ಮುಂಡಾಜೆ ಹೆದ್ದಾರಿ ಬದಿ ಕಳಪೆ ತಗಡು ಶೀಟಿನ ತಂಗುದಾಣ: ಸಾರ್ವಜನಿಕರ ಆಕ್ರೋಶ

ಬೆಳ್ತಂಗಡಿ: ಮುಂಡಾಜೆ ಭಾಗದಲ್ಲಿ ನಡೆಯುತ್ತಿರುವ ನೂತನ ಹೆದ್ದಾರಿ ಕಾಮಗಾರಿಯ ಸಂದರ್ಭದಲ್ಲಿ ಹಳೆಯ ಬಸ್ ತಂಗುದಾಣಗಳನ್ನು ತೆರವುಗೊಳಿಸಲಾಗಿತ್ತು. ಬಳಿಕ ಪ್ರಯಾಣಿಕರ ಅನುಕೂಲಕ್ಕಾಗಿ ಹೆದ್ದಾರಿ ಬದಿಯಲ್ಲಿ ತಾತ್ಕಾಲಿಕ ರೀತಿಯಲ್ಲಿ ತಗಡು ಶೀಟಿನಿಂದ ಹೊಸ ತಂಗುದಾಣಗಳನ್ನು ನಿರ್ಮಿಸಲಾಗಿದೆ. ಆದರೆ ಈ ತಂಗುದಾಣಗಳ ಗುಣಮಟ್ಟ ಇದೀಗ ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ.

ಹೆದ್ದಾರಿ ಕಾಮಗಾರಿ ನಡುವೆ ಅವೈಜ್ಞಾನಿಕ ತಂಗುದಾಣ ನಿರ್ಮಾಣ ಆರೋಪ

ಸ್ಥಳೀಯರ ಪ್ರಕಾರ, ನಿರ್ಮಿಸಲಾಗಿರುವ ತಂಗುದಾಣಗಳು ಮಳೆಗಾಲದ ವೇಳೆ ಬೀಸುವ ಬಿರುಗಾಳಿ ಹಾಗೂ ಭಾರೀ ಮಳೆಯನ್ನು ತಡೆಯುವ ಸಾಮರ್ಥ್ಯವೇ ಇಲ್ಲದಂತಿದೆ. ತಂಗುದಾಣದ ಕಂಬಗಳು ಹಾಗೂ ತಗಡು ಶೀಟುಗಳು ಗಟ್ಟಿತನ ಕಳೆದುಕೊಂಡಿರುವಂತೆ ಕಾಣುತ್ತಿದ್ದು, ಗಾಳಿ ಜೋರಾಗಿ ಬೀಸಿದರೆ ಯಾವುದೇ ಕ್ಷಣದಲ್ಲಿ ಕುಸಿಯುವ ಆತಂಕ ಎದುರಾಗಿದೆ ಎಂದು ಸಾರ್ವಜನಿಕರು ಅಭಿಪ್ರಾಯಪಟ್ಟಿದ್ದಾರೆ.

ಪ್ರತಿ ದಿನ ಶಾಲಾ-ಕಾಲೇಜು ವಿದ್ಯಾರ್ಥಿಗಳು, ಮಹಿಳೆಯರು, ವೃದ್ಧರು ಹಾಗೂ ನೂರಾರು ಪ್ರಯಾಣಿಕರು ಈ ತಂಗುದಾಣಗಳಲ್ಲಿ ಬಸ್‌ಗಾಗಿ ಕಾಯಬೇಕಾದ ಪರಿಸ್ಥಿತಿ ಇದೆ. ಆದರೆ ಮಳೆಗಾಲದ ಸಂದರ್ಭದಲ್ಲಿ ತಂಗುದಾಣದ ಒಳಗೆ ನಿಲ್ಲುವುದಕ್ಕೂ ಜನರು ಭಯಪಡುವಂತಾಗಿದೆ. ಗಾಳಿ ಮಳೆಯ ವೇಳೆ ತಗಡು ಶೀಟುಗಳು ಹಾರಿ ಅಪಾಯ ಸಂಭವಿಸುವ ಭೀತಿ ಕೂಡ ವ್ಯಕ್ತವಾಗುತ್ತಿದೆ.

ಹೆದ್ದಾರಿ ಕಾಮಗಾರಿ ನಡೆಯುತ್ತಿರುವುದರಿಂದ ಈಗಾಗಲೇ ರಸ್ತೆ ಬದಿ ಸಂಚಾರ ಅಸ್ತವ್ಯಸ್ತಗೊಂಡಿದ್ದು, ಇದರ ಮಧ್ಯೆ ಸುರಕ್ಷಿತ ತಂಗುದಾಣದ ಕೊರತೆ ಸಾರ್ವಜನಿಕರ ಸಂಕಷ್ಟವನ್ನು ಇನ್ನಷ್ಟು ಹೆಚ್ಚಿಸಿದೆ. ಹೊಸ ತಂಗುದಾಣ ಎಂಬ ಹೆಸರಿನಲ್ಲಿ ಕೇವಲ ಕಾಟಾಚಾರಕ್ಕಾಗಿ ತಂಗುದಾಣ ನಿರ್ಮಿಸಲಾಗಿದೆ” ಎಂದು ಸ್ಥಳೀಯರು ಆರೋಪಿಸಿದ್ದಾರೆ.

ಸೋಮಂತಡ್ಕ ಪೇಟೆಯಲ್ಲಿ ಎರಡು ತಂಗುದಾಣ ನಿರ್ಮಿಸಿದ್ದು, ಬಾಲಕರ ಹಾಸ್ಟೆಲ್ ಬಳಿಯ ರಸ್ತೆ ತಿರುವಲ್ಲಿ ಇದ್ದ ತಂಗುದಾಣ ತೆರವುಗೊಂಡಿದ್ದು ಆ ಸ್ಥಳದಲ್ಲಿ ತಂಗುದಾಣ ನಿರ್ಮಾಣಕ್ಕೆ ಇನ್ನೂ ಕಾಯಕಲ್ಪ ಕೂಡಿ ಬಂದಿಲ್ಲ ಇನ್ನೂ ಯಾಕೆ ಈ ವ್ಯವಸ್ಥೆ ಮಾಡಿಲ್ಲವೆಂಬುದೇ ವಿಪರ್ಯಾಸವಾಗಿದೆ ಈಗ ತಂಗುದಾಣ ನಿರ್ಮಿಸುವಂತಹ ಬಸ್ ಬೇ ಅಲ್ಲಿ ಇಲ್ಲ. ಇನ್ನು ಬಿಸಿಲಲ್ಲಿ ನಿಂತು ಬಸ್ ಕಾಯುವ ಪರಿಸ್ಥಿತಿ. ಶಾಲಾ ಮಕ್ಕಳಿಗೆ ಮಳೆಗಾಲದಲ್ಲಿ ತುಂಬಾ ಕಷ್ಟ ಆಗಲಿದೆ.

ಸಂಬಂಧಪಟ್ಟ ಇಲಾಖೆ ಹಾಗೂ ಗುತ್ತಿಗೆದಾರರು ಸಾರ್ವಜನಿಕರ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ಗುಣಮಟ್ಟದ, ಬಲಿಷ್ಠ ಹಾಗೂ ಶಾಶ್ವತ ತಂಗುದಾಣಗಳನ್ನು ನಿರ್ಮಿಸಬೇಕು ಎಂಬ ಒತ್ತಾಯ ಕೇಳಿಬರುತ್ತಿದೆ. ಮಳೆಗಾಲ ತೀವ್ರಗೊಳ್ಳುವ ಮುನ್ನವೇ ಅಧಿಕಾರಿಗಳು ಸ್ಥಳ ಪರಿಶೀಲನೆ ನಡೆಸಿ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.

Spread the love
  • Related Posts

    ಮೀನುಗಾರರ ಬದುಕಲ್ಲಿ ಪವಾಡ – ಧರ್ಮಸ್ಥಳ ಮಂಜುನಾಥ ಸ್ವಾಮಿಗೆ 770 ಗ್ರಾಂ ಬೆಳ್ಳಿಯ ಬೆಳ್ಳಿಯ ‘ರಾಣಿ ಮೀನು’ ಹಾರ ಅರ್ಪಣೆ

    ಧರ್ಮಸ್ಥಳ, ಆ. 4: ಶ್ರೀ ಕ್ಷೇತ್ರ ಧರ್ಮಸ್ಥಳದ ಅಧಿದೈವ ಶ್ರೀ ಮಂಜುನಾಥ ಸ್ವಾಮಿಯ ಮೇಲಿನ ಅಚಲ ಭಕ್ತಿ ಮತ್ತು ಕೃತಜ್ಞತೆಯ ಸಂಕೇತವಾಗಿ ಉಡುಪಿ ಕರಾವಳಿಯ ಆಳಸಮುದ್ರ ಟ್ರಾಲ್ ಬೋಟ್ ಮೀನುಗಾರರು 770 ಗ್ರಾಂ ತೂಕದ ಬೆಳ್ಳಿಯ ‘ರಾಣಿ ಮೀನು’ ಹಾರವನ್ನು ಸಮರ್ಪಿಸಿದ್ದಾರೆ.…

    Spread the love

    ಸಕಲೇಶಪುರ: ಬೈಕೆರೆ ಗ್ರಾಮದಲ್ಲಿ 300 ಹಣ್ಣಿನ ಗಿಡಗಳ ನೆಡುವ ಮೂಲಕ ಪ್ರಾಣಿ–ಪಕ್ಷಿಗಳ ಆಹಾರ ಸಂರಕ್ಷಣೆಗೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಶೌರ್ಯ ತಂಡದ ವಿಶೇಷ ಅಭಿಯಾನ

    ಸಕಲೇಶಪುರ, ಆ. 3: ಕಾಡು ಪ್ರಾಣಿಗಳು ಹಾಗೂ ಪಕ್ಷಿಗಳು ಆಹಾರ ಅರಸಿ ಕಾಡಿನಿಂದ ಗ್ರಾಮಗಳಿಗೆ ಬರುತ್ತಿರುವುದರಿಂದ ಮಾನವ–ವನ್ಯಜೀವಿ ಸಂಘರ್ಷ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಈ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಳ್ಳುವ ಹಾಗೂ ವನ್ಯಜೀವಿಗಳಿಗೆ ಕಾಡಿನಲ್ಲೇ ಆಹಾರ ಲಭ್ಯವಾಗುವಂತೆ ಮಾಡುವ ಉದ್ದೇಶದಿಂದ ಶ್ರೀ…

    Spread the love

    You Missed

    ಮೀನುಗಾರರ ಬದುಕಲ್ಲಿ ಪವಾಡ – ಧರ್ಮಸ್ಥಳ ಮಂಜುನಾಥ ಸ್ವಾಮಿಗೆ 770 ಗ್ರಾಂ ಬೆಳ್ಳಿಯ ಬೆಳ್ಳಿಯ ‘ರಾಣಿ ಮೀನು’ ಹಾರ ಅರ್ಪಣೆ

    • By admin
    • August 4, 2026
    • 2 views
    ಮೀನುಗಾರರ ಬದುಕಲ್ಲಿ ಪವಾಡ – ಧರ್ಮಸ್ಥಳ ಮಂಜುನಾಥ ಸ್ವಾಮಿಗೆ 770 ಗ್ರಾಂ ಬೆಳ್ಳಿಯ ಬೆಳ್ಳಿಯ ‘ರಾಣಿ ಮೀನು’ ಹಾರ ಅರ್ಪಣೆ

    ಸಕಲೇಶಪುರ: ಬೈಕೆರೆ ಗ್ರಾಮದಲ್ಲಿ 300 ಹಣ್ಣಿನ ಗಿಡಗಳ ನೆಡುವ ಮೂಲಕ ಪ್ರಾಣಿ–ಪಕ್ಷಿಗಳ ಆಹಾರ ಸಂರಕ್ಷಣೆಗೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಶೌರ್ಯ ತಂಡದ ವಿಶೇಷ ಅಭಿಯಾನ

    • By admin
    • August 3, 2026
    • 8 views
    ಸಕಲೇಶಪುರ: ಬೈಕೆರೆ ಗ್ರಾಮದಲ್ಲಿ 300 ಹಣ್ಣಿನ ಗಿಡಗಳ ನೆಡುವ ಮೂಲಕ ಪ್ರಾಣಿ–ಪಕ್ಷಿಗಳ ಆಹಾರ ಸಂರಕ್ಷಣೆಗೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಶೌರ್ಯ ತಂಡದ ವಿಶೇಷ ಅಭಿಯಾನ

    ಕಾಡಾನೆ ದಾಳಿಯಲ್ಲಿ ಮೃತಪಟ್ಟ ಬಾಲಕೃಷ್ಣ ಗೌಡರ ಕುಟುಂಬಕ್ಕೆ ಶಾಸಕ ಹರೀಶ್ ಪೂಂಜ ಸಾಂತ್ವನ – ರೂ.20 ಲಕ್ಷ ಪರಿಹಾರಕ್ಕೆ ಕ್ರಮ

    • By admin
    • August 2, 2026
    • 8 views
    ಕಾಡಾನೆ ದಾಳಿಯಲ್ಲಿ ಮೃತಪಟ್ಟ ಬಾಲಕೃಷ್ಣ ಗೌಡರ ಕುಟುಂಬಕ್ಕೆ ಶಾಸಕ ಹರೀಶ್ ಪೂಂಜ ಸಾಂತ್ವನ – ರೂ.20 ಲಕ್ಷ ಪರಿಹಾರಕ್ಕೆ ಕ್ರಮ

    ಕಾಡಾನೆ ದಾಳಿಗೆ ವ್ಯಕ್ತಿ ಬಲಿ: ಬೆಳ್ತಂಗಡಿ ತಾಲೂಕಿನ ರೆಖ್ಯ ಗ್ರಾಮದ ಮುಚ್ಚಿರಡ್ಕದಲ್ಲಿ ದಾರುಣ ಘಟನೆ

    • By admin
    • August 1, 2026
    • 7 views
    ಕಾಡಾನೆ ದಾಳಿಗೆ ವ್ಯಕ್ತಿ ಬಲಿ: ಬೆಳ್ತಂಗಡಿ ತಾಲೂಕಿನ ರೆಖ್ಯ ಗ್ರಾಮದ ಮುಚ್ಚಿರಡ್ಕದಲ್ಲಿ ದಾರುಣ ಘಟನೆ

    ಬೆಳ್ತಂಗಡಿಯಲ್ಲಿ ಭಾರಿ ಮಾದಕವಸ್ತು ಬೇಟೆ: ₹15.41 ಲಕ್ಷ ಮೌಲ್ಯದ ಗಾಂಜಾ, ಎಂಡಿಎಂಎ ಜಪ್ತಿ – ದುಬೈಗೆ ತೆರಳಬೇಕಿದ್ದ ಯುವಕ ಜೈಲುಪಾಲು

    • By admin
    • July 30, 2026
    • 11 views
    ಬೆಳ್ತಂಗಡಿಯಲ್ಲಿ ಭಾರಿ ಮಾದಕವಸ್ತು ಬೇಟೆ: ₹15.41 ಲಕ್ಷ ಮೌಲ್ಯದ ಗಾಂಜಾ, ಎಂಡಿಎಂಎ ಜಪ್ತಿ – ದುಬೈಗೆ ತೆರಳಬೇಕಿದ್ದ ಯುವಕ ಜೈಲುಪಾಲು

    ಐಸಿಯುನಲ್ಲಿ ಜೀವನ್ಮರಣ ಹೋರಾಟ ನಡೆಸುತ್ತಿರುವ ವಸಂತ ಗೌಡರ ತುರ್ತು ಚಿಕಿತ್ಸೆಗೆ ನೆರವಿಗಾಗಿ ಮನವಿ

    • By admin
    • July 30, 2026
    • 17 views
    ಐಸಿಯುನಲ್ಲಿ ಜೀವನ್ಮರಣ ಹೋರಾಟ ನಡೆಸುತ್ತಿರುವ ವಸಂತ ಗೌಡರ ತುರ್ತು ಚಿಕಿತ್ಸೆಗೆ  ನೆರವಿಗಾಗಿ ಮನವಿ