9 ನೇ ‘ಅಖಿಲ ಭಾರತೀಯ ಹಿಂದೂ ರಾಷ್ಟ್ರ ಅಧಿವೇಶನ’ದ ಎರಡನೇ ದಿನದಂದು ಹಿಂದೂಗಳ ಮೇಲಿನ ಆಘಾತಗಳ ಬಗ್ಗೆ ವಿಚಾರ ಮಂಥನ !

ಸೆಕ್ಯುಲರ್’ ಭಾರತದಲ್ಲಿ ಇರುವ ‘ಹಲಾಲ್ ಸರ್ಟಿಫಿಕೇಶನ್’ ವ್ಯವಸ್ಥೆಯು ಹಿಂದೂಗಳ ಮೇಲೆ ಹೇರಿದ ‘ಜಿಝಿಯಾ ತೆರಿಗೆ’ ಆಗಿದೆ ! – ಶ್ರೀ. ರಮೇಶ ಶಿಂದೆ, ರಾಷ್ಟ್ರೀಯ ವಕ್ತಾರರು, ಹಿಂದೂ ಜನಜಾಗೃತಿ ಸಮಿತಿ

‘ಝೊಮೆಟೊ’ನ ಮುಸಲ್ಮಾನ ಡೆಲಿವರಿ ಬಾಯ್‌ನಿಂದ ಪಾರ್ಸಲ್ ಪಡೆಯಲು ನಿರಾಕರಿಸಿದ್ದ ಹಿಂದೂ ಗ್ರಾಹಕನ ಮೇಲೆ ‘ಅನ್ನಕ್ಕೆ ಧರ್ಮ ಇರುವುದಿಲ್ಲ’, ಎಂದು ಹೇಳುತ್ತಾ ಸೆಕ್ಯುಲರ್‌ವಾದಿಗಳು ಕಾನೂನು ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದರು; ಆದರೆ ಇಂದು ಭಾರತದಲ್ಲಿ ಮಾಂಸಾಹಾರವಷ್ಟೇ ಅಲ್ಲದೇ, ಅನೇಕ ಶಾಖಾಹಾರಿ ಪದಾರ್ಥ, ಸೌಂದರ್ಯವರ್ಧಕಗಳು, ಔಷಧಿಗಳು, ಆಸ್ಪತ್ರೆಗಳು, ವಸತಿಸಮುಚ್ಚಯ, ಡೇಟಿಂಗ್ ಸೈಟ್ ಇತ್ಯಾದಿಗಳಿಗೆ ಇಸ್ಲಾಮೀ ಕಾನೂನಿಗನುಸಾರ ‘ಹಲಾಲ್ ಸರ್ಟಿಫಿಕೇಶನ್’ನ ವ್ಯವಸ್ಥೆಯನ್ನು ಜಾರಿ ಮಾಡಿದೆ. ಇದರಿಂದ ಇಸ್ಲಾಮಿ ಸಂಸ್ಥೆಗಳಿಗೆ ಸಾವಿರಾರು ಕೋಟಿ ರೂಪಾಯಿ ಸಿಗುತ್ತದೆ. ವಾಸ್ತವದಲ್ಲಿ ‘ಸೆಕ್ಯುಲರ್’ ಭಾರತದಲ್ಲಿ ಇಸ್ಲಾಮೀ ಅರ್ಥವ್ಯವಸ್ಥೆಗೆ ಚಾಲನೆ ನೀಡುವ ‘ಹಲಾಲ್ ಸರ್ಟಿಫಿಕೇಶನ್’ ವ್ಯವಸ್ಥೆಯು ಶೇ.80 ರಷ್ಟು ಹಿಂದೂಗಳ ಮೇಲೆ ಹೇರಿದ ‘ಜಿಝಿಯಾ ತೆರಿಗೆ’ಯೇ ಆಗಿದೆ ಹಾಗೂ ಅದನ್ನು ರದ್ದು ಪಡಿಸಲು ಹಿಂದೂಗಳು ಸಂಘಟಿತರಾಗುವುದು ಅಗತ್ಯವಿದೆ, ಎಂದು ಹಿಂದೂ ಜನಜಾಗೃತಿ ಸಮಿತಿಯ ರಾಷ್ಟ್ರೀಯ ವಕ್ತಾರರಾದ ಶ್ರೀ. ರಮೇಶ ಶಿಂದೆಯವರು ಪ್ರತಿಪಾದಿಸಿದರು. ಅವರು ‘೯ ನೇ ಅಖಿಲ ಭಾರತೀಯ ಹಿಂದೂ ರಾಷ್ಟ್ರ ಅಧಿವೇಶನ’ದ ಎರಡನೇ ದಿನದಂದು ‘ಹಲಾಲ್ ಸರ್ಟಿಫೀಕೆಟ್’ನ ಮಾಧ್ಯಮದಿಂದ ಭಾರತದಲ್ಲಿ ಆರ್ಥಿಕ ಜಿಹಾದ್ ಈ ವಿಷಯದ ಬಗ್ಗೆ ಮಾತನಾಡುತ್ತಿದ್ದರು.
ಈ ಅಧಿವೇಶನವು ಜುಲೈ 30 ರಿಂದ ಆಗಸ್ಟ್ 2 ಹಾಗೂ 6 ರಿಂದ 9 ಆಗಸ್ಟ್ 2020 ಈ ಕಾಲಾವಧಿಯಲ್ಲಿ ಸಾಯಂಕಾಲ 6.30 ರಿಂದ 8.30 ಈ ಸಮಯದಲ್ಲಿ ‘ಆನ್‌ಲೈನ್’ನಲ್ಲಿ ನಡೆಯುತ್ತಿದೆ. ಸಮಿತಿಯ ‘ಯೂ-ಟ್ಯೂಬ್’ ಚಾನೆಲ್ ಹಾಗೂ ಫೇಸ್‌ಬುಕ್ ಮೂಲಕ ಈ ಅಧಿವೇಶನವನ್ನು 68 ಸಾವಿರಕ್ಕಿಂತಲೂ ಹೆಚ್ಚು ಜನರು ಪ್ರತ್ಯಕ್ಷವಾಗಿ ನೋಡಿದರೆ, 3 ಲಕ್ಷ 45 ಸಾವಿರಕ್ಕಿಂತ ಹೆಚ್ಚು ಜನರ ತನಕ ವಿಷಯ ತಲುಪಿದೆ.


ಈ ಅಧಿವೇಶನದಲ್ಲಿ ತಮಿಳುನಾಡಿನ ಹಿಂದೂ ಮಕ್ಕಲ ಕಛ್ಚಿಯ ಸಂಸ್ಥಾಪಕ ಅಧ್ಯಕ್ಷ ಶ್ರೀ. ಅರ್ಜುನ ಸಂಪಥ ಇವರು ಮಾತನಾಡುತ್ತಾ, ‘ಕೊರೋನಾ ವಾಹಕ’ರಂತೆ ವರ್ತಿಸಿದ ತಬಲಿಗೀ ಜಮಾತ್‌ನ ದೆಹಲಿಯ ಕಾರ್ಯಕ್ರಮಕ್ಕೆ ತಮಿಳುನಾಡಿನಿಂದ 2,500 ಕ್ಕೂ ಹೆಚ್ಚು ಜನರು ಪಾಲ್ಗೊಂಡಿದ್ದರು. ಅವರು ರಾಜ್ಯಕ್ಕೆ ಮರಳಿದಾಗ ಅವರ ಮೇಲೆ ಕ್ರಮ ಕೈಗೊಳ್ಳುವುದಕ್ಕಿಂತ ಅವರಿಗೆ ಹೆಚ್ಚು ವೈದ್ಯಕೀಯ ಸೌಲಭ್ಯವನ್ನು ನೀಡಲಾಯಿತು ಗುಣಮುಖರಾದ ನಂತರ ಆಡಳಿತಾಧಿಕಾರಿಗಳು ಅವರನ್ನು ಸ್ವಾಗತಿಸಿದರು. ಅವರಿಗೆ ಕುರಾನ್ ಹಂಚಿದರು. ತದ್ವಿರುದ್ಧ ಈ ಕಾಲಾವಧಿಯಲ್ಲಿ ಹಿಂದೂಗಳಿಗೆ ವೈದ್ಯಕೀಯ ಸೌಲಭ್ಯಗಳನ್ನು ನೀಡುವಾಗ ತಾರತಮ್ಯ ಮಾಡಲಾಗುತ್ತಿತ್ತು’ ಎಂದು ಹೇಳಿದರು.

ತಮಿಳುನಾಡಿನ ಶಿವಸೇನೆಯ ಅಧ್ಯಕ್ಷ ಜಿ. ರಾಧಾಕೃಷ್ಣನ್ ಇವರು ಈ ಸಮಯದಲ್ಲಿ ಮಾತನಾಡುತ್ತಾ, ‘ಪೆರಿಯಾರ, ಅದೇರೀತಿ ದ್ರಮುಕನ ಕಾರ್ಯಕರ್ತರು ವಾಕ್ ಸ್ವಾತಂತ್ರ್ಯದ ಹೆಸರಿನಲ್ಲಿ ಹಿಂದೂ ಧರ್ಮ, ಪರಂಪರೆ, ಸಂಸ್ಕೃತಿ, ಸ್ತೋತ್ರ, ಅದೇರೀತಿ ಬ್ರಾಹ್ಮಣ ಸಮಾಜವನ್ನು ಅವಮಾನಿಸಿ ಹಿಂದೂದ್ವೇಷವನ್ನು ಮಾಡುತ್ತಿದ್ದಾರೆ. ಪೆರಿಯಾರನ ಪ್ರತಿಮೆಗೆ ಮಸಿ ಬಳಿಯುವ ಹಿಂದೂಗಳ ಮೇಲೆ ಕ್ರಮ ಕೈಗೊಳ್ಳಲಾಗುತ್ತದೆ; ಆದರೆ ಹಿಂದೂ ವಿರೋಧಕರ ಮೇಲೆ ಕ್ರಮ ಕೈಗೊಳ್ಳುತ್ತಿಲ್ಲ. ಎಲ್ಲಿ ಧರ್ಮಕ್ಕೆ ಆಘಾತವಾಗುತ್ತದೆಯೋ ಅಲ್ಲಿ ನಾವು ರಸ್ತೆಗಿಳಿಯುವೆವು, ಕಾನೂನಿನ ಮೂಲಕ ಹೋರಾಡುವೆವು’ ಎಂದು ಹೇಳಿದರು.


ಪಾಕಿಸ್ತಾನದಲ್ಲಿ 2 ಸಾವಿರಕ್ಕಿಂತಲೂ ಹೆಚ್ಚು ಹಿಂದೂಗಳಿಗೆ ಭಾರತೀಯ ಪೌರತ್ವ ಕೊಡಿಸುವ ‘ನಿಮಿತ್ತೆಕಮ’ ಸಂಸ್ಥೆಯ ಅಧ್ಯಕ್ಷ ಶ್ರೀ. ಜಯ ಅಹುಜಾ ಇವರು ಮಾತನಾಡುತ್ತಾ, ‘ಇಮ್ರಾನ್ ಖಾನ್ ಸರಕಾರವು ‘ರಿಯಾಸತ-ಎ-ಮದಿನಾ’ ಅಂದರೆ ‘ಕಾಫಿರಮುಕ್ತ ಭೂಮಿ’ ಈ ಸಂಕಲ್ಪನೆಯ ಅಡಿಯಲ್ಲಿ ಇಂದು ಪಾಕಿಸ್ತಾನದಲ್ಲಿ ಅಳಿದುಳಿದ 70 ಲಕ್ಷ ಹಿಂದೂಗಳ ವಂಶನಾಶ ಮಾಡುವ ಕೃತ್ಯವನ್ನು ಮಾಡುತ್ತಿದೆ. ಪ್ರತಿದಿನ ಹಿಂದೂ ಹುಡುಗಿಯರನ್ನು ಬಲವಂತವಾಗಿ ಅಪಹರಣ, ವಿವಾಹ, ನಂತರ ವೇಶ್ಯಾವಾಟಿಕೆಗೆ ನೂಕಿ ಅವರ ಶೋಷಣೆಯನ್ನು ಮಾಡಲಾಗುತ್ತಿದೆ. ಕೊರೋನಾ ಮಾಹಾಮಾರಿಯ ಕಾಲಾವಧಿಯಲ್ಲಿ ಹಸಿದಿರುವ 1600 ಹಿಂದೂಗಳಿಗೆ ಆಹಾರದ ‘ಕಿಟ್’ಗಳನ್ನು ನೀಡುವ ಬದಲಿಗೆ ಅವರನ್ನು ಮತಾಂತರಿಸಲಾಯಿತು’ ಎಂದು ಹೇಳಿದರು.

ಪಾಕಿಸ್ತಾನಿ ಹಿಂದೂಗಳಿಗಾಗಿ ಕಾರ್ಯ ಮಾಡುವ ಸೌ. ಮಿನಾಕ್ಷೀ ಶರಣ ಇವರು ಮಾತನಾಡುತ್ತಾ, ‘ಪಾಕಿಸ್ತಾನದಲ್ಲಿನ ಸಂತ್ರಸ್ತ ಹಿಂದೂಗಳು ಭಾರತದಲ್ಲಿ ಆಶ್ರಯ ಪಡೆಯುತ್ತಿದ್ದಾರೆ; ಅವರು ದೌರ್ಜನ್ಯವನ್ನು ಸಹಿಸಿದರೂ ಧರ್ಮವನ್ನು ಬದಲಾಯಿಸಲಿಲ್ಲ. ಇವರು ನಿಜವಾದ ಪ್ರಾಮಾಣಿಕ ಹಿಂದೂಗಳಾಗಿದ್ದಾರೆ, ಆದರೆ ಅವರು ಭಾರತದಲ್ಲಿ ಮುಖ್ಯ ಪ್ರವಾಹದಲ್ಲಿ ಇನ್ನೂ ಸೇರಿಕೊಂಡಿಲ್ಲ. ಅವರ ಸೆಳೆತ ಹಾಗೂ ಕೌಶಲ್ಯವನ್ನು ನೋಡಿ ಅವರಿಗೆ ಕೆಲಸವನ್ನು ಕೊಡಿಸಬೇಕು’ ಎಂದು ಹೇಳಿದರು.

‘ಪ್ರಜ್ಞತಾ’ ಸಂಸ್ಥೆಯ ಸಹಸಂಸ್ಥಾಪಕರಾದ ಶ್ರೀ. ಆಶಿಷ ಧರ ಇವರು ಮಾತನಾಡುತ್ತಾ, ನಾವು ರಾಷ್ಟ್ರ-ಧರ್ಮ ಇವುಗಳ ಮೇಲಿನ ಆಘಾತಗಳ ಬಗೆಗಿನ ಮಾಹಿತಿಯನ್ನು ತಲುಪಿಸುವ ಉದ್ದೇಶದಿಂದ ವಿಡಿಯೋವನ್ನು ನಿರ್ಮಿಸಿ ಪ್ರಸಾರ ಮಾಡುತ್ತೇವೆ. ನಿರಾಶ್ರಿತ ಕಾಶ್ಮೀರಿ ಪಂಡಿತರು, ರಾಮ ಮಂದಿರ ನಿರ್ಮಾಣ, ಬಾಂಗ್ಲಾದೇಶಿ ಹಿಂದೂಗಳ ವ್ಯಥೆ ಇತ್ಯಾದಿಗಳ ಬಗೆಗಿನ ಅನೇಕ ವಿಡಿಯೋಗಳಿಂದ ದೊಡ್ಡ ಪ್ರಮಾಣದಲ್ಲಿ ಜಾಗೃತಿಯಾಗಿದೆ ಎಂದು ಹೇಳಿದರು.

Spread the love
  • Related Posts

    ನ್ಯಾಯವಾದಿಗಳ ಸೌಹಾರ್ದ ಸಹಕಾರಿ ಸಂಘ ನಿಯಮಿತ ಇದರ ಬಂಟ್ವಾಳದ ನೂತನ ಶಾಖೆ ಉದ್ಘಾಟನೆ

    ಮಂಗಳೂರು: ನ್ಯಾಯವಾದಿಗಳ ಸೌಹಾರ್ದ ಸಹಕಾರಿ ಸಂಘ ನಿಯಮಿತ ಇದರ ಬಂಟ್ವಾಳದ ನೂತನ ಶಾಖೆಯು ಬಂಟ್ವಾಳದ ನ್ಯಾಯಾಲಯದ ಆವರಣದಲ್ಲಿ ಇಂದು ಉದ್ಘಾಟನೆಗೊಂಡಿದ್ದು, ಬಂಟ್ವಾಳದ ನೂತನ ಶಾಖೆಯ ಕಚೇರಿಯನ್ನು ಮಂಗಳೂರು ವಕೀಲರ ಸಂಘದ ಮಾಜಿ ಅಧ್ಯಕ್ಷರಾದ ಶ್ರೀ ಎಸ್ ಪಿ ಚಂಗಪ್ಪ ರವರು ಉದ್ಘಾಟಿಸಿದರು.…

    Spread the love

    ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ 54ನೇ ವರ್ಷದ ಉಚಿತ ಸಾಮೂಹಿಕ ವಿವಾಹ ಸಮಾರಂಭದ ವೈಭವ,106ಜೋಡಿ ಸಪ್ತಪದಿ ತುಳಿದು ದಾಂಪತ್ಯ ಜೀವನಕ್ಕೆ ಪಾದಾರ್ಪಣೆ

    ಧರ್ಮಸ್ಥಳ: ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಬುಧವಾರ ಸಂಜೆ ಗಂಟೆ 6.40ರ ಗೋಧೂಳಿ ಲಗ್ನ ಸುಮುಹೂರ್ತದಲ್ಲಿ ಅಮೃತವರ್ಷಿಣಿ ಸಭಾಭವನದಲ್ಲಿ ನಡೆದ 54ನೇ ವರ್ಷದ ಉಚಿತ ಸಾಮೂಹಿಕ ವಿವಾಹ ಸಮಾರಂಭದಲ್ಲಿ 106 ಜೊತೆ ವಧೂ-ವರರು ದಾಂಪತ್ಯ ಜೀವನಕ್ಕೆ ಪಾದಾರ್ಪಣೆ ಮಾಡಿದರು. ಬುಧವಾರ ಬೆಳಿಗ್ಗೆ ಧರ್ಮಾಧಿಕಾರಿ…

    Spread the love

    You Missed

    ನ್ಯಾಯವಾದಿಗಳ ಸೌಹಾರ್ದ ಸಹಕಾರಿ ಸಂಘ ನಿಯಮಿತ ಇದರ ಬಂಟ್ವಾಳದ ನೂತನ ಶಾಖೆ ಉದ್ಘಾಟನೆ

    • By admin
    • April 30, 2026
    • 208 views
    ನ್ಯಾಯವಾದಿಗಳ ಸೌಹಾರ್ದ ಸಹಕಾರಿ ಸಂಘ ನಿಯಮಿತ ಇದರ ಬಂಟ್ವಾಳದ ನೂತನ ಶಾಖೆ ಉದ್ಘಾಟನೆ

    ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ 54ನೇ ವರ್ಷದ ಉಚಿತ ಸಾಮೂಹಿಕ ವಿವಾಹ ಸಮಾರಂಭದ ವೈಭವ,106ಜೋಡಿ ಸಪ್ತಪದಿ ತುಳಿದು ದಾಂಪತ್ಯ ಜೀವನಕ್ಕೆ ಪಾದಾರ್ಪಣೆ

    • By admin
    • April 29, 2026
    • 54 views
    ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ 54ನೇ ವರ್ಷದ ಉಚಿತ ಸಾಮೂಹಿಕ ವಿವಾಹ ಸಮಾರಂಭದ ವೈಭವ,106ಜೋಡಿ ಸಪ್ತಪದಿ ತುಳಿದು ದಾಂಪತ್ಯ ಜೀವನಕ್ಕೆ ಪಾದಾರ್ಪಣೆ

    ಬೆಂಗಳೂರಿನಲ್ಲಿ ಘನಘೋರ ದುರಂತ ಬೌರಿಂಗ್ ಆಸ್ಪತ್ರೆಯ ಕೌಂಪೌಂಡು ಕುಸಿದು ಮೂವರು ಮಕ್ಕಳ ಸಹಿತ 8ಮಂದಿಯ ದುರ್ಮರಣ

    • By admin
    • April 29, 2026
    • 52 views
    ಬೆಂಗಳೂರಿನಲ್ಲಿ ಘನಘೋರ ದುರಂತ ಬೌರಿಂಗ್ ಆಸ್ಪತ್ರೆಯ ಕೌಂಪೌಂಡು ಕುಸಿದು ಮೂವರು ಮಕ್ಕಳ ಸಹಿತ 8ಮಂದಿಯ   ದುರ್ಮರಣ

    ಕುಂಟುತ್ತಿರುವ ಕಾಮಗಾರಿಯಿಂದ ಬಿಸಿಲ ಬೇಗೆಗೆ ಬೆಂಡಾದ ಜನ: ಟ್ರಾಫಿಕ್ ಜಾಮ್ ನಿಂದ ಹೈರಾಣಾದ ಜನ

    • By admin
    • April 29, 2026
    • 112 views
    ಕುಂಟುತ್ತಿರುವ ಕಾಮಗಾರಿಯಿಂದ ಬಿಸಿಲ ಬೇಗೆಗೆ ಬೆಂಡಾದ ಜನ: ಟ್ರಾಫಿಕ್ ಜಾಮ್ ನಿಂದ ಹೈರಾಣಾದ ಜನ

    ಬಿರು ಬಿಸಿಲಿನಲ್ಲಿ ಪ್ರಾಣಿ–ಪಕ್ಷಿಗಳಿಗೆ ನೀರುಣಿಸುವ ಮಹತ್ವದ ಕಾರ್ಯಕ್ಕೆ ಮುಂದಾಗೋಣ

    • By admin
    • April 29, 2026
    • 48 views
    ಬಿರು ಬಿಸಿಲಿನಲ್ಲಿ ಪ್ರಾಣಿ–ಪಕ್ಷಿಗಳಿಗೆ ನೀರುಣಿಸುವ ಮಹತ್ವದ ಕಾರ್ಯಕ್ಕೆ ಮುಂದಾಗೋಣ

    ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸೇವಾ ಟ್ರಸ್ಟ್ (ರಿ) ಬೆಳ್ತಂಗಡಿ ಇದರ ವತಿಯಿಂದ ಕು.ಪ್ರಾಪ್ತಿ ಎಂ ಗೌಡರಿಗೆ ಗೌರವ ಸನ್ಮಾನ

    • By admin
    • April 28, 2026
    • 89 views
    ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸೇವಾ ಟ್ರಸ್ಟ್ (ರಿ) ಬೆಳ್ತಂಗಡಿ ಇದರ ವತಿಯಿಂದ ಕು.ಪ್ರಾಪ್ತಿ ಎಂ ಗೌಡರಿಗೆ ಗೌರವ ಸನ್ಮಾನ