ಗಡಿಯಲ್ಲಿರುವ ಯೋಧರಿಗೆ ಪ್ರತಿದಿನವೂ ಪುಲ್ವಾಮ ದಾಳಿಯಿದ್ದಂತೆ : ಮೇ.ಜ. ಎಂ. ವಿ. ಭಟ್

ಉಜಿರೆ : ಪತ್ರಿಕೆಗಳಲ್ಲಿ ಸುದ್ದಿಯಾದರೆ ಮಾತ್ರ ಉಗ್ರರ ಜೊತೆಗಿನ ಸೈನಿಕರ ಸಂಘರ್ಷದ ಬಗ್ಗೆ ಜನರಿಗೆ ಮಾಹಿತಿ ತಲುಪುತ್ತದೆ. ಆದರೆ ಗಡಿಯಲ್ಲಿರುವ ಯೋಧರಿಗೆ ಪ್ರತಿದಿನವೂ ಸಂಘರ್ಷದ ದಿನವೇ. ಅವುಗಳು ಸುದ್ದಿಯಾಗುವುದಿಲ್ಲವಷ್ಟೆ ಎಂದು ಭಾರತೀಯ ಭೂಸೇನೆ ಮಾಜಿ ಯೋಧ ಮೇಜರ್ ಜನರಲ್ ಎಂ.ವಿ. ಭಟ್ ಹೇಳಿದರು.

ಉಜಿರೆಯ ಎಸ್.ಡಿ.ಎಂ ಸ್ನಾತಕೋತ್ತರ ಕೇಂದ್ರದ ಸೆಮಿನಾರ್ ಹಾಲ್ ನಲ್ಲಿ ಸಮಾಜಕಾರ್ಯ ವಿಭಾಗ ಏರ್ಪಡಿಸಿದ್ದ ‘ಪುಲ್ವಾಮ ದುರ್ಘಟನೆಯಲ್ಲಿ ಹುತಾತ್ಮರಾದ ಯೋಧರನ್ನು ಸ್ಮರಿಸುವ ಅಂಗವಾಗಿ ನಡೆದ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದರು.

ಪ್ರತಿದಿನದ ಸುದ್ದಿಗಳನ್ನು ನೋಡುವ ಮೂಲಕ ಪರಿಸ್ಥಿತಿಯನ್ನು ಗ್ರಹಿಸಲು ಸಾಧ್ಯವಿದೆ. ಭೌಗೋಳಿಕವಾಗಿ ನಮಗೆ ನಕ್ಷೆಯ ಪರಿಚಯವಿರಬೇಕು. ಹಾಗಿದ್ದಾಗ ಮಾತ್ರ ಘಟನೆಗಳನ್ನು ನಾವು ಊಹಿಸಿಕೊಳ್ಳಲು ಸಾಧ್ಯವಿದೆ ಎಂದರು.

ಜೀವನದಲ್ಲಿ ಧೈರ್ಯವನ್ನು ಅಳವಡಿಸಿಕೊಳ್ಳಿ. ನಿಮ್ಮ ಸಾಮರ್ಥ್ಯದ ಅರಿವು ನಿಮಗಿರಲಿ, ಅಭ್ಯಾಸ ನಿರಂತರವಾಗಿರಲಿ, ವಿಶ್ವಾಸವಿರಲಿ, ಸಮಯದ ಮಹತ್ವ ಮತ್ತು ಬಳಕೆಯ ಬಗ್ಗೆ ಗಮನವಿರಲಿ. ವ್ಯಕ್ತಿಯ ಸೌಂದರ್ಯ ಅಡಿಗಿರುವುದು ಬಾಹ್ಯ ಸೌಂದರ್ಯದಲ್ಲಲ್ಲ. ವ್ಯಕ್ತಿಯ ಅಂತರ್ಯದಲ್ಲಿ ಎಂದರು.

ಪ್ರತಿದಿನ ದೇವರಲ್ಲಿ ಎರಡು ನಿಮಿಷ ದೇಶದ ಗಡಿಯಲ್ಲಿ ಸೇವೆ ಸಲ್ಲಿಸುವ ಯೋಧರ ಆರೋಗ್ಯಕ್ಕಾಗಿ ಪ್ರಾರ್ಥಿಸುವವರು ನಾವಾಗೋಣ ಎಂದರು.

ತಮ್ಮ ಸೇವಾವಧಿಯಲ್ಲಿ ನಡೆದ ಕಮಾಂಡೋ ಆಪರೇಷನ್, ಭೂಮಿಂಗ್ ಟ್ರಾಪ್ ಇತ್ಯಾದಿ ಅನುಭವಗಳನ್ನು ವಿದ್ಯಾರ್ಥಿಗಳೊಂದಿಗೆ ಹಂಚಿಕೊಂಡರು.

ಪುಲ್ವಾಮ ದಾಳಿಯಲ್ಲಿ ಹುತಾತ್ಮರಾದ ಯೋಧರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಲಾಯಿತು.

ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ನಿವೃತ್ತ ಯೋಧ ಗೋಪಾಲಕೃಷ್ಣ ಕಾಂಚೋಡು ಮಾತನಾಡಿ ದೇಶದ ಗಡಿ ಕಾಯುವ ಸೈನಿಕ ಎಷ್ಟು ಮುಖ್ಯವೋ ಹಾಗೆ ಕೃಷಿಕ, ಅಧ್ಯಾಪಕ, ವೈದ್ಯರು ಎಲ್ಲರೂ ಕೂಡ ಸಮಾಜಕ್ಕೆ ಒಂದಕ್ಕೊಂದು ಪೂರಕವಾಗಿರುವ ಅಂಶಗಳು. ಎಲ್ಲರೂ ಅವರವರ ಜೀವನದಲ್ಲಿ ಸೈನಿಕರೇ. ನಮ್ಮ ನಡುವೆ ಇರುವ ದುರಾಭ್ಯಾಸಗಳ ವಿರುದ್ದ ಹೋರಾಡಿ ಸಮಾಜದ ಹಿತಕ್ಕಾಗಿ ಕೆಲಸ ಮಾಡೋಣ ಎಂದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಮುಖ್ಯಸ್ಥ ಡಾ. ವಿಶ್ವನಾಥ್ ಪಿ. ಮಾತನಾಡಿ ಇಂತಹ ಕಾರ್ಯಕ್ರಮಗಳಲ್ಲಿ ದೊರೆತ ಮಾಹಿತಿಗಳನ್ನು ಜೀವನಕ್ಕೆ ಅಳವಡಿಸಿಕೊಳ್ಳಿ ಎಂದು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.

ಕಾರ್ಯಕ್ರಮದಲ್ಲಿ ಸಮಾಜಕಾರ್ಯ ವಿಭಾಗದ ಮುಖ್ಯಸ್ಥ ಪ್ರೊ. ರವಿಶಂಕರ್ ಕೆ.ಆರ್, ಉಪನ್ಯಾಸಕರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ವಿಭಾಗದ ವಿದ್ಯಾರ್ಥಿ ಶ್ರೀದೇವಿ ಕಾರ್ಯಕ್ರಮ ನಿರೂಪಿಸಿದರು. ಪಾರ್ಶ್ವನಾಥ ಜೈನ್ ಸ್ವಾಗತಿಸಿ ರಂಜಿತಾ ವಂದಿಸಿದರು.

ರಿಪೋರ್ಟ್ : ಸ್ವಸ್ತಿಕ್ ಕನ್ಯಾಡಿ

Spread the love
  • Related Posts

    ನಾಗರಪಂಚಮಿ ಪ್ರಯುಕ್ತ ಸೋಮವಾರ ದ.ಕ. ಜಿಲ್ಲೆಗೆ ಸಾರ್ವತ್ರಿಕ ರಜೆ

    ಮಂಗಳೂರು: ನಾಗರಪಂಚಮಿ ಹಬ್ಬದ ಪ್ರಯುಕ್ತ ಆಗಸ್ಟ್ 17ರಂದು ಸೋಮವಾರ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸಾರ್ವತ್ರಿಕ ರಜೆ ಘೋಷಿಸಲಾಗಿದೆ. ಜಿಲ್ಲೆಯಾದ್ಯಂತ ಶಾಲಾ-ಕಾಲೇಜುಗಳು ಸೇರಿದಂತೆ ಎಲ್ಲಾ ಶಿಕ್ಷಣ ಸಂಸ್ಥೆಗಳು ಹಾಗೂ ಸರಕಾರಿ ಕಚೇರಿಗಳಿಗೆ ಸೋಮವಾರ ರಜೆ ಇರಲಿದೆ ಎಂದು ಜಿಲ್ಲಾಧಿಕಾರಿ ಕಚೇರಿ ಪ್ರಕಟಣೆ ತಿಳಿಸಿದೆ.…

    Spread the love

    ಮುಂಡಾಜೆ ಯಂಗ್ ಚಾಲೆಂಜರ್ಸ್ ಕ್ರೀಡಾ ಸಂಘದಲ್ಲಿ ಸ್ವಾತಂತ್ರ್ಯೋತ್ಸವ

    ಬೆಳ್ತಂಗಡಿ: ಮುಂಡಾಜೆಯ ಯಂಗ್ ಚಾಲೆಂಜರ್ಸ್ ಕ್ರೀಡಾ ಸಂಘದಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಧ್ವಜಾರೋಹಣ ನೆರವೇರಿಸುವ ಮೂಲಕ ಆಚರಿಸಲಾಯಿತು.ಸಂಘದ ಅಧ್ಯಕ್ಷ ವಿಜಯ ಆರ್. ಧ್ವಜಾರೋಹಣ ನೆರವೇರಿಸಿ, ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.ಈ ಸಂದರ್ಭದಲ್ಲಿ ಒಂಜರೆಬೈಲು ಅಂಗನವಾಡಿ ಕೇಂದ್ರದ ಪುಷ್ಪಾ, ಕೊಟ್ರೊಟ್ಟು ಅಂಗನವಾಡಿ ಕೇಂದ್ರದ ಪುಷ್ಪಾ,…

    Spread the love

    You Missed

    ನಾಗರಪಂಚಮಿ ಪ್ರಯುಕ್ತ ಸೋಮವಾರ ದ.ಕ. ಜಿಲ್ಲೆಗೆ ಸಾರ್ವತ್ರಿಕ ರಜೆ

    • By admin
    • August 16, 2026
    • 4 views
    ನಾಗರಪಂಚಮಿ ಪ್ರಯುಕ್ತ ಸೋಮವಾರ ದ.ಕ. ಜಿಲ್ಲೆಗೆ ಸಾರ್ವತ್ರಿಕ ರಜೆ

    ಮುಂಡಾಜೆ ಯಂಗ್ ಚಾಲೆಂಜರ್ಸ್ ಕ್ರೀಡಾ ಸಂಘದಲ್ಲಿ ಸ್ವಾತಂತ್ರ್ಯೋತ್ಸವ

    • By admin
    • August 15, 2026
    • 7 views
    ಮುಂಡಾಜೆ ಯಂಗ್ ಚಾಲೆಂಜರ್ಸ್ ಕ್ರೀಡಾ ಸಂಘದಲ್ಲಿ ಸ್ವಾತಂತ್ರ್ಯೋತ್ಸವ

    ನೀಟ್‌ನಲ್ಲಿ ಅತ್ಯುತ್ತಮ ಸಾಧನೆ: ಎಕ್ಸೆಲ್ ಪಿಯು ಕಾಲೇಜಿನ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ಅವರಿಗೆ ‘ಆರೋಗ್ಯ ರತ್ನ’ ಪ್ರಶಸ್ತಿ

    • By admin
    • August 14, 2026
    • 22 views
    ನೀಟ್‌ನಲ್ಲಿ ಅತ್ಯುತ್ತಮ ಸಾಧನೆ: ಎಕ್ಸೆಲ್ ಪಿಯು ಕಾಲೇಜಿನ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ಅವರಿಗೆ ‘ಆರೋಗ್ಯ ರತ್ನ’ ಪ್ರಶಸ್ತಿ

    ಬಂಟ್ವಾಳ ಕಾವಳ ಪಡೂರಿನಲ್ಲಿ ಪೊಲೀಸ್‌ ದಾಳಿ: ನಿಷೇಧಿತ ಎಂ.ಡಿ.ಎಂ.ಎ ಸೇರಿದಂತೆ 4 ಲಕ್ಷ 90 ಸಾವಿರ ಮೌಲ್ಯದ ಸೊತ್ತುಗಳು ವಶಕ್ಕೆ

    • By admin
    • August 14, 2026
    • 12 views
    ಬಂಟ್ವಾಳ ಕಾವಳ ಪಡೂರಿನಲ್ಲಿ ಪೊಲೀಸ್‌ ದಾಳಿ: ನಿಷೇಧಿತ ಎಂ.ಡಿ.ಎಂ.ಎ ಸೇರಿದಂತೆ 4 ಲಕ್ಷ 90 ಸಾವಿರ ಮೌಲ್ಯದ ಸೊತ್ತುಗಳು ವಶಕ್ಕೆ

    ಎಕ್ಸೆಲ್ ಪದವಿ ಪೂರ್ವ ಕಾಲೇಜಿನಲ್ಲಿ 80ನೇ ಸ್ವಾತಂತ್ರ್ಯ ಸಂಭ್ರಮದಲ್ಲಿ ಆಗಸ್ಟ್ 15-16ರಂದು ಶೈಕ್ಷಣಿಕ ಸಾಧಕರ ಅಭಿನಂದನೆ ಮತ್ತು “ರಕ್ಷಕ ನಮನ-2026” ಕಾರ್ಯಕ್ರಮ

    • By admin
    • August 14, 2026
    • 7 views
    ಎಕ್ಸೆಲ್ ಪದವಿ ಪೂರ್ವ ಕಾಲೇಜಿನಲ್ಲಿ 80ನೇ ಸ್ವಾತಂತ್ರ್ಯ ಸಂಭ್ರಮದಲ್ಲಿ ಆಗಸ್ಟ್ 15-16ರಂದು ಶೈಕ್ಷಣಿಕ ಸಾಧಕರ ಅಭಿನಂದನೆ ಮತ್ತು “ರಕ್ಷಕ ನಮನ-2026” ಕಾರ್ಯಕ್ರಮ

    ವೈದ್ಯಕೀಯ ವಿದ್ಯಾರ್ಥಿಗಳ ಕನಸು ನನಸಾಗಿಸುವ ‘ಎಕ್ಸೆಲ್ ನೀಟ್ ಅಕಾಡೆಮಿ’ ವೈದ್ಯರಾಗಲು ವಿಶ್ವಾಸದ ಆಯ್ಕೆ – ಎಕ್ಸೆಲ್ ಗುರುವಾಯನಕೆರೆ

    • By admin
    • August 11, 2026
    • 13 views
    ವೈದ್ಯಕೀಯ ವಿದ್ಯಾರ್ಥಿಗಳ ಕನಸು ನನಸಾಗಿಸುವ ‘ಎಕ್ಸೆಲ್ ನೀಟ್ ಅಕಾಡೆಮಿ’ ವೈದ್ಯರಾಗಲು ವಿಶ್ವಾಸದ ಆಯ್ಕೆ – ಎಕ್ಸೆಲ್  ಗುರುವಾಯನಕೆರೆ