ಗಡಿಯಲ್ಲಿರುವ ಯೋಧರಿಗೆ ಪ್ರತಿದಿನವೂ ಪುಲ್ವಾಮ ದಾಳಿಯಿದ್ದಂತೆ : ಮೇ.ಜ. ಎಂ. ವಿ. ಭಟ್

ಉಜಿರೆ : ಪತ್ರಿಕೆಗಳಲ್ಲಿ ಸುದ್ದಿಯಾದರೆ ಮಾತ್ರ ಉಗ್ರರ ಜೊತೆಗಿನ ಸೈನಿಕರ ಸಂಘರ್ಷದ ಬಗ್ಗೆ ಜನರಿಗೆ ಮಾಹಿತಿ ತಲುಪುತ್ತದೆ. ಆದರೆ ಗಡಿಯಲ್ಲಿರುವ ಯೋಧರಿಗೆ ಪ್ರತಿದಿನವೂ ಸಂಘರ್ಷದ ದಿನವೇ. ಅವುಗಳು ಸುದ್ದಿಯಾಗುವುದಿಲ್ಲವಷ್ಟೆ ಎಂದು ಭಾರತೀಯ ಭೂಸೇನೆ ಮಾಜಿ ಯೋಧ ಮೇಜರ್ ಜನರಲ್ ಎಂ.ವಿ. ಭಟ್ ಹೇಳಿದರು.

ಉಜಿರೆಯ ಎಸ್.ಡಿ.ಎಂ ಸ್ನಾತಕೋತ್ತರ ಕೇಂದ್ರದ ಸೆಮಿನಾರ್ ಹಾಲ್ ನಲ್ಲಿ ಸಮಾಜಕಾರ್ಯ ವಿಭಾಗ ಏರ್ಪಡಿಸಿದ್ದ ‘ಪುಲ್ವಾಮ ದುರ್ಘಟನೆಯಲ್ಲಿ ಹುತಾತ್ಮರಾದ ಯೋಧರನ್ನು ಸ್ಮರಿಸುವ ಅಂಗವಾಗಿ ನಡೆದ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದರು.

ಪ್ರತಿದಿನದ ಸುದ್ದಿಗಳನ್ನು ನೋಡುವ ಮೂಲಕ ಪರಿಸ್ಥಿತಿಯನ್ನು ಗ್ರಹಿಸಲು ಸಾಧ್ಯವಿದೆ. ಭೌಗೋಳಿಕವಾಗಿ ನಮಗೆ ನಕ್ಷೆಯ ಪರಿಚಯವಿರಬೇಕು. ಹಾಗಿದ್ದಾಗ ಮಾತ್ರ ಘಟನೆಗಳನ್ನು ನಾವು ಊಹಿಸಿಕೊಳ್ಳಲು ಸಾಧ್ಯವಿದೆ ಎಂದರು.

ಜೀವನದಲ್ಲಿ ಧೈರ್ಯವನ್ನು ಅಳವಡಿಸಿಕೊಳ್ಳಿ. ನಿಮ್ಮ ಸಾಮರ್ಥ್ಯದ ಅರಿವು ನಿಮಗಿರಲಿ, ಅಭ್ಯಾಸ ನಿರಂತರವಾಗಿರಲಿ, ವಿಶ್ವಾಸವಿರಲಿ, ಸಮಯದ ಮಹತ್ವ ಮತ್ತು ಬಳಕೆಯ ಬಗ್ಗೆ ಗಮನವಿರಲಿ. ವ್ಯಕ್ತಿಯ ಸೌಂದರ್ಯ ಅಡಿಗಿರುವುದು ಬಾಹ್ಯ ಸೌಂದರ್ಯದಲ್ಲಲ್ಲ. ವ್ಯಕ್ತಿಯ ಅಂತರ್ಯದಲ್ಲಿ ಎಂದರು.

ಪ್ರತಿದಿನ ದೇವರಲ್ಲಿ ಎರಡು ನಿಮಿಷ ದೇಶದ ಗಡಿಯಲ್ಲಿ ಸೇವೆ ಸಲ್ಲಿಸುವ ಯೋಧರ ಆರೋಗ್ಯಕ್ಕಾಗಿ ಪ್ರಾರ್ಥಿಸುವವರು ನಾವಾಗೋಣ ಎಂದರು.

ತಮ್ಮ ಸೇವಾವಧಿಯಲ್ಲಿ ನಡೆದ ಕಮಾಂಡೋ ಆಪರೇಷನ್, ಭೂಮಿಂಗ್ ಟ್ರಾಪ್ ಇತ್ಯಾದಿ ಅನುಭವಗಳನ್ನು ವಿದ್ಯಾರ್ಥಿಗಳೊಂದಿಗೆ ಹಂಚಿಕೊಂಡರು.

ಪುಲ್ವಾಮ ದಾಳಿಯಲ್ಲಿ ಹುತಾತ್ಮರಾದ ಯೋಧರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಲಾಯಿತು.

ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ನಿವೃತ್ತ ಯೋಧ ಗೋಪಾಲಕೃಷ್ಣ ಕಾಂಚೋಡು ಮಾತನಾಡಿ ದೇಶದ ಗಡಿ ಕಾಯುವ ಸೈನಿಕ ಎಷ್ಟು ಮುಖ್ಯವೋ ಹಾಗೆ ಕೃಷಿಕ, ಅಧ್ಯಾಪಕ, ವೈದ್ಯರು ಎಲ್ಲರೂ ಕೂಡ ಸಮಾಜಕ್ಕೆ ಒಂದಕ್ಕೊಂದು ಪೂರಕವಾಗಿರುವ ಅಂಶಗಳು. ಎಲ್ಲರೂ ಅವರವರ ಜೀವನದಲ್ಲಿ ಸೈನಿಕರೇ. ನಮ್ಮ ನಡುವೆ ಇರುವ ದುರಾಭ್ಯಾಸಗಳ ವಿರುದ್ದ ಹೋರಾಡಿ ಸಮಾಜದ ಹಿತಕ್ಕಾಗಿ ಕೆಲಸ ಮಾಡೋಣ ಎಂದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಮುಖ್ಯಸ್ಥ ಡಾ. ವಿಶ್ವನಾಥ್ ಪಿ. ಮಾತನಾಡಿ ಇಂತಹ ಕಾರ್ಯಕ್ರಮಗಳಲ್ಲಿ ದೊರೆತ ಮಾಹಿತಿಗಳನ್ನು ಜೀವನಕ್ಕೆ ಅಳವಡಿಸಿಕೊಳ್ಳಿ ಎಂದು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.

ಕಾರ್ಯಕ್ರಮದಲ್ಲಿ ಸಮಾಜಕಾರ್ಯ ವಿಭಾಗದ ಮುಖ್ಯಸ್ಥ ಪ್ರೊ. ರವಿಶಂಕರ್ ಕೆ.ಆರ್, ಉಪನ್ಯಾಸಕರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ವಿಭಾಗದ ವಿದ್ಯಾರ್ಥಿ ಶ್ರೀದೇವಿ ಕಾರ್ಯಕ್ರಮ ನಿರೂಪಿಸಿದರು. ಪಾರ್ಶ್ವನಾಥ ಜೈನ್ ಸ್ವಾಗತಿಸಿ ರಂಜಿತಾ ವಂದಿಸಿದರು.

ರಿಪೋರ್ಟ್ : ಸ್ವಸ್ತಿಕ್ ಕನ್ಯಾಡಿ

Spread the love
  • Related Posts

    ಬೆಳ್ತಂಗಡಿ : ಎಸ್ಐಟಿ ಎಸ್ಪಿ ಪ್ರಯಾಣಿಸುತ್ತಿದ್ದ ಇನೋವಾ ಕಾರು ಪಲ್ಟಿ, ಎಸ್ಪಿ ಸಹಿತ ನಾಲ್ವರು ಅಪಾಯದಿಂದ ಪಾರು

    ಬೆಳ್ತಂಗಡಿ : ಬುರುಡೆ ಪ್ರಕರಣದ ಎಸ್ಐಟಿ ತಂಡದ ಎಸ್ಪಿ ಮತ್ತು ಇತರ ಅಧಿಕಾರಿಗಳು ಪ್ರಯಾಣಿಸುತ್ತಿದ್ದ ಇನೋವಾ ಕಾರು ಚಾರ್ಮಾಡಿಯಲ್ಲಿ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಬೆಳ್ತಂಗಡಿ ಎಸ್ಐಟಿ ಕಚೇರಿಯಿಂದ ಎಸ್ಪಿ ಸಿ.ಎ.ಸೈಮನ್ , ಇನ್ಸ್‌ಪೆಕ್ಟರ್ ಕುಸುಮಾಧರ್, ಸಿಬ್ಬಂದಿ ಮಂಜುನಾಥ್ ಸೇರಿ ಚಿಕ್ಕಮಗಳೂರು ಜಿಲ್ಲಾ…

    Spread the love

    ದೇವಸ್ಥಾನಗಳು ಭಜನೆ, ಸಂಸ್ಕಾರ ಮತ್ತು ಭಕ್ತಿಯ ಕೇಂದ್ರವಾಗಲಿ : ಡಾ. ನವೀನ್ ಚಂದ್ರ ಶೆಟ್ಟಿ

    ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಮಡಬಲು ಶ್ರೀ ಬೀರಲಿಂಗೇಶ್ವರ ಸ್ವಾಮಿ ದೇವಸ್ಥಾನದ ಜೀರ್ಣೋದ್ಧಾರ ಕಾರ್ಯಕ್ಕೆ ₹2 ಲಕ್ಷ ಅನುದಾನ ವಿತರಣೆ ಸಕಲೇಶಪುರ: ತಾಲೂಕಿನ ಮಡಬಲು ಗ್ರಾಮದ ಐತಿಹಾಸಿಕ ಹಾಗೂ ಭಕ್ತರ ಆರಾಧನಾ ಕೇಂದ್ರವಾಗಿರುವ ಶ್ರೀ ಬೀರಲಿಂಗೇಶ್ವರ ಸ್ವಾಮಿ ದೇವಸ್ಥಾನದ ಜೀರ್ಣೋದ್ಧಾರ ಕಾರ್ಯಕ್ಕಾಗಿ ಶ್ರೀ…

    Spread the love

    You Missed

    ಬೆಳ್ತಂಗಡಿ : ಎಸ್ಐಟಿ ಎಸ್ಪಿ ಪ್ರಯಾಣಿಸುತ್ತಿದ್ದ ಇನೋವಾ ಕಾರು ಪಲ್ಟಿ, ಎಸ್ಪಿ ಸಹಿತ ನಾಲ್ವರು ಅಪಾಯದಿಂದ ಪಾರು

    • By admin
    • June 16, 2026
    • 90 views
    ಬೆಳ್ತಂಗಡಿ : ಎಸ್ಐಟಿ ಎಸ್ಪಿ ಪ್ರಯಾಣಿಸುತ್ತಿದ್ದ ಇನೋವಾ ಕಾರು ಪಲ್ಟಿ, ಎಸ್ಪಿ ಸಹಿತ ನಾಲ್ವರು ಅಪಾಯದಿಂದ ಪಾರು

    ದೇವಸ್ಥಾನಗಳು ಭಜನೆ, ಸಂಸ್ಕಾರ ಮತ್ತು ಭಕ್ತಿಯ ಕೇಂದ್ರವಾಗಲಿ : ಡಾ. ನವೀನ್ ಚಂದ್ರ ಶೆಟ್ಟಿ

    • By admin
    • June 16, 2026
    • 35 views
    ದೇವಸ್ಥಾನಗಳು ಭಜನೆ, ಸಂಸ್ಕಾರ ಮತ್ತು ಭಕ್ತಿಯ ಕೇಂದ್ರವಾಗಲಿ : ಡಾ. ನವೀನ್ ಚಂದ್ರ ಶೆಟ್ಟಿ

    ಐಸ್ ಹಾಕಿ ರಾಷ್ಟ್ರೀಯ ಚಾಂಪಿಯನ್‌ಶಿಪ್: ಕುತ್ಲೂರಿನ ನಿಷ್ಕ್ ಹರೀಶ್ ಸಾಲಿಯಾನ್‌ಗೆ ರಾಷ್ಟ್ರೀಯ ಬೆಳ್ಳಿ ಪದಕ

    • By admin
    • June 15, 2026
    • 134 views
    ಐಸ್ ಹಾಕಿ ರಾಷ್ಟ್ರೀಯ ಚಾಂಪಿಯನ್‌ಶಿಪ್: ಕುತ್ಲೂರಿನ ನಿಷ್ಕ್ ಹರೀಶ್ ಸಾಲಿಯಾನ್‌ಗೆ ರಾಷ್ಟ್ರೀಯ ಬೆಳ್ಳಿ ಪದಕ

    ಬೆಳ್ತಂಗಡಿ: ಚಾರ್ಮಾಡಿ ಗ್ರಾಮ ಪಂಚಾಯತ್ ಕಾರ್ಯದರ್ಶಿ ಜಯಕೀರ್ತಿ HB ನಿಧನ

    • By admin
    • June 15, 2026
    • 76 views
    ಬೆಳ್ತಂಗಡಿ: ಚಾರ್ಮಾಡಿ ಗ್ರಾಮ ಪಂಚಾಯತ್ ಕಾರ್ಯದರ್ಶಿ ಜಯಕೀರ್ತಿ HB ನಿಧನ

    ಬೆಳ್ತಂಗಡಿ ನೂತನ ನ್ಯಾಯಾಲಯ ಸಂಕೀರ್ಣದ ಶಂಕುಸ್ಥಾಪನೆ

    • By admin
    • June 14, 2026
    • 47 views
    ಬೆಳ್ತಂಗಡಿ ನೂತನ ನ್ಯಾಯಾಲಯ ಸಂಕೀರ್ಣದ ಶಂಕುಸ್ಥಾಪನೆ

    ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ಬೆಳ್ತಂಗಡಿ ತಾಲೂಕು ಘಟಕ ರಚನೆ: ನಿಶಾನ್ ಬಂಗೇರ ನಾರ್ಯ ಅಧ್ಯಕ್ಷರಾಗಿ ಆಯ್ಕೆ

    • By admin
    • June 13, 2026
    • 84 views
    ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ಬೆಳ್ತಂಗಡಿ ತಾಲೂಕು ಘಟಕ ರಚನೆ: ನಿಶಾನ್ ಬಂಗೇರ ನಾರ್ಯ ಅಧ್ಯಕ್ಷರಾಗಿ ಆಯ್ಕೆ