ವಿಪತ್ತು ನಿರ್ವಹಣಾ ಘಟಕದಿಂದ ಐತಿಹಾಸಿಕ ಪ್ರವಾಸಿ ತಾಣವಾಗಿರುವ ನರಸಿಂಹಗಢದಲ್ಲಿ ಸ್ವಚ್ಚತಾ ಕಾರ್ಯಕ್ರಮ

ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ವಿಪತ್ತು ನಿರ್ವಹಣಾ ಘಟಕದ ಫೆಬ್ರವರಿ ತಿಂಗಳ ಮಾಸಿಕ ಸಭೆ ಭಾನುವಾರ ನಡಗ್ರಾಮದ ನರಸಿಂಹಗಢದಲ್ಲಿ ನಡೆಯಿತು. ಇದೇ ಸಂದರ್ಭದಲ್ಲಿ ಐತಿಹಾಸಿಕ ಪ್ರೇಕ್ಷಣೀಯ ಸ್ಥಳ ಸ್ವಚ್ಚತೆ ಸಾರುವ ನಿಟ್ಟಿನಲ್ಲಿ ಸ್ವಚ್ಛತಾ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು. ಜೊತೆಗೆ ಆಗಮಿಸಿದ್ದ ಚಾರಣಿಗರಿಗೆ ಮಾಹಿತಿ ನೀಡಲಾಯಿತು.

ಐತಿಹಾಸಿಕ ಪ್ರಸಿದ್ಧವಾದ, 1700 ಅಡಿ ಎತ್ತರದ ನರಸಿಂಹಗಢದಲ್ಲಿರುವ ಗಡಾಯಿ ಕಲ್ಲು ( ಜಮಲಾಬಾದ್ ಕೋಟೆ) ಚಾರಣ ಮತ್ತು ಗಡಾಯಿಕಲ್ಲು ಮೇಲ್ಬಾಗದಲ್ಲಿ ಸ್ವಚ್ಚತಾ ಶ್ರಮದಾನ ನಡೆಸಲಾಯಿತು.

ಬೆಳಿಗ್ಗೆ 7.30 ಕ್ಕೆ ಚಾರಣಕ್ಕೆ ಚಾಲನೆ ದೊರೆಯಿತು. ಜನಜಾಗೃತಿ ಪ್ರಾದೇಶಿಕ ನಿರ್ದೇಶಕರಾದ ಶ್ರೀಯುತ ವಿವೇಕ್ ವಿನ್ಸೆಂಟ್ ಪಾಯ್ಸ್ ಅವರು ಚಾಲನೆ ನೀಡಿ ಸ್ವಯಂಸೇವಕರಿಗೆ ಸ್ಪೂರ್ತಿ ತುಂಬಿದರು.

ವಿಪತ್ತು ನಿರ್ವಹಣಾ ಘಟಕದ ಸ್ವಯಂಸೇವಕರಿಗೆ ಚಾರಣ ಏರ್ಪಡಿಸಿದ ಉದ್ದೇಶದ ಬಗ್ಗೆ ಮಾಹಿತಿ ನೀಡಿ ವಿಪತ್ತು ಸ್ಪಂದನಾ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿರುವ ವಿವಿಧ ಘಟಕದ ಸ್ವಯಂಸೇವಕರಿಗೆ ಅಭಿನಂದನೆ ಸಲ್ಲಿಸಿದರು.

ಮೂವತ್ತಾರು ಸ್ವಯಂಸೇವಕರನ್ನು ಒಳಗೊಂಡಿರುವ ತಂಡವನ್ನು ನಾಲ್ಕು ಗುಂಪುಗಳಾಗಿ ವಿಭಾಗಿಸಿ ಚಾರಣ ಆರಂಭಿಸಲಾಯಿತು. ಸಂಯೋಜಕರ ನೇತ್ರತ್ವದಲ್ಲಿ ಸ್ವಯಂಸೇವಕರು ಉತ್ಸಾಹದಿಂದ ಗಗನಮುಖಿಯಾಗಿರುವ ಗುಡ್ಡವನ್ನು ಏರತೊಡಗಿದರು.

ಪ್ರವಾಸಿಗರಿಗೆ ಸ್ವಚ್ಛತೆ ಬಗ್ಗೆ ಅರಿವು ಮೂಡಿಸುವ ಕಾರ್ಯವನ್ನು ಇದೇ ಸಂದರ್ಭದಲ್ಲಿ ಮಾಡಲಾಯಿತು.

ಗುಡ್ಡ ಏರುತ್ತಿರುವಾಗ ಮತ್ತು ಇಳಿಯುತ್ತಿರುವಾಗ ಎದುರಾಗುವ ಪ್ರವಾಸಿಗರಿಗೆ ಸ್ವಚ್ಛತೆಯ ಬಗ್ಗೆ ಪಾಠವನ್ನು ಸ್ವಯಂಸೇವಕರು ಮಾಡಿದರು.

ಎಲ್ಲೆಂದರಲ್ಲಿ ಪ್ಲಾಸ್ಟಿಕ್ ಕವರ್ ಗಳನ್ನು, ಬಾಟಲಿಗಳನ್ನು ಎಸೆಯದಂತೆ ಮನವಿ ಮಾಡಿಕೊಳ್ಳಲಾಯಿತು.

ಸುಮಾರು 9.30 ಕ್ಕೆ ಗುಡ್ಡದ ತುದಿಯನ್ನು ಸ್ವಯಂಸೇವಕರ ತಂಡ ತಲುಪಿತ್ತು. ಗುಡ್ಡದ ನಾಲ್ಕೂ ಮೂಲೆಗಳಲ್ಲಿ ಸ್ವಚ್ಚತಾ ಶ್ರಮದಾನ ನಡೆಸಲಾಯಿತು. ಗುಡ್ಡದ ಇಳಿಜಾರಿನಲ್ಲಿ ಅಲ್ಲಲ್ಲಿ ಸಿಲುಕಿರುವ ಪ್ಲಾಸ್ಟಿಕ್ ಕವರ್ ಗಳು, ಬಾಟಲ್ ಗಳನ್ನು ಆರಿಸಿ ಚೀಲದಲ್ಲಿ ತುಂಬಿಸಿಕೊಳ್ಳಲಾಯಿತು. ಸುಮಾರು ಎರಡು ಗಂಟೆಗಳ ಕಾಲ ಶ್ರಮದಾನವನ್ನು ಗುಡ್ಡದ ತುದಿಯಲ್ಲಿ ಮಾಡಲಾಯಿತು.

ಸ್ವಯಂಸೇವಕರ ಶ್ರಮದಾನದ ಸೇವೆಯನ್ನು ಗಮನಿಸಿದ ಕೆಲವು ಪ್ರವಾಸಿಗರು ತಾವು ಸಹ ಕೆಲ ಸಮಯ ಶ್ರಮದಾನದಲ್ಲಿ ಕೈಜೋಡಿಸಿದ್ದು ವಿಶೇಷವಾಗಿತ್ತು.

ದಾರಿಯಲ್ಲಿ ಹಾಗೂ ಮೆಟ್ಟಿಲುಗಳಲ್ಲಿ ಬೆಳೆದು ನಿಂತು ಪ್ರವಾಸಿಗರ ದಾರಿಗೆ ಅಡ್ಡಲಾಗಿದ್ದ ಗಿಡಗಳು, ಮುಳ್ಳು ಕಂಟಿಗಳನ್ನು ತೆರವುಗೊಳಿಸಲಾಯಿತು.

ಕಲ್ಲಿನ ಗುಡ್ಡಗಳ ಮೇಲೆ ಅನಗತ್ಯ ಸಂದೇಶಗಳನ್ನು ಬರೆಯದಂತೆ ಪ್ರವಾಸಿಗರಲ್ಲಿ ಮನವಿ ಮಾಡಿಕೊಳ್ಳಲಾಯಿತು.

ಗುಡ್ಡದ ಮೇಲ್ಬಾಗದಲ್ಲಿ ಇರುವ ಕೆರೆಯ ದಡದಲ್ಲಿ ಪ್ಲಾಸ್ಟಿಕ್ ಬಾಟಲ್ ಗಳು ಹೇರಳವಾಗಿದ್ದು ಆರಿಸಿ ತೆಗೆಯಲಾಯಿತು. ಅಲ್ಲಲ್ಲಿ ಬಿದ್ದ ಮರದ ಗೆಲ್ಲುಗಳನ್ನು ಆರಿಸಿ ಕೆರೆಯ ನೀರಿಗೆ ಬೀಳದಂತೆ ತೆರವುಗೊಳಿಸಲಾಯಿತು.

ಗುಡ್ಡದ ಮೇಲೆ ಆರಿಸಿದ ಎಲ್ಲಾ ಪ್ಲಾಸ್ಟಿಕ್ ಬಾಟಲ್ ಗಳನ್ನು ಹೊತ್ತು ಗುಡ್ಡದ ಕೆಳಭಾಗಕ್ಕೆ ತಂದು ವಿಲೇವಾರಿ ಮಾಡಲಾಯಿತು.

ಅರಣ್ಯ ಇಲಾಖೆಯ ಅಧಿಕಾರಿಗಳು ಚಾರಣ ಮತ್ತು ಶ್ರಮದಾನದಕ್ಕೆ ವಿಶೇಷ ನೆರವು ನೀಡಿರುತ್ತಾರೆ.

ನಡ ಕನ್ಯಾಡಿ ಘಟಕ, ಬೆಳಾಲು ಘಟಕ, ಕೊಕ್ಕಡ ಘಟಕ, ಧರ್ಮಸ್ಥಳ ಘಟಕ, ನಾವೂರು ಘಟಕದ ಸ್ವಯಂಸೇವಕರು ಶ್ರಮದಾನದಲ್ಲಿ ಉತ್ಸಾಹದಿಂದ ಪಾಲ್ಗೊಂಡರು.

ವಿಪತ್ತು ನಿರ್ವಹಣಾ ಘಟಕದ ಸ್ವಯಂಸೇವಕರ ಸೇವಾಕಾರ್ಯ ಸರ್ವರ ಪ್ರಶಂಸೆಗೆ ಪಾತ್ರವಾಯಿತು. ಪ್ರವಾಸಿಗರ ಮನ ಗೆದ್ದಿತು.

ಈ ಸಂದರ್ಭದಲ್ಲಿ ವಿಪತ್ತು ನಿರ್ವಹಣಾ ಘಟಕದ ರಾಜ್ಯ ನಿರ್ದೇಶಕ ವಿವೇಕ್ ವಿನ್ಸಂಟ್ ಪಾಯಸ್, ಯೋಜನಾಧಿಕಾರಿ ಜೈವಂತ್ ಪಟಗಾರ್, ಜನಜಾಗೃತಿ ಪ್ರಾದೇಶಿಕ ಯೋಜನಾಧಿಕಾರಿ ನಾಗೇಶ್ ಎನ್.ಪಿ, ಉಜಿರೆ ವಲಯದ ಮೇಲ್ವಿಚಾರಕರಾದ ಶ್ರೀಮತಿ ಅಶ್ವಿತಾ, ವಿಪತ್ತು ನಿರ್ವಹಣಾ ಘಟಕದ ಸಂಯೋಜಕರಾದ ವಸಂತಿ, ಗಿರಿಜಾ ಹಾಗೂ ಕೊರಗಪ್ಪ ಹಾಗೂ ಬೆಳ್ತಂಗಡಿ ವಲಯದ ಸ್ವಯಂಸೇವಕರು ಉಪಸ್ಥಿತರಿದ್ದರು.

🖊️ವರದಿ: ಸ್ವಸ್ತಿಕ್ ಕನ್ಯಾಡಿ

Spread the love
  • Related Posts

    ಒಟ್ಲ ಶ್ರೀ ಧರ್ಮರಸು ಉಳ್ಳಾಕ್ಲು ಬ್ರಹ್ಮಬೈದೇರುಗಳ ಗರಡಿ ಹಾಗೂ ಪರಿವಾರ ದೈವಗಳ ಕ್ಷೇತ್ರದಲ್ಲಿ ವರ್ಷಾವಧಿ ಜಾತ್ರೆ

    ಶಿಶಿಲ: ಒಟ್ಲ ಶ್ರೀ ಧರ್ಮರಸು ಉಳ್ಳಾಕ್ಲು ಬ್ರಹ್ಮಬೈದೇರುಗಳ ಗರಡಿ ಹಾಗೂ ಪರಿವಾರ ದೈವಗಳ ಕ್ಷೇತ್ರದಲ್ಲಿ ವರ್ಷಾವಧಿ ಜಾತ್ರೆಯು 07/02/2026 ಶನಿವಾರದಿಂದ 10/02/2026ಮಂಗಳವಾರದವರೆಗೆ ನಡೆಯಲಿದೆ. Spread the love

    Spread the love

    ಸಿ.ಎಸ್. ಫಲಿತಾಂಶ ಪ್ರಕಟ: ಎಕ್ಸೆಲ್ ವಿದ್ಯಾರ್ಥಿಗಳು ರಾಜ್ಯದಲ್ಲೇ ಅಭೂತಪೂರ್ವ ಸಾಧನೆ, ಭವೇಶ್ ಸೀರ್ವಿ ರಾಜ್ಯಕ್ಕೆ ಪ್ರಥಮ ಸ್ಥಾನ

    ಗುರುವಾಯನಕೆರೆ: ರಾಷ್ಟ್ರಮಟ್ಟದಲ್ಲಿ ಇನ್ಸಿಟ್ಯೂಟ್ ಆಫ್‌ ಕಂಪನಿ ಸೆಕ್ರೆಟರಿಸ್ ಆಫ್ ಇಂಡಿಯಾ ನಡೆಸುವ ಕಂಪನಿ ಸೆಕ್ರೆಟರಿ ಪರೀಕ್ಷೆಯ ಎರಡನೇ ಆವೃತ್ತಿಯಲ್ಲಿ ಗುರುವಾಯನಕೆರೆ ಎಕ್ಸೆಲ್ ಪದವಿ ಪೂರ್ವ ಕಾಲೇಜಿನ ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳು ಅಭೂತಪೂರ್ವ ಸಾಧನೆ ಮಾಡಿದ್ದಾರೆ. 200 ಅಂಕಗಳ ಪರೀಕ್ಷೆಯಲ್ಲಿ 183 ಅಂಕಗಳನ್ನು…

    Spread the love

    You Missed

    ಒಟ್ಲ ಶ್ರೀ ಧರ್ಮರಸು ಉಳ್ಳಾಕ್ಲು ಬ್ರಹ್ಮಬೈದೇರುಗಳ ಗರಡಿ ಹಾಗೂ ಪರಿವಾರ ದೈವಗಳ ಕ್ಷೇತ್ರದಲ್ಲಿ ವರ್ಷಾವಧಿ ಜಾತ್ರೆ

    • By admin
    • January 28, 2026
    • 63 views
    ಒಟ್ಲ ಶ್ರೀ ಧರ್ಮರಸು ಉಳ್ಳಾಕ್ಲು ಬ್ರಹ್ಮಬೈದೇರುಗಳ ಗರಡಿ ಹಾಗೂ ಪರಿವಾರ ದೈವಗಳ ಕ್ಷೇತ್ರದಲ್ಲಿ ವರ್ಷಾವಧಿ ಜಾತ್ರೆ

    ಸಿ.ಎಸ್. ಫಲಿತಾಂಶ ಪ್ರಕಟ: ಎಕ್ಸೆಲ್ ವಿದ್ಯಾರ್ಥಿಗಳು ರಾಜ್ಯದಲ್ಲೇ ಅಭೂತಪೂರ್ವ ಸಾಧನೆ, ಭವೇಶ್ ಸೀರ್ವಿ ರಾಜ್ಯಕ್ಕೆ ಪ್ರಥಮ ಸ್ಥಾನ

    • By admin
    • January 20, 2026
    • 306 views
    ಸಿ.ಎಸ್. ಫಲಿತಾಂಶ ಪ್ರಕಟ: ಎಕ್ಸೆಲ್ ವಿದ್ಯಾರ್ಥಿಗಳು ರಾಜ್ಯದಲ್ಲೇ ಅಭೂತಪೂರ್ವ ಸಾಧನೆ,  ಭವೇಶ್ ಸೀರ್ವಿ ರಾಜ್ಯಕ್ಕೆ ಪ್ರಥಮ ಸ್ಥಾನ

    ಆಮಂತ್ರಣ ಪರಿವಾರದ ದಶಮಾನೋತ್ಸವದ ರಾಜ್ಯಮಟ್ಟದ ಚಿತ್ರಕಲಾ ಸ್ಪರ್ಧೆಯಲ್ಲಿ ಪುಷ್ಟಿ ಮುಂಡಾಜೆ ಪ್ರಥಮ

    • By admin
    • January 20, 2026
    • 103 views
    ಆಮಂತ್ರಣ ಪರಿವಾರದ ದಶಮಾನೋತ್ಸವದ ರಾಜ್ಯಮಟ್ಟದ ಚಿತ್ರಕಲಾ ಸ್ಪರ್ಧೆಯಲ್ಲಿ ಪುಷ್ಟಿ ಮುಂಡಾಜೆ ಪ್ರಥಮ

    ಹಳ್ಳಿ ಹೈದ ಗಿಲ್ಲಿ ನಟನಿಗೆ ‘ಬಿಗ್’ ಕಿರೀಟ ಕರಾವಳಿಯ ಬೆಡಗಿ ರಕ್ಷಿತಾ ಶೆಟ್ಟಿ ರನ್ನರ್ ಆಫ್

    • By admin
    • January 18, 2026
    • 97 views
    ಹಳ್ಳಿ ಹೈದ ಗಿಲ್ಲಿ ನಟನಿಗೆ ‘ಬಿಗ್’ ಕಿರೀಟ ಕರಾವಳಿಯ ಬೆಡಗಿ ರಕ್ಷಿತಾ ಶೆಟ್ಟಿ ರನ್ನರ್ ಆಫ್

    ಚಾರ್ಮಾಡಿ ಘಾಟಿಯಲ್ಲಿ ಹಬ್ಬಿದ ಕಾಡ್ಗಿಚ್ಚು ಅಪಾರ ಸಸ್ಯ ಪ್ರಬೇಧಗಳು, ಪ್ರಾಣಿ ಸಂಕುಲಕ್ಕೆ ಹಾನಿ ಸಾಧ್ಯತೆ!!! ನಿರಂತರ ಕಾಡ್ಗಿಚ್ಚಿಗೆ ಶಾಶ್ವತ ಪರಿಹಾರ ಯಾವಾಗ???

    • By admin
    • January 18, 2026
    • 89 views
    ಚಾರ್ಮಾಡಿ ಘಾಟಿಯಲ್ಲಿ ಹಬ್ಬಿದ ಕಾಡ್ಗಿಚ್ಚು ಅಪಾರ ಸಸ್ಯ ಪ್ರಬೇಧಗಳು, ಪ್ರಾಣಿ ಸಂಕುಲಕ್ಕೆ ಹಾನಿ ಸಾಧ್ಯತೆ!!! ನಿರಂತರ ಕಾಡ್ಗಿಚ್ಚಿಗೆ ಶಾಶ್ವತ ಪರಿಹಾರ ಯಾವಾಗ???

    ಚಾರ್ಮಾಡಿ ಘಾಟಿಯ ತುತ್ತ ತುದಿಯಲ್ಲಿ ಕಾಣಿಸಿಕೊಂಡ ಬೆಂಕಿ ಇದು ಆಕಸ್ಮಿಕವೋ‼️ ಅಥವಾ ದುಷ್ಟರ ಕೃತ್ಯವೋ⁉️

    • By admin
    • January 18, 2026
    • 69 views
    ಚಾರ್ಮಾಡಿ ಘಾಟಿಯ ತುತ್ತ ತುದಿಯಲ್ಲಿ ಕಾಣಿಸಿಕೊಂಡ ಬೆಂಕಿ ಇದು ಆಕಸ್ಮಿಕವೋ‼️ ಅಥವಾ ದುಷ್ಟರ ಕೃತ್ಯವೋ⁉️