ಇಂದು ಪ್ರಧಾನಿ ನರೇಂದ್ರ ಮೋದಿಯವರು ದೇಶವನ್ನುದ್ದೇಶಿಸಿ ಮಾತನಾಡಿದರು.

ನವದೆಹಲಿ: ಕೊರೋನಾದ ಸಾಂಕ್ರಾಮಿಕ ರೋಗದ ಸಂಕಷ್ಟ ಸಮಯ ಆರಂಭವಾದ ನಂತರ ಕಳೆದ ಏಳು ತಿಂಗಳಲ್ಲಿ ಏಳನೇ ಬಾರಿ ದೇಶದ ಜನತೆಯನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿಯವರು, ಕೋವಿಡ್ 19 ಇನ್ನೂ ಕೊನೆಗೊಂಡಿಲ್ಲ. ಕಳೆದ 7ರಿಂದ 8 ತಿಂಗಳ ಅವಧಿಯಲ್ಲಿ ಪ್ರತಿಯೊಬ್ಬ ಭಾರತೀಯನ ಪ್ರಯತ್ನದ ಫಲವಾಗಿ ಭಾರತದಲ್ಲಿ ಸ್ಥಿರತೆ ಕಾಯ್ದುಕೊಳ್ಳಲಾಗಿದೆ. ಅದನ್ನು ಹಾಳುಗೆಡಹುವ ಕೆಲಸ ನಮ್ಮಿಂದ ಆಗದಂತೆ ಎಚ್ಚರಿಕೆಯಿಂದ ಇರಬೇಕು ಎಂದ ಅವರು, ಇದೇ ವೇಳೆ ನವರಾತ್ರಿ, ಈದ್​ ದೀಪಾವಳಿ, ಚಥ್​​​ ಪೂಜಾ ಶುಭಾಶಯ ತಿಳಿಸಿದರು.

ಜೀವನದ ಉದ್ದೇಶಕ್ಕಾಗಿ ನಾವು ಹೊರಬರುತ್ತಿದ್ದೇವೆ. ಲಾಕ್​ಡೌನ್​ ಮುಗಿಯಿತು ಎಂದ ಮಾತ್ರಕ್ಕೆ ವೈರಸ್​ ಕೊನೆಗೊಂಡಿಲ್ಲ ಎಂಬುದನ್ನು ಮರೆಯಬಾರದು.

ಹಬ್ಬದ ಸಮಯ ಎಂಬುದು ಜೀವನದ ಖುಷಿ. ಈ ವೇಳೆ ಬೇಜಾವಬ್ದಾರಿ ವಹಿಸಿದರೆ, ಭಾರೀ ದಂಡ ತೆರೆಬೇಕಾಗುತ್ತದೆ. ಈ ಸಮಯದಲ್ಲಿ ಎಚ್ಚರದಿಂದ ಇದ್ದರೆ, ಉತ್ತಮ ದಿನಗಳು ನಮ್ಮ ಮುಂದಿರಲಿದೆ.

ಅಮೆರಿಕ, ಯುರೋಪ್​ಗಳಲ್ಲಿ ಕೊರೋನಾ ಕಡಿಮೆಯಾಗುತ್ತಿದ್ದಂತೆ ಹೆಚ್ಚಾಗಿದ್ದನ್ನು ಜನರು ಮರೆಯಬಾರದು.

ಹಬ್ಬದ ಸಮಯಲ್ಲಿ ಜನರು ಜಾಗರುಕತೆಯಿಂದ ಮೂರು ಮಂತ್ರಗಳಾದ ಸ್ವಚ್ಛತೆ, ಮಾಸ್ಕ್​ಧಾರಣೆ, ಸಾಮಾಜಿಕ ಅಂತರಗಳನ್ನು ಅನುಸರಿಸಬೇಕು.

ನಿಮ್ಮನ್ನು ನೀವು ಕಾಪಾಡಿಕೊಳ್ಳುವ ಮೂಲಕ ಇದೇ ದೇಶಕ್ಕೆ ನೀಡುವ ಸೇವೆ. ಈ ವಿಷಯದಲ್ಲಿ ನೀವು ನಮಗೆ ಜೊತೆಯಾಗಬೇಕು.

ಇಂದು ದೇಶದಲ್ಲಿ ರಿಕವರಿ ರೇಟ್​ ಚೆನ್ನಾಗಿದೆ. ಮರಣ ಪ್ರಮಾಣ ಕಡಿಮೆ ಇದೆ. ಭಾರತದಲ್ಲಿ 10 ಲಕ್ಷ ಜನಸಂಖ್ಯೆಗೆ 5,500 ಜನರಷ್ಟೇ ಸೋಂಕಿತರಾಗಿದ್ದಾರೆ. ಅಮೆರಿಕ, ಬ್ರೆಜಿಲ್​ ಮುಂತಾದ ರಾಷ್ಟ್ರಗಳಲ್ಲಿ ಇದು 25,000 ಇದೆ. ಮರಣ ಪ್ರಮಾಣ ಪ್ರತಿ 10 ಲಕ್ಷಕ್ಕೆ ಭಾರತದಲ್ಲಿ 83 ಇದ್ದರೆ, ಅಮೆರಿಕ, ಬ್ರೆಜಿಲ್, ಸ್ಪೇನ್​, ಬ್ರಿಟನ್​ಗಳಲ್ಲಿ 600ಕ್ಕೂ ಹೆಚ್ಚಿದೆ ಎಂದು ಪ್ರಧಾನಿ ಮೋದಿಯವರು ತಮ್ಮ ಭಾಷಣದಲ್ಲಿ ತಿಳಿಸಿದ್ದಾರೆ

Spread the love
  • Related Posts

    ಮನ ಮುದಗೊಳಿಸಿದ ಫ್ರೆಂಡ್ಸ್ ಸಮಾಗಮ

    ಬೆಳ್ತಂಗಡಿ: ಫ್ರೆಂಡ್ಸ್ ವ್ಯಾಟ್ಸಾಪ್ ಗ್ರೂಪ್ ನ 13ವರ್ಷಗಳ ನಂತರ ಮೊದಲ ಬಾರಿಗೆ ಸ್ನೇಹಿತರನ್ನೆಲ್ಲ ಒಗ್ಗೂಡಿಸಿ ಫ್ರೆಂಡ್ಸ್ ಸಮಾಗಮ -2025 ಕಾರ್ಯಕ್ರಮವನ್ನು ತಾಲೂಕಿನ ಬಲಿಪ ರೆಸಾರ್ಟ್ ನಲ್ಲಿ ನಡೆಸಲಾಯಿತು. 2013ರಲ್ಲಿ ಪ್ರಾರಂಭಗೊಂಡ ಈ ಗ್ರೂಫ್ ನಲ್ಲಿ ವಕೀಲರು, ಉಪನ್ಯಾಸಕರು, ಇಲಾಖಾ ಅಧಿಕಾರಿಗಳು, ಪ್ರಗತಿಪರ…

    Spread the love

    ಬೆಳ್ತಂಗಡಿ : “ಸಾಲ್ಯಾನ್ ಎಲ್ ಇಡಿ, ಧ್ವನಿ ನ್ಯೂಸ್ ಮಾಲಕ ಸುದೀಪ್ ಸಾಲ್ಯಾನ್’ಗೆ ಗೋಲ್ಡನ್ ಬುಕ್ ಆಫ್ ವರ್ಲ್ಡ್‌ ರೆಕಾರ್ಡ್ ಗರಿಮೆ

    ಬೆಳ್ತಂಗಡಿ : ತಾಲೂಕು ಮಾತ್ರವಲ್ಲದೆ ಜಿಲ್ಲೆಯಾದ್ಯಂತ ಬಹಳಷ್ಟು ಖ್ಯಾತಿ ಪಡೆದಿರುವ “ಸಾಲ್ಯಾನ್ ಎಲ್ ಇಡಿ” ಇಂದು ಗೋಲ್ಡನ್ ಬುಕ್ ಆಫ್ ವರ್ಲ್ಡ್‌ ರೆಕಾರ್ಡ್ ಪ್ರಮಾಣಪತ್ರವನ್ನು ತನ್ನದಾಗಿಸಿಕೊಂಡಿದ್ದಾರೆ. ಮಂಗಳೂರಿನಲ್ಲಿ ನಡೆದ ದಿ| ಕಿಶೋರ್‌ಕುಮಾರ್‌ ಹಾಡುಗಳ ಗಾಯನ ದಾಖಲೆ, 100 ಗಾಯಕರು, ನಿರಂತರ 40…

    Spread the love

    You Missed

    ಮನ ಮುದಗೊಳಿಸಿದ ಫ್ರೆಂಡ್ಸ್ ಸಮಾಗಮ

    • By admin
    • December 15, 2025
    • 179 views
    ಮನ ಮುದಗೊಳಿಸಿದ ಫ್ರೆಂಡ್ಸ್ ಸಮಾಗಮ

    ಬೆಳ್ತಂಗಡಿ : “ಸಾಲ್ಯಾನ್ ಎಲ್ ಇಡಿ, ಧ್ವನಿ ನ್ಯೂಸ್ ಮಾಲಕ ಸುದೀಪ್ ಸಾಲ್ಯಾನ್’ಗೆ ಗೋಲ್ಡನ್ ಬುಕ್ ಆಫ್ ವರ್ಲ್ಡ್‌ ರೆಕಾರ್ಡ್ ಗರಿಮೆ

    • By admin
    • December 13, 2025
    • 61 views
    ಬೆಳ್ತಂಗಡಿ : “ಸಾಲ್ಯಾನ್ ಎಲ್ ಇಡಿ, ಧ್ವನಿ ನ್ಯೂಸ್ ಮಾಲಕ ಸುದೀಪ್ ಸಾಲ್ಯಾನ್’ಗೆ  ಗೋಲ್ಡನ್ ಬುಕ್ ಆಫ್ ವರ್ಲ್ಡ್‌ ರೆಕಾರ್ಡ್ ಗರಿಮೆ

    ಜೇಸಿ ಉತ್ಸವ ತಾಲೂಕು ಮಟ್ಟದ ಚಿತ್ರಕಲಾ ಸ್ಪರ್ಧೆ: ಪುಷ್ಠಿ ಮುಂಡಾಜೆ ಪ್ರಥಮ

    • By admin
    • December 8, 2025
    • 24 views
    ಜೇಸಿ ಉತ್ಸವ ತಾಲೂಕು ಮಟ್ಟದ ಚಿತ್ರಕಲಾ ಸ್ಪರ್ಧೆ: ಪುಷ್ಠಿ ಮುಂಡಾಜೆ ಪ್ರಥಮ

    ವಿವಿಧ ಬೇಡಿಕೆಗಳನ್ನು ಈಡೇರಿಸಲು ಆಗ್ರಹಿಸಿ ಕರ್ನಾಟಕದಲ್ಲಿ ಪ್ರತಿಭಟನೆ ನಡೆಸುತ್ತಿದ್ದ ಅಂಗನವಾಡಿ, ಅಕ್ಷರ ದಾಸೋಹ, ಆಶಾ ನೌಕರರ ಪ್ರಮುಖರ ಸಭೆ ಆಯೋಜಿಸಿದ ಕೇಂದ್ರ ಸಚಿವ ಎಚ್ ಡಿ ಕೆ

    • By admin
    • December 4, 2025
    • 43 views
    ವಿವಿಧ ಬೇಡಿಕೆಗಳನ್ನು ಈಡೇರಿಸಲು ಆಗ್ರಹಿಸಿ ಕರ್ನಾಟಕದಲ್ಲಿ ಪ್ರತಿಭಟನೆ ನಡೆಸುತ್ತಿದ್ದ ಅಂಗನವಾಡಿ, ಅಕ್ಷರ ದಾಸೋಹ, ಆಶಾ ನೌಕರರ ಪ್ರಮುಖರ ಸಭೆ ಆಯೋಜಿಸಿದ ಕೇಂದ್ರ ಸಚಿವ ಎಚ್ ಡಿ ಕೆ

    ಸಂಗಮ ಕ್ಷೇತ್ರ ಪಜಿರಡ್ಕ ಶ್ರೀ ಸದಾಶಿವೇಶ್ವರ ದೇವಸ್ಥಾನದ ನೂತನ ಧ್ವಜಸ್ತಂಭಕ್ಕೆ ಧರ್ಮಸ್ಥಳದಲ್ಲಿ ವಿಷೇಶ ಪೂಜೆ

    • By admin
    • December 4, 2025
    • 66 views
    ಸಂಗಮ ಕ್ಷೇತ್ರ ಪಜಿರಡ್ಕ ಶ್ರೀ ಸದಾಶಿವೇಶ್ವರ ದೇವಸ್ಥಾನದ ನೂತನ ಧ್ವಜಸ್ತಂಭಕ್ಕೆ ಧರ್ಮಸ್ಥಳದಲ್ಲಿ ವಿಷೇಶ ಪೂಜೆ

    ಸೇವಾ ಭಾರತಿಯ ನೂತನ ಕಾರ್ಯಾಲಯ ಸೇವಾನಿಕೇತನ’ದ ಉದ್ಘಾಟನೆ ಹಾಗೂ 21ನೇ ವರ್ಷದ ಸಂಭ್ರಮ ಕಾರ್ಯಕ್ರಮ

    • By admin
    • December 4, 2025
    • 40 views
    ಸೇವಾ ಭಾರತಿಯ ನೂತನ ಕಾರ್ಯಾಲಯ ಸೇವಾನಿಕೇತನ’ದ ಉದ್ಘಾಟನೆ ಹಾಗೂ 21ನೇ ವರ್ಷದ ಸಂಭ್ರಮ ಕಾರ್ಯಕ್ರಮ