ನಾಗರ ಪಂಚಮಿ ದಿನ ಹಿಂದೂಗಳ ಹಬ್ಬಗಳ ಟೀಕಿಸುವ ಸತೀಶ ಜಾರಕಿಹೊಳಿ ಯವರು ಕ್ಷಮೆಯಾಚನೆ ಮಾಡಬೇಕು: HJS ಮೋಹನ ಗೌಡ ಆಗ್ರಹ

ಬೆಂಗಳೂರು: ನಾಗರಪಂಚಮಿಯಂದು ಹಿಂದೂಗಳು ನಾಗದೇವರಿಗೆ ಹಾಲನ್ನು ಎರೆಯುವ ಸಂಪ್ರದಾಯವನ್ನು ಕಾಂಗ್ರೆಸ್ ಶಾಸಕ ಸತೀಶ ಜಾರಕಿಹೊಳಿಯವರು ಟೀಕಿಸುತ್ತಾ, ಇದು ಅವೈಜ್ಞಾನಿಕ ಕೋಟ್ಯಂತರ ಲೀಟರ್ ಹಾಲು ವ್ಯರ್ಥವಾಗುತ್ತದೆ. ಹಾಗಾಗಿ ಅದನ್ನು ಬಡಮಕ್ಕಳಿಗೆ, ರೋಗಿಗಳಿಗೆ ನೀಡಿ ಎಂದು ಹಿಂದೂ ವಿರೋಧಿ ಕರೆ ನೀಡುವ ಒಂದು ಪೋಸ್ಟ್ ಸಾಮಾಜಿಕ ಮಾಧ್ಯಗಳಲ್ಲಿ ಹರಿದಾಡುತ್ತಿದೆ. ಅದಲ್ಲದೇ ಕರ್ನಾಟಕದಲ್ಲಿ ಪ್ರತಿ ವರ್ಷ ೪೦ ಸಾವಿರಕ್ಕೂ ಹೆಚ್ಚು ಮಕ್ಕಳು ಅಪೌಷ್ಠಿಕತೆಯಿಂದ ಮರಣ ಹೊಂದುತ್ತಿದ್ದಾರೆ, ನಾಗನಿಗೆ ಹಾಲು ಎರೆಯವ ಬದಲು, ಬಡಮಕ್ಕಳಿಗೆ ಹಾಲು ನೀಡಿ ಎಂದು ಕರೆ ನೀಡಿದ್ದಾರೆ. ಇದು ಇವರ ಹಿಂದೂಗಳ ಧಾರ್ಮಿಕ ಹಬ್ಬಗಳ ಹಿಂದಿರುವ ಶಾಸ್ತ್ರವನ್ನು ಅರಿತುಕೊಳ್ಳದೇ ಹಿಂದುಗಳ ಹಬ್ಬದ ಬಗ್ಗೆ ಅಪಪ್ರಚಾರ ಮಾಡುತ್ತಿದ್ದಾರೆ. ಇದನ್ನು ಹಿಂದೂ ಜನಜಾಗೃತಿ ಸಮಿತಿಯು ತೀವ್ರವಾಗಿ ಖಂಡಿಸುತ್ತದೆ ಎಂದು ಹಿಂದೂ ಜನಜಾಗೃತಿ ಸಮಿತಿಯ ರಾಜ್ಯವಕ್ತಾರ ಶ್ರೀ ಮೋಹನ ಗೌಡ ಆಗ್ರಹಿಸಿದ್ದಾರೆ.

ಶಿವಲಿಂಗಕ್ಕೆ ಹಾಲು ಅರ್ಪಿಸಬೇಡಿ ಮಕ್ಕಳಿಗೆ ನೀಡಿ ಹೇಳುವವರು, ಹಾಲಿನ ಬೆಲೆ ಹೆಚ್ಚಿಸಲು ಪ್ರತಿಭಟನೆ ಹೆಸರಿನಲ್ಲಿ ಲಕ್ಷಗಟ್ಟಲೆ ಲೀಟರ್ ಹಾಲು ಬೀದಿಯಲ್ಲಿ ಸುರಿಯುವಾಗ ಯಾಕೆ ಮೌನವಾಗಿದ್ದರು? ಅದಲ್ಲದೇ ಶೇಕಡಾ 80 ರಷ್ಟು ಹಾಲನ್ನು ಕಲಬೆರಕೆ ಮಾಡಿ ಮಾರಾಟ ಮಾಡುವ ಮೂಲಕ ಲಕ್ಷಾಂತರ ಮಕ್ಕಳ ಜೀವನ ಹಾಳು ಮಾಡುವ ಸಮಸ್ಯೆಯ ಬಗ್ಗೆ ಯಾಕೆ ಮೌನ ?

ಭಾರತೀಯ ಸಂವಿಧಾನವು ಪ್ರತಿಯೊಬ್ಬರಿಗೂ ತಮ್ಮ ಧರ್ಮವನ್ನು ಆಚರಿಸುವ ಸಾಂವಿಧಾನಿಕ ಹಕ್ಕನ್ನು ನೀಡಿದೆ. ಅದರಲ್ಲಿ ಹಸ್ತಕ್ಷೇಪ ಮಾಡುವ ಹಕ್ಕು ಯಾರಿಗೂ ಇಲ್ಲ’ ಎಂದು ನಾವು ಹೇಳಬಯಸುತ್ತೇವೆ. ಅಪೌಷ್ಟಿಕತೆಯಿಂದ ಸಾಯುತ್ತಿರುವ ಬಡ ಮಕ್ಕಳಿಗೆ ಹಾಲು ಸಿಗದಿರಲು ಸರ್ಕಾರ ಅವರಿಗೆ ಸರಿಯಾದ ಸೌಲಭ್ಯ ಮತ್ತು ಪರಿಹಾರಗಳ ತಲುಪದಿರುವುದರ ಪರಿಣಾಮವಾಗಿದೆ. ಈ ರೀತಿ ಮೂಲ ಸಮಸ್ಯೆಯನ್ನು ಪರಿಹರಿಸದೆ ಕೇವಲ ಮೇಲುಮೇಲಿನ ಉಪಾಯವೆಂದು ನಾಗಪಂಚಮಿ ಅಥವಾ ಮಹಾಶಿವರಾತ್ರಿಯ ಕೇವಲ ಒಂದು ದಿನದ ಹಾಲನ್ನು ನೀಡುವ ಮೂಲಕ ಅಪೌಷ್ಟಿಕತೆಯ ಸಮಸ್ಯೆಯನ್ನು ಪರಿಹರಿಸಬಹುದೇ?

ಇಂದು, ಹಿಂದೂ ಧರ್ಮ, ಸಂಪ್ರದಾಯಗಳು ಮತ್ತು ಹಬ್ಬಗಳ ಮೇಲೆ ಕೆಸರೆರಚಿ ಖ್ಯಾತಿ ಪಡೆಯುವುದು ಫ್ಯಾಷನ್ ಆಗಿದೆ. ಹೀಗೆ ಹೇಳುವವರು ಬಕ್ರಿದ್ ಮತ್ತು ಇತರ ಧರ್ಮಗಳಿಗೆ ಏಕೆ ಮಾರ್ಗದರ್ಶನ ಮಾಡುವುದಿಲ್ಲ? ಹಿಂದೂಗಳು ಸಹಿಷ್ಣುರು, ಆದ್ದರಿಂದ ಅವರನ್ನು ಸಾಫ್ಟ್ ಟಾರ್ಗೆಟ್ ಮಾಡಲಾಗುತ್ತದೆ. ಎಲ್ಲ ಹಿಂದೂಗಳು ಇದನ್ನು ಸಂವಿಧಾನದ ಮಾರ್ಗದಿಂದ ಈ ಹೇಳಿಕೆಯನ್ನು ಬಲವಾಗಿ ವಿರೋಧಿಸುವುದು ಅವಶ್ಯಕ. ಸತೀಶ ಜಾರಕಿಹೊಳಿ ಯವರು ಈ ಹೇಳಿಕೆ ಬಗ್ಗೆ ನಾಡಿನ ಸಮಸ್ತ ಹಿಂದೂಗಳಲ್ಲಿ ಕ್ಷಮೆಯಾಚಿಸಬೇಕು ಎಂದು ಹಿಂದೂ ಜನಜಾಗೃತಿ ಸಮಿತಿಯ ರಾಜ್ಯವಕ್ತಾರ ಶ್ರೀ ಮೋಹನ ಗೌಡ ಆಗ್ರಹಿಸಿದ್ದಾರೆ.

Spread the love
  • Related Posts

    ನ್ಯಾಯವಾದಿಗಳ ಸೌಹಾರ್ದ ಸಹಕಾರಿ ಸಂಘ ನಿಯಮಿತ ಇದರ ಬಂಟ್ವಾಳದ ನೂತನ ಶಾಖೆ ಉದ್ಘಾಟನೆ

    ಮಂಗಳೂರು: ನ್ಯಾಯವಾದಿಗಳ ಸೌಹಾರ್ದ ಸಹಕಾರಿ ಸಂಘ ನಿಯಮಿತ ಇದರ ಬಂಟ್ವಾಳದ ನೂತನ ಶಾಖೆಯು ಬಂಟ್ವಾಳದ ನ್ಯಾಯಾಲಯದ ಆವರಣದಲ್ಲಿ ಇಂದು ಉದ್ಘಾಟನೆಗೊಂಡಿದ್ದು, ಬಂಟ್ವಾಳದ ನೂತನ ಶಾಖೆಯ ಕಚೇರಿಯನ್ನು ಮಂಗಳೂರು ವಕೀಲರ ಸಂಘದ ಮಾಜಿ ಅಧ್ಯಕ್ಷರಾದ ಶ್ರೀ ಎಸ್ ಪಿ ಚಂಗಪ್ಪ ರವರು ಉದ್ಘಾಟಿಸಿದರು.…

    Spread the love

    ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ 54ನೇ ವರ್ಷದ ಉಚಿತ ಸಾಮೂಹಿಕ ವಿವಾಹ ಸಮಾರಂಭದ ವೈಭವ,106ಜೋಡಿ ಸಪ್ತಪದಿ ತುಳಿದು ದಾಂಪತ್ಯ ಜೀವನಕ್ಕೆ ಪಾದಾರ್ಪಣೆ

    ಧರ್ಮಸ್ಥಳ: ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಬುಧವಾರ ಸಂಜೆ ಗಂಟೆ 6.40ರ ಗೋಧೂಳಿ ಲಗ್ನ ಸುಮುಹೂರ್ತದಲ್ಲಿ ಅಮೃತವರ್ಷಿಣಿ ಸಭಾಭವನದಲ್ಲಿ ನಡೆದ 54ನೇ ವರ್ಷದ ಉಚಿತ ಸಾಮೂಹಿಕ ವಿವಾಹ ಸಮಾರಂಭದಲ್ಲಿ 106 ಜೊತೆ ವಧೂ-ವರರು ದಾಂಪತ್ಯ ಜೀವನಕ್ಕೆ ಪಾದಾರ್ಪಣೆ ಮಾಡಿದರು. ಬುಧವಾರ ಬೆಳಿಗ್ಗೆ ಧರ್ಮಾಧಿಕಾರಿ…

    Spread the love

    You Missed

    ನ್ಯಾಯವಾದಿಗಳ ಸೌಹಾರ್ದ ಸಹಕಾರಿ ಸಂಘ ನಿಯಮಿತ ಇದರ ಬಂಟ್ವಾಳದ ನೂತನ ಶಾಖೆ ಉದ್ಘಾಟನೆ

    • By admin
    • April 30, 2026
    • 153 views
    ನ್ಯಾಯವಾದಿಗಳ ಸೌಹಾರ್ದ ಸಹಕಾರಿ ಸಂಘ ನಿಯಮಿತ ಇದರ ಬಂಟ್ವಾಳದ ನೂತನ ಶಾಖೆ ಉದ್ಘಾಟನೆ

    ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ 54ನೇ ವರ್ಷದ ಉಚಿತ ಸಾಮೂಹಿಕ ವಿವಾಹ ಸಮಾರಂಭದ ವೈಭವ,106ಜೋಡಿ ಸಪ್ತಪದಿ ತುಳಿದು ದಾಂಪತ್ಯ ಜೀವನಕ್ಕೆ ಪಾದಾರ್ಪಣೆ

    • By admin
    • April 29, 2026
    • 35 views
    ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ 54ನೇ ವರ್ಷದ ಉಚಿತ ಸಾಮೂಹಿಕ ವಿವಾಹ ಸಮಾರಂಭದ ವೈಭವ,106ಜೋಡಿ ಸಪ್ತಪದಿ ತುಳಿದು ದಾಂಪತ್ಯ ಜೀವನಕ್ಕೆ ಪಾದಾರ್ಪಣೆ

    ಬೆಂಗಳೂರಿನಲ್ಲಿ ಘನಘೋರ ದುರಂತ ಬೌರಿಂಗ್ ಆಸ್ಪತ್ರೆಯ ಕೌಂಪೌಂಡು ಕುಸಿದು ಮೂವರು ಮಕ್ಕಳ ಸಹಿತ 8ಮಂದಿಯ ದುರ್ಮರಣ

    • By admin
    • April 29, 2026
    • 49 views
    ಬೆಂಗಳೂರಿನಲ್ಲಿ ಘನಘೋರ ದುರಂತ ಬೌರಿಂಗ್ ಆಸ್ಪತ್ರೆಯ ಕೌಂಪೌಂಡು ಕುಸಿದು ಮೂವರು ಮಕ್ಕಳ ಸಹಿತ 8ಮಂದಿಯ   ದುರ್ಮರಣ

    ಕುಂಟುತ್ತಿರುವ ಕಾಮಗಾರಿಯಿಂದ ಬಿಸಿಲ ಬೇಗೆಗೆ ಬೆಂಡಾದ ಜನ: ಟ್ರಾಫಿಕ್ ಜಾಮ್ ನಿಂದ ಹೈರಾಣಾದ ಜನ

    • By admin
    • April 29, 2026
    • 99 views
    ಕುಂಟುತ್ತಿರುವ ಕಾಮಗಾರಿಯಿಂದ ಬಿಸಿಲ ಬೇಗೆಗೆ ಬೆಂಡಾದ ಜನ: ಟ್ರಾಫಿಕ್ ಜಾಮ್ ನಿಂದ ಹೈರಾಣಾದ ಜನ

    ಬಿರು ಬಿಸಿಲಿನಲ್ಲಿ ಪ್ರಾಣಿ–ಪಕ್ಷಿಗಳಿಗೆ ನೀರುಣಿಸುವ ಮಹತ್ವದ ಕಾರ್ಯಕ್ಕೆ ಮುಂದಾಗೋಣ

    • By admin
    • April 29, 2026
    • 45 views
    ಬಿರು ಬಿಸಿಲಿನಲ್ಲಿ ಪ್ರಾಣಿ–ಪಕ್ಷಿಗಳಿಗೆ ನೀರುಣಿಸುವ ಮಹತ್ವದ ಕಾರ್ಯಕ್ಕೆ ಮುಂದಾಗೋಣ

    ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸೇವಾ ಟ್ರಸ್ಟ್ (ರಿ) ಬೆಳ್ತಂಗಡಿ ಇದರ ವತಿಯಿಂದ ಕು.ಪ್ರಾಪ್ತಿ ಎಂ ಗೌಡರಿಗೆ ಗೌರವ ಸನ್ಮಾನ

    • By admin
    • April 28, 2026
    • 84 views
    ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸೇವಾ ಟ್ರಸ್ಟ್ (ರಿ) ಬೆಳ್ತಂಗಡಿ ಇದರ ವತಿಯಿಂದ ಕು.ಪ್ರಾಪ್ತಿ ಎಂ ಗೌಡರಿಗೆ ಗೌರವ ಸನ್ಮಾನ