ವಿಪತ್ತು ನಿರ್ವಹಣಾ ಘಟಕದಿಂದ ಐತಿಹಾಸಿಕ ಪ್ರವಾಸಿ ತಾಣವಾಗಿರುವ ನರಸಿಂಹಗಢದಲ್ಲಿ ಸ್ವಚ್ಚತಾ ಕಾರ್ಯಕ್ರಮ

ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ವಿಪತ್ತು ನಿರ್ವಹಣಾ ಘಟಕದ ಫೆಬ್ರವರಿ ತಿಂಗಳ ಮಾಸಿಕ ಸಭೆ ಭಾನುವಾರ ನಡಗ್ರಾಮದ ನರಸಿಂಹಗಢದಲ್ಲಿ ನಡೆಯಿತು. ಇದೇ ಸಂದರ್ಭದಲ್ಲಿ ಐತಿಹಾಸಿಕ ಪ್ರೇಕ್ಷಣೀಯ ಸ್ಥಳ ಸ್ವಚ್ಚತೆ ಸಾರುವ ನಿಟ್ಟಿನಲ್ಲಿ ಸ್ವಚ್ಛತಾ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು. ಜೊತೆಗೆ ಆಗಮಿಸಿದ್ದ ಚಾರಣಿಗರಿಗೆ ಮಾಹಿತಿ ನೀಡಲಾಯಿತು.

ಐತಿಹಾಸಿಕ ಪ್ರಸಿದ್ಧವಾದ, 1700 ಅಡಿ ಎತ್ತರದ ನರಸಿಂಹಗಢದಲ್ಲಿರುವ ಗಡಾಯಿ ಕಲ್ಲು ( ಜಮಲಾಬಾದ್ ಕೋಟೆ) ಚಾರಣ ಮತ್ತು ಗಡಾಯಿಕಲ್ಲು ಮೇಲ್ಬಾಗದಲ್ಲಿ ಸ್ವಚ್ಚತಾ ಶ್ರಮದಾನ ನಡೆಸಲಾಯಿತು.

ಬೆಳಿಗ್ಗೆ 7.30 ಕ್ಕೆ ಚಾರಣಕ್ಕೆ ಚಾಲನೆ ದೊರೆಯಿತು. ಜನಜಾಗೃತಿ ಪ್ರಾದೇಶಿಕ ನಿರ್ದೇಶಕರಾದ ಶ್ರೀಯುತ ವಿವೇಕ್ ವಿನ್ಸೆಂಟ್ ಪಾಯ್ಸ್ ಅವರು ಚಾಲನೆ ನೀಡಿ ಸ್ವಯಂಸೇವಕರಿಗೆ ಸ್ಪೂರ್ತಿ ತುಂಬಿದರು.

ವಿಪತ್ತು ನಿರ್ವಹಣಾ ಘಟಕದ ಸ್ವಯಂಸೇವಕರಿಗೆ ಚಾರಣ ಏರ್ಪಡಿಸಿದ ಉದ್ದೇಶದ ಬಗ್ಗೆ ಮಾಹಿತಿ ನೀಡಿ ವಿಪತ್ತು ಸ್ಪಂದನಾ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿರುವ ವಿವಿಧ ಘಟಕದ ಸ್ವಯಂಸೇವಕರಿಗೆ ಅಭಿನಂದನೆ ಸಲ್ಲಿಸಿದರು.

ಮೂವತ್ತಾರು ಸ್ವಯಂಸೇವಕರನ್ನು ಒಳಗೊಂಡಿರುವ ತಂಡವನ್ನು ನಾಲ್ಕು ಗುಂಪುಗಳಾಗಿ ವಿಭಾಗಿಸಿ ಚಾರಣ ಆರಂಭಿಸಲಾಯಿತು. ಸಂಯೋಜಕರ ನೇತ್ರತ್ವದಲ್ಲಿ ಸ್ವಯಂಸೇವಕರು ಉತ್ಸಾಹದಿಂದ ಗಗನಮುಖಿಯಾಗಿರುವ ಗುಡ್ಡವನ್ನು ಏರತೊಡಗಿದರು.

ಪ್ರವಾಸಿಗರಿಗೆ ಸ್ವಚ್ಛತೆ ಬಗ್ಗೆ ಅರಿವು ಮೂಡಿಸುವ ಕಾರ್ಯವನ್ನು ಇದೇ ಸಂದರ್ಭದಲ್ಲಿ ಮಾಡಲಾಯಿತು.

ಗುಡ್ಡ ಏರುತ್ತಿರುವಾಗ ಮತ್ತು ಇಳಿಯುತ್ತಿರುವಾಗ ಎದುರಾಗುವ ಪ್ರವಾಸಿಗರಿಗೆ ಸ್ವಚ್ಛತೆಯ ಬಗ್ಗೆ ಪಾಠವನ್ನು ಸ್ವಯಂಸೇವಕರು ಮಾಡಿದರು.

ಎಲ್ಲೆಂದರಲ್ಲಿ ಪ್ಲಾಸ್ಟಿಕ್ ಕವರ್ ಗಳನ್ನು, ಬಾಟಲಿಗಳನ್ನು ಎಸೆಯದಂತೆ ಮನವಿ ಮಾಡಿಕೊಳ್ಳಲಾಯಿತು.

ಸುಮಾರು 9.30 ಕ್ಕೆ ಗುಡ್ಡದ ತುದಿಯನ್ನು ಸ್ವಯಂಸೇವಕರ ತಂಡ ತಲುಪಿತ್ತು. ಗುಡ್ಡದ ನಾಲ್ಕೂ ಮೂಲೆಗಳಲ್ಲಿ ಸ್ವಚ್ಚತಾ ಶ್ರಮದಾನ ನಡೆಸಲಾಯಿತು. ಗುಡ್ಡದ ಇಳಿಜಾರಿನಲ್ಲಿ ಅಲ್ಲಲ್ಲಿ ಸಿಲುಕಿರುವ ಪ್ಲಾಸ್ಟಿಕ್ ಕವರ್ ಗಳು, ಬಾಟಲ್ ಗಳನ್ನು ಆರಿಸಿ ಚೀಲದಲ್ಲಿ ತುಂಬಿಸಿಕೊಳ್ಳಲಾಯಿತು. ಸುಮಾರು ಎರಡು ಗಂಟೆಗಳ ಕಾಲ ಶ್ರಮದಾನವನ್ನು ಗುಡ್ಡದ ತುದಿಯಲ್ಲಿ ಮಾಡಲಾಯಿತು.

ಸ್ವಯಂಸೇವಕರ ಶ್ರಮದಾನದ ಸೇವೆಯನ್ನು ಗಮನಿಸಿದ ಕೆಲವು ಪ್ರವಾಸಿಗರು ತಾವು ಸಹ ಕೆಲ ಸಮಯ ಶ್ರಮದಾನದಲ್ಲಿ ಕೈಜೋಡಿಸಿದ್ದು ವಿಶೇಷವಾಗಿತ್ತು.

ದಾರಿಯಲ್ಲಿ ಹಾಗೂ ಮೆಟ್ಟಿಲುಗಳಲ್ಲಿ ಬೆಳೆದು ನಿಂತು ಪ್ರವಾಸಿಗರ ದಾರಿಗೆ ಅಡ್ಡಲಾಗಿದ್ದ ಗಿಡಗಳು, ಮುಳ್ಳು ಕಂಟಿಗಳನ್ನು ತೆರವುಗೊಳಿಸಲಾಯಿತು.

ಕಲ್ಲಿನ ಗುಡ್ಡಗಳ ಮೇಲೆ ಅನಗತ್ಯ ಸಂದೇಶಗಳನ್ನು ಬರೆಯದಂತೆ ಪ್ರವಾಸಿಗರಲ್ಲಿ ಮನವಿ ಮಾಡಿಕೊಳ್ಳಲಾಯಿತು.

ಗುಡ್ಡದ ಮೇಲ್ಬಾಗದಲ್ಲಿ ಇರುವ ಕೆರೆಯ ದಡದಲ್ಲಿ ಪ್ಲಾಸ್ಟಿಕ್ ಬಾಟಲ್ ಗಳು ಹೇರಳವಾಗಿದ್ದು ಆರಿಸಿ ತೆಗೆಯಲಾಯಿತು. ಅಲ್ಲಲ್ಲಿ ಬಿದ್ದ ಮರದ ಗೆಲ್ಲುಗಳನ್ನು ಆರಿಸಿ ಕೆರೆಯ ನೀರಿಗೆ ಬೀಳದಂತೆ ತೆರವುಗೊಳಿಸಲಾಯಿತು.

ಗುಡ್ಡದ ಮೇಲೆ ಆರಿಸಿದ ಎಲ್ಲಾ ಪ್ಲಾಸ್ಟಿಕ್ ಬಾಟಲ್ ಗಳನ್ನು ಹೊತ್ತು ಗುಡ್ಡದ ಕೆಳಭಾಗಕ್ಕೆ ತಂದು ವಿಲೇವಾರಿ ಮಾಡಲಾಯಿತು.

ಅರಣ್ಯ ಇಲಾಖೆಯ ಅಧಿಕಾರಿಗಳು ಚಾರಣ ಮತ್ತು ಶ್ರಮದಾನದಕ್ಕೆ ವಿಶೇಷ ನೆರವು ನೀಡಿರುತ್ತಾರೆ.

ನಡ ಕನ್ಯಾಡಿ ಘಟಕ, ಬೆಳಾಲು ಘಟಕ, ಕೊಕ್ಕಡ ಘಟಕ, ಧರ್ಮಸ್ಥಳ ಘಟಕ, ನಾವೂರು ಘಟಕದ ಸ್ವಯಂಸೇವಕರು ಶ್ರಮದಾನದಲ್ಲಿ ಉತ್ಸಾಹದಿಂದ ಪಾಲ್ಗೊಂಡರು.

ವಿಪತ್ತು ನಿರ್ವಹಣಾ ಘಟಕದ ಸ್ವಯಂಸೇವಕರ ಸೇವಾಕಾರ್ಯ ಸರ್ವರ ಪ್ರಶಂಸೆಗೆ ಪಾತ್ರವಾಯಿತು. ಪ್ರವಾಸಿಗರ ಮನ ಗೆದ್ದಿತು.

ಈ ಸಂದರ್ಭದಲ್ಲಿ ವಿಪತ್ತು ನಿರ್ವಹಣಾ ಘಟಕದ ರಾಜ್ಯ ನಿರ್ದೇಶಕ ವಿವೇಕ್ ವಿನ್ಸಂಟ್ ಪಾಯಸ್, ಯೋಜನಾಧಿಕಾರಿ ಜೈವಂತ್ ಪಟಗಾರ್, ಜನಜಾಗೃತಿ ಪ್ರಾದೇಶಿಕ ಯೋಜನಾಧಿಕಾರಿ ನಾಗೇಶ್ ಎನ್.ಪಿ, ಉಜಿರೆ ವಲಯದ ಮೇಲ್ವಿಚಾರಕರಾದ ಶ್ರೀಮತಿ ಅಶ್ವಿತಾ, ವಿಪತ್ತು ನಿರ್ವಹಣಾ ಘಟಕದ ಸಂಯೋಜಕರಾದ ವಸಂತಿ, ಗಿರಿಜಾ ಹಾಗೂ ಕೊರಗಪ್ಪ ಹಾಗೂ ಬೆಳ್ತಂಗಡಿ ವಲಯದ ಸ್ವಯಂಸೇವಕರು ಉಪಸ್ಥಿತರಿದ್ದರು.

🖊️ವರದಿ: ಸ್ವಸ್ತಿಕ್ ಕನ್ಯಾಡಿ

Spread the love
  • Related Posts

    ಕಾಡಾನೆ ದಾಳಿಗೆ ವ್ಯಕ್ತಿ ಬಲಿ: ಬೆಳ್ತಂಗಡಿ ತಾಲೂಕಿನ ರೆಖ್ಯ ಗ್ರಾಮದ ಮುಚ್ಚಿರಡ್ಕದಲ್ಲಿ ದಾರುಣ ಘಟನೆ

    ನೆಲ್ಯಾಡಿ: ಬೆಳ್ತಂಗಡಿ ತಾಲೂಕಿನ ರೆಖ್ಯ ಗ್ರಾಮದ ನೇಲಡ್ಕ ಸಮೀಪದ ಮುಚ್ಚಿರಡ್ಕದಲ್ಲಿ ಕಾಡಾನೆ ದಾಳಿಗೆ ವ್ಯಕ್ತಿಯೊಬ್ಬರು ಮೃತಪಟ್ಟಿರುವ ದಾರುಣ ಘಟನೆ ಶನಿವಾರ ಸಂಜೆ ಸಂಭವಿಸಿದೆ.ಮೃತರನ್ನು ಇಡ್ಯಾಲು ನಿವಾಸಿ ಬಾಲಕೃಷ್ಣ ಗೌಡ (55) ಎಂದು ಗುರುತಿಸಲಾಗಿದೆ. ಬಾಲಕೃಷ್ಣ ಗೌಡ ಅವರು ಎಂದಿನಂತೆ ಕೆಲಸಕ್ಕೆ ತೆರಳಿದ್ದು,…

    Spread the love

    ಬೆಳ್ತಂಗಡಿಯಲ್ಲಿ ಭಾರಿ ಮಾದಕವಸ್ತು ಬೇಟೆ: ₹15.41 ಲಕ್ಷ ಮೌಲ್ಯದ ಗಾಂಜಾ, ಎಂಡಿಎಂಎ ಜಪ್ತಿ – ದುಬೈಗೆ ತೆರಳಬೇಕಿದ್ದ ಯುವಕ ಜೈಲುಪಾಲು

    ಬೆಳ್ತಂಗಡಿ, ಜು.30: ಬೆಳ್ತಂಗಡಿ ತಾಲೂಕಿನ ಕುವೆಟ್ಟು ಗ್ರಾಮದ ಪಿಲಿಚಂಡಿಕಲ್ಲು ಪ್ರದೇಶದಲ್ಲಿ ಬೆಳ್ತಂಗಡಿ ಪೊಲೀಸರು ನಡೆಸಿದ ಕಾರ್ಯಾಚರಣೆಯಲ್ಲಿ ₹15.41 ಲಕ್ಷ ಮೌಲ್ಯದ ಗಾಂಜಾ, ಎಂಡಿಎಂಎ (MDMA), ಕಾರು, ಆಟೋ ರಿಕ್ಷಾ ಹಾಗೂ ಮೊಬೈಲ್ ಸೇರಿದಂತೆ ವಿವಿಧ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವ…

    Spread the love

    You Missed

    ಕಾಡಾನೆ ದಾಳಿಗೆ ವ್ಯಕ್ತಿ ಬಲಿ: ಬೆಳ್ತಂಗಡಿ ತಾಲೂಕಿನ ರೆಖ್ಯ ಗ್ರಾಮದ ಮುಚ್ಚಿರಡ್ಕದಲ್ಲಿ ದಾರುಣ ಘಟನೆ

    • By admin
    • August 1, 2026
    • 2 views
    ಕಾಡಾನೆ ದಾಳಿಗೆ ವ್ಯಕ್ತಿ ಬಲಿ: ಬೆಳ್ತಂಗಡಿ ತಾಲೂಕಿನ ರೆಖ್ಯ ಗ್ರಾಮದ ಮುಚ್ಚಿರಡ್ಕದಲ್ಲಿ ದಾರುಣ ಘಟನೆ

    ಬೆಳ್ತಂಗಡಿಯಲ್ಲಿ ಭಾರಿ ಮಾದಕವಸ್ತು ಬೇಟೆ: ₹15.41 ಲಕ್ಷ ಮೌಲ್ಯದ ಗಾಂಜಾ, ಎಂಡಿಎಂಎ ಜಪ್ತಿ – ದುಬೈಗೆ ತೆರಳಬೇಕಿದ್ದ ಯುವಕ ಜೈಲುಪಾಲು

    • By admin
    • July 30, 2026
    • 6 views
    ಬೆಳ್ತಂಗಡಿಯಲ್ಲಿ ಭಾರಿ ಮಾದಕವಸ್ತು ಬೇಟೆ: ₹15.41 ಲಕ್ಷ ಮೌಲ್ಯದ ಗಾಂಜಾ, ಎಂಡಿಎಂಎ ಜಪ್ತಿ – ದುಬೈಗೆ ತೆರಳಬೇಕಿದ್ದ ಯುವಕ ಜೈಲುಪಾಲು

    ಐಸಿಯುನಲ್ಲಿ ಜೀವನ್ಮರಣ ಹೋರಾಟ ನಡೆಸುತ್ತಿರುವ ವಸಂತ ಗೌಡರ ತುರ್ತು ಚಿಕಿತ್ಸೆಗೆ ನೆರವಿಗಾಗಿ ಮನವಿ

    • By admin
    • July 30, 2026
    • 12 views
    ಐಸಿಯುನಲ್ಲಿ ಜೀವನ್ಮರಣ ಹೋರಾಟ ನಡೆಸುತ್ತಿರುವ ವಸಂತ ಗೌಡರ ತುರ್ತು ಚಿಕಿತ್ಸೆಗೆ  ನೆರವಿಗಾಗಿ ಮನವಿ

    ಬೆಳ್ತಂಗಡಿ ಕ್ಷೇತ್ರದ ಧಾರ್ಮಿಕ-ಐತಿಹಾಸಿಕ ಕ್ಷೇತ್ರಗಳ ಸಮಗ್ರ ಅಭಿವೃದ್ಧಿಗೆ ಉಪಮುಖ್ಯಮಂತ್ರಿಗೆ ಶಾಸಕ ಹರೀಶ್ ಪೂಂಜಾರವರಿಂದ ಮನವಿ

    • By admin
    • July 30, 2026
    • 10 views
    ಬೆಳ್ತಂಗಡಿ ಕ್ಷೇತ್ರದ ಧಾರ್ಮಿಕ-ಐತಿಹಾಸಿಕ ಕ್ಷೇತ್ರಗಳ ಸಮಗ್ರ ಅಭಿವೃದ್ಧಿಗೆ ಉಪಮುಖ್ಯಮಂತ್ರಿಗೆ ಶಾಸಕ ಹರೀಶ್ ಪೂಂಜಾರವರಿಂದ ಮನವಿ

    ಬೆಳ್ತಂಗಡಿ: ಗುರುವಾಯನಕೆರೆ-ವೇಣೂರಿನ ಹದಗೆಟ್ಟ ರಸ್ತೆಯ ತುರ್ತು ದುರಸ್ತಿ ಕಾರ್ಯ, ಶಾಸಕರ ತುರ್ತು ಸ್ಪಂದನೆ

    • By admin
    • July 29, 2026
    • 12 views
    ಬೆಳ್ತಂಗಡಿ: ಗುರುವಾಯನಕೆರೆ-ವೇಣೂರಿನ  ಹದಗೆಟ್ಟ ರಸ್ತೆಯ ತುರ್ತು ದುರಸ್ತಿ ಕಾರ್ಯ, ಶಾಸಕರ ತುರ್ತು ಸ್ಪಂದನೆ

    30 ವರ್ಷಗಳಿಂದ ಶಾಪಗ್ರಸ್ತವಾಗಿರುವ ಮುಂಡಾಜೆ ಗ್ರಾಮದ ಸೀಟು–ಕಾಯರ್ತೋಡಿ–ಕೊಡಂಗೆ–ಮೂಲಾರು ಕುಡೆಂಚಿ ರಸ್ತೆ: ಚುನಾವಣೆ ಬಂದಾಗ ಶಿಲಾನ್ಯಾಸ, ಬಳಿಕ ಮರೆತುಬಿಡುವ ಆರೋಪ

    • By admin
    • July 29, 2026
    • 11 views
    30 ವರ್ಷಗಳಿಂದ ಶಾಪಗ್ರಸ್ತವಾಗಿರುವ ಮುಂಡಾಜೆ ಗ್ರಾಮದ ಸೀಟು–ಕಾಯರ್ತೋಡಿ–ಕೊಡಂಗೆ–ಮೂಲಾರು ಕುಡೆಂಚಿ ರಸ್ತೆ: ಚುನಾವಣೆ ಬಂದಾಗ ಶಿಲಾನ್ಯಾಸ, ಬಳಿಕ ಮರೆತುಬಿಡುವ ಆರೋಪ