ಹಲವು ವರ್ಷಗಳ ಬಳಿಕ ಇಂದು ಸುದೀರ್ಘ ಚಂದ್ರಗ್ರಹಣ

ಹಲವು ವರ್ಷಗಳ ಬಳಿಕ ಇಂದು ಸುದೀರ್ಘ ಚಂದ್ರಗ್ರಹಣ ಸಂಭವಿಸಲಿದೆ. ಈ ಭಾಗಶಃ ಚಂದ್ರಗ್ರಹಣದ ಅವಧಿ 3 ಗಂಟೆ 28 ನಿಮಿಷ 24 ಸೆಕೆಂಡುಗಳು. ಇದಕ್ಕೂ ಮೊದಲು 18 ಫೆಬ್ರವರಿ 1440 ರಂದು ಅಂತಹ ದೀರ್ಘ ಚಂದ್ರಗ್ರಹಣ ಸಂಭವಿಸಿದೆ. ಅಂದರೆ, ಇಷ್ಟು ದೀರ್ಘಾವಧಿಯ ಈ ಭಾಗಶಃ ಚಂದ್ರಗ್ರಹಣವು 580 ವರ್ಷಗಳ ನಂತರ ಸಂಭವಿಸುತ್ತಿದೆ.

ಇದು 2021 ರ ಎರಡನೇ ಮತ್ತು ಕೊನೆಯ ಚಂದ್ರಗ್ರಹಣವಾಗಿದೆ. ಈ ಹಿಂದೆ ಮೇ 26ರಂದು ಚಂದ್ರಗ್ರಹಣ ಸಂಭವಿಸಿತ್ತು. ಇದು ಸಂಪೂರ್ಣವಾಗಿ ಕೆಂಪು ಬಣ್ಣದ್ದಾಗಿತ್ತು, ಆದ್ದರಿಂದ ಇದನ್ನು ಸೂಪರ್ ಮೂನ್ ಥ ಅಥವಾ ರೆಡ್ ಬ್ಲಡ್ ಮೂನ್ ಎಂದೂ ಕರೆಯುತ್ತಾರೆ. ಈ ಭಾಗಶಃ ಚಂದ್ರಗ್ರಹಣದ ನಂತರ 15 ದಿನಗಳ ನಂತರ ಅಂದರೆ ಡಿಸೆಂಬರ್ 4 ರಂದು ಸಂಪೂರ್ಣ ಸೂರ್ಯಗ್ರಹಣ ಕೂಡ ಸಂಭವಿಸಲಿದೆ. ಹಿಂದೂ ಧರ್ಮ ಗ್ರಂಥಗಳ ಪ್ರಕಾರ, ರಾಹು ದೇವರು ಸೂರ್ಯ ಮತ್ತು ಚಂದ್ರನನ್ನು ಬಾಯಿಯಿಂದ ಹಿಡಿದಾಗ ಚಂದ್ರ ಗ್ರಹಣ ಸಂಭವಿಸುತ್ತದೆ. ಇದು ರಾಕ್ಷಸ ದೇವರನ್ನು ಒಳಗೊಂಡಿರುವುದರಿಂದ, ಗ್ರಹಣ ವೇಳೆ ಬಹಳಷ್ಟು ನಕಾರಾತ್ಮಕತೆಯನ್ನು ಹೊರಸೂಸುತ್ತದೆ ಎನ್ನಲಾಗಿದೆ.

ಎಲ್ಲೆಲ್ಲಿ ಚಂದ್ರಗ್ರಹಣ ಗೋಚರ

ಈ ಚಂದ್ರಗ್ರಹಣವು ಭಾರತೀಯ ಕಾಲಮಾನ 10:59 ಕ್ಕೆ ಸಂಭವಿಸಲಿದೆ. ಸುಮಾರು 3 ಗಂಟೆ 28 ನಿಮಿಷ 24 ಸೆಕೆಂಡುಗಳ ಕಾಲ ನಡೆಯಲಿರುವ ಈ ಭಾಗಶಃ ಚಂದ್ರಗ್ರಹಣವು ಪಶ್ಚಿಮ ಆಫ್ರಿಕಾ, ಪಶ್ಚಿಮ ಯುರೋಪ್, ಉತ್ತರ ಅಮೆರಿಕ, ದಕ್ಷಿಣ ಅಮೆರಿಕ ಮತ್ತು ಏಷ್ಯಾದ ಕೆಲವು ಭಾಗಗಳಲ್ಲಿ ಗೋಚರಿಸಲಿದೆ. ಭಾರತದಲ್ಲಿ ಇದು ಅರುಣಾಚಲ ಪ್ರದೇಶ ಮತ್ತು ಅಸ್ಸಾಂನಲ್ಲಿ ಸ್ವಲ್ಪ ಸಮಯದವರೆಗೆ ಮಾತ್ರ ಗೋಚರಿಸುತ್ತದೆ.

Spread the love
  • Related Posts

    ಕೊಕ್ಕಡ ಸಮೀಪ ಭೀಕರ ಅಪಘಾತ: ಸರ್ಕಾರಿ ಬಸ್–ಕಾರು ಡಿಕ್ಕಿ

    ಧರ್ಮಸ್ಥಳ: ಧರ್ಮಸ್ಥಳ ಕಡೆಯಿಂದ ಬೆಂಗಳೂರಿನತ್ತ ಸಾಗುತ್ತಿದ್ದ ಟಾಟಾ ಸಫಾರಿ ಕಾರು ಹಾಗೂ ಕುಕ್ಕೆ ಸುಬ್ರಹ್ಮಣ್ಯದಿಂದ ಧರ್ಮಸ್ಥಳದತ್ತ ಬರುತ್ತಿದ್ದ ಸರ್ಕಾರಿ ಬಸ್ ನಡುವೆ ಭೀಕರ ಅಪಘಾತ ಸಂಭವಿಸಿದ ಘಟನೆ ಇಂದು ಕೊಕ್ಕಡ ಸಮೀಪ ನಡೆದಿದೆ. ಅಪಘಾತದ ತೀವ್ರತೆಗೆ ಬಸ್ ಹಾಗೂ ಕಾರು ಸಂಪೂರ್ಣ…

    Spread the love

    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಿರುದ್ಧ ದ ಆರೋಪ ಆಧಾರರಹಿತ: ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ವಜಾ

    ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಿರುದ್ಧ ರಂಜನ್ ರಾವ್ ಯರ್ಡೂರು ಸುಪ್ರಿಂ ಕೋರ್ಟ್ ನಲ್ಲಿ ಸಲ್ಲಿಸಿದ್ದ ಮೇಲ್ಮನವಿಯನ್ನು ಆಲಿಸಿದ ನ್ಯಾಯಾಲಯ ದೂರುದಾರರು ನೀಡಿದ ಈ ದೂರು ಆಧಾರ ರಹಿತವಾಗಿದೆ ಎಂದು, ದಾವೆಯನ್ನು ಪ್ರಾಥಮಿಕ ಹಂತದಲ್ಲೇ ವಜಾಗೊಳಿಸಿದೆ. ಶ್ರೀ ಕ್ಷೇತ್ರ…

    Spread the love

    You Missed

    ಕೊಕ್ಕಡ ಸಮೀಪ ಭೀಕರ ಅಪಘಾತ: ಸರ್ಕಾರಿ ಬಸ್–ಕಾರು ಡಿಕ್ಕಿ

    • By admin
    • September 12, 2026
    • 2 views
    ಕೊಕ್ಕಡ ಸಮೀಪ ಭೀಕರ ಅಪಘಾತ: ಸರ್ಕಾರಿ ಬಸ್–ಕಾರು ಡಿಕ್ಕಿ

    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಿರುದ್ಧ ದ ಆರೋಪ ಆಧಾರರಹಿತ: ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ವಜಾ

    • By admin
    • September 8, 2026
    • 8 views
    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಿರುದ್ಧ ದ ಆರೋಪ ಆಧಾರರಹಿತ: ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ವಜಾ

    ಧರ್ಮ–ಸಂಸ್ಕೃತಿಯ ಸಾರ ಹೊತ್ತು ವಿಜೃಂಭಿಸಿದ ಚಿರಂಜೀವಿಯ 35ನೇ ವರ್ಷದ ಶ್ರೀಕೃಷ್ಣ ಜನ್ಮಾಷ್ಟಮಿ

    • By admin
    • September 8, 2026
    • 14 views
    ಧರ್ಮ–ಸಂಸ್ಕೃತಿಯ ಸಾರ ಹೊತ್ತು ವಿಜೃಂಭಿಸಿದ ಚಿರಂಜೀವಿಯ 35ನೇ ವರ್ಷದ ಶ್ರೀಕೃಷ್ಣ ಜನ್ಮಾಷ್ಟಮಿ

    ಬೆಳಾಲಿನಲ್ಲಿ ರಸ್ತೆಯ ಮಧ್ಯೆ ಕಾಡಾನೆ ಪ್ರತ್ಯಕ್ಷ: ಬೈಕ್ ಸವಾರ ಕೂದಲೆಳೆ ಅಂತರದಲ್ಲಿ ಅಪಾಯದಿಂದ ಪಾರು

    • By admin
    • September 3, 2026
    • 13 views
    ಬೆಳಾಲಿನಲ್ಲಿ ರಸ್ತೆಯ ಮಧ್ಯೆ ಕಾಡಾನೆ ಪ್ರತ್ಯಕ್ಷ: ಬೈಕ್ ಸವಾರ ಕೂದಲೆಳೆ ಅಂತರದಲ್ಲಿ ಅಪಾಯದಿಂದ ಪಾರು

    ಧರ್ಮಸ್ಥಳ ಕೊಕ್ಕಡ ಹೆದ್ದಾರಿ ಬದಿಯಲ್ಲಿ ಕಾಡಾನೆ ಪ್ರತ್ಯಕ್ಷ, ವಾಹನ ಸವಾರರು ಮುನ್ನೆಚ್ಚರಿಕೆ ವಹಿಸುವುದು ಸೂಕ್ತ

    • By admin
    • September 3, 2026
    • 9 views
    ಧರ್ಮಸ್ಥಳ ಕೊಕ್ಕಡ ಹೆದ್ದಾರಿ ಬದಿಯಲ್ಲಿ ಕಾಡಾನೆ ಪ್ರತ್ಯಕ್ಷ, ವಾಹನ ಸವಾರರು ಮುನ್ನೆಚ್ಚರಿಕೆ ವಹಿಸುವುದು ಸೂಕ್ತ

    APK ಬಳಿಕ .IMG, .ISO ಫೈಲ್‌ಗಳ ಮೂಲಕ ಸೈಬರ್ ದಾಳಿ; WhatsApp Web ಬಳಕೆದಾರರಿಗೆ ಎಚ್ಚರಿಕೆ

    • By admin
    • September 3, 2026
    • 11 views
    APK ಬಳಿಕ .IMG, .ISO ಫೈಲ್‌ಗಳ ಮೂಲಕ ಸೈಬರ್ ದಾಳಿ; WhatsApp Web ಬಳಕೆದಾರರಿಗೆ ಎಚ್ಚರಿಕೆ