ಗಡಿಯಲ್ಲಿರುವ ಯೋಧರಿಗೆ ಪ್ರತಿದಿನವೂ ಪುಲ್ವಾಮ ದಾಳಿಯಿದ್ದಂತೆ : ಮೇ.ಜ. ಎಂ. ವಿ. ಭಟ್

ಉಜಿರೆ : ಪತ್ರಿಕೆಗಳಲ್ಲಿ ಸುದ್ದಿಯಾದರೆ ಮಾತ್ರ ಉಗ್ರರ ಜೊತೆಗಿನ ಸೈನಿಕರ ಸಂಘರ್ಷದ ಬಗ್ಗೆ ಜನರಿಗೆ ಮಾಹಿತಿ ತಲುಪುತ್ತದೆ. ಆದರೆ ಗಡಿಯಲ್ಲಿರುವ ಯೋಧರಿಗೆ ಪ್ರತಿದಿನವೂ ಸಂಘರ್ಷದ ದಿನವೇ. ಅವುಗಳು ಸುದ್ದಿಯಾಗುವುದಿಲ್ಲವಷ್ಟೆ ಎಂದು ಭಾರತೀಯ ಭೂಸೇನೆ ಮಾಜಿ ಯೋಧ ಮೇಜರ್ ಜನರಲ್ ಎಂ.ವಿ. ಭಟ್ ಹೇಳಿದರು.

ಉಜಿರೆಯ ಎಸ್.ಡಿ.ಎಂ ಸ್ನಾತಕೋತ್ತರ ಕೇಂದ್ರದ ಸೆಮಿನಾರ್ ಹಾಲ್ ನಲ್ಲಿ ಸಮಾಜಕಾರ್ಯ ವಿಭಾಗ ಏರ್ಪಡಿಸಿದ್ದ ‘ಪುಲ್ವಾಮ ದುರ್ಘಟನೆಯಲ್ಲಿ ಹುತಾತ್ಮರಾದ ಯೋಧರನ್ನು ಸ್ಮರಿಸುವ ಅಂಗವಾಗಿ ನಡೆದ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದರು.

ಪ್ರತಿದಿನದ ಸುದ್ದಿಗಳನ್ನು ನೋಡುವ ಮೂಲಕ ಪರಿಸ್ಥಿತಿಯನ್ನು ಗ್ರಹಿಸಲು ಸಾಧ್ಯವಿದೆ. ಭೌಗೋಳಿಕವಾಗಿ ನಮಗೆ ನಕ್ಷೆಯ ಪರಿಚಯವಿರಬೇಕು. ಹಾಗಿದ್ದಾಗ ಮಾತ್ರ ಘಟನೆಗಳನ್ನು ನಾವು ಊಹಿಸಿಕೊಳ್ಳಲು ಸಾಧ್ಯವಿದೆ ಎಂದರು.

ಜೀವನದಲ್ಲಿ ಧೈರ್ಯವನ್ನು ಅಳವಡಿಸಿಕೊಳ್ಳಿ. ನಿಮ್ಮ ಸಾಮರ್ಥ್ಯದ ಅರಿವು ನಿಮಗಿರಲಿ, ಅಭ್ಯಾಸ ನಿರಂತರವಾಗಿರಲಿ, ವಿಶ್ವಾಸವಿರಲಿ, ಸಮಯದ ಮಹತ್ವ ಮತ್ತು ಬಳಕೆಯ ಬಗ್ಗೆ ಗಮನವಿರಲಿ. ವ್ಯಕ್ತಿಯ ಸೌಂದರ್ಯ ಅಡಿಗಿರುವುದು ಬಾಹ್ಯ ಸೌಂದರ್ಯದಲ್ಲಲ್ಲ. ವ್ಯಕ್ತಿಯ ಅಂತರ್ಯದಲ್ಲಿ ಎಂದರು.

ಪ್ರತಿದಿನ ದೇವರಲ್ಲಿ ಎರಡು ನಿಮಿಷ ದೇಶದ ಗಡಿಯಲ್ಲಿ ಸೇವೆ ಸಲ್ಲಿಸುವ ಯೋಧರ ಆರೋಗ್ಯಕ್ಕಾಗಿ ಪ್ರಾರ್ಥಿಸುವವರು ನಾವಾಗೋಣ ಎಂದರು.

ತಮ್ಮ ಸೇವಾವಧಿಯಲ್ಲಿ ನಡೆದ ಕಮಾಂಡೋ ಆಪರೇಷನ್, ಭೂಮಿಂಗ್ ಟ್ರಾಪ್ ಇತ್ಯಾದಿ ಅನುಭವಗಳನ್ನು ವಿದ್ಯಾರ್ಥಿಗಳೊಂದಿಗೆ ಹಂಚಿಕೊಂಡರು.

ಪುಲ್ವಾಮ ದಾಳಿಯಲ್ಲಿ ಹುತಾತ್ಮರಾದ ಯೋಧರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಲಾಯಿತು.

ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ನಿವೃತ್ತ ಯೋಧ ಗೋಪಾಲಕೃಷ್ಣ ಕಾಂಚೋಡು ಮಾತನಾಡಿ ದೇಶದ ಗಡಿ ಕಾಯುವ ಸೈನಿಕ ಎಷ್ಟು ಮುಖ್ಯವೋ ಹಾಗೆ ಕೃಷಿಕ, ಅಧ್ಯಾಪಕ, ವೈದ್ಯರು ಎಲ್ಲರೂ ಕೂಡ ಸಮಾಜಕ್ಕೆ ಒಂದಕ್ಕೊಂದು ಪೂರಕವಾಗಿರುವ ಅಂಶಗಳು. ಎಲ್ಲರೂ ಅವರವರ ಜೀವನದಲ್ಲಿ ಸೈನಿಕರೇ. ನಮ್ಮ ನಡುವೆ ಇರುವ ದುರಾಭ್ಯಾಸಗಳ ವಿರುದ್ದ ಹೋರಾಡಿ ಸಮಾಜದ ಹಿತಕ್ಕಾಗಿ ಕೆಲಸ ಮಾಡೋಣ ಎಂದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಮುಖ್ಯಸ್ಥ ಡಾ. ವಿಶ್ವನಾಥ್ ಪಿ. ಮಾತನಾಡಿ ಇಂತಹ ಕಾರ್ಯಕ್ರಮಗಳಲ್ಲಿ ದೊರೆತ ಮಾಹಿತಿಗಳನ್ನು ಜೀವನಕ್ಕೆ ಅಳವಡಿಸಿಕೊಳ್ಳಿ ಎಂದು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.

ಕಾರ್ಯಕ್ರಮದಲ್ಲಿ ಸಮಾಜಕಾರ್ಯ ವಿಭಾಗದ ಮುಖ್ಯಸ್ಥ ಪ್ರೊ. ರವಿಶಂಕರ್ ಕೆ.ಆರ್, ಉಪನ್ಯಾಸಕರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ವಿಭಾಗದ ವಿದ್ಯಾರ್ಥಿ ಶ್ರೀದೇವಿ ಕಾರ್ಯಕ್ರಮ ನಿರೂಪಿಸಿದರು. ಪಾರ್ಶ್ವನಾಥ ಜೈನ್ ಸ್ವಾಗತಿಸಿ ರಂಜಿತಾ ವಂದಿಸಿದರು.

ರಿಪೋರ್ಟ್ : ಸ್ವಸ್ತಿಕ್ ಕನ್ಯಾಡಿ

Spread the love
  • Related Posts

    ಒಟ್ಲ ಶ್ರೀ ಧರ್ಮರಸು ಉಳ್ಳಾಕ್ಲು ಬ್ರಹ್ಮಬೈದೇರುಗಳ ಗರಡಿ ಹಾಗೂ ಪರಿವಾರ ದೈವಗಳ ಕ್ಷೇತ್ರದಲ್ಲಿ ವರ್ಷಾವಧಿ ಜಾತ್ರೆ

    ಶಿಶಿಲ: ಒಟ್ಲ ಶ್ರೀ ಧರ್ಮರಸು ಉಳ್ಳಾಕ್ಲು ಬ್ರಹ್ಮಬೈದೇರುಗಳ ಗರಡಿ ಹಾಗೂ ಪರಿವಾರ ದೈವಗಳ ಕ್ಷೇತ್ರದಲ್ಲಿ ವರ್ಷಾವಧಿ ಜಾತ್ರೆಯು 07/02/2026 ಶನಿವಾರದಿಂದ 10/02/2026ಮಂಗಳವಾರದವರೆಗೆ ನಡೆಯಲಿದೆ. Spread the love

    Spread the love

    ಸಿ.ಎಸ್. ಫಲಿತಾಂಶ ಪ್ರಕಟ: ಎಕ್ಸೆಲ್ ವಿದ್ಯಾರ್ಥಿಗಳು ರಾಜ್ಯದಲ್ಲೇ ಅಭೂತಪೂರ್ವ ಸಾಧನೆ, ಭವೇಶ್ ಸೀರ್ವಿ ರಾಜ್ಯಕ್ಕೆ ಪ್ರಥಮ ಸ್ಥಾನ

    ಗುರುವಾಯನಕೆರೆ: ರಾಷ್ಟ್ರಮಟ್ಟದಲ್ಲಿ ಇನ್ಸಿಟ್ಯೂಟ್ ಆಫ್‌ ಕಂಪನಿ ಸೆಕ್ರೆಟರಿಸ್ ಆಫ್ ಇಂಡಿಯಾ ನಡೆಸುವ ಕಂಪನಿ ಸೆಕ್ರೆಟರಿ ಪರೀಕ್ಷೆಯ ಎರಡನೇ ಆವೃತ್ತಿಯಲ್ಲಿ ಗುರುವಾಯನಕೆರೆ ಎಕ್ಸೆಲ್ ಪದವಿ ಪೂರ್ವ ಕಾಲೇಜಿನ ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳು ಅಭೂತಪೂರ್ವ ಸಾಧನೆ ಮಾಡಿದ್ದಾರೆ. 200 ಅಂಕಗಳ ಪರೀಕ್ಷೆಯಲ್ಲಿ 183 ಅಂಕಗಳನ್ನು…

    Spread the love

    You Missed

    ಒಟ್ಲ ಶ್ರೀ ಧರ್ಮರಸು ಉಳ್ಳಾಕ್ಲು ಬ್ರಹ್ಮಬೈದೇರುಗಳ ಗರಡಿ ಹಾಗೂ ಪರಿವಾರ ದೈವಗಳ ಕ್ಷೇತ್ರದಲ್ಲಿ ವರ್ಷಾವಧಿ ಜಾತ್ರೆ

    • By admin
    • January 28, 2026
    • 64 views
    ಒಟ್ಲ ಶ್ರೀ ಧರ್ಮರಸು ಉಳ್ಳಾಕ್ಲು ಬ್ರಹ್ಮಬೈದೇರುಗಳ ಗರಡಿ ಹಾಗೂ ಪರಿವಾರ ದೈವಗಳ ಕ್ಷೇತ್ರದಲ್ಲಿ ವರ್ಷಾವಧಿ ಜಾತ್ರೆ

    ಸಿ.ಎಸ್. ಫಲಿತಾಂಶ ಪ್ರಕಟ: ಎಕ್ಸೆಲ್ ವಿದ್ಯಾರ್ಥಿಗಳು ರಾಜ್ಯದಲ್ಲೇ ಅಭೂತಪೂರ್ವ ಸಾಧನೆ, ಭವೇಶ್ ಸೀರ್ವಿ ರಾಜ್ಯಕ್ಕೆ ಪ್ರಥಮ ಸ್ಥಾನ

    • By admin
    • January 20, 2026
    • 306 views
    ಸಿ.ಎಸ್. ಫಲಿತಾಂಶ ಪ್ರಕಟ: ಎಕ್ಸೆಲ್ ವಿದ್ಯಾರ್ಥಿಗಳು ರಾಜ್ಯದಲ್ಲೇ ಅಭೂತಪೂರ್ವ ಸಾಧನೆ,  ಭವೇಶ್ ಸೀರ್ವಿ ರಾಜ್ಯಕ್ಕೆ ಪ್ರಥಮ ಸ್ಥಾನ

    ಆಮಂತ್ರಣ ಪರಿವಾರದ ದಶಮಾನೋತ್ಸವದ ರಾಜ್ಯಮಟ್ಟದ ಚಿತ್ರಕಲಾ ಸ್ಪರ್ಧೆಯಲ್ಲಿ ಪುಷ್ಟಿ ಮುಂಡಾಜೆ ಪ್ರಥಮ

    • By admin
    • January 20, 2026
    • 103 views
    ಆಮಂತ್ರಣ ಪರಿವಾರದ ದಶಮಾನೋತ್ಸವದ ರಾಜ್ಯಮಟ್ಟದ ಚಿತ್ರಕಲಾ ಸ್ಪರ್ಧೆಯಲ್ಲಿ ಪುಷ್ಟಿ ಮುಂಡಾಜೆ ಪ್ರಥಮ

    ಹಳ್ಳಿ ಹೈದ ಗಿಲ್ಲಿ ನಟನಿಗೆ ‘ಬಿಗ್’ ಕಿರೀಟ ಕರಾವಳಿಯ ಬೆಡಗಿ ರಕ್ಷಿತಾ ಶೆಟ್ಟಿ ರನ್ನರ್ ಆಫ್

    • By admin
    • January 18, 2026
    • 97 views
    ಹಳ್ಳಿ ಹೈದ ಗಿಲ್ಲಿ ನಟನಿಗೆ ‘ಬಿಗ್’ ಕಿರೀಟ ಕರಾವಳಿಯ ಬೆಡಗಿ ರಕ್ಷಿತಾ ಶೆಟ್ಟಿ ರನ್ನರ್ ಆಫ್

    ಚಾರ್ಮಾಡಿ ಘಾಟಿಯಲ್ಲಿ ಹಬ್ಬಿದ ಕಾಡ್ಗಿಚ್ಚು ಅಪಾರ ಸಸ್ಯ ಪ್ರಬೇಧಗಳು, ಪ್ರಾಣಿ ಸಂಕುಲಕ್ಕೆ ಹಾನಿ ಸಾಧ್ಯತೆ!!! ನಿರಂತರ ಕಾಡ್ಗಿಚ್ಚಿಗೆ ಶಾಶ್ವತ ಪರಿಹಾರ ಯಾವಾಗ???

    • By admin
    • January 18, 2026
    • 89 views
    ಚಾರ್ಮಾಡಿ ಘಾಟಿಯಲ್ಲಿ ಹಬ್ಬಿದ ಕಾಡ್ಗಿಚ್ಚು ಅಪಾರ ಸಸ್ಯ ಪ್ರಬೇಧಗಳು, ಪ್ರಾಣಿ ಸಂಕುಲಕ್ಕೆ ಹಾನಿ ಸಾಧ್ಯತೆ!!! ನಿರಂತರ ಕಾಡ್ಗಿಚ್ಚಿಗೆ ಶಾಶ್ವತ ಪರಿಹಾರ ಯಾವಾಗ???

    ಚಾರ್ಮಾಡಿ ಘಾಟಿಯ ತುತ್ತ ತುದಿಯಲ್ಲಿ ಕಾಣಿಸಿಕೊಂಡ ಬೆಂಕಿ ಇದು ಆಕಸ್ಮಿಕವೋ‼️ ಅಥವಾ ದುಷ್ಟರ ಕೃತ್ಯವೋ⁉️

    • By admin
    • January 18, 2026
    • 69 views
    ಚಾರ್ಮಾಡಿ ಘಾಟಿಯ ತುತ್ತ ತುದಿಯಲ್ಲಿ ಕಾಣಿಸಿಕೊಂಡ ಬೆಂಕಿ ಇದು ಆಕಸ್ಮಿಕವೋ‼️ ಅಥವಾ ದುಷ್ಟರ ಕೃತ್ಯವೋ⁉️