ಹೆದ್ದಾರಿಯ ಅವೈಜ್ಞಾನಿಕ ಕಾಮಗಾರಿಯಿಂದ ಕಂಗೆಟ್ಟ ಮುಂಡಾಜೆಯ ಬಡಕುಟುಂಬ

ಬೆಳ್ತಂಗಡಿ: ಪುಂಜಾಲಕಟ್ಟೆ- ಚಾರ್ಮಾಡಿ ವರೆಗಿನ ಹೈವೇ ಕಾಮಗಾರಿಯಲ್ಲಿ ಗುತ್ತಿಗೆದಾರರ ಅಸಮರ್ಪಕ ಹಾಗೂ ವೇಜವಾಬ್ಧಾರಿ ನಿರ್ವಹಣೆಯಿಂದಾಗಿ ಈಗಾಗಲೇ ಹಲವು ಅಪಘಾತ ಮತ್ತು ಪ್ರಾಣಹಾನಿ ಸಂಭವಿಸಿರುವ ಮಧ್ಯೆಯೇ ಇದೀಗ ಮುಂಡಾಜೆ ಗ್ರಾಮದ ಅಂಬಡ್ತ್ಯಾರು ಎಂಬಲ್ಲಿ ಚಂದ್ರಶೇಖರ ಅವರ ಮನೆಗೆ ಮಳೆ ನೀರು ಪ್ರವಾಹದ ರೀತಿಯಲ್ಲಿ ನುಗ್ಗಿ ಅಪಾಯಕಾರಿ ಸ್ಥಿತಿ ನಿರ್ಮಾಣವಾಗಿದೆ.

ಸೋಮವಾರ ರಾತ್ರಿ ಮತ್ತು ಮಂಗಳವಾರ ಭಾರೀ ಪ್ರಮಾಣದಲ್ಲಿ ಮಳೆಯಾಗಿರುವ ಹಿನ್ನೆಲೆಯಲ್ಲಿ ಮುಚ್ಚಲ್ಪಟ್ಟ ಚರಂಡಿ ಹಾಗೂ ಕೆಲವೆಡೆ ಅರ್ಧ ಮಾಡಿಟ್ಟ ಚರಂಡಿ ಕಾಮಗಾರಿಯ ಪರಿಣಾಮ ತಗ್ಗು ಪ್ರದೇಶದಲ್ಲಿರುವ ಚಂದ್ರಶೇಖರ ಅವರ ಮನೆಗೆ ನೀರು ನುಗ್ಗಿದೆ. ಈ ಹೈವೇ ಕಾಮಗಾರಿಯ ಅವಾಂತರದಿಂದಾಗಿ ಪತ್ನಿ ಮಕ್ಕಳ ಜೊತೆ ಮನೆಯಲ್ಲಿ ನೆಲೆಸಿರುವ ಚಂದ್ರಶೇಖರ ಅವರು ಇದೀಗ ಕಾಳಜಿ ಕೇಂದ್ರ ಸೇರಬೇಕಾದ ಸ್ಥಿತಿ ತಂದಿಡಲಾಗಿದೆ.

ಇವರ ಮನೆಯು ಕೆಳಭಾಗದಲ್ಲಿದ್ದು, ಮೇಲಿನ ರಸ್ತೆಯಲ್ಲಿ ಇದ್ದ ಮೋರಿಯನ್ನು 10 ತಿಂಗಳ ಹಿಂದೆ ಕೆಡವಿರುವ ಗುತ್ತಿಗೆದಾರರು, ಅರ್ಧ ಮೋರಿ ಕಾಮಗಾರಿ ನಿರ್ವಹಿಸಿ ಉಳಿದ ಭಾಗವನ್ನು ಮಣ್ಣು ಮುಚ್ಚಿ ಹಾಗೆಯೇ ಬಿಟ್ಟು ಹೋಗಿದ್ದಾರೆ.ಮೇಲ್ಬಾಗದ ಅರಣ್ಯ ಮತ್ತು ಖಾಸಗಿ ಜಾಗದಿಂದ ಭಾರೀ ಪ್ರಮಾಣದಲ್ಲಿ ಹರಿದು ಬರುತ್ತಿರುವ ನೀರಿಗೆ ಸರಾಗವಾಗಿ ಹರಿದು ಹೋಗಲು ಸ್ಥಳಾವಕಾಶವಿಲ್ಲದೆ ಪೂರ್ತಿ ನೀರು ಅವರ ಮನೆಯ ಅಂಗಳದ ಕಡೆಗೆ ಹರಿದುಬರುತ್ತಿದೆ.

ಅವರ ಮನೆಯ ಪಕ್ಕದಲ್ಲೇ ಇರುವ ಶೆಡ್ಡ್ ನೊಳಗೆ ನುಗ್ಗಿರುವ ನೀರು ಹಾಗೆಯೇ ಮುಂದಕ್ಕೆ ಅವರ ವಾಸದ ಮನೆಯ ಅಂಗಳಕ್ಕೆ ಹರಿಯುತ್ತಿದೆ. ಮನೆಯೊಳಗೆ ಕೂಡ ನೀರು ಪ್ರವೇಶಿಸಿದ್ದು ರಾಡಿಯಿಂದಾಗಿ ಮನೆಯ ಸೊತ್ತುಗಳಿಗೆ ಹಾನಿಯಾಗಿದೆ. ರಾತ್ರಿ ಇಲ್ಲಿ ತಂಗುವುದಕ್ಕೂ ಮನೆ ಮಂದಿ ಭಯಪಡುವ ಸನ್ನಿವೇಶ ಏರ್ಪಟ್ಟಿದೆ. ಅಲ್ಲದೆ ಮುಖ್ಯ ರಸ್ತೆಯಿಂದ ಇವರ ಮನೆಗೆ ಇಳಿಯಲು ಇವರೇ ಸ್ವತಃ ರಚಿಸಿಕೊಂಡಿರುವ ರಸ್ತೆಯ ಮೇಲೆ ನೀರು ಹರಿದು ಸಂಪರ್ಕ ರಸ್ತೆಯೂ ಹಾನಿಗೊಳಗಾಗಿದೆ. ಆದ್ದರಿಂದ ಹೆದ್ದಾರಿ ಇಲಾಖೆ, ಸಂಬಂಧಿಸಿದ ಗುತ್ತಿಗೆದಾರರು,ತಾಲೂಕು ಆಡಳಿತ, ವಿಪತ್ತು ನಿರ್ವಹಣಾ ಘಟಕ ಈ ಬಗ್ಗೆ ತಕ್ಷಣ ಕಾರ್ಯಪ್ರವೃತ್ತರಾಗಿ ಸೂಕ್ತ ರಕ್ಷಣೆ ಒದಗಿಸಬೇಕಾಗಿದೆ.

Spread the love
  • Related Posts

    ಪಹಲ್ಗಾಮ್ ಭಯೋತ್ಪಾದಕ ದಾಳಿಗೆ ಪೂರಕವಾಗಿ ಅಟ್ಟಾರಿ ಗಡಿ ಮುಚ್ಚುವಿಕೆ, ಸಿಂಧೂ ಜಲ ಒಪ್ಪಂದಕ್ಕೆ ತಡೆ ಸೇರಿದಂತೆ ಕೇಂದ್ರ ಸರ್ಕಾರದಿಂದ 5 ಪ್ರಮುಖ ನಿರ್ಧಾರ

    ಹೊಸದಿಲ್ಲಿ: ಪಹಲ್ಗಾಮ್ ಭಯೋತ್ಪಾದಕ ದಾಳಿಯ ಕುರಿತು ಬುಧವಾರ ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ಭದ್ರತಾ ಸಂಪುಟ ಸಮಿತಿಯ (ಸಿಸಿಎಸ್) ಉನ್ನತ ಮಟ್ಟದ ಸಭೆ ನಡೆಯಿತು. ಅಟ್ಟಾರಿ ಗಡಿ ಮುಚ್ಚುವಿಕೆ, ಸಿಂಧೂ ಜಲ ಒಪ್ಪಂದಕ್ಕೆ ತಡೆ ಸೇರಿದಂತೆ 5 ಪ್ರಮುಖ ನಿರ್ಧಾರದೊಂದಿಗೆ ಪಹಲ್ಗಾಮ್…

    Spread the love

    ಬೆಳ್ತಂಗಡಿ : ಉಜಿರೆಯಲ್ಲಿ ರಾಮೋತ್ಸವ ಕಾರ್ಯಕ್ರಮ ಹಿನ್ನಲೆ ಕಾರ್ಯಕ್ರಮಕ್ಕೆ ಬರುತ್ತಿದ್ದ ಪುನೀತ್ ಕೆರೆಹಳ್ಳಿಯನ್ನು ತಡೆದ ಪೊಲೀಸರು!!!

    ಬೆಳ್ತಂಗಡಿ : ಉಜಿರೆ ಕೃಷ್ಣಾನುಗ್ರಹದ ಸಭಾಭವನದಲ್ಲಿ ವಿಶ್ವ ಹಿಂದೂ ಪರಿಷತ್ ಬೆಳ್ತಂಗಡಿ ಪ್ರಖಂಡ ಏ.19 ರಂದು ಸಂಜೆ ಆಯೋಜಿಸಲಾಗಿದ್ದ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ಚಕ್ರವರ್ತಿ ಸೂಲಿಬೆಲೆ ಆಗಮಿತಿ ಭಾಷಣ ಮಾಡಲಿದ್ದಾರೆ. ಈ ಕಾರ್ಯಕ್ರಮ ವೀಕ್ಷಿಸಲು ಹಿಂದೂ ಗೋ ರಕ್ಷಕ ಪುನೀತ್ ಕೆರೆಹಳ್ಳಿ…

    Spread the love

    You Missed

    ಪಹಲ್ಗಾಮ್ ಭಯೋತ್ಪಾದಕ ದಾಳಿಗೆ ಪೂರಕವಾಗಿ ಅಟ್ಟಾರಿ ಗಡಿ ಮುಚ್ಚುವಿಕೆ, ಸಿಂಧೂ ಜಲ ಒಪ್ಪಂದಕ್ಕೆ ತಡೆ ಸೇರಿದಂತೆ ಕೇಂದ್ರ ಸರ್ಕಾರದಿಂದ 5 ಪ್ರಮುಖ ನಿರ್ಧಾರ

    • By admin
    • April 23, 2025
    • 78 views
    ಪಹಲ್ಗಾಮ್ ಭಯೋತ್ಪಾದಕ ದಾಳಿಗೆ ಪೂರಕವಾಗಿ ಅಟ್ಟಾರಿ ಗಡಿ ಮುಚ್ಚುವಿಕೆ, ಸಿಂಧೂ ಜಲ ಒಪ್ಪಂದಕ್ಕೆ ತಡೆ ಸೇರಿದಂತೆ ಕೇಂದ್ರ ಸರ್ಕಾರದಿಂದ 5 ಪ್ರಮುಖ ನಿರ್ಧಾರ

    ಟೀಕೆಗಳು ಸಾಯುತ್ತದೆ ನಾವು ಮಾಡೋ ಕೆಲಸಗಳು ಶಾಶ್ವತವಾಗಿ ಉಳಿಯುತ್ತದೆ: ಡಿ.ಕೆ.ಶಿ

    • By admin
    • April 20, 2025
    • 41 views
    ಟೀಕೆಗಳು ಸಾಯುತ್ತದೆ ನಾವು ಮಾಡೋ ಕೆಲಸಗಳು ಶಾಶ್ವತವಾಗಿ ಉಳಿಯುತ್ತದೆ: ಡಿ.ಕೆ.ಶಿ

    ಬೆಳ್ತಂಗಡಿ : ಉಜಿರೆಯಲ್ಲಿ ರಾಮೋತ್ಸವ ಕಾರ್ಯಕ್ರಮ ಹಿನ್ನಲೆ ಕಾರ್ಯಕ್ರಮಕ್ಕೆ ಬರುತ್ತಿದ್ದ ಪುನೀತ್ ಕೆರೆಹಳ್ಳಿಯನ್ನು ತಡೆದ ಪೊಲೀಸರು!!!

    • By admin
    • April 19, 2025
    • 170 views
    ಬೆಳ್ತಂಗಡಿ : ಉಜಿರೆಯಲ್ಲಿ ರಾಮೋತ್ಸವ ಕಾರ್ಯಕ್ರಮ ಹಿನ್ನಲೆ ಕಾರ್ಯಕ್ರಮಕ್ಕೆ ಬರುತ್ತಿದ್ದ ಪುನೀತ್ ಕೆರೆಹಳ್ಳಿಯನ್ನು ತಡೆದ ಪೊಲೀಸರು!!!

    ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಕಾಮಗಾರಿ ನಡೆಯುತ್ತಿರುವ ಚರಂಡಿಗೆ ಬಿದ್ದ ಆಟೋ, ಚಾಲಕ ಪವಾಡ ಸದೃಶ ಪಾರು

    • By admin
    • April 18, 2025
    • 182 views
    ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಕಾಮಗಾರಿ ನಡೆಯುತ್ತಿರುವ ಚರಂಡಿಗೆ ಬಿದ್ದ ಆಟೋ, ಚಾಲಕ ಪವಾಡ ಸದೃಶ ಪಾರು

    ಮಂಗಳೂರಿನ ಹಳೇ ಬಂದರಿನಿಂದ ಲಕ್ಷದೀಪಕ್ಕೆ ಹೈ ಸ್ಪೀಡ್ ಫೇರೀ ಪ್ರಾಯೋಗಿಕ ಸಂಚಾರ ಪುನರಾರಂಭ

    • By admin
    • April 9, 2025
    • 84 views
    ಮಂಗಳೂರಿನ ಹಳೇ ಬಂದರಿನಿಂದ ಲಕ್ಷದೀಪಕ್ಕೆ ಹೈ ಸ್ಪೀಡ್ ಫೇರೀ ಪ್ರಾಯೋಗಿಕ ಸಂಚಾರ ಪುನರಾರಂಭ

    ಪಿಯುಸಿ ಫಲಿತಾಂಶ ಪ್ರಕಟ ಉಡುಪಿಗೆ ಮೊದಲ ಸ್ಥಾನ

    • By admin
    • April 8, 2025
    • 103 views
    ಪಿಯುಸಿ ಫಲಿತಾಂಶ ಪ್ರಕಟ ಉಡುಪಿಗೆ ಮೊದಲ ಸ್ಥಾನ