಬೇಕು.

ನಿಮ್ಮನ್ನು ನೀವು ಕಾಪಾಡಿಕೊಳ್ಳುವ ಮೂಲಕ ಇದೇ ದೇಶಕ್ಕೆ ನೀಡುವ ಸೇವೆ. ಈ ವಿಷಯದಲ್ಲಿ ನೀವು ನಮಗೆ ಜೊತೆಯಾಗಬೇಕು.

ಇಂದು ದೇಶದಲ್ಲಿ ರಿಕವರಿ ರೇಟ್​ ಚೆನ್ನಾಗಿದೆ. ಮರಣ ಪ್ರಮಾಣ ಕಡಿಮೆ ಇದೆ. ಭಾರತದಲ್ಲಿ 10 ಲಕ್ಷ ಜನಸಂಖ್ಯೆಗೆ 5,500 ಜನರಷ್ಟೇ ಸೋಂಕಿತರಾಗಿದ್ದಾರೆ. ಅಮೆರಿಕ, ಬ್ರೆಜಿಲ್​ ಮುಂತಾದ ರಾಷ್ಟ್ರಗಳಲ್ಲಿ ಇದು 25,000 ಇದೆ. ಮರಣ ಪ್ರಮಾಣ ಪ್ರತಿ 10 ಲಕ್ಷಕ್ಕೆ ಭಾರತದಲ್ಲಿ 83 ಇದ್ದರೆ, ಅಮೆರಿಕ, ಬ್ರೆಜಿಲ್, ಸ್ಪೇನ್​, ಬ್ರಿಟನ್​ಗಳಲ್ಲಿ 600ಕ್ಕೂ ಹೆಚ್ಚಿದೆ ಎಂದು ಪ್ರಧಾನಿ ಮೋದಿಯವರು ತಮ್ಮ ಭಾಷಣದಲ್ಲಿ ತಿಳಿಸಿದ್ದಾರೆ

Spread the love
  • Related Posts

    ಬಿಜೆಪಿ ಮುಖಂಡ ಯೋಗೇಶ್ ಗೌಡ ಕೊಲೆ ಪ್ರಕರಣ: ಮಾಜಿ ಸಚಿವ ವಿನಯ್ ಕುಲಕರ್ಣಿ ಸೇರಿ 16 ಮಂದಿ ಆರೋಪಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಿ ತೀರ್ಪು

    ಬೆಂಗಳೂರು: ಧಾರವಾಡ ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಹಾಗೂ ಬಿಜೆಪಿ ಮುಖಂಡ ಯೋಗೇಶ್ ಗೌಡ ಕೊಲೆ ಪ್ರಕರಣದಲ್ಲಿ ಮಾಜಿ ಸಚಿವ ವಿನಯ್ ಕುಲಕರ್ಣಿ ಸೇರಿ 16 ಮಂದಿ ಆರೋಪಿಗಳಿಗೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಶುಕ್ರವಾರ (ಏ17)ಜೀವಾವಧಿ ಶಿಕ್ಷೆ ವಿಧಿಸಿ ತೀರ್ಪು ನೀಡಿದೆ.…

    Spread the love

    ಬಳಂಜದಲ್ಲಿ ಭಕ್ತಿಭಾವದಿಂದ ‘ಶ್ರೀ ದೇವಿ ಮಹಾತ್ಮೆ’ ಯಕ್ಷಗಾನ ಪ್ರದರ್ಶನ

    ಬೆಳ್ತಂಗಡಿ: ಕಟೀಲು ಶ್ರೀ ದುರ್ಗಾಪರಮೇಶ್ವರಿ ಪ್ರಸಾದಿತ ದಶಾವತಾರ ಯಕ್ಷಗಾನ ಮಂಡಳಿ ಇವರಿಂದ ಶ್ರೀಮತಿ ಮಿನಾಕ್ಷಿ ಮತ್ತು ಸಾಂತಪ್ಪ ಸುವರ್ಣ ಕುಟುಂಬಸ್ಥರ ಹರಕೆಯ ಸೇವಾರ್ಥವಾಗಿ ‘ಶ್ರೀ ದೇವಿ ಮಹಾತ್ಮ’ ಎಂಬ ಪೌರಾಣಿಕ ಕಥಾ ಭಾಗವು ಏ.13ರಂದು ಬಳಂಜದ ಸುವರ್ಣ ನಿಲಯದಲ್ಲಿ ಜರುಗಿತು. ಸಂಜೆ…

    Spread the love

    You Missed

    ಬಿಜೆಪಿ ಮುಖಂಡ ಯೋಗೇಶ್ ಗೌಡ ಕೊಲೆ ಪ್ರಕರಣ: ಮಾಜಿ ಸಚಿವ ವಿನಯ್ ಕುಲಕರ್ಣಿ ಸೇರಿ 16 ಮಂದಿ ಆರೋಪಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಿ ತೀರ್ಪು

    • By admin
    • April 17, 2026
    • 21 views
    ಬಿಜೆಪಿ ಮುಖಂಡ ಯೋಗೇಶ್ ಗೌಡ ಕೊಲೆ ಪ್ರಕರಣ: ಮಾಜಿ ಸಚಿವ ವಿನಯ್ ಕುಲಕರ್ಣಿ ಸೇರಿ 16 ಮಂದಿ ಆರೋಪಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಿ ತೀರ್ಪು

    ಬಳಂಜದಲ್ಲಿ ಭಕ್ತಿಭಾವದಿಂದ ‘ಶ್ರೀ ದೇವಿ ಮಹಾತ್ಮೆ’ ಯಕ್ಷಗಾನ ಪ್ರದರ್ಶನ

    • By admin
    • April 14, 2026
    • 51 views
    ಬಳಂಜದಲ್ಲಿ ಭಕ್ತಿಭಾವದಿಂದ ‘ಶ್ರೀ ದೇವಿ ಮಹಾತ್ಮೆ’ ಯಕ್ಷಗಾನ ಪ್ರದರ್ಶನ

    ಕಲ್ಚೆರ್ಪೆ ಗ್ರಾಮದಲ್ಲಿ ಬಾವಿಗೆ ಬಿದ್ದಿದ್ದ ಕಾಡಾನೆಯ ರಕ್ಷಣಾಕಾರ್ಯ ಯಶಸ್ವಿ

    • By admin
    • April 13, 2026
    • 27 views
    ಕಲ್ಚೆರ್ಪೆ ಗ್ರಾಮದಲ್ಲಿ ಬಾವಿಗೆ ಬಿದ್ದಿದ್ದ ಕಾಡಾನೆಯ ರಕ್ಷಣಾಕಾರ್ಯ ಯಶಸ್ವಿ

    ಆಯತಪ್ಪಿ ರಾತ್ರಿ ಬಾವಿಗೆ ಬಿದ್ದ ಕಾಡಾನೆ ಪೆರಾಜೆ ಕಲ್ಲುಚರ್ಪೆಯಲ್ಲಿ ನಡೆದ ಘಟನೆ

    • By admin
    • April 13, 2026
    • 50 views
    ಆಯತಪ್ಪಿ ರಾತ್ರಿ ಬಾವಿಗೆ ಬಿದ್ದ ಕಾಡಾನೆ ಪೆರಾಜೆ  ಕಲ್ಲುಚರ್ಪೆಯಲ್ಲಿ ನಡೆದ ಘಟನೆ

    ಚಾಲಕನ ಅಜಾಗರೂಕತೆಯಿಂದ ಪಾದಾಚಾರಿಗಳ ಮೇಲೆರಗಿದ ಓಮ್ಮಿ ಕಾರು

    • By admin
    • April 12, 2026
    • 90 views
    ಚಾಲಕನ ಅಜಾಗರೂಕತೆಯಿಂದ ಪಾದಾಚಾರಿಗಳ ಮೇಲೆರಗಿದ ಓಮ್ಮಿ ಕಾರು

    ಮೆದುಳು ಜ್ವರದಿಂದ ಕಿಲ್ಲೂರಿನ ಯುವಕ ನಿಧನ

    • By admin
    • April 12, 2026
    • 129 views
    ಮೆದುಳು ಜ್ವರದಿಂದ ಕಿಲ್ಲೂರಿನ ಯುವಕ ನಿಧನ