ನಗುವಿನ ನಂದನವನ, ಮಗು ಮನಸ್ಸಿನ ವಾಲ್ಟರ್ ನಂದಳಿಕೆ

250 ರುಪಾಯಿ ಕೊರ‍್ದು ಸಿನಿಮಾ ತೂಪಿನೆಡ್ದ್ ಮೊಬೈಲುಡೇ ಕಾಮೆಡಿ ತೂವೊಲಿ ಎಂದು ಒಬ್ಬರು ಫೇಸ್ ಬುಕ್ ನಲ್ಲಿ ಬರೆದುಕೊಂಡಿದ್ದರು, ನನಗೆ ಇದು ಹೌದು ಎಂದು ಅನಿಸಿದ್ದು ಮೊನ್ನೆ ವಾಲ್ಟರ್ ನಂದಳಿಕೆ ಅವರ ಪ್ರೆವೇಟ್ ಚಾಲೆಂಜ್ ನಲ್ಲಿ ಬಸ್ ಕಂಡಕ್ಟರ್ ಜತೆಗಿನ ಸಂದರ್ಶನ.

ನನ್ನ ಮೊಬೈಲ್ ನ ಸ್ಕ್ರೀನ್ ನಲ್ಲಿ ಆಗಾಗ ಬರುವ ನಂದಳಿಕೆ- ಬೋಳಾರ್ ಕಾಮಿಡಿ ಸೀರಿಯಲ್‌ಗಳನ್ನುನೋಡಿ ಖುಷಿ ಪಡುವುದುಂಟು.

ಮೊನ್ನೆಯಂತೂ ಬೋಳಾರ್ ಬಸ್ ಕಂಡಕ್ಟರ್ ಪಾತ್ರದಲ್ಲಿ ಕಾಮಿಡಿ ಜತೆ ವಾಸ್ತವವನ್ನು ಬಿಚ್ಚಿಡುವ ಕಾಮಿಡಿ.
ಅದಕ್ಕೆ ಪೂರಕವಾಗಿ ಸಂದರ್ಶಿಸುವ ವಾಲ್ಟರ್ ಅವರ ಮುಗ್ಧತೆಯ ಪ್ರಶ್ನೆಗಳು… ಈ ಜೋಡಿಯ ಮೋಡಿಯನ್ನು ಕಂಡಾಗ ಇದೊಂದು ವರ್ತ್ ಪ್ರೋಗ್ರಾಂ ( ಅಪರೂಪದ ಅಮೂಲ್ಯ ಕಾರ್ಯಕ್ರಮ) ಎಂದೆಣಿಸಿದ್ದು ಸುಳ್ಳಲ್ಲ.
ಒಂದು ಎಪಿಸೋಡ್ ಗೆಎಷ್ಟೊಂದು ಅಧ್ಯಯನ, ತಯಾರಿ?! ಅದನ್ನು ಕಾಮಿಡಿಗೆ ಪರಿವರ್ತಿಸುವ ಚಾಕಚಕ್ಯತೆ, ಎಲ್ಲೆ ಮೀರದ ಪ್ರಸ್ತುತಿ… ಎಲ್ಲವೂ ಒಂದಕ್ಕೊಂದು ಸರಿ ಮಿಗಿಲು.

ಎರಡು ದಶಕಗಳಿಂದ ನಾನು ವಾಲ್ಟರ್ ಅವರನ್ನು ಗಮನಿಸುತ್ತಿದ್ದೇನೆ. ಸರ್ವರ ಜತೆ ಸಮಭಾವ. ಪಕ್ಷಪಾತ ಧೋರಣೆ ಇಲ್ಲದೆ ಸಮಚಿತ್ತವಾಗಿರುವ ವಾಲ್ಟರ್ ನಿಗರ್ವಿ. ಒಂದೆರಡು ಬಾರಿ ವೈಯಕ್ತಿಕವಾಗಿ ಅಭಿನಂದಿಸಿರಬಹುದು. ಅವರು ಮಾಡಿದ ಸಾಧನೆಗೆ ಹಲವು ಬಾರಿ ಅಭಿನಂದಿಸಬೇಕಿತ್ರು. ಆದರೇನು ನಾವು ಹೇಳಿ ಕೇಳಿ ಪತ್ರಕರ್ತರು ನಮ್ಮ ಕಣ್ಣಿಗೆ ನಮ್ಮವರೇ ಆದ ಪತ್ರಕರ್ತರು ಬೀಳುವುದೇ ಇಲ್ಲ. ಬಿದ್ದರೂ ಬೇಕೆಂದೇ ಗಮನಿಸುವುದಿಲ್ಲ.

ಸಾಧನೆ ಮಾಡಿದರೂ “ಅವ್ ದಾದ ಮಲ್ಲ ಕುಂಬುಡನಾ” ಎಂದು ಉದ್ದೇಶಪೂರ್ವಕವಾಗಿ ಉಪೇಕ್ಷಿಸುವುದೇ ಹೆಚ್ಚು!.

ಆದರೆ ಈ ಬಾರಿ ಅವರ ಕಾಮಿಡಿ ಶೋ ನನ್ನ ಮನಸ್ಸನ್ನು ಎಷ್ಟು ಶುಭ್ರಗೊಳಿಸಿತು ಎಂದರೆ ಅಭಿನಂದಿಸಲೇ ಬೇಕು ಎಂದು ಹಠ ಹಿಡಿದು ಮೊದಲ ಬಾರಿಗೆ ತುಸು ದೀರ್ಘವಾಗಿಯೇ ಬರೆದು ಅಭಿನಂದಿಸಿದ್ದೇನೆ, (ಬಾಕಿ ಎಲ್ಲ ಸೇರಿಸಿ).

ಪಿಂಗಾರದ ರೇಮಂಡ್ ತಾಕೊಡೆ ಕಾರ್ಕಳದಲ್ಲಿ ಸಿಕ್ಕಾಗ ದಾಯ್ಜಿದುಬೈಯ ಕಾರ್ಕಳದ ವರದಿಗಾರ ಎಂದು 2002ರಲ್ಲಿ ಹೇಳಿದ ನೆನಪು. ಆಗ ಮೊದಲ ಬಾರಿ ವಾಲ್ಟರ್ ಅವರ ಹೆಸರು ಕೇಳಿದೆ. ನಾನಾಗ ಕಾರ್ಕಳದಲ್ಲಿ ವಿಜಯಕರ್ನಾಟಕ ವರದಿಗಾರನಾಗಿದ್ದೆ.

ದೂರದ ದುಬೈಯತ್ತ..

ಕರಾವಳಿಯ ಎಲ್ಲ ಹುಡುಗರಂತೆ ವಾಲ್ಟರ್ ಕೂಡಾ ಉದ್ಯೋಗ ನಿಮಿತ್ತ ದುಬೈಗೆ ಹೋಗಿದ್ದಾಗ “ನಾನು ವೆಬ್‌ಸೈಟ್ ಮಾಡ್ತಾ ಇದ್ದೇನೆ” ಎಂದು 2000ದಲ್ಲಿ ಗೆಳೆಯರಿಗೆ ಎಪ್ರಿಲ್ ಫೂಲ್ ಇಮೇಲ್ ಮಾಡಿದ್ರಂತೆ !
ಗೆಳೆಯರು ಸಹಜ ಎಂದು ವಿಚಾರಿಸತೊಡಗಿದಾಗ ನಿಜವಾಗಿಯೂ ವೆಬ್‌ಸೈಟ್ ಮಾಡುವ ಯೋಚನೆ ಬಂದು ಆ ಬಗ್ಗೆ ಅಧ್ಯಯನ ಮಾಡಿ ದಾಯ್ಜಿದುಬೈ ಮಾಡಿದರು.
ಬಳಿಕ “ದಾಯ್ಜಿವರ್ಲ್ಡ್ ವೆಬ್‌ಸೈಟ್” ಮೊತ್ತ ಮೊದಲ ಬಾರಿಗೆ ಲಕ್ಷ ಲಕ್ಷ ಹಿಟ್ಸ್ ಪಡೆದ ಕರಾವಳಿಯ ವೆಬ್‌ಸೈಟ್.
ಇದೊಂದು ಲಾಭದಾಯಕ ಉದ್ಯಮ ಎನ್ನುವುದನ್ನು ಕರಾವಳಿಯಲ್ಲಿ ಮಾತ್ರವಲ್ಲ ರಾಜ್ಯದಲ್ಲೂ ತೋರಿಸಿಕೊಟ್ಟಿತು.

ದಾಯ್ಜಿವರ್ಲ್ಡ್24×7 ವಾಹಿನಿಯಂತೂ ಕರಾವಳಿಯಲ್ಲಿ ಮನೆ ಮಾತು. ಲಾಕ್‌ಡೌನ್‌ನಲ್ಲಿ ಎಲ್ಲರೂ ಅಧಃಪತನದತ್ತ ಸಾಗುತ್ತಿದ್ದಾಗ ಫೀನಿಕ್ಸ್ ನಂತೆ ಮೇಲೆದ್ದು ಪ್ರತಿ ಸೋಲು- ಸಮಸ್ಯೆ ಒಂದು ಅವಕಾಶ ಎಂದು ಭಾವಿಸಿ, ಅದನ್ನು ಸವಾಲಿನಂತೆ ಸ್ವೀಕರಿಸಿ ಕೊರೋನ ಗೆಲ್ಲೋಣ ಎಂಬ ಕಾರ್ಯಕ್ರಮದ ಮೂಲಕ ಕರಾವಳಿ ಅಮೂಲ್ಯ ಪ್ರತಿಭೆಗಳನ್ನು ಟಿವಿಯ ಮುಂದೆ ತಂದು ಕರಾವಳಿಗರ ಮನ ತಣಿಸಿ, ಕರಾವಳಿಯಲ್ಲಿ ಮನೆ ಮಾತಾದರು.

ಕೊಂಕಣಿ- ತುಳು ಕಾರ್ಯಕ್ರಮ, ಧರ್ಮಗುರುಗಳ ಸಂದರ್ಶನ, ಯತಿ ಶ್ರೇಷ್ಠರು, ಪಬ್ಲಿಕ್ ಚಾಲೆಂಜ್ ಹೀಗೆ ಅನೇಕ ಜನ ಮೆಚ್ಚುವ ಕಾರ್ಯಕ್ರಮಗಳು.
ಅದರಲ್ಲೂ ಕಾಮಿಡಿ ಶೋ ಪ್ರೈವೇಟ್ ಚಾಲೆಂಜ್ ಜಾಲತಾಣಗಳಲ್ಲಿಯೂ ಮಿಲಿಯಗಟ್ಟಲೆ ವೀವ್ಸ್ ಪಡೆಯುತ್ತಿವೆ.

ಖುಷಿ ಎಂದರೆ ವಾಲ್ಟರ್ ಅವರ ಪಬ್ಲಿಕ್ ಚಾಲೆಂಜ್ ಸೀರೀಸ್ ನಲ್ಲಿ ಅವರ ಒತ್ತಾಯದ ಮೇರೆಗೆ 7 ವರ್ಷಗಳ ಹಿಂದೆ ನಾನು ಕನ್ನಡಪ್ರಭದಲ್ಲಿದ್ದಾಗ ಅತಿಥಿ ಆಂಕರ್ ಆಗಿ ಪದಾರ್ಪಣೆ ಮಾಡಿ ಒಂದು ಎಪಿಸೋಡ್ ಮಾಡಿರುವುದು ಮರೆಯಲಾಗದ ನೆನಪು.

ಸೇವೆ:
ಇವರ ಚಾರಿಟಿ ಸಂಸ್ಥೆ ದಾನಿಗಳ ಮತ್ತು ಫಲಾನುಭವಿಗಳ ಮಧ್ಯವರ್ತಿಯಾಗಿ ಇದುವರೆಗೆ 20 ಕೋಟಿ ರು. ಬಡ- ಜನ ಸಾಮಾನ್ಯರ ಸೇವೆಗೆ ಒದಗಿಸಿರುವುದು ಇವರ ಸೇವಾ ಮನೋಭಾವಕ್ಕೆ ಹಿಡಿದ ಕನ್ನಡಿ.

ಮಾನವೀಯ ವರದಿಗಳಿಗೆ ಕೆಲವೇ ಗಂಟೆಗಳಲ್ಲಿ ಲಕ್ಷ ಲಕ್ಷ ರು. ನೆರವು ಬಂದಿರೋದನ್ನ ನಾನು ನೋಡಿದ್ದೇನೆ.

ನನ್ನ ಕಾರ್ಕಳ, I mean ನಮ್ಮ ಕಾರ್ಕಳದ ವಾಲ್ಟರ್ ನಂದಳಿಕೆ- ವಿಲ್ಮಾ ದಂಪತಿಗೆ ಮೂವರು ಮಕ್ಕಳು.

ಕರಾವಳಿ- ವಿಶ್ವ ಕೊಂಕಣಿ, ತುಳು, ಕನ್ನಡಿಗರ ಮನ ಗೆದ್ದಿರುವ ವಾಲ್ಟರ್ ನಂದಳಿಕೆ ಅವರಿಂದ ಸಮಾಜಕ್ಕೆ ಇನ್ನಷ್ಟು ಕೊಡುಗೆ ಬರಲಿ.

✍🏻 JITENDRA Kundeshwara
9945666324
kundeshwara@gmail.com

Spread the love
  • Related Posts

    ಧರ್ಮಸ್ಥಳದಲ್ಲಿ ಸಂಭ್ರಮ: ಅ.24ರಂದು ಡಾ.ಡಿ ವೀರೇಂದ್ರ ಹೆಗ್ಗಡೆಯವರ ಪಟ್ಟಾಭಿಷೇಕದ 58ನೇ ವರ್ಧಂತ್ಯುತ್ಸವ

    ಧರ್ಮಸ್ಥಳ: ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ. ವೀರೇಂದ್ರ ಹೆಗ್ಗಡೆಯವರ ಪಟ್ಟಾಭಿಷೇಕದ 58 ನೇ ವರ್ಧಂತ್ಯುತ್ಸವ ಅಕ್ಟೋಬರ್ 24 ಶುಕ್ರವಾರದಂದು ಧರ್ಮಸ್ಥಳದಲ್ಲಿ ನೌಕರವೃಂದದವರು, ಊರಿನ ನಾಗರೀಕರು, ಭಕ್ತರು ಹಾಗೂ ಅಭಿಮಾನಿಗಳ ಉಪಸ್ಥಿತಿಯಲ್ಲಿ ನಡೆಯಲಿದೆ. ಭಗವಾನ್ ಚಂದ್ರನಾಥಸ್ವಾಮಿ ಬಸದಿ ಹಾಗೂ ಶ್ರೀ ಮಂಜುನಾಥಸ್ವಾಮಿ…

    Spread the love

    ನಾಳೆ ಎಸ್.ಡಿ.ಎಂ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಉಜಿರೆಯಲ್ಲಿ ಉಚಿತ ಮೂಳೆ ಮತ್ತು ಮೂಳೆ ಸಾಂದ್ರತೆ ತಪಾಸಣಾ ಶಿಬಿರ

    ಉಜಿರೆ: ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥೇಶ್ವರ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಉಜಿರೆಯಲ್ಲಿ ದಿನಾಂಕ 24/10/2025ರಂದು ಬೆಳಿಗ್ಗೆ 9.30ರಿಂದ ಅಪರಾಹ್ನ 2ಗಂಟೆಯವರೆಗೆ ಉಚಿತ ಮೂಳೆ ಮತ್ತು ಮೂಳೆ ಸಾಂದ್ರತೆ ತಪಾಸಣಾ ಶಿಬಿರವು ನಡೆಯಲಿದೆ. Spread the love

    Spread the love

    You Missed

    ಧರ್ಮಸ್ಥಳದಲ್ಲಿ ಸಂಭ್ರಮ: ಅ.24ರಂದು ಡಾ.ಡಿ ವೀರೇಂದ್ರ ಹೆಗ್ಗಡೆಯವರ ಪಟ್ಟಾಭಿಷೇಕದ 58ನೇ ವರ್ಧಂತ್ಯುತ್ಸವ

    • By admin
    • October 23, 2025
    • 23 views
    ಧರ್ಮಸ್ಥಳದಲ್ಲಿ ಸಂಭ್ರಮ: ಅ.24ರಂದು ಡಾ.ಡಿ ವೀರೇಂದ್ರ ಹೆಗ್ಗಡೆಯವರ ಪಟ್ಟಾಭಿಷೇಕದ 58ನೇ ವರ್ಧಂತ್ಯುತ್ಸವ

    ನಾಳೆ ಎಸ್.ಡಿ.ಎಂ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಉಜಿರೆಯಲ್ಲಿ ಉಚಿತ ಮೂಳೆ ಮತ್ತು ಮೂಳೆ ಸಾಂದ್ರತೆ ತಪಾಸಣಾ ಶಿಬಿರ

    • By admin
    • October 23, 2025
    • 24 views
    ನಾಳೆ  ಎಸ್.ಡಿ.ಎಂ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಉಜಿರೆಯಲ್ಲಿ ಉಚಿತ ಮೂಳೆ ಮತ್ತು ಮೂಳೆ ಸಾಂದ್ರತೆ ತಪಾಸಣಾ ಶಿಬಿರ

    ಸೇವಾಧಾಮದಲ್ಲಿ ದೀಪಾವಳಿ ಹಬ್ಬದ ಆಚರಣೆ

    • By admin
    • October 23, 2025
    • 39 views
    ಸೇವಾಧಾಮದಲ್ಲಿ ದೀಪಾವಳಿ ಹಬ್ಬದ ಆಚರಣೆ

    ಮಂಗಳೂರಿನಲ್ಲಿ ಹೈ ಕೋರ್ಟ್ ಪೀಠ ಸ್ಥಾಪನೆಗಾಗಿ ಬಂಟ್ವಾಳದಲ್ಲಿ ಪೋಸ್ಟ್ ಕಾರ್ಡ್ ಚಳವಳಿ

    • By admin
    • October 23, 2025
    • 216 views
    ಮಂಗಳೂರಿನಲ್ಲಿ ಹೈ ಕೋರ್ಟ್ ಪೀಠ ಸ್ಥಾಪನೆಗಾಗಿ ಬಂಟ್ವಾಳದಲ್ಲಿ ಪೋಸ್ಟ್ ಕಾರ್ಡ್ ಚಳವಳಿ

    17ವಯೋಮಾನದ ಬಾಲಕಿಯರ ರಾಜ್ಯಮಟ್ಟದ ವಾಲಿಬಾಲ್ ಪಂದ್ಯಾಟದಲ್ಲಿ ಮುಂಡಾಜೆ ಪ್ರೌಢಶಾಲೆಯ ಕು. ಯಕ್ಷಿತಾ.ಜೆ ರಾಷ್ಟ್ರ ಮಟ್ಟಕ್ಕೆ ಆಯ್ಕೆ

    • By admin
    • October 19, 2025
    • 86 views
    17ವಯೋಮಾನದ  ಬಾಲಕಿಯರ ರಾಜ್ಯಮಟ್ಟದ ವಾಲಿಬಾಲ್ ಪಂದ್ಯಾಟದಲ್ಲಿ ಮುಂಡಾಜೆ ಪ್ರೌಢಶಾಲೆಯ ಕು. ಯಕ್ಷಿತಾ.ಜೆ ರಾಷ್ಟ್ರ ಮಟ್ಟಕ್ಕೆ ಆಯ್ಕೆ

    14ರ ವಯೋಮಾನದ ಬಾಲಕಿಯರ ರಾಜ್ಯಮಟ್ಟದ ವಾಲಿಬಾಲ್ ಪಂದ್ಯಾಟದಲ್ಲಿ ಬಂದಾರು ಪ್ರಾಥಮಿಕ ಶಾಲೆಯ ಕು.ರಕ್ಷಿತಾ. ಜೆ ರಾಷ್ಟ್ರಮಟ್ಟಕ್ಕೆ ಆಯ್ಕೆ

    • By admin
    • October 19, 2025
    • 62 views
    14ರ ವಯೋಮಾನದ ಬಾಲಕಿಯರ ರಾಜ್ಯಮಟ್ಟದ ವಾಲಿಬಾಲ್ ಪಂದ್ಯಾಟದಲ್ಲಿ ಬಂದಾರು ಪ್ರಾಥಮಿಕ ಶಾಲೆಯ ಕು.ರಕ್ಷಿತಾ. ಜೆ  ರಾಷ್ಟ್ರಮಟ್ಟಕ್ಕೆ ಆಯ್ಕೆ