ಮೋಸ್ಟ್ ವಾಂಟೆಡ್ ಕ್ರಿಮಿನಲ್ ಕೇರಳದ ಗ್ಯಾಂಗ್’ಸ್ಟರ್ ಜಿಯಾ ಮುಂಬಯಿಯಲ್ಲಿ ಬಂಧನ!

ಮಂಗಳೂರು: ಕೇರಳ ಮತ್ತು ಕರ್ನಾಟಕದಲ್ಲಿ ದುಷ್ಕೃತ್ಯದಲ್ಲಿ ಭಾಗಿಯಾದ ರೌಡಿ ಶೀಟರ್ ಯೂಸುಫ್ ಜಿಯಾನನ್ನು ಕೇರಳ ಎಟಿಎಸ್ ತಂಡ ಮುಂಬಯಿಯಲ್ಲಿ ಗುರುವಾರ ರಾತ್ರಿ ಬಂಧಿಸಿದೆ.

ಕೇರಳ ಮತ್ತು ಕರ್ನಾಟಕದಲ್ಲಿ ಹಲವು ಕೃತ್ಯಗಳಲ್ಲಿ ಭಾಗಿಯಾದ ರೌಡಿಶೀಟರ್ ಖಾಲಿಯಾ ರಫೀಕ್‌ನನ್ನು ಮಂಗಳೂರಿನ ಹೆದ್ದಾರಿಯಲ್ಲಿ ಕೊಲೆ ನಡೆಸಿದ್ದ ಜಿಯಾ, ಉಭಯ ರಾಜ್ಯಗಳ ಪೋಲೀಸ್ ಇಲಾಖೆಗೆ ಬೇಕಾಗಿದ್ದ ಮೋಸ್ಟ್’ವಾಂಟೆಟ್ ಆರೋಪಿಯಾಗಿದ್ದ.

2017ರ ಫೆ.14ರಂದು ಕಾಸರಗೋಡು ಕಡೆಯಿಂದ ಮಂಗಳೂರು ಕಡೆಗೆ ಬರುತ್ತಿದ್ದ ಖಾಲಿಯಾ ರಫೀಕ್‌ನನ್ನು ಕೋಟೆಕಾರು ಪೆಟ್ರೋಲ್ ಬಂಕ್ ಬಳಿ ಲಾರಿಯಿಂದ ಗುದ್ದಿಸಿ ಬಳಿಕ ಗುಂಡಿಕ್ಕಿ, ತಲವಾರು ದಾಳಿ ನಡೆಸಿ ಕೊಲೆ ಮಾಡಲಾಗಿತ್ತು. ಈ ಪ್ರಕರಣದಲ್ಲಿ ಹಲವರನ್ನು ಈ ಹಿಂದೆಯೇ ಮಂಗಳೂರು ಪೊಲೀಸರು ಬಂಧಿಸಿದ್ದರು. ಪ್ರಮುಖ ಆರೋಪಿ ಜಿಯಾ ವಿದೇಶದಲ್ಲಿ ತಲೆಮರೆಸಿಕೊಂಡಿದ್ದ.

ಜಿಯಾ ವಿರುದ್ಧ ಕೇರಳ ಮತ್ತು ಕರ್ನಾಟಕದಲ್ಲಿ ಲುಕ್‌ಔಟ್ ನೋಟಿಸು ಹೊರಡಿಸಲಾಗಿತ್ತು. ಖಾಲಿಯಾ ಕೊಲೆ ಪ್ರಕರಣದ ಹೆಚ್ಚಿನ ವಿಚಾರಣೆಗೆ ಜಿಯಾನನ್ನು ವಶಕ್ಕೆ ನೀಡುವಂತೆ ಶೀಘ್ರವೇ ಕೇರಳ ನ್ಯಾಯಾಲಯಕ್ಕೆ ಮನವಿ ಮಾಡಲಾಗುವುದು ಎಂದು ಮಂಗಳೂರು ಪೊಲೀಸ್ ಆಯುಕ್ತ ಎನ್. ಶಶಿಕುಮಾರ್ ತಿಳಿಸಿದ್ದಾರೆ

ಕೇರಳದ ನಟಿಯ ಮೇಲೆ ಗುಂಡು ಹಾರಿಸಿದ್ದ ಜಿಯಾ, ಘಟನೆಯ ಬಳಿಕ ವಿದೇಶಕ್ಕೆ ಪರಾರಿಯಾಗಿದ್ದು, ಕೆಲವು ಸಮಯದ ಬಳಿಕ ನಕಲಿ ಪಾಸ್‌ಪೋರ್ಟ್ ಬಳಸಿ ಕೇರಳಕ್ಕೆ ಆಗಮಿಸಿದ್ದ ಗುರುವಾರ ಮತ್ತೆ ವಿದೇಶಕ್ಕೆ ಪರಾರಿಯಾಗಲು ಯತ್ನಿಸಿದ್ದು, ಈ ಸಂದರ್ಭ ಎಮಿಗ್ರೇಷನ್ ಅಧಿಕಾರಿಗಳು ಪರಿಶೀಲನ ನಡೆಸಿದಾಗ ನಕಲಿ ಪಾಸ್‌ಪೋರ್ಟ್ ಎಂದು ದೃಢಪಟ್ಟಿದೆ.

ಕೂಡಲೇ ಈತನ ಬಗ್ಗೆ ಶೋಧ ನಡೆಸಿದಾಗ ಕರ್ನಾಟಕ ಮತ್ತು ಕೇರಳ ಪೊಲೀಸರು ಲುಕ್ ಔಟ್ ನೋಟಿಸ್ ಜಾರಿ ಮಾಡಿರುವುದು ತಿಳಿದುಬಂದಿದ್ದು ಬಳಿಕ ಬಂಧಿಸಲಾಗಿದೆ.

Spread the love
  • Related Posts

    ಕೊಕ್ಕಡ ಸಮೀಪ ಭೀಕರ ಅಪಘಾತ: ಸರ್ಕಾರಿ ಬಸ್–ಕಾರು ಡಿಕ್ಕಿ

    ಧರ್ಮಸ್ಥಳ: ಧರ್ಮಸ್ಥಳ ಕಡೆಯಿಂದ ಬೆಂಗಳೂರಿನತ್ತ ಸಾಗುತ್ತಿದ್ದ ಟಾಟಾ ಸಫಾರಿ ಕಾರು ಹಾಗೂ ಕುಕ್ಕೆ ಸುಬ್ರಹ್ಮಣ್ಯದಿಂದ ಧರ್ಮಸ್ಥಳದತ್ತ ಬರುತ್ತಿದ್ದ ಸರ್ಕಾರಿ ಬಸ್ ನಡುವೆ ಭೀಕರ ಅಪಘಾತ ಸಂಭವಿಸಿದ ಘಟನೆ ಇಂದು ಕೊಕ್ಕಡ ಸಮೀಪ ನಡೆದಿದೆ. ಅಪಘಾತದ ತೀವ್ರತೆಗೆ ಬಸ್ ಹಾಗೂ ಕಾರು ಸಂಪೂರ್ಣ…

    Spread the love

    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಿರುದ್ಧ ದ ಆರೋಪ ಆಧಾರರಹಿತ: ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ವಜಾ

    ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಿರುದ್ಧ ರಂಜನ್ ರಾವ್ ಯರ್ಡೂರು ಸುಪ್ರಿಂ ಕೋರ್ಟ್ ನಲ್ಲಿ ಸಲ್ಲಿಸಿದ್ದ ಮೇಲ್ಮನವಿಯನ್ನು ಆಲಿಸಿದ ನ್ಯಾಯಾಲಯ ದೂರುದಾರರು ನೀಡಿದ ಈ ದೂರು ಆಧಾರ ರಹಿತವಾಗಿದೆ ಎಂದು, ದಾವೆಯನ್ನು ಪ್ರಾಥಮಿಕ ಹಂತದಲ್ಲೇ ವಜಾಗೊಳಿಸಿದೆ. ಶ್ರೀ ಕ್ಷೇತ್ರ…

    Spread the love

    You Missed

    ಕೊಕ್ಕಡ ಸಮೀಪ ಭೀಕರ ಅಪಘಾತ: ಸರ್ಕಾರಿ ಬಸ್–ಕಾರು ಡಿಕ್ಕಿ

    • By admin
    • September 12, 2026
    • 2 views
    ಕೊಕ್ಕಡ ಸಮೀಪ ಭೀಕರ ಅಪಘಾತ: ಸರ್ಕಾರಿ ಬಸ್–ಕಾರು ಡಿಕ್ಕಿ

    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಿರುದ್ಧ ದ ಆರೋಪ ಆಧಾರರಹಿತ: ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ವಜಾ

    • By admin
    • September 8, 2026
    • 8 views
    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಿರುದ್ಧ ದ ಆರೋಪ ಆಧಾರರಹಿತ: ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ವಜಾ

    ಧರ್ಮ–ಸಂಸ್ಕೃತಿಯ ಸಾರ ಹೊತ್ತು ವಿಜೃಂಭಿಸಿದ ಚಿರಂಜೀವಿಯ 35ನೇ ವರ್ಷದ ಶ್ರೀಕೃಷ್ಣ ಜನ್ಮಾಷ್ಟಮಿ

    • By admin
    • September 8, 2026
    • 14 views
    ಧರ್ಮ–ಸಂಸ್ಕೃತಿಯ ಸಾರ ಹೊತ್ತು ವಿಜೃಂಭಿಸಿದ ಚಿರಂಜೀವಿಯ 35ನೇ ವರ್ಷದ ಶ್ರೀಕೃಷ್ಣ ಜನ್ಮಾಷ್ಟಮಿ

    ಬೆಳಾಲಿನಲ್ಲಿ ರಸ್ತೆಯ ಮಧ್ಯೆ ಕಾಡಾನೆ ಪ್ರತ್ಯಕ್ಷ: ಬೈಕ್ ಸವಾರ ಕೂದಲೆಳೆ ಅಂತರದಲ್ಲಿ ಅಪಾಯದಿಂದ ಪಾರು

    • By admin
    • September 3, 2026
    • 13 views
    ಬೆಳಾಲಿನಲ್ಲಿ ರಸ್ತೆಯ ಮಧ್ಯೆ ಕಾಡಾನೆ ಪ್ರತ್ಯಕ್ಷ: ಬೈಕ್ ಸವಾರ ಕೂದಲೆಳೆ ಅಂತರದಲ್ಲಿ ಅಪಾಯದಿಂದ ಪಾರು

    ಧರ್ಮಸ್ಥಳ ಕೊಕ್ಕಡ ಹೆದ್ದಾರಿ ಬದಿಯಲ್ಲಿ ಕಾಡಾನೆ ಪ್ರತ್ಯಕ್ಷ, ವಾಹನ ಸವಾರರು ಮುನ್ನೆಚ್ಚರಿಕೆ ವಹಿಸುವುದು ಸೂಕ್ತ

    • By admin
    • September 3, 2026
    • 9 views
    ಧರ್ಮಸ್ಥಳ ಕೊಕ್ಕಡ ಹೆದ್ದಾರಿ ಬದಿಯಲ್ಲಿ ಕಾಡಾನೆ ಪ್ರತ್ಯಕ್ಷ, ವಾಹನ ಸವಾರರು ಮುನ್ನೆಚ್ಚರಿಕೆ ವಹಿಸುವುದು ಸೂಕ್ತ

    APK ಬಳಿಕ .IMG, .ISO ಫೈಲ್‌ಗಳ ಮೂಲಕ ಸೈಬರ್ ದಾಳಿ; WhatsApp Web ಬಳಕೆದಾರರಿಗೆ ಎಚ್ಚರಿಕೆ

    • By admin
    • September 3, 2026
    • 11 views
    APK ಬಳಿಕ .IMG, .ISO ಫೈಲ್‌ಗಳ ಮೂಲಕ ಸೈಬರ್ ದಾಳಿ; WhatsApp Web ಬಳಕೆದಾರರಿಗೆ ಎಚ್ಚರಿಕೆ