‘ಆನ್‌ಲೈನ್’ ಮಾಧ್ಯಮದಿಂದ ೯ ನೇ ‘ಅಖಿಲ ಭಾರತೀಯ ಹಿಂದೂ ರಾಷ್ಟ್ರ ಅಧಿವೇಶ’ವು ಉತ್ಸಾಹದಿಂದ ಆರಂಭ !

ವೈಚಾರಿಕ ಧ್ರುವೀಕರಣದ ಕಾಲದಲ್ಲಿ ಧರ್ಮದ ಪರವಾಗಿ ನಿಂತು ಹಿಂದೂ ರಾಷ್ಟ್ರದ ದಿಕ್ಕಿನತ್ತ ಮಾರ್ಗಕ್ರಮಣ ಮಾಡಿ ! – ಸದ್ಗುರು (ಡಾ.) ಚಾರುದತ್ತ ಪಿಂಗಳೆ, ರಾಷ್ಟ್ರೀಯ ಮಾರ್ಗದರ್ಶಕರು, ಹಿಂದೂ ಜನಜಾಗೃತಿ ಸಮಿತಿ

ಕೊರೋನಾದ ಮಹಾಮಾರಿಯಾಗಿರಲಿ ಅಥವಾ ಭವಿಷ್ಯದಲ್ಲಿ ಎದುರಾಗುವ ಮೂರನೇ ವಿಶ್ವಯುದ್ಧವಾಗಿರಲಿ, ಕಾಲಮಹಾತ್ಮೆಗನುಸಾರ ಮುಂಬರುವ ಕಾಲವು ಹಿಂದುತ್ವನಿಷ್ಠರಿಗೆ ಅನುಕೂಲಕರ ಕಾಲವಾಗಿರಲಿದೆ. ಅದಕ್ಕಾಗಿ ನಾವು ನಿರಂತರವಾಗಿ ಹಿಂದೂ ರಾಷ್ಟ್ರದ ಬೇಡಿಕೆಯನ್ನು ಮಾಡುತ್ತಿರಬೇಕು. ಕೊರೋನಾ ಮಹಾಮಾರಿಯ ಕಾಲದಲ್ಲಿ ತಬ್ಲಿಗೀ ಜಮಾತವು ‘ಕೊರೋನಾ ವಾಹಕ’ದ ಪಾತ್ರ ನಿರ್ವಹಿಸಿದರೆ, ಅನೇಕ ಹಿಂದುತ್ವನಿಷ್ಠ ಸಂಘಟನೆಗಳು ‘ಕೊರೋನಾ ಯೋಧ’ರ ಪಾತ್ರವನ್ನು ನಿರ್ವಹಿಸಿದವು. ಪ್ರಸಕ್ತ ಕಾಲದಲ್ಲಿ ರಾಜಕಾರಣ, ಶಿಕ್ಷಣಕ್ಷೇತ್ರ, ಪ್ರಸಾರ ಮಾಧ್ಯಮಗಳು, ಕಲಾಕ್ಷೇತ್ರ ಇತ್ಯಾದಿ ಎಲ್ಲ ಕ್ಷೇತ್ರಗಳಲ್ಲಿ ‘ದೇಶಭಕ್ತ ಹಾಗೂ ಧರ್ಮಪ್ರೇಮಿ’ಗಳ ವಿರುದ್ಧ ‘ದೇಶದ್ರೋಹಿ ಹಾಗೂ ಧರ್ಮವಿರೋಧಿ’ ಹೀಗೆ ಧ್ರುವೀಕರಣ ಆಗುತ್ತಿದೆ. ಈ ವೈಚಾರಿಕ ಧ್ರುವೀಕರಣದ ಕಾಲದಲ್ಲಿ ಧರ್ಮದ ಪರವಾಗಿ ಹಿಂದೂ ರಾಷ್ಟ್ರದ ದಿಕ್ಕಿನತ್ತ ಮಾರ್ಗಕ್ರಮಣ ಮಾಡಿರಿ, ಎಂದು ಹಿಂದೂ ಜನಜಾಗೃತಿ ಸಮಿತಿಯ ರಾಷ್ಟ್ರೀಯ ಮಾರ್ಗದರ್ಶಕ ಸದ್ಗುರು (ಡಾ.) ಚಾರುದತ್ತ ಪಿಂಗಳೆಯವರು ಕರೆ ನೀಡಿದ್ದಾರೆ. ಅವರು ‘೯ ನೇ ಅಖಿಲ ಭಾರತೀಯ ಹಿಂದೂ ರಾಷ್ಟ್ರ ಅಧಿವೇಶನ’ದ ಉದ್ಘಾಟನೆಯ ಸಮಯದಲ್ಲಿ ಮಾತನಾಡುತ್ತಿದ್ದರು.

ಈ ಅಧಿವೇಶನವು ಜುಲೈ ೩೦ ರಿಂದ ಆಗಸ್ಟ್ ೨ ಹಾಗೂ ೬ ರಿಂದ ೯ ಆಗಸ್ಟ್ ೨೦೨೦ ಈ ಕಾಲಾವಧಿಯಲ್ಲಿ ಸಾಯಂಕಾಲ ೬.೩೦ ರಿಂದ ೮.೩೦ ಈ ಸಮಯದಲ್ಲಿ
‘ಆನ್‌ಲೈನ್’ನಲ್ಲಿ ನಡೆಯುತ್ತಿದೆ. ಈ ಅಧಿವೇಶನಕ್ಕೆ ದೇಶ-ವಿದೇಶಗಳಿಂದ ವಿವಿಧ ಹಿಂದುತ್ವನಿಷ್ಠ ಸಂಘಟನೆಗಳ ಪ್ರತಿನಿಧಿಗಳು, ನ್ಯಾಯವಾದಿಗಳು, ವಿಚಾರವಂತರು, ಸಂಪಾದಕರು, ಉದ್ಯಮಿಗಳು ಮುಂತಾದವರು ದೊಡ್ಡ ಸಂಖ್ಯೆಯಲ್ಲಿ ‘ಆನ್‌ಲೈನ್’ನಲ್ಲಿ ಉಪಸ್ಥಿತರಿದ್ದರು. ಸಮಿತಿಯ ‘ಯೂ ಟ್ಯೂಬ್’ ಚಾನಲ್ ಹಾಗೂ ಫೇಸ್‌ಬುಕ್ ಮೂಲಕ ಈ ಅಧಿವೇಶನವನ್ನು 67 ಸಾವಿರಕ್ಕೂ ಹೆಚ್ಚು ಜನರು ಪ್ರತ್ಯಕ್ಷವಾಗಿ ನೋಡಿದರೆ, ‘3 ಲಕ್ಷದ 17 ಸಾವಿರಕ್ಕೂ ಹೆಚ್ಚು ಜನರ ತನಕ ಈ ವಿಷಯ ತಲುಪಿದೆ. ಹಿಂದೂ ಅಧಿವೇಶನಕ್ಕೆ ಬೆಂಬಲ ಸೂಚಿಸಲು ಅನೇಕರು ಟ್ವೀಟ್‌ಗಳನ್ನು ಮಾಡಲಾಯಿತು. #We_Want_Hindu_Rashtra ಈ ಹ್ಯಾಶಟ್ಯಾಗ್ ಭಾರತದಲ್ಲಿ ಮೊದಲ ಐದು ಟ್ರೆಂಡಿಂಗ್‌ದಲ್ಲಿತ್ತು. ಈ ಅಧಿವೇಶನವು HinduJagruti ಈ ಯೂಟ್ಯೂಬ್ ಚಾನೆಲ್ ಮೂಲಕ, ಅದೇರೀತಿ HinduAdhiveshan ಈ ಫೇಸ್‌ಬುಕ್ ಪೇಜ್‌ನಿಂದ ಲೈವ್ ಪ್ರಸಾರ ಮಾಡಲಾಗುತ್ತಿದೆ.

ಅಧಿವೇಶನದ ಆರಂಭದಲ್ಲಿ ಶಂಖನಾದ, ವೇದಮಂತ್ರಗಳ ಪಠಣ ಹಾಗೂ ಸದ್ಗುರು (ಡಾ) ಚಾರುದತ್ತ ಪಿಂಗಳೆ ಇವರ ಶುಭಹಸ್ತದಿಂದ ದೀಪ ಪ್ರಜ್ವಲನೆಯನ್ನು ಮಾಡಿ ಮಾಡಲಾಯಿತು. ಈ ಸಂದರ್ಭದಲ್ಲಿ ಸನಾತನದ ಧರ್ಮಪ್ರಚಾರಕರಾದ ಸದ್ಗುರು ಸತ್ಯವಾನ ಕದಮ ಇವರು ಹಿಂದೂ ಜನಜಾಗೃತಿ ಸಮಿತಿಯ ಪ್ರೇರಣಾಸ್ಥಾನ ಪರಾತ್ಪರ ಗುರು ಡಾ. ಜಯಂತ ಆಠವಲೆ ಇವರ ಆಶೀರ್ವಾದ ರೂಪಿ ಸಂದೇಶವನ್ನು ಓದಿದರು. ಸನಾತನ ಸಂಸ್ಥೆಯ ರಾಷ್ಟ್ರೀಯ ವಕ್ತಾರರಾದ ಶ್ರೀ. ಚೇತನ ರಾಜಹಂಸ ಇವರು ಅಧಿವೇಶನದ ಉದ್ದೇಶವನ್ನು ಹೇಳಿದರೆ, ಅದರ ನಿರೂಪಣೆಯನ್ನು ಶ್ರೀ. ಸುಮಿತ ಸಾಗವೇಕರ ಇವರು ಮಾಡಿದರು.

‘ಜಾತ್ಯತೀತ ಹಾಗೂ ವಿದೇಶಿ ಜನರ ಕುದೃಷ್ಟಿಯಿಂದಾಗಿ ನೇಪಾಳವನ್ನು ‘ಹಿಂದೂ ರಾಷ್ಟ್ರ’ವೆಂದು ಘೋಷಿಸಲು ಅಡಚಣೆಗಳು ನಿರ್ಮಾಣವಾಗುತ್ತಿವೆ. ನೇಪಾಳದ ಈಗಿನ ಸರಕಾರವು ಹಿಂದೂದ್ರೋಹಿಯಾಗಿದೆ. ನೇಪಾಳ ಹಾಗೂ ಭಾರತ ಇವರೆಡು ರಾಷ್ಟ್ರಗಳನ್ನು ‘ಹಿಂದೂ ರಾಷ್ಟ್ರ’ವನ್ನಾಗಿಸಲು ಜಗತ್ತಿನಾದ್ಯಂತ ಹಿಂದೂಗಳು ಸಂಘಟಿತರಾಗಿ ತಮ್ಮ ಯೋಗದಾನವನ್ನು ನೀಡಬೇಕು. ಸಣ್ಣ, ಸಾಂಪ್ರದಾಯಿಕ ಸ್ವಾರ್ಥವನ್ನು ಬಿಟ್ಟು ವ್ಯಾಪಕ ಹಿಂದುತ್ವದ ಆಗ್ರಹವನ್ನು ಹಿಡಿಯಬೇಕು’, ಎಂದು ರಾಷ್ಟ್ರೀಯ ಧರ್ಮಸಭಾ, ನೇಪಾಳದ ಅಧ್ಯಕ್ಷ ಡಾ. ಮಾಧವ ಭಟ್ಟರಾಯಿ ಇವರು ಹೇಳಿದರು.

ಬಾಲಿ (ಇಂಡೋನೇಷಿಯಾ)ದಿಂದ ಆನ್‌ಲೈನ್ ಮೂಲಕ ಜೋಡಿಸಲ್ಪಟ್ಟಿದ್ದ ಹಾಗೂ ‘ಇಂಟರನ್ಯಾಶನಲ್ ಡಿವೈನ್ ಲವ್ ಸೊಸೈಟಿ’ಯ ಅಧ್ಯಕ್ಷ ಅದೇರೀತಿ ‘ವರ್ಲ್ಡ್ ಹಿಂದೂ ಫೆಡರೇಶನ್’ ಇದರ ಉಪಾಧ್ಯಕ್ಷರಾದ ಶ್ರೀ ಧರ್ಮಯೆಶಾಜಿ ಇವರು, ‘ನಾವು ನಮ್ಮ ಕುಟುಂಬದವರನ್ನು ರಕ್ಷಿಸುವಂತೆಯೇ ನಮ್ಮ ಧರ್ಮದ ರಕ್ಷಣೆಯನ್ನು ಮಾಡಬೇಕು. ಧರ್ಮ ಇದು ಮೋಕ್ಷದಾಯಕವಾಗಿದೆ, ಆದ್ದರಿಂದ ಓರ್ವ ಸೇವಕನಂತೆ ಧರ್ಮದ ರಕ್ಷಣೆಯನ್ನು ಮಾಡಿದರೆ ಧರ್ಮ ನಮ್ಮ ರಕ್ಷಣೆಯನ್ನು ಮಾಡುವುದು’ ಎಂದು ಹೇಳಿದರು.

ಕರ್ನಾಟಕದ ಶ್ರೀರಾಮ ಸೇನೆಯ ಸಂಸ್ಥಾಪಕ ಅಧ್ಯಕ್ಷ ಶ್ರೀ. ಪ್ರಮೋದ ಮುತಾಲಿಕ್ ಇವರು ಮಾತನಾಡುತ್ತಾ, ‘ಕೊರೋನಾದಂತಹ ಇನ್ನು ಕೆಲವು ವಿಷಾಣುಗಳ ಸಂಕಟ ನಮ್ಮ ಮುಂದಿದೆ, ಅದೆಂದರೆ ಹಿಂದೂವಿರೋಧಿ ಹಾಗೂ ಹಿಂದೂದ್ರೋಹಿ ! ಎಲ್ಲ ರಾಷ್ಟ್ರಘಾತಕ ಶಕ್ತಿಗಳಿಗೆ ಉತ್ತರವೆಂದರೆ ‘ಹಿಂದೂ ರಾಷ್ಟ್ರ’ವೇ ಆಗಿದೆ’ ಎಂದು ಹೇಳಿದರು.

Spread the love
  • Related Posts

    ಪಹಲ್ಗಾಮ್ ಭಯೋತ್ಪಾದಕ ದಾಳಿಗೆ ಪೂರಕವಾಗಿ ಅಟ್ಟಾರಿ ಗಡಿ ಮುಚ್ಚುವಿಕೆ, ಸಿಂಧೂ ಜಲ ಒಪ್ಪಂದಕ್ಕೆ ತಡೆ ಸೇರಿದಂತೆ ಕೇಂದ್ರ ಸರ್ಕಾರದಿಂದ 5 ಪ್ರಮುಖ ನಿರ್ಧಾರ

    ಹೊಸದಿಲ್ಲಿ: ಪಹಲ್ಗಾಮ್ ಭಯೋತ್ಪಾದಕ ದಾಳಿಯ ಕುರಿತು ಬುಧವಾರ ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ಭದ್ರತಾ ಸಂಪುಟ ಸಮಿತಿಯ (ಸಿಸಿಎಸ್) ಉನ್ನತ ಮಟ್ಟದ ಸಭೆ ನಡೆಯಿತು. ಅಟ್ಟಾರಿ ಗಡಿ ಮುಚ್ಚುವಿಕೆ, ಸಿಂಧೂ ಜಲ ಒಪ್ಪಂದಕ್ಕೆ ತಡೆ ಸೇರಿದಂತೆ 5 ಪ್ರಮುಖ ನಿರ್ಧಾರದೊಂದಿಗೆ ಪಹಲ್ಗಾಮ್…

    Spread the love

    ಬೆಳ್ತಂಗಡಿ : ಉಜಿರೆಯಲ್ಲಿ ರಾಮೋತ್ಸವ ಕಾರ್ಯಕ್ರಮ ಹಿನ್ನಲೆ ಕಾರ್ಯಕ್ರಮಕ್ಕೆ ಬರುತ್ತಿದ್ದ ಪುನೀತ್ ಕೆರೆಹಳ್ಳಿಯನ್ನು ತಡೆದ ಪೊಲೀಸರು!!!

    ಬೆಳ್ತಂಗಡಿ : ಉಜಿರೆ ಕೃಷ್ಣಾನುಗ್ರಹದ ಸಭಾಭವನದಲ್ಲಿ ವಿಶ್ವ ಹಿಂದೂ ಪರಿಷತ್ ಬೆಳ್ತಂಗಡಿ ಪ್ರಖಂಡ ಏ.19 ರಂದು ಸಂಜೆ ಆಯೋಜಿಸಲಾಗಿದ್ದ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ಚಕ್ರವರ್ತಿ ಸೂಲಿಬೆಲೆ ಆಗಮಿತಿ ಭಾಷಣ ಮಾಡಲಿದ್ದಾರೆ. ಈ ಕಾರ್ಯಕ್ರಮ ವೀಕ್ಷಿಸಲು ಹಿಂದೂ ಗೋ ರಕ್ಷಕ ಪುನೀತ್ ಕೆರೆಹಳ್ಳಿ…

    Spread the love

    You Missed

    ಪಹಲ್ಗಾಮ್ ಭಯೋತ್ಪಾದಕ ದಾಳಿಗೆ ಪೂರಕವಾಗಿ ಅಟ್ಟಾರಿ ಗಡಿ ಮುಚ್ಚುವಿಕೆ, ಸಿಂಧೂ ಜಲ ಒಪ್ಪಂದಕ್ಕೆ ತಡೆ ಸೇರಿದಂತೆ ಕೇಂದ್ರ ಸರ್ಕಾರದಿಂದ 5 ಪ್ರಮುಖ ನಿರ್ಧಾರ

    • By admin
    • April 23, 2025
    • 105 views
    ಪಹಲ್ಗಾಮ್ ಭಯೋತ್ಪಾದಕ ದಾಳಿಗೆ ಪೂರಕವಾಗಿ ಅಟ್ಟಾರಿ ಗಡಿ ಮುಚ್ಚುವಿಕೆ, ಸಿಂಧೂ ಜಲ ಒಪ್ಪಂದಕ್ಕೆ ತಡೆ ಸೇರಿದಂತೆ ಕೇಂದ್ರ ಸರ್ಕಾರದಿಂದ 5 ಪ್ರಮುಖ ನಿರ್ಧಾರ

    ಟೀಕೆಗಳು ಸಾಯುತ್ತದೆ ನಾವು ಮಾಡೋ ಕೆಲಸಗಳು ಶಾಶ್ವತವಾಗಿ ಉಳಿಯುತ್ತದೆ: ಡಿ.ಕೆ.ಶಿ

    • By admin
    • April 20, 2025
    • 64 views
    ಟೀಕೆಗಳು ಸಾಯುತ್ತದೆ ನಾವು ಮಾಡೋ ಕೆಲಸಗಳು ಶಾಶ್ವತವಾಗಿ ಉಳಿಯುತ್ತದೆ: ಡಿ.ಕೆ.ಶಿ

    ಬೆಳ್ತಂಗಡಿ : ಉಜಿರೆಯಲ್ಲಿ ರಾಮೋತ್ಸವ ಕಾರ್ಯಕ್ರಮ ಹಿನ್ನಲೆ ಕಾರ್ಯಕ್ರಮಕ್ಕೆ ಬರುತ್ತಿದ್ದ ಪುನೀತ್ ಕೆರೆಹಳ್ಳಿಯನ್ನು ತಡೆದ ಪೊಲೀಸರು!!!

    • By admin
    • April 19, 2025
    • 194 views
    ಬೆಳ್ತಂಗಡಿ : ಉಜಿರೆಯಲ್ಲಿ ರಾಮೋತ್ಸವ ಕಾರ್ಯಕ್ರಮ ಹಿನ್ನಲೆ ಕಾರ್ಯಕ್ರಮಕ್ಕೆ ಬರುತ್ತಿದ್ದ ಪುನೀತ್ ಕೆರೆಹಳ್ಳಿಯನ್ನು ತಡೆದ ಪೊಲೀಸರು!!!

    ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಕಾಮಗಾರಿ ನಡೆಯುತ್ತಿರುವ ಚರಂಡಿಗೆ ಬಿದ್ದ ಆಟೋ, ಚಾಲಕ ಪವಾಡ ಸದೃಶ ಪಾರು

    • By admin
    • April 18, 2025
    • 197 views
    ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಕಾಮಗಾರಿ ನಡೆಯುತ್ತಿರುವ ಚರಂಡಿಗೆ ಬಿದ್ದ ಆಟೋ, ಚಾಲಕ ಪವಾಡ ಸದೃಶ ಪಾರು

    ಮಂಗಳೂರಿನ ಹಳೇ ಬಂದರಿನಿಂದ ಲಕ್ಷದೀಪಕ್ಕೆ ಹೈ ಸ್ಪೀಡ್ ಫೇರೀ ಪ್ರಾಯೋಗಿಕ ಸಂಚಾರ ಪುನರಾರಂಭ

    • By admin
    • April 9, 2025
    • 100 views
    ಮಂಗಳೂರಿನ ಹಳೇ ಬಂದರಿನಿಂದ ಲಕ್ಷದೀಪಕ್ಕೆ ಹೈ ಸ್ಪೀಡ್ ಫೇರೀ ಪ್ರಾಯೋಗಿಕ ಸಂಚಾರ ಪುನರಾರಂಭ

    ಪಿಯುಸಿ ಫಲಿತಾಂಶ ಪ್ರಕಟ ಉಡುಪಿಗೆ ಮೊದಲ ಸ್ಥಾನ

    • By admin
    • April 8, 2025
    • 118 views
    ಪಿಯುಸಿ ಫಲಿತಾಂಶ ಪ್ರಕಟ ಉಡುಪಿಗೆ ಮೊದಲ ಸ್ಥಾನ