ಇಂದು ಪ್ರಧಾನಿ ನರೇಂದ್ರ ಮೋದಿಯವರು ದೇಶವನ್ನುದ್ದೇಶಿಸಿ ಮಾತನಾಡಿದರು.

ನವದೆಹಲಿ: ಕೊರೋನಾದ ಸಾಂಕ್ರಾಮಿಕ ರೋಗದ ಸಂಕಷ್ಟ ಸಮಯ ಆರಂಭವಾದ ನಂತರ ಕಳೆದ ಏಳು ತಿಂಗಳಲ್ಲಿ ಏಳನೇ ಬಾರಿ ದೇಶದ ಜನತೆಯನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿಯವರು, ಕೋವಿಡ್ 19 ಇನ್ನೂ ಕೊನೆಗೊಂಡಿಲ್ಲ. ಕಳೆದ 7ರಿಂದ 8 ತಿಂಗಳ ಅವಧಿಯಲ್ಲಿ ಪ್ರತಿಯೊಬ್ಬ ಭಾರತೀಯನ ಪ್ರಯತ್ನದ ಫಲವಾಗಿ ಭಾರತದಲ್ಲಿ ಸ್ಥಿರತೆ ಕಾಯ್ದುಕೊಳ್ಳಲಾಗಿದೆ. ಅದನ್ನು ಹಾಳುಗೆಡಹುವ ಕೆಲಸ ನಮ್ಮಿಂದ ಆಗದಂತೆ ಎಚ್ಚರಿಕೆಯಿಂದ ಇರಬೇಕು ಎಂದ ಅವರು, ಇದೇ ವೇಳೆ ನವರಾತ್ರಿ, ಈದ್​ ದೀಪಾವಳಿ, ಚಥ್​​​ ಪೂಜಾ ಶುಭಾಶಯ ತಿಳಿಸಿದರು.

ಜೀವನದ ಉದ್ದೇಶಕ್ಕಾಗಿ ನಾವು ಹೊರಬರುತ್ತಿದ್ದೇವೆ. ಲಾಕ್​ಡೌನ್​ ಮುಗಿಯಿತು ಎಂದ ಮಾತ್ರಕ್ಕೆ ವೈರಸ್​ ಕೊನೆಗೊಂಡಿಲ್ಲ ಎಂಬುದನ್ನು ಮರೆಯಬಾರದು.

ಹಬ್ಬದ ಸಮಯ ಎಂಬುದು ಜೀವನದ ಖುಷಿ. ಈ ವೇಳೆ ಬೇಜಾವಬ್ದಾರಿ ವಹಿಸಿದರೆ, ಭಾರೀ ದಂಡ ತೆರೆಬೇಕಾಗುತ್ತದೆ. ಈ ಸಮಯದಲ್ಲಿ ಎಚ್ಚರದಿಂದ ಇದ್ದರೆ, ಉತ್ತಮ ದಿನಗಳು ನಮ್ಮ ಮುಂದಿರಲಿದೆ.

ಅಮೆರಿಕ, ಯುರೋಪ್​ಗಳಲ್ಲಿ ಕೊರೋನಾ ಕಡಿಮೆಯಾಗುತ್ತಿದ್ದಂತೆ ಹೆಚ್ಚಾಗಿದ್ದನ್ನು ಜನರು ಮರೆಯಬಾರದು.

ಹಬ್ಬದ ಸಮಯಲ್ಲಿ ಜನರು ಜಾಗರುಕತೆಯಿಂದ ಮೂರು ಮಂತ್ರಗಳಾದ ಸ್ವಚ್ಛತೆ, ಮಾಸ್ಕ್​ಧಾರಣೆ, ಸಾಮಾಜಿಕ ಅಂತರಗಳನ್ನು ಅನುಸರಿಸಬೇಕು.

ನಿಮ್ಮನ್ನು ನೀವು ಕಾಪಾಡಿಕೊಳ್ಳುವ ಮೂಲಕ ಇದೇ ದೇಶಕ್ಕೆ ನೀಡುವ ಸೇವೆ. ಈ ವಿಷಯದಲ್ಲಿ ನೀವು ನಮಗೆ ಜೊತೆಯಾಗಬೇಕು.

ಇಂದು ದೇಶದಲ್ಲಿ ರಿಕವರಿ ರೇಟ್​ ಚೆನ್ನಾಗಿದೆ. ಮರಣ ಪ್ರಮಾಣ ಕಡಿಮೆ ಇದೆ. ಭಾರತದಲ್ಲಿ 10 ಲಕ್ಷ ಜನಸಂಖ್ಯೆಗೆ 5,500 ಜನರಷ್ಟೇ ಸೋಂಕಿತರಾಗಿದ್ದಾರೆ. ಅಮೆರಿಕ, ಬ್ರೆಜಿಲ್​ ಮುಂತಾದ ರಾಷ್ಟ್ರಗಳಲ್ಲಿ ಇದು 25,000 ಇದೆ. ಮರಣ ಪ್ರಮಾಣ ಪ್ರತಿ 10 ಲಕ್ಷಕ್ಕೆ ಭಾರತದಲ್ಲಿ 83 ಇದ್ದರೆ, ಅಮೆರಿಕ, ಬ್ರೆಜಿಲ್, ಸ್ಪೇನ್​, ಬ್ರಿಟನ್​ಗಳಲ್ಲಿ 600ಕ್ಕೂ ಹೆಚ್ಚಿದೆ ಎಂದು ಪ್ರಧಾನಿ ಮೋದಿಯವರು ತಮ್ಮ ಭಾಷಣದಲ್ಲಿ ತಿಳಿಸಿದ್ದಾರೆ

Spread the love
  • Related Posts

    ಧರ್ಮ–ಸಂಸ್ಕೃತಿಯ ಸಾರ ಹೊತ್ತು ವಿಜೃಂಭಿಸಿದ ಚಿರಂಜೀವಿಯ 35ನೇ ವರ್ಷದ ಶ್ರೀಕೃಷ್ಣ ಜನ್ಮಾಷ್ಟಮಿ

    ಕಡಿರುದ್ಯಾವರ: ಚಿರಂಜೀವಿ ಯುವಕ ಮಂಡಲ (ರಿ) ಕಾನರ್ಪ, ಶ್ರೀ ದುರ್ಗಾಶಕ್ತಿ ಮಹಿಳಾ ಸಂಘ ಮತ್ತು 35ನೇ ವರ್ಷದ ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣಾ ಸಮಿತಿ ಇದರ ವತಿಯಿಂದ 35ನೇ ವರ್ಷದ ಶ್ರೀಕೃಷ್ಣ ಜನ್ಮಾಷ್ಟಮಿ ಧಾರ್ಮಿಕ ಪೂಜಾ ಕಾರ್ಯಕ್ರಮ ಹಾಗೂ ವಿವಿಧ ಗ್ರಾಮೀಣ ಕ್ರೀಡಾಕೂಟಗಳು…

    Spread the love

    ಬೆಳಾಲಿನಲ್ಲಿ ರಸ್ತೆಯ ಮಧ್ಯೆ ಕಾಡಾನೆ ಪ್ರತ್ಯಕ್ಷ: ಬೈಕ್ ಸವಾರ ಕೂದಲೆಳೆ ಅಂತರದಲ್ಲಿ ಅಪಾಯದಿಂದ ಪಾರು

    ಬೆಳ್ತಂಗಡಿ: ತಾಲೂಕಿನ ಬೆಳಾಲು ಗ್ರಾಮದ ಮಿನಂದೇಲು ಬಸ್ ನಿಲ್ದಾಣದ ಸಮೀಪ ಸೆ. 3ರಂದು ರಾತ್ರಿ ವೇಳೆ ರಸ್ತೆಯಲ್ಲಿ ಸಂಚರಿಸುತ್ತಿದ್ದ ಬೈಕ್ ಸವಾರನಿಗೆ ಆನೆ ಪ್ರತ್ಯಕ್ಷವಾಗಿ ಆತಂಕ ಉಂಟುಮಾಡಿದ ಘಟನೆ ವರದಿಯಾಗಿದೆ. ಉಜಿರೆ–ಬೆಳಾಲು–ಬಂದಾರು ಮುಖ್ಯ ರಸ್ತೆಯ ಮಿನಂದೇಲು ಬಸ್ ನಿಲ್ದಾಣ ಹಾಗೂ ಡಿ.ಪಿ.…

    Spread the love

    You Missed

    ಧರ್ಮ–ಸಂಸ್ಕೃತಿಯ ಸಾರ ಹೊತ್ತು ವಿಜೃಂಭಿಸಿದ ಚಿರಂಜೀವಿಯ 35ನೇ ವರ್ಷದ ಶ್ರೀಕೃಷ್ಣ ಜನ್ಮಾಷ್ಟಮಿ

    • By admin
    • September 8, 2026
    • 5 views
    ಧರ್ಮ–ಸಂಸ್ಕೃತಿಯ ಸಾರ ಹೊತ್ತು ವಿಜೃಂಭಿಸಿದ ಚಿರಂಜೀವಿಯ 35ನೇ ವರ್ಷದ ಶ್ರೀಕೃಷ್ಣ ಜನ್ಮಾಷ್ಟಮಿ

    ಬೆಳಾಲಿನಲ್ಲಿ ರಸ್ತೆಯ ಮಧ್ಯೆ ಕಾಡಾನೆ ಪ್ರತ್ಯಕ್ಷ: ಬೈಕ್ ಸವಾರ ಕೂದಲೆಳೆ ಅಂತರದಲ್ಲಿ ಅಪಾಯದಿಂದ ಪಾರು

    • By admin
    • September 3, 2026
    • 8 views
    ಬೆಳಾಲಿನಲ್ಲಿ ರಸ್ತೆಯ ಮಧ್ಯೆ ಕಾಡಾನೆ ಪ್ರತ್ಯಕ್ಷ: ಬೈಕ್ ಸವಾರ ಕೂದಲೆಳೆ ಅಂತರದಲ್ಲಿ ಅಪಾಯದಿಂದ ಪಾರು

    ಧರ್ಮಸ್ಥಳ ಕೊಕ್ಕಡ ಹೆದ್ದಾರಿ ಬದಿಯಲ್ಲಿ ಕಾಡಾನೆ ಪ್ರತ್ಯಕ್ಷ, ವಾಹನ ಸವಾರರು ಮುನ್ನೆಚ್ಚರಿಕೆ ವಹಿಸುವುದು ಸೂಕ್ತ

    • By admin
    • September 3, 2026
    • 6 views
    ಧರ್ಮಸ್ಥಳ ಕೊಕ್ಕಡ ಹೆದ್ದಾರಿ ಬದಿಯಲ್ಲಿ ಕಾಡಾನೆ ಪ್ರತ್ಯಕ್ಷ, ವಾಹನ ಸವಾರರು ಮುನ್ನೆಚ್ಚರಿಕೆ ವಹಿಸುವುದು ಸೂಕ್ತ

    APK ಬಳಿಕ .IMG, .ISO ಫೈಲ್‌ಗಳ ಮೂಲಕ ಸೈಬರ್ ದಾಳಿ; WhatsApp Web ಬಳಕೆದಾರರಿಗೆ ಎಚ್ಚರಿಕೆ

    • By admin
    • September 3, 2026
    • 9 views
    APK ಬಳಿಕ .IMG, .ISO ಫೈಲ್‌ಗಳ ಮೂಲಕ ಸೈಬರ್ ದಾಳಿ; WhatsApp Web ಬಳಕೆದಾರರಿಗೆ ಎಚ್ಚರಿಕೆ

    ಚಿರಂಜೀವಿ ಯುವಕ ಮಂಡಲ ಕಾನರ್ಪದಲ್ಲಿ ಸೆ.6ರಂದು 35ನೇ ವರ್ಷದ ಮೊಸರು ಕುಡಿಕೆ ಅಷ್ಟಮಿ ಉತ್ಸವ ಹಾಗೂ ಕೆಸರುಗದ್ದೆಯಲ್ಲಿ ಗ್ರಾಮೀಣ ಕ್ರೀಡಾಕೂಟ ಆಯೋಜನೆ

    • By admin
    • September 3, 2026
    • 14 views
    ಚಿರಂಜೀವಿ ಯುವಕ ಮಂಡಲ ಕಾನರ್ಪದಲ್ಲಿ ಸೆ.6ರಂದು 35ನೇ ವರ್ಷದ ಮೊಸರು ಕುಡಿಕೆ ಅಷ್ಟಮಿ ಉತ್ಸವ ಹಾಗೂ ಕೆಸರುಗದ್ದೆಯಲ್ಲಿ ಗ್ರಾಮೀಣ ಕ್ರೀಡಾಕೂಟ ಆಯೋಜನೆ

    ಬೆಳ್ತಂಗಡಿ : ಲಾಯಿಲ ಗ್ರಾಮಸಭೆಯಲ್ಲಿ ಅಕ್ರಮಗಳ ಆರೋಪಕ್ಕೆ ಕಿಡಿ, ನಿವೇಶನದಿಂದ ಸರ್ಕಾರಿ ಜಮೀನು, ಕಳಪೆ ಕಾಮಗಾರಿವರೆಗೆ ಸಮಗ್ರ ತನಿಖೆಗೆ ಒತ್ತಾಯ

    • By admin
    • August 31, 2026
    • 9 views
    ಬೆಳ್ತಂಗಡಿ : ಲಾಯಿಲ ಗ್ರಾಮಸಭೆಯಲ್ಲಿ ಅಕ್ರಮಗಳ ಆರೋಪಕ್ಕೆ ಕಿಡಿ, ನಿವೇಶನದಿಂದ ಸರ್ಕಾರಿ ಜಮೀನು, ಕಳಪೆ ಕಾಮಗಾರಿವರೆಗೆ ಸಮಗ್ರ ತನಿಖೆಗೆ ಒತ್ತಾಯ