ಮುಂಬೈನ 5 ತಿಂಗಳಿನ ಟೀರಾಗೆ ಬೇಕಿರುವ ‘ಔಷಧಿ’ ಮೇಲಿನ 6 ಕೋಟಿ ರೂ.ಜಿಎಸ್’ಟಿ ಮನ್ನಾ ಮಾಡಿದ ಪ್ರಧಾನಿ ಮೋದಿ!

ಮುಂಬೈ: ಜೀವನ್ಮರಣ ಹೋರಾಟ ನಡೆಸುತ್ತಿರುವ ಐದು ತಿಂಗಳ ಟೀರಾ ಕಾಮತ್‌ಳ ಜೀವ ಉಳಿಸುವ ಔಷಧಿ ಆಮದಿನ ಮೇಲಿನ ತೆರಿಗೆಯನ್ನು ಪ್ರಧಾನಿ ನರೇಂದ್ರ ಮೋದಿ ಅವರು ಮನ್ನಾ ಮಾಡಿದ್ದು ಈ ನಿರ್ಧಾರ ಮಗುವಿನ ಪೋಷಕರಿಗೆ ಹೊಸ ಆಶಾಕಿರಣ ಮೂಡಿಸಿದೆ.

ಅಪರೂಪದ ಆನುವಂಶಿಕ ಕಾಯಿಲೆಯಿಂದ ಬಳಲುತ್ತಿರುವ ಟೀರಾ ಕಾಮತ್ ಗೆ 16 ಕೋಟಿ ರೂ. ಮೌಲ್ಯದ ಔಷಧಿಯನ್ನು ಆಮದು ಮಾಡಿಕೊಳ್ಳುತ್ತಿದ್ದು ಇದರ ಮೇಲಿನ 6 ಕೋಟಿ ರೂ.ಗಳ ಜಿಎಸ್ಟಿ ಮೊತ್ತವನ್ನು ಪಿಎಂ ಮೋದಿ ಮನ್ನಾ ಮಾಡಿದ್ದಾರೆ.

ಟೀರಾ ಪೋಷಕರು ಜೀನ್ ಬದಲಿ ಚಿಕಿತ್ಸೆಯಿಂದ ಗುಣಪಡಿಸಬಹುದಾದ ಔಷಧಿಯನ್ನು ಕ್ರೌಡ್-ಫಂಡಿಂಗ್ ಮೂಲಕ 16 ಕೋಟಿ ರೂಪಾಯಿಯನ್ನು ಸಂಗ್ರಹಿಸಿದ್ದರು. ಇನ್ನು ಈ ಔಷಧಿಯನ್ನು ಅಮೆರಿಕಾದಿಂದ ಆಮದು ಮಾಡಿಕೊಳ್ಳಬೇಕಾಗಿತ್ತು. ಇದಕ್ಕಾಗಿ ಆಮದು ಸುಂಕವನ್ನು ಪಾವತಿ ಮಾಡಬೇಕಾಗಿತ್ತು.

ಇದಕ್ಕಾಗಿ ಪ್ರತಿಪಕ್ಷದ ನಾಯಕ ಮತ್ತು ಬಿಜೆಪಿ ಶಾಸಕ ದೇವೇಂದ್ರ ಫಡ್ನವೀಸ್ ಅವರು ಪ್ರಧಾನಿ ಮೋದಿ ಮತ್ತು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರಿಗೆ ಟೀರಾ ಕಾಮತ್ ಪೋಷಕರು ಪತ್ರ ಬರೆದು ಔಷಧಿಗಳ ಆಮದಿಗೆ ಅನ್ವಯವಾಗುವ ಎಲ್ಲ ತೆರಿಗೆಗಳನ್ನು ವಿನಾಯಿತಿ ನೀಡುವಂತೆ ಕೋರಿದ್ದರು.

ಇದೇ ವಿಷಯವಾಗಿ 6 ಕೋಟಿ ರೂ. ಆಮದು ಸುಂಕವನ್ನು ಕಡಿತ ಮಾಡಬೇಕು ಎಂದು ಫಡ್ನವೀಸ್ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದರು. ಇದಕ್ಕೆ ಪ್ರತಿಕ್ರಿಯಿಸಿರುವ ಮೋದಿ ಅವರು ಆಮದು ಸುಂಕ ವಿನಾಯಿತಿ ನೀಡಲಾಗುವುದು ಎಂದು ತಿಳಿಸಿದ್ದಾರೆ.

ಮುಂಬೈ ನಿವಾಸಿಗಳಾದ ಪ್ರಿಯಾಂಕಾ ಮತ್ತು ಮಿಹಿರ್ ಕಾಮತ್ ಅವರು ಆಗಸ್ಟ್ 14, 2020 ರಂದು ಟೀರಾಗೆ ಜನ್ಮ ನೀಡಿದರು. ಟೀರಾ ಹುಟ್ಟಿದಾಗ ಲವಲವಿಕೆಯಿಂದಲೇ ಇದ್ದಳು. ಆದರೆ ಎರಡು ವಾರಗಳ ನಂತರ, ಟೀರಾ ಎದೆ ಹಾಲು ಕುಡಿಯಲು ತೊಂದರೆ ಅನುಭವಿಸಿದ್ದಳು. ಆಗ ಪೋಷಕರು ಮಕ್ಕಳ ವೈದ್ಯರ ಬಳಿಗೆ ಕರೆದೊಯ್ದಿದ್ದರು. ಆಗ ಮಗುವಿಗೆ ಸ್ಪೈನಲ್ ಮಸ್ಕ್ಯುಲರ್ ಅಟ್ರೋಫಿ(ಎಸ್ಎಂಎ) ಕಾಯಿಲೆ ಇರುವುದನ್ನು ವೈದ್ಯರು ಪತ್ತೆ ಹಚ್ಚಿದ್ದರು.

Spread the love
  • Related Posts

    ಕಡಿರುದ್ಯಾವರ: ಗ್ರಾಮೀಣ ರಸ್ತೆಯಲ್ಲಿ ಮರ ಸಾಗಾಟದ ಲಾರಿಗಳ ಹಾವಳಿ — ರಸ್ತೆ ಹಾಳಾಗುತ್ತಿರುವ ಆರೋಪ

    ಕಾನರ್ಪ ನೂಜಿ ರಸ್ತೆಯಲ್ಲಿ ತಡರಾತ್ರಿ ರಸ್ತೆ ಮಧ್ಯೆ ಲಾರಿ ಬಾಕಿ; ಸ್ಥಳೀಯರಿಂದ ಪ್ರತಿಭಟನೆ ಕಡಿರುದ್ಯಾವರ: ಗ್ರಾಮೀಣ ಪ್ರದೇಶದ ರಸ್ತೆಗಳಲ್ಲಿ ನಿರಂತರವಾಗಿ ಮರ ಸಾಗಾಟದ ಲಾರಿಗಳು ಸಂಚರಿಸುತ್ತಿರುವುದರಿಂದ ರಸ್ತೆಗಳು ಸಂಪೂರ್ಣ ಹಾಳಾಗುತ್ತಿವೆ ಎಂದು ಸ್ಥಳೀಯರು ಆರೋಪಿಸಿದ್ದಾರೆ. ಕಾನರ್ಪದಲ್ಲಿ ತಡರಾತ್ರಿ ಮರ ಸಾಗಾಟ ಮಾಡುತ್ತಿದ್ದ…

    Spread the love

    ಪದ್ಮುಂಜ: ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣಾ ಸಮಿತಿ ವತಿಯಿಂದ ಮೊಸರು ಕುಡಿಕೆ ಉತ್ಸವ, ಸಾಧಕರಿಗೆ ಸನ್ಮಾನ,ಬಹುಮಾನ ವಿತರಣೆ ಕಾರ್ಯಕ್ರಮ

    ಪದ್ಮುಂಜ: ಸೆ 12 ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣಾ ಸಮಿತಿ ವತಿಯಿಂದ ಮೊಸರು ಕುಡಿಕೆ ಉತ್ಸವ, ಸಾಧಕರಿಗೆ ಸನ್ಮಾನ, ವಿಜೇತರಿಗೆ ಬಹುಮಾನ ವಿತರಣೆ ಕಾರ್ಯಕ್ರಮ ಪದ್ಮುಂಜ ಪ್ರಾಥಮಿಕ ಕೃಷಿಪತ್ತಿನ ಸಹಕಾರಿ ಸಂಘದ ವಠಾರದಲ್ಲಿ ವಿಜೃಂಭಣೆಯಿಂದ ನೆರವೇರಿತು.ಬೆಳಗ್ಗೆ ಉಮಾಮಹೇಶ್ವರ ಮಹಿಳಾ ಭಜನಾ ತಂಡ,…

    Spread the love

    You Missed

    ಕಡಿರುದ್ಯಾವರ: ಗ್ರಾಮೀಣ ರಸ್ತೆಯಲ್ಲಿ ಮರ ಸಾಗಾಟದ ಲಾರಿಗಳ ಹಾವಳಿ — ರಸ್ತೆ ಹಾಳಾಗುತ್ತಿರುವ ಆರೋಪ

    • By admin
    • September 13, 2026
    • 6 views
    ಕಡಿರುದ್ಯಾವರ: ಗ್ರಾಮೀಣ ರಸ್ತೆಯಲ್ಲಿ ಮರ ಸಾಗಾಟದ ಲಾರಿಗಳ ಹಾವಳಿ — ರಸ್ತೆ ಹಾಳಾಗುತ್ತಿರುವ ಆರೋಪ

    ಪದ್ಮುಂಜ: ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣಾ ಸಮಿತಿ ವತಿಯಿಂದ ಮೊಸರು ಕುಡಿಕೆ ಉತ್ಸವ, ಸಾಧಕರಿಗೆ ಸನ್ಮಾನ,ಬಹುಮಾನ ವಿತರಣೆ ಕಾರ್ಯಕ್ರಮ

    • By admin
    • September 13, 2026
    • 11 views
    ಪದ್ಮುಂಜ: ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣಾ ಸಮಿತಿ ವತಿಯಿಂದ ಮೊಸರು ಕುಡಿಕೆ ಉತ್ಸವ, ಸಾಧಕರಿಗೆ ಸನ್ಮಾನ,ಬಹುಮಾನ ವಿತರಣೆ ಕಾರ್ಯಕ್ರಮ

    ಕೊಕ್ಕಡ ಸಮೀಪ ಭೀಕರ ಅಪಘಾತ: ಸರ್ಕಾರಿ ಬಸ್–ಕಾರು ಡಿಕ್ಕಿ

    • By admin
    • September 12, 2026
    • 6 views
    ಕೊಕ್ಕಡ ಸಮೀಪ ಭೀಕರ ಅಪಘಾತ: ಸರ್ಕಾರಿ ಬಸ್–ಕಾರು ಡಿಕ್ಕಿ

    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಿರುದ್ಧ ದ ಆರೋಪ ಆಧಾರರಹಿತ: ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ವಜಾ

    • By admin
    • September 8, 2026
    • 12 views
    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಿರುದ್ಧ ದ ಆರೋಪ ಆಧಾರರಹಿತ: ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ವಜಾ

    ಧರ್ಮ–ಸಂಸ್ಕೃತಿಯ ಸಾರ ಹೊತ್ತು ವಿಜೃಂಭಿಸಿದ ಚಿರಂಜೀವಿಯ 35ನೇ ವರ್ಷದ ಶ್ರೀಕೃಷ್ಣ ಜನ್ಮಾಷ್ಟಮಿ

    • By admin
    • September 8, 2026
    • 18 views
    ಧರ್ಮ–ಸಂಸ್ಕೃತಿಯ ಸಾರ ಹೊತ್ತು ವಿಜೃಂಭಿಸಿದ ಚಿರಂಜೀವಿಯ 35ನೇ ವರ್ಷದ ಶ್ರೀಕೃಷ್ಣ ಜನ್ಮಾಷ್ಟಮಿ

    ಬೆಳಾಲಿನಲ್ಲಿ ರಸ್ತೆಯ ಮಧ್ಯೆ ಕಾಡಾನೆ ಪ್ರತ್ಯಕ್ಷ: ಬೈಕ್ ಸವಾರ ಕೂದಲೆಳೆ ಅಂತರದಲ್ಲಿ ಅಪಾಯದಿಂದ ಪಾರು

    • By admin
    • September 3, 2026
    • 15 views
    ಬೆಳಾಲಿನಲ್ಲಿ ರಸ್ತೆಯ ಮಧ್ಯೆ ಕಾಡಾನೆ ಪ್ರತ್ಯಕ್ಷ: ಬೈಕ್ ಸವಾರ ಕೂದಲೆಳೆ ಅಂತರದಲ್ಲಿ ಅಪಾಯದಿಂದ ಪಾರು