ಕರಾವಳಿಯ ತುಳುನಾಡಿನಾದ್ಯಂತ ನಾಗರಪಂಚಮಿಯ ಸಡಗರ

ಮಂಗಳೂರು: ಕರಾವಳಿಯಾಧ್ಯಂತ ತುಳುನಾಡಿನ ಜನತೆ ನಾಗಾರಾಧನೆಗೆ ಹೆಚ್ಚಿನ ಮಹತ್ವವನ್ನು ನೀಡುತ್ತಿದ್ದು ಇಂದು ಎಲ್ಲರಿಗೂ ಹಬ್ಬದ ಸಡಗರ ಆಷಾಢ ಮಾಸ ಕಳೆದ ನಂತರ ಶ್ರಾವಣ ಮಾಸದಲ್ಲಿ ಬರುವ ಹಬ್ಬ ನಾಗರ ಪಂಚಮಿಯಾಗಿದೆ ಈ ದಿನದ ವಿಶೇಷತೆ ವೈಶಿಷ್ಟ್ಯತೆಯನ್ನು ನಾವೇಲ್ಲರು ತಿಳಿಯಬೇಕಾಗಿದೆ.

ಆಸ್ತಿಕ ಋಷಿಯು ಸರ್ಪಯಜ್ಞ ಮಾಡುವ ಜನಮೇಜಯ ರಾಜನನ್ನು ಪ್ರಸನ್ನಗೊಳಿಸಿಕೊಂಡನು. ಜನಮೇಜಯ ರಾಜನು ‘ವರವನ್ನು ಕೇಳು’ ಎಂದು ಹೇಳಿದಾಗ, ಆಸ್ತಿಕನು ಸರ್ಪಯಜ್ಞವನ್ನು ನಿಲ್ಲಿಸಬೇಕು ಎಂಬ ವರವನ್ನು ಕೇಳಿಕೊಂಡನು. ಜನಮೇಜಯನು ಸರ್ಪಯಜ್ಞವನ್ನು ನಿಲ್ಲಿಸಿದ ದಿನವು ಪಂಚಮಿಯಾಗಿತ್ತು.

ನಾಗರಪಂಚಮಿ – ಸಾತ್ತ್ವಿಕತೆ ಗ್ರಹಿಸಲು ಉಪಯುಕ್ತ ಕಾಲ

ಪಂಚಪ್ರಾಣಗಳೇ ಪಂಚನಾಗಗಳಾಗಿವೆ. ನಾಗರಪಂಚಮಿಯ ದಿನದಲ್ಲಿ ವಾತಾವರಣವು ಸ್ಥಿರವಾಗಿರುತ್ತದೆ. ಸಾತ್ತ್ವಿಕತೆಯನ್ನು ಗ್ರಹಿಸಲು ಈ ಕಾಲವು ಅತ್ಯಂತ ಯೋಗ್ಯ ಮತ್ತು ಬಹಳ ಉಪಯುಕ್ತವಾಗಿದೆ. ಈ ದಿನದಂದು ಶೇಷನಾಗ ಮತ್ತು ಶ್ರೀವಿಷ್ಣುವಿಗೆ ಮುಂದಿನಂತೆ ಪ್ರಾರ್ಥನೆ ಮಾಡಬೇಕು – ‘ತಮ್ಮ ಕೃಪೆಯಿಂದ ಈ ದಿನದಂದು ಶಿವ ಲೋಕದಿಂದ ಪ್ರಕ್ಷೇಪಿತವಾಗುವ ಲಹರಿಗಳು ನನ್ನಿಂದ ಹೆಚ್ಚೆಚ್ಚು ಗ್ರಹಣವಾಗಲಿ. ನನ್ನ ಆಧ್ಯಾತ್ಮಿಕ ಪ್ರಗತಿಗೆ ಎದುರಾಗುವ ಎಲ್ಲ ಅಡಚಣೆಗಳೂ ನಾಶವಾಗಲಿ. ದೇವತೆಗಳ ಶಕ್ತಿಯು ನನ್ನ ಪಂಚಪ್ರಾಣಗಳಲ್ಲಿ ಸಂಗ್ರಹವಾಗಿ ಅದು ಈಶ್ವರ ಪ್ರಾಪ್ತಿಗಾಗಿ ಮತ್ತು ರಾಷ್ಟ್ರ ರಕ್ಷಣೆಗಾಗಿ ಉಪಯೋಗವಾಗಲಿ. ನನ್ನ ಪಂಚಪ್ರಾಣದ ಶುದ್ಧಿಯಾಗಲಿ.’ ನಾಗದೇವತೆಯು ಸಂಪೂರ್ಣ ಬ್ರಹ್ಮಾಂಡದ ಕುಂಡಲಿನಿಯಾಗಿದ್ದಾನೆ. ಪಂಚಪ್ರಾಣ ವೆಂದರೆ ಪಂಚಭೌತಿಕ ತತ್ತ್ವದಿಂದ ಉಂಟಾದ ಶರೀರದ ಸೂಕ್ಷ್ಮರೂಪವಾಗಿದೆ. ಸ್ಥೂಲ ದೇಹವು ಪ್ರಾಣಹೀನವಾಗಿದೆ ಮತ್ತು ಸ್ಥೂಲ ದೇಹದಲ್ಲಿ ಚಲಿಸುವ ಪ್ರಾಣವಾಯುವು ಪಂಚಪ್ರಾಣದಿಂದ ಬರುತ್ತದೆ.

ನಾಗರಪಂಚಮಿಯಂದು ಮಾಡಿದ ಉಪವಾಸದ ಮಹತ್ವ

೫ ಯುಗಗಳ ಹಿಂದೆ ಸತ್ಯೇಶ್ವರೀ ಎಂಬ ಹೆಸರಿನ ಕನಿಷ್ಠ ದೇವಿಯಿದ್ದಳು. ಸತ್ಯೇಶ್ವರನು ಅವಳ ಸಹೋದರನಾಗಿದ್ದನು. ಸತ್ಯೇಶ್ವರನು ನಾಗರಪಂಚಮಿಯ ಹಿಂದಿನ ದಿನ ಮೃತ್ಯು ಹೊಂದಿದನು. ಆಗ ಸಹೋದರನ ಮೃತ್ಯುವಿನ ಶೋಕದಲ್ಲಿ ಸತ್ಯೇಶ್ವರಿಯು ಆಹಾರವನ್ನು ಸ್ವೀಕರಿಸಲಿಲ್ಲ. ಆದುದರಿಂದ ಆ ದಿನ ಸ್ತ್ರೀಯರು ಸಹೋದರನ ಹೆಸರಿನಲ್ಲಿ ಉಪವಾಸ ಮಾಡುತ್ತಾರೆ. ‘ಸಹೋದರನಿಗೆ ಅಖಂಡ ಆಯುಷ್ಯವು ದೊರಕಲಿ, ಅನೇಕ ಆಯುಧಗಳು ಪ್ರಾಪ್ತವಾಗಲಿ ಮತ್ತು ಅವನು ಪ್ರತಿಯೊಂದು ದುಃಖ ಮತ್ತು ಸಂಕಟಗಳಿಂದ ಪಾರಾಗಲಿ’ ಎನ್ನುವುದು ಸಹ ಈ ಉಪವಾಸದ ಹಿಂದಿನ ಕಾರಣವಾಗಿದೆ. ನಾಗರಪಂಚಮಿಯ ಹಿಂದಿನ ದಿನ ಪ್ರತಿಯೊಬ್ಬ ಸಹೋದರಿಯು ದೇವರಲ್ಲಿ ಮೊರೆ ಇಡುವುದರಿಂದ ಅವಳ ಸಹೋದರನಿಗೆ ಲಾಭವಾಗುತ್ತದೆ ಮತ್ತು ಅವನ ರಕ್ಷಣೆಯಾಗುತ್ತದೆ.

ನಾಗನ ಪೂಜೆ ಮಾಡುವುದರ ಹಿಂದಿನ ಶಾಸ್ತ್ರ

ಸತ್ಯೇಶ್ವರಿಗೆ ಅವಳ ಸಹೋದರನು ನಾಗರೂಪದಲ್ಲಿ ಕಂಡನು. ಆಗ ಅವಳು ಆ ನಾಗರೂಪವನ್ನು ತನ್ನ ಸಹೋದರನೆಂದು ಭಾವಿಸಿದಳು. ಆಗ ನಾಗದೇವನು, ನನ್ನನ್ನು ಸಹೋದರನೆಂದು ಭಾವಿಸಿ ಪೂಜೆ ಮಾಡಿದ ಸಹೋದರಿಯ ರಕ್ಷಣೆಯನ್ನು ನಾನು ಮಾಡುವೆನು ಎಂದು ಅವಳಿಗೆ ವಚನ ನೀಡಿದನು. ಆದುದರಿಂದಲೇ ಆ ದಿನ ಪ್ರತಿಯೊಬ್ಬ ಸ್ತ್ರೀಯು ನಾಗನ ಪೂಜೆ ಮಾಡಿ ನಾಗರಪಂಚಮಿಯನ್ನು ಆಚರಿಸುತ್ತಾಳೆ.

ನಾಗನ ಮಹಾತ್ಮೆ

೧. ‘ಶೇಷನಾಗನು ಪಾತಾಳದಲ್ಲಿ ವಾಸಿಸುತ್ತಾನೆ. ಅವನು ತನ್ನ ಹೆಡೆಯ ಮೇಲೆ ಪೃಥ್ವಿಯನ್ನು ಧರಿಸಿದ್ದಾನೆ. ಅವನಿಗೆ ಸಹಸ್ರ ಹೆಡೆಗಳಿವೆ. ಪ್ರತಿಯೊಂದು ಹೆಡೆಯ ಮೇಲೆ ಒಂದು ವಜ್ರವಿದೆ. ಅವನು ಶ್ರೀವಿಷ್ಣುವಿನ ತಮೋಗುಣದಿಂದ ಉತ್ಪನ್ನವಾಗಿದ್ದಾನೆ. ಪ್ರತಿಯೊಂದು ಕಲ್ಪದ ಅಂತ್ಯದಲ್ಲಿ ಶ್ರೀವಿಷ್ಣು ಮಹಾಸಾಗರದಲ್ಲಿ ಶೇಷಾಸನದ ಮೇಲೆ ಶಯನ ಮಾಡುತ್ತಾನೆ. ತ್ರೇತಾಯುಗದಲ್ಲಿ ಶ್ರೀವಿಷ್ಣು ರಾಮನ ಅವತಾರವನ್ನು ತೆಗೆದುಕೊಂಡಾಗ ಶೇಷನು ಲಕ್ಷ್ಮಣನ ಅವತಾರವನ್ನು ತೆಗೆದುಕೊಂಡಿದ್ದನು. ದ್ವಾಪರ ಮತ್ತು ಕಲಿಯುಗದ ಸಂಧಿಕಾಲದಲ್ಲಿ ಕೃಷ್ಣನ ಅವತಾರವಾದಾಗ ಶೇಷನು ಬಲರಾಮನಾಗಿದ್ದನು.

೨. ‘ಶ್ರೀಕೃಷ್ಣನು ಯಮುನಾ ನದಿಯ ಆಳದಲ್ಲಿದ್ದ ಕಾಲಿಯಾ ನಾಗನನ್ನು ಮರ್ದನ ಮಾಡಿದನು. ಆ ದಿನವು ಶ್ರಾವಣ ಶುಕ್ಲ ಪಂಚಮಿಯಾಗಿತ್ತು.

೩. ‘ನಾಗಗಳಲ್ಲಿನ ಶ್ರೇಷ್ಠನಾದ ‘ಅನಂತ’ನೇ ನಾನು’, ಎಂದು ಗೀತೆಯಲ್ಲಿ (೧೦.೨೯) ಶ್ರೀಕೃಷ್ಣ ತನ್ನ ವಿಭೂತಿಯನ್ನು ಹೇಳುತ್ತಾನೆ.

ಅನಂತಂ ವಾಸುಕಿಂ ಶೇಷಂ ಪದ್ಮನಾಭಂ ಚ ಕಂಬಲಮ್|
ಶಂಖಪಾಲಂ ಧೃತರಾಷ್ಟ್ರಂ ತಕ್ಷಕಂ, ಕಾಲಿಯಂ ತಥಾ||

ಅನಂತ, ವಾಸುಕೀ, ಶೇಷ, ಪದ್ಮನಾಭ, ಕಂಬಲ, ಶಂಖಪಾಲ, ಧೃತರಾಷ್ಟ್ರ, ತಕ್ಷಕ ಮತ್ತು ಕಾಲಿಯಾ ಹೀಗೆ ಒಂಭತ್ತು ಜಾತಿಯ ನಾಗಗಳ ಆರಾಧನೆಯನ್ನು ಮಾಡುತ್ತಾರೆ. ಇದರಿಂದ ಸರ್ಪಭಯವಿರುವುದಿಲ್ಲ ಮತ್ತು ವಿಷದಿಂದ ತೊಂದರೆಯಾಗುವುದಿಲ್ಲ.’

ನಾಗರಪಂಚಮಿಯ ದಿನ ಅರಿಶಿನ ಅಥವಾ ರಕ್ತಚಂದನದಿಂದ ಮಣೆಯ ಮೇಲೆ ನವನಾಗಗಳ ಆಕೃತಿಗಳನ್ನು ಬಿಡಿಸಿ ಅವುಗಳ ಪೂಜೆಯನ್ನು ಮಾಡಿ ಹಾಲು ಮತ್ತು ಅರಳಿನ ನೈವೇದ್ಯವನ್ನು ಅರ್ಪಿಸಬೇಕು. ನವನಾಗಗಳು ಪವಿತ್ರಕಗಳ ಒಂಬತ್ತು ಪ್ರಮುಖ ಗುಂಪುಗಳಾಗಿವೆ. ಪವಿತ್ರಕಗಳೆಂದರೆ ಸೂಕ್ಷ್ಮಾತಿಸೂಕ್ಷ್ಮ ದೈವೀ ಕಣಗಳು (ಚೈತನ್ಯಕಣಗಳು).

‘ಜಗತ್ತಿನಲ್ಲಿನ ಎಲ್ಲಾ ಜೀವಜಂತುಗಳು ಜಗತ್ತಿನ ಕಾರ್ಯಕ್ಕಾಗಿ ಪೂರಕವಾಗಿವೆ. ನಾಗರಪಂಚಮಿಯ ದಿನ ನಾಗಗಳ ಪೂಜೆಯಿಂದ ‘ಭಗವಂತನು ಅವುಗಳ ಮೂಲಕ ಕಾರ್ಯವನ್ನು ಮಾಡುತ್ತಿದ್ದಾನೆ’, ಎಂಬ ವಿಶಾಲ ದೃಷ್ಟಿಕೋನವನ್ನಿಡಲು ಕಲಿಯುವುದಿರುತ್ತದೆ.’

ಈ ದಿನ ಯಾವ ಕೆಲಸ ಕಾರ್ಯ ಮಾಡಬಾರದು

ನಾಗರಪಂಚಮಿಯ ದಿನ ಏನನ್ನೂ ಹೆಚ್ಚಬಾರದು, ಕೊಯ್ಯಬಾರದು, ಕರಿಯಬಾರದು, ಒಲೆಯ ಮೇಲೆ ತವೆಯನ್ನು ಇಡಬಾರದು ಮುಂತಾದ ನಿಯಮಗಳನ್ನು ಪಾಲಿಸಬೇಕು. ಈ ದಿನ ಭೂಮಿಯನ್ನು ಅಗೆಯಬಾರದು.

ಕೃಪೆ:- ಸನಾತನ ಧರ್ಮ ಗ್ರಂಥ

Spread the love
  • Related Posts

    ಬೆಳ್ತಂಗಡಿ ನೂತನ ನ್ಯಾಯಾಲಯ ಸಂಕೀರ್ಣದ ಶಂಕುಸ್ಥಾಪನೆ

    ಬೆಳ್ತಂಗಡಿ: ಜಿಲ್ಲಾ ನ್ಯಾಯಾಂಗ, ದ.ಕ ಲೋಕೋಪಯೋಗಿ ಇಲಾಖೆ ಹಾಗೂ ವಕೀಲರ ಸಂಘ ಬೆಳ್ತಂಗಡಿ ಇವರ ಸಂಯುಕ್ತ ಆಶ್ರಯದಲ್ಲಿ ಬೆಳ್ತಂಗಡಿ ತಾಲೂಕಿನ ಜನತೆ ಮತ್ತು ವಕೀಲರ ಸಂಘದ ಬಹುದಿನಗಳ ಬೇಡಿಕೆಯಾಗಿದ್ದ ನೂತನ ನ್ಯಾಯಾಲಯ ಸಂಕೀರ್ಣಕ್ಕೆ ಕರ್ನಾಟಕ ಸರಕಾರಕ್ಕೆ ಸಲ್ಲಿಸಲಾದ ಸುಮಾರು 23 ಕೋಟಿ…

    Spread the love

    ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ಬೆಳ್ತಂಗಡಿ ತಾಲೂಕು ಘಟಕ ರಚನೆ: ನಿಶಾನ್ ಬಂಗೇರ ನಾರ್ಯ ಅಧ್ಯಕ್ಷರಾಗಿ ಆಯ್ಕೆ

    ಬೆಳ್ತಂಗಡಿ, ಜೂನ್ 13: ಸ್ಥಳೀಯ ಪತ್ರಿಕೋದ್ಯಮವನ್ನು ಮತ್ತಷ್ಟು ಬಲಪಡಿಸುವ ಹಾಗೂ ಪತ್ರಕರ್ತರ ಹಿತರಕ್ಷಣೆಗೆ ಒತ್ತು ನೀಡುವ ಉದ್ದೇಶದಿಂದ ಕರ್ನಾಟಕ ಜರ್ನಲಿಸ್ಟ್ ಯೂನಿಯನ್‌ನ ಬೆಳ್ತಂಗಡಿ ತಾಲೂಕು ಘಟಕದ 2026-27ನೇ ಸಾಲಿನ ನೂತನ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ಯಶಸ್ವಿಯಾಗಿ ನಡೆಯಿತು. ಸಂಘದ ಮುಂದಿನ ಅವಧಿಗೆ…

    Spread the love

    You Missed

    ಬೆಳ್ತಂಗಡಿ ನೂತನ ನ್ಯಾಯಾಲಯ ಸಂಕೀರ್ಣದ ಶಂಕುಸ್ಥಾಪನೆ

    • By admin
    • June 14, 2026
    • 30 views
    ಬೆಳ್ತಂಗಡಿ ನೂತನ ನ್ಯಾಯಾಲಯ ಸಂಕೀರ್ಣದ ಶಂಕುಸ್ಥಾಪನೆ

    ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ಬೆಳ್ತಂಗಡಿ ತಾಲೂಕು ಘಟಕ ರಚನೆ: ನಿಶಾನ್ ಬಂಗೇರ ನಾರ್ಯ ಅಧ್ಯಕ್ಷರಾಗಿ ಆಯ್ಕೆ

    • By admin
    • June 13, 2026
    • 76 views
    ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ಬೆಳ್ತಂಗಡಿ ತಾಲೂಕು ಘಟಕ ರಚನೆ: ನಿಶಾನ್ ಬಂಗೇರ ನಾರ್ಯ ಅಧ್ಯಕ್ಷರಾಗಿ ಆಯ್ಕೆ

    ಓರಿಯಂಟೇಶನ್ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಿಗೆ ಯಶಸ್ಸಿನ ಮಂತ್ರ, ಶ್ರದ್ಧೆ ಮತ್ತು ಪರಿಶ್ರಮದಿಂದ ಉಜ್ವಲ ಭವಿಷ್ಯ ಸಾಧ್ಯ: ಸ್ಮಿತೇಶ್ ಬಾರ್ಯ

    • By admin
    • June 13, 2026
    • 25 views
    ಓರಿಯಂಟೇಶನ್ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಿಗೆ ಯಶಸ್ಸಿನ ಮಂತ್ರ, ಶ್ರದ್ಧೆ ಮತ್ತು ಪರಿಶ್ರಮದಿಂದ ಉಜ್ವಲ ಭವಿಷ್ಯ ಸಾಧ್ಯ: ಸ್ಮಿತೇಶ್ ಬಾರ್ಯ

    ಸ್ಪರ್ಧಾತ್ಮಕ ಪರೀಕ್ಷೆಗಳತ್ತ ವಿದ್ಯಾರ್ಥಿಗಳನ್ನು ಪ್ರೇರೇಪಿಸುವ ಒಲಿಂಪಿಯಾಡ್ ಕಾರ್ಯಕ್ರಮ,ಸಾಧಕ ವಿದ್ಯಾರ್ಥಿಗಳಿಗೆ ಪ್ರಮಾಣಪತ್ರ ವಿತರಣೆ

    • By admin
    • June 13, 2026
    • 62 views
    ಸ್ಪರ್ಧಾತ್ಮಕ ಪರೀಕ್ಷೆಗಳತ್ತ ವಿದ್ಯಾರ್ಥಿಗಳನ್ನು ಪ್ರೇರೇಪಿಸುವ ಒಲಿಂಪಿಯಾಡ್ ಕಾರ್ಯಕ್ರಮ,ಸಾಧಕ ವಿದ್ಯಾರ್ಥಿಗಳಿಗೆ ಪ್ರಮಾಣಪತ್ರ ವಿತರಣೆ

    ಬೆಳ್ತಂಗಡಿ ನರಸಿಂಹಗಡ (ಗಡಾಯಿಕಲ್ಲು) ಚಾರಣಕ್ಕೆ ಪ್ರವಾಸಿಗರಿಗೆ ನಿಷೇಧ ಹೇರಿದ ಅರಣ್ಯ ಇಲಾಖೆ!!!

    • By admin
    • June 13, 2026
    • 21 views
    ಬೆಳ್ತಂಗಡಿ ನರಸಿಂಹಗಡ (ಗಡಾಯಿಕಲ್ಲು) ಚಾರಣಕ್ಕೆ ಪ್ರವಾಸಿಗರಿಗೆ ನಿಷೇಧ ಹೇರಿದ ಅರಣ್ಯ ಇಲಾಖೆ!!!

    ಲ್ಯಾಂಡಿಂಗ್ ವೇಳೆ ದುರಂತ: ಬೆಂಕಿಗಾಹುತಿಯಾದ ವಾಯುಪಡೆಯ AN-32 ವಿಮಾನ

    • By admin
    • June 13, 2026
    • 191 views
    ಲ್ಯಾಂಡಿಂಗ್ ವೇಳೆ ದುರಂತ: ಬೆಂಕಿಗಾಹುತಿಯಾದ ವಾಯುಪಡೆಯ AN-32 ವಿಮಾನ