ಕೋಮು ಗಲಭೆಯಲ್ಲಿ ಆರ್​ಎಸ್​ಎಸ್​ ಮತ್ತು ಸಹ ಸಂಘಟನೆಗಳ ಪಾತ್ರ ಸಾಬೀತುಪಡಿಸಿ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಸವಾಲು

ಬೆಂಗಳೂರು: ಕೋಮು ಗಲಭೆಯಲ್ಲಿ ಆರ್​ಎಸ್​ಎಸ್​ ಮತ್ತು ಸಹ ಸಂಘಟನೆಗಳ ಪಾತ್ರ ಸಾಬೀತುಪಡಿಸಿ, ಇಲ್ಲವೇ ಬೇಷರತ್ ಕ್ಷಮೆ ಕೋರಿ ಎಂದು ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ರವರಿಗೆ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಸವಾಲು ಹಾಕಿದ್ದಾರೆ.

ಆರ್​ಎಸ್​ಎಸ್ ಮತ್ತು ಅದರ ಸಹ ಸಂಘಟನೆಗಳು ಕೋಮು ಗಲಭೆಯ ಸಂದರ್ಭದಲ್ಲಿ ಆಗಿರುವ ಹಾನಿಯನ್ನು ತುಂಬಿಕೊಡುವಂತೆ ಮಾಡಬೇಕು ಎಂಬ ಸಿದ್ದರಾಮಯ್ಯ ಅವರ ಹೇಳಿಕೆ ಅತಿರೇಕದಿಂದ ಕೂಡಿದೆ. ಯಾವುದೇ ತನಿಖಾ ಸಂಸ್ಥೆ ಅಥವಾ ವಿಚಾರಣಾ ನ್ಯಾಯಾಲಯಗಳು ದೇಶದ ಯಾವುದೇ ಭಾಗದಲ್ಲಿ ನಡೆದ ಕೋಮು ಗಲಭೆಗಳಲ್ಲಿ ಯಾವತ್ತೂ ಆರ್​ಎಸ್​ಎಸ್ ಅಥವಾ ಅದರ ಸಹ ಸಂಘಟನೆಗಳು ಕಾರಣ ಎಂದು ಹೇಳಿಲ್ಲ. ಆದರೆ, ಸಿದ್ದರಾಮಯ್ಯ ಈ ರೀತಿ ಆರೋಪ ಮಾಡುತ್ತಿದ್ದಾರೆ ಎಂದು ಕಟೀಲ್ ಕಟು ಶಬ್ದಗಳಿಂದ ಖಂಡಿಸಿದರು.

ಡಿ.ಜೆ.ಹಳ್ಳಿ ಮತ್ತು ಕೆ.ಜಿ.ಹಳ್ಳಿ ಗಲಭೆಯಿಂದ ಆದ ಹಾನಿಯನ್ನು ಗಲಭೆಕೋರರಿಂದ ವಸೂಲಿ ಮಾಡುವ ಸರ್ಕಾರದ ಕ್ರಮಕ್ಕೆ ಪ್ರತಿಯಾಗಿ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಗಳಿಗೆ ಕೆಲವು ದಿನಗಳ ಹಿಂದೆ ಬರೆದಿರುವ 13 ಅಂಶಗಳನ್ನೊಳಗೊಂಡ 2 ಪುಟಗಳ ಪತ್ರದಲ್ಲಿ ಸಂಘ ಪರಿವಾರ ಈ ಹಿಂದೆ ನಡೆದಿರುವ ಕೋಮುಗಲಭೆಗಳಲ್ಲಿ ಆದ ಹಾನಿಯನ್ನು ತುಂಬಿಕೊಡುವಂತೆ ಮಾಡಬೇಕು ಎಂದು ಉಲ್ಲೇಖಿಸುವುದನ್ನು ಟೀಕಿಸಿದ್ದಾರೆ.

ಸಿದ್ದರಾಮಯ್ಯನವರು ಸಂಘಪರಿವಾರದಿಂದ ಹಾನಿ ವಸೂಲಿ ಮಾಡಬೇಕು ಎಂದು ಹೇಳುವ ಮೂಲಕ ಡಿಜೆ ಹಳ್ಳಿ ಮತ್ತು ಕೆಜಿ ಹಳ್ಳಿ ಗಲಭೆಯಲ್ಲಿ ಗಲಭೆ ಮಾಡಿದವರು ಅಲ್ಪಸಂಖ್ಯಾತರೇ ಎಂದು ಒಪ್ಪಿಕೊಂಡು ಅವರನ್ನು ರಕ್ಷಿಸುವ ಪ್ರಯತ್ನ ಮಾಡುತ್ತಿದ್ದಾರೆ. ಇದು ಅಲ್ಪಸಂಖ್ಯಾತರನ್ನು ಓಲೈಸುವ ಅವರ ಪಕ್ಷದ ನೀತಿಯ ಮತ್ತು ಮತ ಬ್ಯಾಂಕ್ ರಾಜಕಾರಣದ ಭಾಗವಾಗಿದೆ ಎಂದು ಪತ್ರಿಕಾ ಹೇಳಿಕೆ ಮೂಲಕ ವಾಗ್ದಾಳಿ ನಡೆಸಿದ್ದಾರೆ.

Spread the love
  • Related Posts

    ಬೆಳ್ತಂಗಡಿ: ‘ಡ್ರಗ್ಸ್ ಮುಕ್ತ ಬೆಳ್ತಂಗಡಿ’ ಜಾಗೃತಿ ಅಭಿಯಾನಕ್ಕೆ ಯುವ ಕಾಂಗ್ರೆಸ್ ಚಾಲನೆ

    ಬೆಳ್ತಂಗಡಿ:ಮಾದಕ ವಸ್ತುಗಳ ದುಷ್ಪರಿಣಾಮಗಳ ಕುರಿತು ಯುವಜನರಲ್ಲಿ ಜಾಗೃತಿ ಮೂಡಿಸುವ ಹಾಗೂ ಬೆಳ್ತಂಗಡಿ ತಾಲೂಕನ್ನು ಮಾದಕ ವಸ್ತು ಮುಕ್ತಗೊಳಿಸುವ ಉದ್ದೇಶದಿಂದ ಯುವ ಕಾಂಗ್ರೆಸ್ ಬೆಳ್ತಂಗಡಿ ವತಿಯಿಂದ ‘ಡ್ರಗ್ಸ್ ಮುಕ್ತ ಬೆಳ್ತಂಗಡಿ’ ಜಾಗೃತಿ ಅಭಿಯಾನ ಹಮ್ಮಿಕೊಳ್ಳಲಾಗಿದೆ. “ನಶೆ ಬೇಡ… ನಾಳೆಯ ಭವಿಷ್ಯ ಬೇಕು” ಹಾಗೂ…

    Spread the love

    ಚಾರ್ಮಾಡಿ ಘಾಟಿಯಲ್ಲಿ ನಿರಂತರವಾಗಿ ಕಾಣಿಸಿಕೊಳ್ಳುತ್ತಿರುವ ಏಕದಂತ

    ಬೆಳ್ತಂಗಡಿ: ಚಾರ್ಮಾಡಿ ಘಾಟಿಯಲ್ಲಿ ಭಾನುವಾರ ರಾತ್ರಿ ಮತ್ತೆ ದೈತ್ಯ ಗಾತ್ರದ ಕಾಡಾನೆ ಕಂಡುಬಂದಿದೆ. ಘಾಟಿ ಭಾಗದಲ್ಲಿ ಆಗಾಗ ಕಾಣಸಿಗುವ ಈ ಕಾಡಾನೆ ರಸ್ತೆ ಬದಿ ನಿಂತಿದ್ದು ವಾಹನ ಸಂಚಾರಕ್ಕೆ ವ್ಯತ್ಯಯ ಉಂಟಾಗಿದೆ. ಸ್ಥಳಕ್ಕೆ ಅರಣ್ಯ ಇಲಾಖೆ ಸಿಬ್ಬಂದಿ ತೆರಳಿದ್ದು ಕಾಡಾನೆಯನ್ನು ಕಾಡಿಗಟ್ಟುವ…

    Spread the love

    You Missed

    ಬೆಳ್ತಂಗಡಿ: ‘ಡ್ರಗ್ಸ್ ಮುಕ್ತ ಬೆಳ್ತಂಗಡಿ’ ಜಾಗೃತಿ ಅಭಿಯಾನಕ್ಕೆ ಯುವ ಕಾಂಗ್ರೆಸ್ ಚಾಲನೆ

    • By admin
    • August 10, 2026
    • 4 views
    ಬೆಳ್ತಂಗಡಿ: ‘ಡ್ರಗ್ಸ್ ಮುಕ್ತ ಬೆಳ್ತಂಗಡಿ’ ಜಾಗೃತಿ ಅಭಿಯಾನಕ್ಕೆ ಯುವ ಕಾಂಗ್ರೆಸ್ ಚಾಲನೆ

    ಚಾರ್ಮಾಡಿ ಘಾಟಿಯಲ್ಲಿ ನಿರಂತರವಾಗಿ ಕಾಣಿಸಿಕೊಳ್ಳುತ್ತಿರುವ ಏಕದಂತ

    • By admin
    • August 10, 2026
    • 6 views
    ಚಾರ್ಮಾಡಿ ಘಾಟಿಯಲ್ಲಿ ನಿರಂತರವಾಗಿ ಕಾಣಿಸಿಕೊಳ್ಳುತ್ತಿರುವ ಏಕದಂತ

    ಪಶ್ಚಿಮ ಘಟ್ಟದ ಪ್ರಕೃತಿ ಮಡಿಲಿನ ‘ನೇತ್ರಾವತಿ ಹೋಂ ಸ್ಟೇ’ – ಪ್ರವಾಸಿಗರಿಗಾಗಿ ಪರಿಪೂರ್ಣ ತಾಣ

    • By admin
    • August 9, 2026
    • 6 views

    ಬೆಳ್ತಂಗಡಿ: ಅನಾರೋಗ್ಯದಿಂದ ಬಳಲುತ್ತಿರುವ 2 ತಿಂಗಳ ಮಗುವಿನ ಚಿಕಿತ್ಸೆಗೆ ಸಹೃದಯಿಗಳ ತುರ್ತು ನೆರವಿನ ಹಸ್ತ ಅಗತ್ಯ

    • By admin
    • August 8, 2026
    • 12 views
    ಬೆಳ್ತಂಗಡಿ: ಅನಾರೋಗ್ಯದಿಂದ ಬಳಲುತ್ತಿರುವ 2 ತಿಂಗಳ ಮಗುವಿನ ಚಿಕಿತ್ಸೆಗೆ ಸಹೃದಯಿಗಳ ತುರ್ತು ನೆರವಿನ ಹಸ್ತ ಅಗತ್ಯ

    “ಬೆಳಾಲು ಶ್ರೀ ಧ.ಮಂ. ಪ್ರೌಢಶಾಲೆಯಲ್ಲಿ ಪರಿಸರ ಜಾಗೃತಿ ಕಾರ್ಯಕ್ರಮ: ವಿದ್ಯಾರ್ಥಿಗಳಲ್ಲಿ ಪರಿಸರ ಕಾಳಜಿ ಬೆಳೆಸಿದ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ”

    • By admin
    • August 8, 2026
    • 8 views
    “ಬೆಳಾಲು ಶ್ರೀ ಧ.ಮಂ. ಪ್ರೌಢಶಾಲೆಯಲ್ಲಿ ಪರಿಸರ ಜಾಗೃತಿ ಕಾರ್ಯಕ್ರಮ: ವಿದ್ಯಾರ್ಥಿಗಳಲ್ಲಿ ಪರಿಸರ ಕಾಳಜಿ ಬೆಳೆಸಿದ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ”

    ಭಾರಿ ಮಳೆ ಹಿನ್ನೆಲೆ: ಪುತ್ತೂರು ಉಪವಿಭಾಗದ ವ್ಯಾಪ್ತಿಯ ಶಾಲಾ-ಕಾಲೇಜುಗಳಿಗೆ ನಾಳೆ ರಜೆ ಘೋಷಣೆ

    • By admin
    • August 7, 2026
    • 12 views
    ಭಾರಿ ಮಳೆ ಹಿನ್ನೆಲೆ: ಪುತ್ತೂರು ಉಪವಿಭಾಗದ ವ್ಯಾಪ್ತಿಯ ಶಾಲಾ-ಕಾಲೇಜುಗಳಿಗೆ ನಾಳೆ ರಜೆ ಘೋಷಣೆ