ಹೆದ್ದಾರಿಯ ಅವೈಜ್ಞಾನಿಕ ಕಾಮಗಾರಿಯಿಂದ ಕಂಗೆಟ್ಟ ಮುಂಡಾಜೆಯ ಬಡಕುಟುಂಬ

ಬೆಳ್ತಂಗಡಿ: ಪುಂಜಾಲಕಟ್ಟೆ- ಚಾರ್ಮಾಡಿ ವರೆಗಿನ ಹೈವೇ ಕಾಮಗಾರಿಯಲ್ಲಿ ಗುತ್ತಿಗೆದಾರರ ಅಸಮರ್ಪಕ ಹಾಗೂ ವೇಜವಾಬ್ಧಾರಿ ನಿರ್ವಹಣೆಯಿಂದಾಗಿ ಈಗಾಗಲೇ ಹಲವು ಅಪಘಾತ ಮತ್ತು ಪ್ರಾಣಹಾನಿ ಸಂಭವಿಸಿರುವ ಮಧ್ಯೆಯೇ ಇದೀಗ ಮುಂಡಾಜೆ ಗ್ರಾಮದ ಅಂಬಡ್ತ್ಯಾರು ಎಂಬಲ್ಲಿ ಚಂದ್ರಶೇಖರ ಅವರ ಮನೆಗೆ ಮಳೆ ನೀರು ಪ್ರವಾಹದ ರೀತಿಯಲ್ಲಿ ನುಗ್ಗಿ ಅಪಾಯಕಾರಿ ಸ್ಥಿತಿ ನಿರ್ಮಾಣವಾಗಿದೆ.

ಸೋಮವಾರ ರಾತ್ರಿ ಮತ್ತು ಮಂಗಳವಾರ ಭಾರೀ ಪ್ರಮಾಣದಲ್ಲಿ ಮಳೆಯಾಗಿರುವ ಹಿನ್ನೆಲೆಯಲ್ಲಿ ಮುಚ್ಚಲ್ಪಟ್ಟ ಚರಂಡಿ ಹಾಗೂ ಕೆಲವೆಡೆ ಅರ್ಧ ಮಾಡಿಟ್ಟ ಚರಂಡಿ ಕಾಮಗಾರಿಯ ಪರಿಣಾಮ ತಗ್ಗು ಪ್ರದೇಶದಲ್ಲಿರುವ ಚಂದ್ರಶೇಖರ ಅವರ ಮನೆಗೆ ನೀರು ನುಗ್ಗಿದೆ. ಈ ಹೈವೇ ಕಾಮಗಾರಿಯ ಅವಾಂತರದಿಂದಾಗಿ ಪತ್ನಿ ಮಕ್ಕಳ ಜೊತೆ ಮನೆಯಲ್ಲಿ ನೆಲೆಸಿರುವ ಚಂದ್ರಶೇಖರ ಅವರು ಇದೀಗ ಕಾಳಜಿ ಕೇಂದ್ರ ಸೇರಬೇಕಾದ ಸ್ಥಿತಿ ತಂದಿಡಲಾಗಿದೆ.

ಇವರ ಮನೆಯು ಕೆಳಭಾಗದಲ್ಲಿದ್ದು, ಮೇಲಿನ ರಸ್ತೆಯಲ್ಲಿ ಇದ್ದ ಮೋರಿಯನ್ನು 10 ತಿಂಗಳ ಹಿಂದೆ ಕೆಡವಿರುವ ಗುತ್ತಿಗೆದಾರರು, ಅರ್ಧ ಮೋರಿ ಕಾಮಗಾರಿ ನಿರ್ವಹಿಸಿ ಉಳಿದ ಭಾಗವನ್ನು ಮಣ್ಣು ಮುಚ್ಚಿ ಹಾಗೆಯೇ ಬಿಟ್ಟು ಹೋಗಿದ್ದಾರೆ.ಮೇಲ್ಬಾಗದ ಅರಣ್ಯ ಮತ್ತು ಖಾಸಗಿ ಜಾಗದಿಂದ ಭಾರೀ ಪ್ರಮಾಣದಲ್ಲಿ ಹರಿದು ಬರುತ್ತಿರುವ ನೀರಿಗೆ ಸರಾಗವಾಗಿ ಹರಿದು ಹೋಗಲು ಸ್ಥಳಾವಕಾಶವಿಲ್ಲದೆ ಪೂರ್ತಿ ನೀರು ಅವರ ಮನೆಯ ಅಂಗಳದ ಕಡೆಗೆ ಹರಿದುಬರುತ್ತಿದೆ.

ಅವರ ಮನೆಯ ಪಕ್ಕದಲ್ಲೇ ಇರುವ ಶೆಡ್ಡ್ ನೊಳಗೆ ನುಗ್ಗಿರುವ ನೀರು ಹಾಗೆಯೇ ಮುಂದಕ್ಕೆ ಅವರ ವಾಸದ ಮನೆಯ ಅಂಗಳಕ್ಕೆ ಹರಿಯುತ್ತಿದೆ. ಮನೆಯೊಳಗೆ ಕೂಡ ನೀರು ಪ್ರವೇಶಿಸಿದ್ದು ರಾಡಿಯಿಂದಾಗಿ ಮನೆಯ ಸೊತ್ತುಗಳಿಗೆ ಹಾನಿಯಾಗಿದೆ. ರಾತ್ರಿ ಇಲ್ಲಿ ತಂಗುವುದಕ್ಕೂ ಮನೆ ಮಂದಿ ಭಯಪಡುವ ಸನ್ನಿವೇಶ ಏರ್ಪಟ್ಟಿದೆ. ಅಲ್ಲದೆ ಮುಖ್ಯ ರಸ್ತೆಯಿಂದ ಇವರ ಮನೆಗೆ ಇಳಿಯಲು ಇವರೇ ಸ್ವತಃ ರಚಿಸಿಕೊಂಡಿರುವ ರಸ್ತೆಯ ಮೇಲೆ ನೀರು ಹರಿದು ಸಂಪರ್ಕ ರಸ್ತೆಯೂ ಹಾನಿಗೊಳಗಾಗಿದೆ. ಆದ್ದರಿಂದ ಹೆದ್ದಾರಿ ಇಲಾಖೆ, ಸಂಬಂಧಿಸಿದ ಗುತ್ತಿಗೆದಾರರು,ತಾಲೂಕು ಆಡಳಿತ, ವಿಪತ್ತು ನಿರ್ವಹಣಾ ಘಟಕ ಈ ಬಗ್ಗೆ ತಕ್ಷಣ ಕಾರ್ಯಪ್ರವೃತ್ತರಾಗಿ ಸೂಕ್ತ ರಕ್ಷಣೆ ಒದಗಿಸಬೇಕಾಗಿದೆ.

Spread the love
  • Related Posts

    ಕೊಕ್ಕಡ ಸಮೀಪ ಭೀಕರ ಅಪಘಾತ: ಸರ್ಕಾರಿ ಬಸ್–ಕಾರು ಡಿಕ್ಕಿ

    ಧರ್ಮಸ್ಥಳ: ಧರ್ಮಸ್ಥಳ ಕಡೆಯಿಂದ ಬೆಂಗಳೂರಿನತ್ತ ಸಾಗುತ್ತಿದ್ದ ಟಾಟಾ ಸಫಾರಿ ಕಾರು ಹಾಗೂ ಕುಕ್ಕೆ ಸುಬ್ರಹ್ಮಣ್ಯದಿಂದ ಧರ್ಮಸ್ಥಳದತ್ತ ಬರುತ್ತಿದ್ದ ಸರ್ಕಾರಿ ಬಸ್ ನಡುವೆ ಭೀಕರ ಅಪಘಾತ ಸಂಭವಿಸಿದ ಘಟನೆ ಇಂದು ಕೊಕ್ಕಡ ಸಮೀಪ ನಡೆದಿದೆ. ಅಪಘಾತದ ತೀವ್ರತೆಗೆ ಬಸ್ ಹಾಗೂ ಕಾರು ಸಂಪೂರ್ಣ…

    Spread the love

    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಿರುದ್ಧ ದ ಆರೋಪ ಆಧಾರರಹಿತ: ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ವಜಾ

    ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಿರುದ್ಧ ರಂಜನ್ ರಾವ್ ಯರ್ಡೂರು ಸುಪ್ರಿಂ ಕೋರ್ಟ್ ನಲ್ಲಿ ಸಲ್ಲಿಸಿದ್ದ ಮೇಲ್ಮನವಿಯನ್ನು ಆಲಿಸಿದ ನ್ಯಾಯಾಲಯ ದೂರುದಾರರು ನೀಡಿದ ಈ ದೂರು ಆಧಾರ ರಹಿತವಾಗಿದೆ ಎಂದು, ದಾವೆಯನ್ನು ಪ್ರಾಥಮಿಕ ಹಂತದಲ್ಲೇ ವಜಾಗೊಳಿಸಿದೆ. ಶ್ರೀ ಕ್ಷೇತ್ರ…

    Spread the love

    You Missed

    ಕೊಕ್ಕಡ ಸಮೀಪ ಭೀಕರ ಅಪಘಾತ: ಸರ್ಕಾರಿ ಬಸ್–ಕಾರು ಡಿಕ್ಕಿ

    • By admin
    • September 12, 2026
    • 2 views
    ಕೊಕ್ಕಡ ಸಮೀಪ ಭೀಕರ ಅಪಘಾತ: ಸರ್ಕಾರಿ ಬಸ್–ಕಾರು ಡಿಕ್ಕಿ

    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಿರುದ್ಧ ದ ಆರೋಪ ಆಧಾರರಹಿತ: ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ವಜಾ

    • By admin
    • September 8, 2026
    • 8 views
    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಿರುದ್ಧ ದ ಆರೋಪ ಆಧಾರರಹಿತ: ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ವಜಾ

    ಧರ್ಮ–ಸಂಸ್ಕೃತಿಯ ಸಾರ ಹೊತ್ತು ವಿಜೃಂಭಿಸಿದ ಚಿರಂಜೀವಿಯ 35ನೇ ವರ್ಷದ ಶ್ರೀಕೃಷ್ಣ ಜನ್ಮಾಷ್ಟಮಿ

    • By admin
    • September 8, 2026
    • 14 views
    ಧರ್ಮ–ಸಂಸ್ಕೃತಿಯ ಸಾರ ಹೊತ್ತು ವಿಜೃಂಭಿಸಿದ ಚಿರಂಜೀವಿಯ 35ನೇ ವರ್ಷದ ಶ್ರೀಕೃಷ್ಣ ಜನ್ಮಾಷ್ಟಮಿ

    ಬೆಳಾಲಿನಲ್ಲಿ ರಸ್ತೆಯ ಮಧ್ಯೆ ಕಾಡಾನೆ ಪ್ರತ್ಯಕ್ಷ: ಬೈಕ್ ಸವಾರ ಕೂದಲೆಳೆ ಅಂತರದಲ್ಲಿ ಅಪಾಯದಿಂದ ಪಾರು

    • By admin
    • September 3, 2026
    • 13 views
    ಬೆಳಾಲಿನಲ್ಲಿ ರಸ್ತೆಯ ಮಧ್ಯೆ ಕಾಡಾನೆ ಪ್ರತ್ಯಕ್ಷ: ಬೈಕ್ ಸವಾರ ಕೂದಲೆಳೆ ಅಂತರದಲ್ಲಿ ಅಪಾಯದಿಂದ ಪಾರು

    ಧರ್ಮಸ್ಥಳ ಕೊಕ್ಕಡ ಹೆದ್ದಾರಿ ಬದಿಯಲ್ಲಿ ಕಾಡಾನೆ ಪ್ರತ್ಯಕ್ಷ, ವಾಹನ ಸವಾರರು ಮುನ್ನೆಚ್ಚರಿಕೆ ವಹಿಸುವುದು ಸೂಕ್ತ

    • By admin
    • September 3, 2026
    • 9 views
    ಧರ್ಮಸ್ಥಳ ಕೊಕ್ಕಡ ಹೆದ್ದಾರಿ ಬದಿಯಲ್ಲಿ ಕಾಡಾನೆ ಪ್ರತ್ಯಕ್ಷ, ವಾಹನ ಸವಾರರು ಮುನ್ನೆಚ್ಚರಿಕೆ ವಹಿಸುವುದು ಸೂಕ್ತ

    APK ಬಳಿಕ .IMG, .ISO ಫೈಲ್‌ಗಳ ಮೂಲಕ ಸೈಬರ್ ದಾಳಿ; WhatsApp Web ಬಳಕೆದಾರರಿಗೆ ಎಚ್ಚರಿಕೆ

    • By admin
    • September 3, 2026
    • 11 views
    APK ಬಳಿಕ .IMG, .ISO ಫೈಲ್‌ಗಳ ಮೂಲಕ ಸೈಬರ್ ದಾಳಿ; WhatsApp Web ಬಳಕೆದಾರರಿಗೆ ಎಚ್ಚರಿಕೆ