ಒಂದರಿಂದ ನಾಲ್ಕನೇ ತರಗತಿಗಳ ವಿದ್ಯಾರ್ಥಿಗಳಿಗೆ ಆಕಾಶವಾಣಿ‌ಯಲ್ಲಿ ನಲಿಕಲಿ ಮತ್ತು ಕಲಿನಲಿ ಕಾರ್ಯಕ್ರಮ


ಬೆಂಗಳೂರು: ರಾಜ್ಯದ ಒಂದರಿಂದ ನಾಲ್ಕನೇ ತರಗತಿ ವರೆಗಿನ ವಿದ್ಯಾರ್ಥಿಗಳನ್ನು ಗಮನದಲ್ಲಿಟ್ಟುಕೊಂಡು ಶಿಕ್ಷಣ ಇಲಾಖೆಯು ಆಕಾಶವಾಣಿ‌ಯಲ್ಲಿ ನಲಿಕಲಿ ಮತ್ತು ಕಲಿನಲಿ ಕಾರ್ಯಕ್ರಮ‌ಗಳನ್ನು ಜ. 11 ರಿಂದ ತೊಡಗಿದಂತೆ ಎ. 5 ರ ವರೆಗೆ ಪ್ರಸಾರ ಮಾಡಲಿರುವುದಾಗಿ ಸಚಿವ ಸುರೇಶ್ ಕುಮಾರ್ ಮಾಹಿತಿ ನೀಡಿದ್ದಾರೆ.

ಸೋಮವಾರದಿಂದ ಶುಕ್ರವಾರದ ವರೆಗೂ ಈ ಕಾರ್ಯಕ್ರಮ ನಡೆಯಲಿದೆ. ಕಲಿಯುತ್ತಾ ನಲಿಯೋಣ ಎಂಬ ಹೆಸರಿನಲ್ಲಿ ಆಕಾಶವಾಣಿ ಈ ಕಾರ್ಯಕ್ರಮ‌ವನ್ನು ಪ್ರಸಾರ ಮಾಡಲಿದೆ. ನಿತ್ಯ ಬೆಳಿಗ್ಗೆ 10 ಗಂಟೆಯಿಂದ 10.15 ರ ವರೆಗೆ ಒಂದು ಮತ್ತು ಎರಡನೇ ತರಗತಿಗಳಿಗಾಗಿ ಹಾಗೂ 10.15 ರಿಂದ 10.30 ರ ವರೆಗೆ 3 ಮತ್ತು 4ನೇ ತರಗತಿ ಗಳಿಗಾಗಿ ಹಾಡು, ಕಥೆ, ನಾಟಕ, ಸಂಭಾಷಣೆ, ಒಗಟು, ಮತ್ತು ವಿವಿಧ ಆಸಕ್ತಿಕರ ಕಾರ್ಯಕ್ರಮಗಳ ಮೂಲಕ ಆಯಾ ತರಗತಿಗಳ ಮಕ್ಕಳ ಕಲಿಕೆ ಮುಂದುವರಿಯುವಂತೆ ಮಾಡಲು ಶಿಕ್ಷಣ ಇಲಾಖೆ ಈ ಪ್ರಯತ್ನ‌ಕ್ಕೆ ಮುಂದಾಗಿರುವುದಾಗಿ ಸಚಿವರು ಮಾಹಿತಿ ನೀಡಿದ್ದಾರೆ.

ಅದರೊಂದಿಗೆ ಈ ಕಾರ್ಯಕ್ರಮ‌ದಲ್ಲಿ ವಿದ್ಯಾರ್ಥಿಗಳಿಗೂ ಭಾಗವಹಿಸಲು ಅವಕಾಶ‌ವಿದ್ದು, ಪೋಷಕರು ತಮ್ಮ ಮಕ್ಕಳಿಂದ ಯಾವುದಾದರೂ ಕತೆ ಹಾಡು ಒಗಟು ಹೇಳಿಸಿ whatsapp ನಂಬರ್ 9449417612 ಗೆ ಕಳುಹಿಸಿದರೆ , ಅದನ್ನು ಪ್ರಸಾರ ಮಾಡಲಾಗುವುದು ಎಂದು ತಿಳಿಸಿದ್ದಾರೆ. ರಾಜ್ಯದ 13 ಆಕಾಶವಾಣಿ ಕೇಂದ್ರಗಳು ಈ ಕಾರ್ಯಕ್ರಮ‌ವನ್ನು ಪ್ರಸಾರ ಮಾಡಲಿದ್ದು, ಆ ಬಳಿಕ ಯೂಟ್ಯೂಬ್ ನಲ್ಲಿ ಈ ಕಾರ್ಯಕ್ರಮ ವೀಕ್ಷಿಸಲು ಅವಕಾಶ ಇರುವುದಾಗಿಯೂ ಸಚಿವರು ಮಾಹಿತಿ ನೀಡಿದ್ದಾರೆ.

Spread the love
  • Related Posts

    ಬೆಳ್ತಂಗಡಿ : ಎಸ್ಐಟಿ ಎಸ್ಪಿ ಪ್ರಯಾಣಿಸುತ್ತಿದ್ದ ಇನೋವಾ ಕಾರು ಪಲ್ಟಿ, ಎಸ್ಪಿ ಸಹಿತ ನಾಲ್ವರು ಅಪಾಯದಿಂದ ಪಾರು

    ಬೆಳ್ತಂಗಡಿ : ಬುರುಡೆ ಪ್ರಕರಣದ ಎಸ್ಐಟಿ ತಂಡದ ಎಸ್ಪಿ ಮತ್ತು ಇತರ ಅಧಿಕಾರಿಗಳು ಪ್ರಯಾಣಿಸುತ್ತಿದ್ದ ಇನೋವಾ ಕಾರು ಚಾರ್ಮಾಡಿಯಲ್ಲಿ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಬೆಳ್ತಂಗಡಿ ಎಸ್ಐಟಿ ಕಚೇರಿಯಿಂದ ಎಸ್ಪಿ ಸಿ.ಎ.ಸೈಮನ್ , ಇನ್ಸ್‌ಪೆಕ್ಟರ್ ಕುಸುಮಾಧರ್, ಸಿಬ್ಬಂದಿ ಮಂಜುನಾಥ್ ಸೇರಿ ಚಿಕ್ಕಮಗಳೂರು ಜಿಲ್ಲಾ…

    Spread the love

    ದೇವಸ್ಥಾನಗಳು ಭಜನೆ, ಸಂಸ್ಕಾರ ಮತ್ತು ಭಕ್ತಿಯ ಕೇಂದ್ರವಾಗಲಿ : ಡಾ. ನವೀನ್ ಚಂದ್ರ ಶೆಟ್ಟಿ

    ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಮಡಬಲು ಶ್ರೀ ಬೀರಲಿಂಗೇಶ್ವರ ಸ್ವಾಮಿ ದೇವಸ್ಥಾನದ ಜೀರ್ಣೋದ್ಧಾರ ಕಾರ್ಯಕ್ಕೆ ₹2 ಲಕ್ಷ ಅನುದಾನ ವಿತರಣೆ ಸಕಲೇಶಪುರ: ತಾಲೂಕಿನ ಮಡಬಲು ಗ್ರಾಮದ ಐತಿಹಾಸಿಕ ಹಾಗೂ ಭಕ್ತರ ಆರಾಧನಾ ಕೇಂದ್ರವಾಗಿರುವ ಶ್ರೀ ಬೀರಲಿಂಗೇಶ್ವರ ಸ್ವಾಮಿ ದೇವಸ್ಥಾನದ ಜೀರ್ಣೋದ್ಧಾರ ಕಾರ್ಯಕ್ಕಾಗಿ ಶ್ರೀ…

    Spread the love

    You Missed

    ಬೆಳ್ತಂಗಡಿ : ಎಸ್ಐಟಿ ಎಸ್ಪಿ ಪ್ರಯಾಣಿಸುತ್ತಿದ್ದ ಇನೋವಾ ಕಾರು ಪಲ್ಟಿ, ಎಸ್ಪಿ ಸಹಿತ ನಾಲ್ವರು ಅಪಾಯದಿಂದ ಪಾರು

    • By admin
    • June 16, 2026
    • 90 views
    ಬೆಳ್ತಂಗಡಿ : ಎಸ್ಐಟಿ ಎಸ್ಪಿ ಪ್ರಯಾಣಿಸುತ್ತಿದ್ದ ಇನೋವಾ ಕಾರು ಪಲ್ಟಿ, ಎಸ್ಪಿ ಸಹಿತ ನಾಲ್ವರು ಅಪಾಯದಿಂದ ಪಾರು

    ದೇವಸ್ಥಾನಗಳು ಭಜನೆ, ಸಂಸ್ಕಾರ ಮತ್ತು ಭಕ್ತಿಯ ಕೇಂದ್ರವಾಗಲಿ : ಡಾ. ನವೀನ್ ಚಂದ್ರ ಶೆಟ್ಟಿ

    • By admin
    • June 16, 2026
    • 36 views
    ದೇವಸ್ಥಾನಗಳು ಭಜನೆ, ಸಂಸ್ಕಾರ ಮತ್ತು ಭಕ್ತಿಯ ಕೇಂದ್ರವಾಗಲಿ : ಡಾ. ನವೀನ್ ಚಂದ್ರ ಶೆಟ್ಟಿ

    ಐಸ್ ಹಾಕಿ ರಾಷ್ಟ್ರೀಯ ಚಾಂಪಿಯನ್‌ಶಿಪ್: ಕುತ್ಲೂರಿನ ನಿಷ್ಕ್ ಹರೀಶ್ ಸಾಲಿಯಾನ್‌ಗೆ ರಾಷ್ಟ್ರೀಯ ಬೆಳ್ಳಿ ಪದಕ

    • By admin
    • June 15, 2026
    • 138 views
    ಐಸ್ ಹಾಕಿ ರಾಷ್ಟ್ರೀಯ ಚಾಂಪಿಯನ್‌ಶಿಪ್: ಕುತ್ಲೂರಿನ ನಿಷ್ಕ್ ಹರೀಶ್ ಸಾಲಿಯಾನ್‌ಗೆ ರಾಷ್ಟ್ರೀಯ ಬೆಳ್ಳಿ ಪದಕ

    ಬೆಳ್ತಂಗಡಿ: ಚಾರ್ಮಾಡಿ ಗ್ರಾಮ ಪಂಚಾಯತ್ ಕಾರ್ಯದರ್ಶಿ ಜಯಕೀರ್ತಿ HB ನಿಧನ

    • By admin
    • June 15, 2026
    • 76 views
    ಬೆಳ್ತಂಗಡಿ: ಚಾರ್ಮಾಡಿ ಗ್ರಾಮ ಪಂಚಾಯತ್ ಕಾರ್ಯದರ್ಶಿ ಜಯಕೀರ್ತಿ HB ನಿಧನ

    ಬೆಳ್ತಂಗಡಿ ನೂತನ ನ್ಯಾಯಾಲಯ ಸಂಕೀರ್ಣದ ಶಂಕುಸ್ಥಾಪನೆ

    • By admin
    • June 14, 2026
    • 47 views
    ಬೆಳ್ತಂಗಡಿ ನೂತನ ನ್ಯಾಯಾಲಯ ಸಂಕೀರ್ಣದ ಶಂಕುಸ್ಥಾಪನೆ

    ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ಬೆಳ್ತಂಗಡಿ ತಾಲೂಕು ಘಟಕ ರಚನೆ: ನಿಶಾನ್ ಬಂಗೇರ ನಾರ್ಯ ಅಧ್ಯಕ್ಷರಾಗಿ ಆಯ್ಕೆ

    • By admin
    • June 13, 2026
    • 85 views
    ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ಬೆಳ್ತಂಗಡಿ ತಾಲೂಕು ಘಟಕ ರಚನೆ: ನಿಶಾನ್ ಬಂಗೇರ ನಾರ್ಯ ಅಧ್ಯಕ್ಷರಾಗಿ ಆಯ್ಕೆ