ಮುಂಬೈನ 5 ತಿಂಗಳಿನ ಟೀರಾಗೆ ಬೇಕಿರುವ ‘ಔಷಧಿ’ ಮೇಲಿನ 6 ಕೋಟಿ ರೂ.ಜಿಎಸ್’ಟಿ ಮನ್ನಾ ಮಾಡಿದ ಪ್ರಧಾನಿ ಮೋದಿ!

ಮುಂಬೈ: ಜೀವನ್ಮರಣ ಹೋರಾಟ ನಡೆಸುತ್ತಿರುವ ಐದು ತಿಂಗಳ ಟೀರಾ ಕಾಮತ್‌ಳ ಜೀವ ಉಳಿಸುವ ಔಷಧಿ ಆಮದಿನ ಮೇಲಿನ ತೆರಿಗೆಯನ್ನು ಪ್ರಧಾನಿ ನರೇಂದ್ರ ಮೋದಿ ಅವರು ಮನ್ನಾ ಮಾಡಿದ್ದು ಈ ನಿರ್ಧಾರ ಮಗುವಿನ ಪೋಷಕರಿಗೆ ಹೊಸ ಆಶಾಕಿರಣ ಮೂಡಿಸಿದೆ.

ಅಪರೂಪದ ಆನುವಂಶಿಕ ಕಾಯಿಲೆಯಿಂದ ಬಳಲುತ್ತಿರುವ ಟೀರಾ ಕಾಮತ್ ಗೆ 16 ಕೋಟಿ ರೂ. ಮೌಲ್ಯದ ಔಷಧಿಯನ್ನು ಆಮದು ಮಾಡಿಕೊಳ್ಳುತ್ತಿದ್ದು ಇದರ ಮೇಲಿನ 6 ಕೋಟಿ ರೂ.ಗಳ ಜಿಎಸ್ಟಿ ಮೊತ್ತವನ್ನು ಪಿಎಂ ಮೋದಿ ಮನ್ನಾ ಮಾಡಿದ್ದಾರೆ.

ಟೀರಾ ಪೋಷಕರು ಜೀನ್ ಬದಲಿ ಚಿಕಿತ್ಸೆಯಿಂದ ಗುಣಪಡಿಸಬಹುದಾದ ಔಷಧಿಯನ್ನು ಕ್ರೌಡ್-ಫಂಡಿಂಗ್ ಮೂಲಕ 16 ಕೋಟಿ ರೂಪಾಯಿಯನ್ನು ಸಂಗ್ರಹಿಸಿದ್ದರು. ಇನ್ನು ಈ ಔಷಧಿಯನ್ನು ಅಮೆರಿಕಾದಿಂದ ಆಮದು ಮಾಡಿಕೊಳ್ಳಬೇಕಾಗಿತ್ತು. ಇದಕ್ಕಾಗಿ ಆಮದು ಸುಂಕವನ್ನು ಪಾವತಿ ಮಾಡಬೇಕಾಗಿತ್ತು.

ಇದಕ್ಕಾಗಿ ಪ್ರತಿಪಕ್ಷದ ನಾಯಕ ಮತ್ತು ಬಿಜೆಪಿ ಶಾಸಕ ದೇವೇಂದ್ರ ಫಡ್ನವೀಸ್ ಅವರು ಪ್ರಧಾನಿ ಮೋದಿ ಮತ್ತು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರಿಗೆ ಟೀರಾ ಕಾಮತ್ ಪೋಷಕರು ಪತ್ರ ಬರೆದು ಔಷಧಿಗಳ ಆಮದಿಗೆ ಅನ್ವಯವಾಗುವ ಎಲ್ಲ ತೆರಿಗೆಗಳನ್ನು ವಿನಾಯಿತಿ ನೀಡುವಂತೆ ಕೋರಿದ್ದರು.

ಇದೇ ವಿಷಯವಾಗಿ 6 ಕೋಟಿ ರೂ. ಆಮದು ಸುಂಕವನ್ನು ಕಡಿತ ಮಾಡಬೇಕು ಎಂದು ಫಡ್ನವೀಸ್ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದರು. ಇದಕ್ಕೆ ಪ್ರತಿಕ್ರಿಯಿಸಿರುವ ಮೋದಿ ಅವರು ಆಮದು ಸುಂಕ ವಿನಾಯಿತಿ ನೀಡಲಾಗುವುದು ಎಂದು ತಿಳಿಸಿದ್ದಾರೆ.

ಮುಂಬೈ ನಿವಾಸಿಗಳಾದ ಪ್ರಿಯಾಂಕಾ ಮತ್ತು ಮಿಹಿರ್ ಕಾಮತ್ ಅವರು ಆಗಸ್ಟ್ 14, 2020 ರಂದು ಟೀರಾಗೆ ಜನ್ಮ ನೀಡಿದರು. ಟೀರಾ ಹುಟ್ಟಿದಾಗ ಲವಲವಿಕೆಯಿಂದಲೇ ಇದ್ದಳು. ಆದರೆ ಎರಡು ವಾರಗಳ ನಂತರ, ಟೀರಾ ಎದೆ ಹಾಲು ಕುಡಿಯಲು ತೊಂದರೆ ಅನುಭವಿಸಿದ್ದಳು. ಆಗ ಪೋಷಕರು ಮಕ್ಕಳ ವೈದ್ಯರ ಬಳಿಗೆ ಕರೆದೊಯ್ದಿದ್ದರು. ಆಗ ಮಗುವಿಗೆ ಸ್ಪೈನಲ್ ಮಸ್ಕ್ಯುಲರ್ ಅಟ್ರೋಫಿ(ಎಸ್ಎಂಎ) ಕಾಯಿಲೆ ಇರುವುದನ್ನು ವೈದ್ಯರು ಪತ್ತೆ ಹಚ್ಚಿದ್ದರು.

Spread the love
  • Related Posts

    ನ್ಯಾಯವಾದಿಗಳ ಸೌಹಾರ್ದ ಸಹಕಾರಿ ಸಂಘ ನಿಯಮಿತ ಇದರ ಬಂಟ್ವಾಳದ ನೂತನ ಶಾಖೆ ಉದ್ಘಾಟನೆ

    ಮಂಗಳೂರು: ನ್ಯಾಯವಾದಿಗಳ ಸೌಹಾರ್ದ ಸಹಕಾರಿ ಸಂಘ ನಿಯಮಿತ ಇದರ ಬಂಟ್ವಾಳದ ನೂತನ ಶಾಖೆಯು ಬಂಟ್ವಾಳದ ನ್ಯಾಯಾಲಯದ ಆವರಣದಲ್ಲಿ ಇಂದು ಉದ್ಘಾಟನೆಗೊಂಡಿದ್ದು, ಬಂಟ್ವಾಳದ ನೂತನ ಶಾಖೆಯ ಕಚೇರಿಯನ್ನು ಮಂಗಳೂರು ವಕೀಲರ ಸಂಘದ ಮಾಜಿ ಅಧ್ಯಕ್ಷರಾದ ಶ್ರೀ ಎಸ್ ಪಿ ಚಂಗಪ್ಪ ರವರು ಉದ್ಘಾಟಿಸಿದರು.…

    Spread the love

    ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ 54ನೇ ವರ್ಷದ ಉಚಿತ ಸಾಮೂಹಿಕ ವಿವಾಹ ಸಮಾರಂಭದ ವೈಭವ,106ಜೋಡಿ ಸಪ್ತಪದಿ ತುಳಿದು ದಾಂಪತ್ಯ ಜೀವನಕ್ಕೆ ಪಾದಾರ್ಪಣೆ

    ಧರ್ಮಸ್ಥಳ: ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಬುಧವಾರ ಸಂಜೆ ಗಂಟೆ 6.40ರ ಗೋಧೂಳಿ ಲಗ್ನ ಸುಮುಹೂರ್ತದಲ್ಲಿ ಅಮೃತವರ್ಷಿಣಿ ಸಭಾಭವನದಲ್ಲಿ ನಡೆದ 54ನೇ ವರ್ಷದ ಉಚಿತ ಸಾಮೂಹಿಕ ವಿವಾಹ ಸಮಾರಂಭದಲ್ಲಿ 106 ಜೊತೆ ವಧೂ-ವರರು ದಾಂಪತ್ಯ ಜೀವನಕ್ಕೆ ಪಾದಾರ್ಪಣೆ ಮಾಡಿದರು. ಬುಧವಾರ ಬೆಳಿಗ್ಗೆ ಧರ್ಮಾಧಿಕಾರಿ…

    Spread the love

    You Missed

    ನ್ಯಾಯವಾದಿಗಳ ಸೌಹಾರ್ದ ಸಹಕಾರಿ ಸಂಘ ನಿಯಮಿತ ಇದರ ಬಂಟ್ವಾಳದ ನೂತನ ಶಾಖೆ ಉದ್ಘಾಟನೆ

    • By admin
    • April 30, 2026
    • 197 views
    ನ್ಯಾಯವಾದಿಗಳ ಸೌಹಾರ್ದ ಸಹಕಾರಿ ಸಂಘ ನಿಯಮಿತ ಇದರ ಬಂಟ್ವಾಳದ ನೂತನ ಶಾಖೆ ಉದ್ಘಾಟನೆ

    ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ 54ನೇ ವರ್ಷದ ಉಚಿತ ಸಾಮೂಹಿಕ ವಿವಾಹ ಸಮಾರಂಭದ ವೈಭವ,106ಜೋಡಿ ಸಪ್ತಪದಿ ತುಳಿದು ದಾಂಪತ್ಯ ಜೀವನಕ್ಕೆ ಪಾದಾರ್ಪಣೆ

    • By admin
    • April 29, 2026
    • 44 views
    ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ 54ನೇ ವರ್ಷದ ಉಚಿತ ಸಾಮೂಹಿಕ ವಿವಾಹ ಸಮಾರಂಭದ ವೈಭವ,106ಜೋಡಿ ಸಪ್ತಪದಿ ತುಳಿದು ದಾಂಪತ್ಯ ಜೀವನಕ್ಕೆ ಪಾದಾರ್ಪಣೆ

    ಬೆಂಗಳೂರಿನಲ್ಲಿ ಘನಘೋರ ದುರಂತ ಬೌರಿಂಗ್ ಆಸ್ಪತ್ರೆಯ ಕೌಂಪೌಂಡು ಕುಸಿದು ಮೂವರು ಮಕ್ಕಳ ಸಹಿತ 8ಮಂದಿಯ ದುರ್ಮರಣ

    • By admin
    • April 29, 2026
    • 50 views
    ಬೆಂಗಳೂರಿನಲ್ಲಿ ಘನಘೋರ ದುರಂತ ಬೌರಿಂಗ್ ಆಸ್ಪತ್ರೆಯ ಕೌಂಪೌಂಡು ಕುಸಿದು ಮೂವರು ಮಕ್ಕಳ ಸಹಿತ 8ಮಂದಿಯ   ದುರ್ಮರಣ

    ಕುಂಟುತ್ತಿರುವ ಕಾಮಗಾರಿಯಿಂದ ಬಿಸಿಲ ಬೇಗೆಗೆ ಬೆಂಡಾದ ಜನ: ಟ್ರಾಫಿಕ್ ಜಾಮ್ ನಿಂದ ಹೈರಾಣಾದ ಜನ

    • By admin
    • April 29, 2026
    • 109 views
    ಕುಂಟುತ್ತಿರುವ ಕಾಮಗಾರಿಯಿಂದ ಬಿಸಿಲ ಬೇಗೆಗೆ ಬೆಂಡಾದ ಜನ: ಟ್ರಾಫಿಕ್ ಜಾಮ್ ನಿಂದ ಹೈರಾಣಾದ ಜನ

    ಬಿರು ಬಿಸಿಲಿನಲ್ಲಿ ಪ್ರಾಣಿ–ಪಕ್ಷಿಗಳಿಗೆ ನೀರುಣಿಸುವ ಮಹತ್ವದ ಕಾರ್ಯಕ್ಕೆ ಮುಂದಾಗೋಣ

    • By admin
    • April 29, 2026
    • 46 views
    ಬಿರು ಬಿಸಿಲಿನಲ್ಲಿ ಪ್ರಾಣಿ–ಪಕ್ಷಿಗಳಿಗೆ ನೀರುಣಿಸುವ ಮಹತ್ವದ ಕಾರ್ಯಕ್ಕೆ ಮುಂದಾಗೋಣ

    ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸೇವಾ ಟ್ರಸ್ಟ್ (ರಿ) ಬೆಳ್ತಂಗಡಿ ಇದರ ವತಿಯಿಂದ ಕು.ಪ್ರಾಪ್ತಿ ಎಂ ಗೌಡರಿಗೆ ಗೌರವ ಸನ್ಮಾನ

    • By admin
    • April 28, 2026
    • 87 views
    ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸೇವಾ ಟ್ರಸ್ಟ್ (ರಿ) ಬೆಳ್ತಂಗಡಿ ಇದರ ವತಿಯಿಂದ ಕು.ಪ್ರಾಪ್ತಿ ಎಂ ಗೌಡರಿಗೆ ಗೌರವ ಸನ್ಮಾನ