ಮೋಸ್ಟ್ ವಾಂಟೆಡ್ ಕ್ರಿಮಿನಲ್ ಕೇರಳದ ಗ್ಯಾಂಗ್’ಸ್ಟರ್ ಜಿಯಾ ಮುಂಬಯಿಯಲ್ಲಿ ಬಂಧನ!

ಮಂಗಳೂರು: ಕೇರಳ ಮತ್ತು ಕರ್ನಾಟಕದಲ್ಲಿ ದುಷ್ಕೃತ್ಯದಲ್ಲಿ ಭಾಗಿಯಾದ ರೌಡಿ ಶೀಟರ್ ಯೂಸುಫ್ ಜಿಯಾನನ್ನು ಕೇರಳ ಎಟಿಎಸ್ ತಂಡ ಮುಂಬಯಿಯಲ್ಲಿ ಗುರುವಾರ ರಾತ್ರಿ ಬಂಧಿಸಿದೆ.

ಕೇರಳ ಮತ್ತು ಕರ್ನಾಟಕದಲ್ಲಿ ಹಲವು ಕೃತ್ಯಗಳಲ್ಲಿ ಭಾಗಿಯಾದ ರೌಡಿಶೀಟರ್ ಖಾಲಿಯಾ ರಫೀಕ್‌ನನ್ನು ಮಂಗಳೂರಿನ ಹೆದ್ದಾರಿಯಲ್ಲಿ ಕೊಲೆ ನಡೆಸಿದ್ದ ಜಿಯಾ, ಉಭಯ ರಾಜ್ಯಗಳ ಪೋಲೀಸ್ ಇಲಾಖೆಗೆ ಬೇಕಾಗಿದ್ದ ಮೋಸ್ಟ್’ವಾಂಟೆಟ್ ಆರೋಪಿಯಾಗಿದ್ದ.

2017ರ ಫೆ.14ರಂದು ಕಾಸರಗೋಡು ಕಡೆಯಿಂದ ಮಂಗಳೂರು ಕಡೆಗೆ ಬರುತ್ತಿದ್ದ ಖಾಲಿಯಾ ರಫೀಕ್‌ನನ್ನು ಕೋಟೆಕಾರು ಪೆಟ್ರೋಲ್ ಬಂಕ್ ಬಳಿ ಲಾರಿಯಿಂದ ಗುದ್ದಿಸಿ ಬಳಿಕ ಗುಂಡಿಕ್ಕಿ, ತಲವಾರು ದಾಳಿ ನಡೆಸಿ ಕೊಲೆ ಮಾಡಲಾಗಿತ್ತು. ಈ ಪ್ರಕರಣದಲ್ಲಿ ಹಲವರನ್ನು ಈ ಹಿಂದೆಯೇ ಮಂಗಳೂರು ಪೊಲೀಸರು ಬಂಧಿಸಿದ್ದರು. ಪ್ರಮುಖ ಆರೋಪಿ ಜಿಯಾ ವಿದೇಶದಲ್ಲಿ ತಲೆಮರೆಸಿಕೊಂಡಿದ್ದ.

ಜಿಯಾ ವಿರುದ್ಧ ಕೇರಳ ಮತ್ತು ಕರ್ನಾಟಕದಲ್ಲಿ ಲುಕ್‌ಔಟ್ ನೋಟಿಸು ಹೊರಡಿಸಲಾಗಿತ್ತು. ಖಾಲಿಯಾ ಕೊಲೆ ಪ್ರಕರಣದ ಹೆಚ್ಚಿನ ವಿಚಾರಣೆಗೆ ಜಿಯಾನನ್ನು ವಶಕ್ಕೆ ನೀಡುವಂತೆ ಶೀಘ್ರವೇ ಕೇರಳ ನ್ಯಾಯಾಲಯಕ್ಕೆ ಮನವಿ ಮಾಡಲಾಗುವುದು ಎಂದು ಮಂಗಳೂರು ಪೊಲೀಸ್ ಆಯುಕ್ತ ಎನ್. ಶಶಿಕುಮಾರ್ ತಿಳಿಸಿದ್ದಾರೆ

ಕೇರಳದ ನಟಿಯ ಮೇಲೆ ಗುಂಡು ಹಾರಿಸಿದ್ದ ಜಿಯಾ, ಘಟನೆಯ ಬಳಿಕ ವಿದೇಶಕ್ಕೆ ಪರಾರಿಯಾಗಿದ್ದು, ಕೆಲವು ಸಮಯದ ಬಳಿಕ ನಕಲಿ ಪಾಸ್‌ಪೋರ್ಟ್ ಬಳಸಿ ಕೇರಳಕ್ಕೆ ಆಗಮಿಸಿದ್ದ ಗುರುವಾರ ಮತ್ತೆ ವಿದೇಶಕ್ಕೆ ಪರಾರಿಯಾಗಲು ಯತ್ನಿಸಿದ್ದು, ಈ ಸಂದರ್ಭ ಎಮಿಗ್ರೇಷನ್ ಅಧಿಕಾರಿಗಳು ಪರಿಶೀಲನ ನಡೆಸಿದಾಗ ನಕಲಿ ಪಾಸ್‌ಪೋರ್ಟ್ ಎಂದು ದೃಢಪಟ್ಟಿದೆ.

ಕೂಡಲೇ ಈತನ ಬಗ್ಗೆ ಶೋಧ ನಡೆಸಿದಾಗ ಕರ್ನಾಟಕ ಮತ್ತು ಕೇರಳ ಪೊಲೀಸರು ಲುಕ್ ಔಟ್ ನೋಟಿಸ್ ಜಾರಿ ಮಾಡಿರುವುದು ತಿಳಿದುಬಂದಿದ್ದು ಬಳಿಕ ಬಂಧಿಸಲಾಗಿದೆ.

Spread the love
  • Related Posts

    ಬೆಳ್ತಂಗಡಿ ನೂತನ ನ್ಯಾಯಾಲಯ ಸಂಕೀರ್ಣದ ಶಂಕುಸ್ಥಾಪನೆ

    ಬೆಳ್ತಂಗಡಿ: ಜಿಲ್ಲಾ ನ್ಯಾಯಾಂಗ, ದ.ಕ ಲೋಕೋಪಯೋಗಿ ಇಲಾಖೆ ಹಾಗೂ ವಕೀಲರ ಸಂಘ ಬೆಳ್ತಂಗಡಿ ಇವರ ಸಂಯುಕ್ತ ಆಶ್ರಯದಲ್ಲಿ ಬೆಳ್ತಂಗಡಿ ತಾಲೂಕಿನ ಜನತೆ ಮತ್ತು ವಕೀಲರ ಸಂಘದ ಬಹುದಿನಗಳ ಬೇಡಿಕೆಯಾಗಿದ್ದ ನೂತನ ನ್ಯಾಯಾಲಯ ಸಂಕೀರ್ಣಕ್ಕೆ ಕರ್ನಾಟಕ ಸರಕಾರಕ್ಕೆ ಸಲ್ಲಿಸಲಾದ ಸುಮಾರು 23 ಕೋಟಿ…

    Spread the love

    ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ಬೆಳ್ತಂಗಡಿ ತಾಲೂಕು ಘಟಕ ರಚನೆ: ನಿಶಾನ್ ಬಂಗೇರ ನಾರ್ಯ ಅಧ್ಯಕ್ಷರಾಗಿ ಆಯ್ಕೆ

    ಬೆಳ್ತಂಗಡಿ, ಜೂನ್ 13: ಸ್ಥಳೀಯ ಪತ್ರಿಕೋದ್ಯಮವನ್ನು ಮತ್ತಷ್ಟು ಬಲಪಡಿಸುವ ಹಾಗೂ ಪತ್ರಕರ್ತರ ಹಿತರಕ್ಷಣೆಗೆ ಒತ್ತು ನೀಡುವ ಉದ್ದೇಶದಿಂದ ಕರ್ನಾಟಕ ಜರ್ನಲಿಸ್ಟ್ ಯೂನಿಯನ್‌ನ ಬೆಳ್ತಂಗಡಿ ತಾಲೂಕು ಘಟಕದ 2026-27ನೇ ಸಾಲಿನ ನೂತನ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ಯಶಸ್ವಿಯಾಗಿ ನಡೆಯಿತು. ಸಂಘದ ಮುಂದಿನ ಅವಧಿಗೆ…

    Spread the love

    You Missed

    ಬೆಳ್ತಂಗಡಿ ನೂತನ ನ್ಯಾಯಾಲಯ ಸಂಕೀರ್ಣದ ಶಂಕುಸ್ಥಾಪನೆ

    • By admin
    • June 14, 2026
    • 20 views
    ಬೆಳ್ತಂಗಡಿ ನೂತನ ನ್ಯಾಯಾಲಯ ಸಂಕೀರ್ಣದ ಶಂಕುಸ್ಥಾಪನೆ

    ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ಬೆಳ್ತಂಗಡಿ ತಾಲೂಕು ಘಟಕ ರಚನೆ: ನಿಶಾನ್ ಬಂಗೇರ ನಾರ್ಯ ಅಧ್ಯಕ್ಷರಾಗಿ ಆಯ್ಕೆ

    • By admin
    • June 13, 2026
    • 72 views
    ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ಬೆಳ್ತಂಗಡಿ ತಾಲೂಕು ಘಟಕ ರಚನೆ: ನಿಶಾನ್ ಬಂಗೇರ ನಾರ್ಯ ಅಧ್ಯಕ್ಷರಾಗಿ ಆಯ್ಕೆ

    ಓರಿಯಂಟೇಶನ್ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಿಗೆ ಯಶಸ್ಸಿನ ಮಂತ್ರ, ಶ್ರದ್ಧೆ ಮತ್ತು ಪರಿಶ್ರಮದಿಂದ ಉಜ್ವಲ ಭವಿಷ್ಯ ಸಾಧ್ಯ: ಸ್ಮಿತೇಶ್ ಬಾರ್ಯ

    • By admin
    • June 13, 2026
    • 25 views
    ಓರಿಯಂಟೇಶನ್ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಿಗೆ ಯಶಸ್ಸಿನ ಮಂತ್ರ, ಶ್ರದ್ಧೆ ಮತ್ತು ಪರಿಶ್ರಮದಿಂದ ಉಜ್ವಲ ಭವಿಷ್ಯ ಸಾಧ್ಯ: ಸ್ಮಿತೇಶ್ ಬಾರ್ಯ

    ಸ್ಪರ್ಧಾತ್ಮಕ ಪರೀಕ್ಷೆಗಳತ್ತ ವಿದ್ಯಾರ್ಥಿಗಳನ್ನು ಪ್ರೇರೇಪಿಸುವ ಒಲಿಂಪಿಯಾಡ್ ಕಾರ್ಯಕ್ರಮ,ಸಾಧಕ ವಿದ್ಯಾರ್ಥಿಗಳಿಗೆ ಪ್ರಮಾಣಪತ್ರ ವಿತರಣೆ

    • By admin
    • June 13, 2026
    • 62 views
    ಸ್ಪರ್ಧಾತ್ಮಕ ಪರೀಕ್ಷೆಗಳತ್ತ ವಿದ್ಯಾರ್ಥಿಗಳನ್ನು ಪ್ರೇರೇಪಿಸುವ ಒಲಿಂಪಿಯಾಡ್ ಕಾರ್ಯಕ್ರಮ,ಸಾಧಕ ವಿದ್ಯಾರ್ಥಿಗಳಿಗೆ ಪ್ರಮಾಣಪತ್ರ ವಿತರಣೆ

    ಬೆಳ್ತಂಗಡಿ ನರಸಿಂಹಗಡ (ಗಡಾಯಿಕಲ್ಲು) ಚಾರಣಕ್ಕೆ ಪ್ರವಾಸಿಗರಿಗೆ ನಿಷೇಧ ಹೇರಿದ ಅರಣ್ಯ ಇಲಾಖೆ!!!

    • By admin
    • June 13, 2026
    • 21 views
    ಬೆಳ್ತಂಗಡಿ ನರಸಿಂಹಗಡ (ಗಡಾಯಿಕಲ್ಲು) ಚಾರಣಕ್ಕೆ ಪ್ರವಾಸಿಗರಿಗೆ ನಿಷೇಧ ಹೇರಿದ ಅರಣ್ಯ ಇಲಾಖೆ!!!

    ಲ್ಯಾಂಡಿಂಗ್ ವೇಳೆ ದುರಂತ: ಬೆಂಕಿಗಾಹುತಿಯಾದ ವಾಯುಪಡೆಯ AN-32 ವಿಮಾನ

    • By admin
    • June 13, 2026
    • 191 views
    ಲ್ಯಾಂಡಿಂಗ್ ವೇಳೆ ದುರಂತ: ಬೆಂಕಿಗಾಹುತಿಯಾದ ವಾಯುಪಡೆಯ AN-32 ವಿಮಾನ