ನಾಳೆಯಿಂದ 9ನೇಯ ಅಖಿಲ ಭಾರತೀಯ ಹಿಂದೂ ರಾಷ್ಟ್ರ ಅಧಿವೇಶನವು ಆನ್‌ಲೈನ್ ನಲ್ಲಿ ಪ್ರಸಾರ

ಮಂಗಳೂರು: ಮೋದಿ ಸರಕಾರ ಕೇಂದ್ರದಲ್ಲಿ ಎರಡನೆಯ ಬಾರಿಗೆ ಬಂದ ಬಳಿಕ ಕಾಶ್ಮೀರಿ ಹಿಂದೂಗಳ ಪುನರ್ವಸತಿಯ ದೃಷ್ಟಿಯಿಂದ ಕಲಮ್ ೩೭೦ ರದ್ದುಗೊಳಿಸುವುದು, ಪೌರತ್ವ ತಿದ್ದುಪಡಿ ಕಾನೂನು (ಸಿ.ಎ.ಎ.), ಸರ್ವೋಚ್ಚ ನ್ಯಾಯಾಲಯವು ರಾಮಮಂದಿರದ ಪರವಾಗಿ ನೀಡಿರುವ ಐತಿಹಾಸಿಕ ತೀರ್ಪು, ಅಲ್ಲದೇ ೫ ಆಗಸ್ಟ್ ೨೦೨೦ ರಂದು ಆಯೋಜಿಸಲಾಗಿರುವ ರಾಮಮಂದಿರದ ಭೂಮಿಪೂಜೆ ಮುಂತಾದ ಸಕಾರಾತ್ಮಕ ವಿಷಯಗಳು ಘಟಿಸುತ್ತಿವೆ. ಇದರಲ್ಲಿ ಪೌರತ್ವ ತಿದ್ದುಪಡಿ ಕಾನೂನು ‘ಅಖಿಲ ಭಾರತೀಯ ಹಿಂದೂ ರಾಷ್ಟ್ರ ಅಧಿವೇಶನದ ಫಲಶ್ರುತಿಯಾಗಿದೆ. ೨೦೧೪ ನೇ ಇಸವಿಯಲ್ಲಿ ‘ಹಿಂದೂ ರಾಷ್ಟ್ರ ಅಧಿವೇಶನದಲ್ಲಿ ಆ ರೀತಿಯ ಠರಾವನ್ನು ಅಂಗೀಕರಿಸಲಾಗಿತ್ತು. ‘ಸೆಕ್ಯುಲರ್ (ಜಾತ್ಯತೀತ) ಪಕ್ಷಗಳ ಅಧಿಕಾರವಿರುವ ರಾಜ್ಯಗಳಲ್ಲಿ ‘ಸಿ.ಎ.ಎ. ಕಾನೂನು ಜಾರಿಗೊಳಿಸದಿರಲು ನಿರ್ಧರಿಸುವುದು ಮತ್ತು ಹಿಂದೂಬಹುಸಂಖ್ಯಾತ ಭಾರತದಲ್ಲಿ ನೊಂದ ಹಿಂದೂಗಳಿಗೆ ನ್ಯಾಯ ಸಿಗದಿರುವುದು, ಇದು ಮಾನವತೆಯ ಹಾಗೆಯೇ ಪ್ರಜಾಪ್ರಭುತ್ವದ ವೈಫಲ್ಯವಾಗಿದೆ.

೨೦೧೧ ರ ಜನಗಣತಿಗನುಸಾರ ‘೨೦೬೧ ರಲ್ಲಿ ಭಾರತದಲ್ಲಿ ಹಿಂದೂಗಳು ಅಲ್ಪಸಂಖ್ಯಾತರಾಗುವರು ಎನ್ನುವಂತಹ ಸ್ಥಿತಿಯಿದೆ. ಈ ಹಿನ್ನೆಲೆಯಲ್ಲಿ ಹಿಂದೂಗಳಿಗೆ ಅವರ ನ್ಯಾಯಯುತವಾದ ಹಕ್ಕು ದೊರಕಲು ಭಾರತವನ್ನು ‘ಹಿಂದೂ ರಾಷ್ಟ್ರವೆಂದು ಘೋಷಿಸಬೇಕು, ಈ ಪ್ರಮುಖ ಬೇಡಿಕೆಗಳಿಗಾಗಿ ‘೯ ನೆಯ ಅಖಿಲ ಭಾರತೀಯ ಹಿಂದೂ ರಾಷ್ಟ್ರ ಅಧಿವೇಶನವನ್ನು ಆಯೋಜಿಸಲಾಗಿದೆ, ಎಂಬ ಮಾಹಿತಿಯನ್ನು ಹಿಂದೂ ಜನಜಾಗೃತಿ ಸಮಿತಿಯ ರಾಷ್ಟ್ರೀಯ ಮಾರ್ಗದರ್ಶಕರಾದ ಸದ್ಗುರು (ಡಾ.) ಚಾರುದತ್ತ ಪಿಂಗಳೆಯವರು ನೀಡಿದರು. ಅವರು ‘೯ ನೆಯ ಅಖಿಲ ಭಾರತೀಯ ಹಿಂದೂ ರಾಷ್ಟ್ರ ಅಧಿವೇಶನದ ಮಾಹಿತಿಯನ್ನು ನೀಡಲು ಆಯೋಜಿಸಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡುತ್ತಿದ್ದರು.


ಸದ್ಗುರು(ಡಾ.) ಪಿಂಗಳೆಯವರು ಮುಂದೆ ಮಾತನಾಡುತ್ತಾ, “ಈ ಅಧಿವೇಶನ ೩೦ ಜುಲೈ ರಿಂದ ೨ ಆಗಸ್ಟ್ ಮತ್ತು ೬ ರಿಂದ ೯ ಆಗಸ್ಟ್ ೨೦೨೦ ಈ ಕಾಲಾವಧಿಯಲ್ಲಿ ಸಾಯಂಕಾಲ ೬.೩೦ ರಿಂದ ೮.೩೦ ಈ ಸಮಯದಲ್ಲಿ ‘ಆನ್‌ಲೈನ್ ಪದ್ಧತಿಯಲ್ಲಿ ನಡೆಸಲಾಗುವುದು. ೯ ನೆಯ ಅಖಿಲ ಭಾರತೀಯ ಹಿಂದೂ ರಾಷ್ಟ್ರ ಅಧಿವೇಶನದಲ್ಲಿ ದೇಶ-ವಿದೇಶಗಳಿಂದ ವಿವಿಧ ಹಿಂದುತ್ವನಿಷ್ಠ ಸಂಘಟನೆಗಳ ಮುಖಂಡರು, ಕಾರ್ಯಕರ್ತರು, ನ್ಯಾಯವಾದಿಗಳು, ವಿಚಾರವಂತರು, ಸಂಪಾದಕರು, ಉದ್ಯಮಿಗಳು ಮುಂತಾದವರು ಬೃಹತ್ ಸಂಖ್ಯೆಯಲ್ಲಿ ‘ಆನ್‌ಲೈನ್ ಪದ್ಧತಿಯಲ್ಲಿ ಭಾಗವಹಿಸಲಿದ್ದಾರೆ ಎಂದು ತಿಳಿಸಿದರು.


ಅಧಿವೇಶನದ ಬಗ್ಗೆ ಹೆಚ್ಚಿನ ಮಾಹಿತಿಯನ್ನು ನೀಡಿದ ಹಿಂದೂ ಜನಜಾಗೃತಿ ಸಮಿತಿಯ ರಾಷ್ಟ್ರೀಯ ವಕ್ತಾರರಾದ ಶ್ರೀ. ರಮೇಶ ಶಿಂದೆಯವರು, ‘ಕಳೆದ ೮ ವರ್ಷಗಳಿಂದ ಗೋವಾದಲ್ಲಿ ನಡೆಯುತ್ತಿರುವ ಈ ಅಧಿವೇಶನಕ್ಕೆ ಅತ್ಯುತ್ತಮ ಸ್ಪಂದನೆ ದೊರಕಿತು; ಆದರೆ ‘ಕೋವಿಡ್-೧೯ರ ವಿಪತ್ತಿನಿಂದಾಗಿ ಈ ಬಾರಿಯ ಅಧಿವೇಶನವನ್ನು ಆನ್‌ಲೈನ್ ಪದ್ಧತಿಯಲ್ಲಿ ನಡೆಸಬೇಕಾಗಿದೆ. ಅಯೋಧ್ಯೆಯಲ್ಲಿ ರಾಮಮಂದಿರದ ಭೂಮಿಪೂಜೆಗೆ ಕೆಲವು ‘ಸೆಕ್ಯುಲರ್(ಜಾತ್ಯತೀತ)ವಾದಿಗಳು ಅಡ್ಡಿ ಪಡಿಸುತ್ತಿದ್ದಾರೆ. ತದ್ವಿರುದ್ಧ ಪಾಕಿಸ್ತಾನದಲ್ಲಿ ಒಂದು ದೇವಸ್ಥಾನವನ್ನು ಕಟ್ಟುವುದೂ ಸಾಧ್ಯವಿಲ್ಲದ ಪರಿಸ್ಥಿತಿಯಿದೆ. ಪಾಕಿಸ್ತಾನದಲ್ಲಿ ದೇವಸ್ಥಾನಕ್ಕೆ ಸ್ಥಾನವಿಲ್ಲ ಎಂದು ಅಲ್ಲಿಯ ಜನರು ಹೇಳುತ್ತಿದ್ದಾರೆ. ಹಿಂದೂಬಹುಸಂಖ್ಯಾತ ಭಾರತದಲ್ಲಿ ಮಾತ್ರ ಮಸೀದಿಗಳ ಸಂಖ್ಯೆ ಹೆಚ್ಚಳವಾಗುತ್ತಿದೆ. ಆದುದರಿಂದ ಭಾರತವು ಈಗಲಾದರೂ ‘ಹಿಂದೂ ರಾಷ್ಟ್ರವೆಂದು ಘೋಷಿಸಲ್ಪಡಬೇಕು. ಹಿಂದೂ ಸಂಘಟನೆ ಮತ್ತು ಸಂಪ್ರದಾಯಕ್ಕಾಗಿ ಅಂದರೆ ರಾಷ್ಟ್ರಹಿತ ಮತ್ತು ಧರ್ಮಹಿತಕ್ಕಾಗಿ ಯೋಗದಾನ ನೀಡುವುದು ಹಾಗೂ ಸಮಾನ ಕೃತಿಯ ಕಾರ್ಯಕ್ರಮವನ್ನು ನಿರ್ಧರಿಸುವುದು ಅದರೊಂದಿಗೆ ಹಿಂದೂಹಿತದ ನಿರ್ಣಯವನ್ನು ಅಂಗೀಕರಿಸುವುದು ಈ ‘ಆನ್‌ಲೈನ್’ ಅಧಿವೇಶನದ ಸ್ವರೂಪವಾಗಿರಲಿದೆ ಎಂದು ತಿಳಿಸಿದರು.


ಈ ಸಂದರ್ಭದಲ್ಲಿ ಸನಾತನ ಸಂಸ್ಥೆಯ ರಾಷ್ಟ್ರೀಯ ವಕ್ತಾರರಾದ ಶ್ರೀ. ಚೇತನ ರಾಜಹಂಸ ಇವರು ಮಾತನಾಡುತ್ತಾ, “ಮುಂಬರುವ ಆಪತ್ಕಾಲದ ದೃಷ್ಟಿಯಿಂದ ಹಿಂದೂಗಳಿಗೆ ಸಹಾಯ ಮಾಡಲು ಹಿಂದುತ್ವನಿಷ್ಠರಿಗೆ ವಿವಿಧ ಕೌಶಲ್ಯಗಳನ್ನು ಅಭಿವೃದ್ಧಿಪಡಿಸಿಕೊಳ್ಳಬೇಕಾಗಿದೆ. ಈ ಸೇವಾಕಾರ್ಯದ ತರಬೇತಿಯನ್ನು ನೀಡಲು ‘ಹಿಂದೂ ರಾಷ್ಟ್ರ ಸಂಘಟಕ ಅಧಿವೇಶನವನ್ನು ೧೩ ರಿಂದ ೧೬ ಆಗಸ್ಟ್ ಈ ಕಾಲಾವಧಿಯಲ್ಲಿ ಆಯೋಜಿಸಲಾಗಿದೆ, ಎಂದರು.

ಈ ಅಧಿವೇಶನವನ್ನು ಈ ಕೆಳಗಿನ ‘ಲಿಂಕ್ಗಳಲ್ಲಿ ನೇರಪ್ರಸಾರ ಮಾಡಲಾಗುತ್ತಿದ್ದು ಇದನ್ನು ಎಲ್ಲರೂ ವೀಕ್ಷಿಸಬಹುದಾಗಿದೆ. ಹಿಂದುತ್ವನಿಷ್ಠರು ಇದರ ಲಾಭವನ್ನು ಪಡೆದುಕೊಳ್ಳಬೇಕು http://www.youtube.com/HinduJagruti

https://www.facebook.com/HinduAdhiveshan

Spread the love
  • Related Posts

    ಬೆಳ್ತಂಗಡಿ ತಾಲೂಕಿನಾದ್ಯಂತ ಗುಡುಗು-ಸಿಡಿಲು ಸಹಿತ ಮಳೆ: ನಿಡ್ಲೆ–ಕಳೆಂಜ ರಸ್ತೆಯಲ್ಲಿ ಮರ ಬಿದ್ದು ವಿದ್ಯುತ್ ಲೈನ್ ಹಾನಿ

    Belthangady: ತಾಲೂಕಿನ ಹಲವೆಡೆ ಶನಿವಾರ ಸಂಜೆ ಉತ್ತಮ ಮಳೆಯಾಗಿದೆ.Shishila, Kokkada, Dharmasthala, Arasinamakki, Ujire ಹಾಗೂ Nidle ಮೊದಲಾದ ಕಡೆಗಳಲ್ಲಿ ಗುಡುಗು-ಸಿಡಿಲು ಸಹಿತ ಉತ್ತಮ ಮಳೆ ಸುರಿದಿದೆ. ಉಳಿದ ಕೆಲವು ಪ್ರದೇಶಗಳಲ್ಲಿ ತುಂತುರು ಹಾಗೂ ಸಾಮಾನ್ಯ ಮಳೆಯಾಗಿದೆ.ತಾಲೂಕಿನಲ್ಲಿ ಫೆಬ್ರವರಿ 21ರಂದು ಕೆಲವೆಡೆ…

    Spread the love

    “ಬಂಗಾಡಿ ಕೊಲ್ಲಿ” 28ನೇ ವರ್ಷದ ‘ಸೂರ್ಯ – ಚಂದ್ರ’ ಜೋಡುಕರೆ ಕಂಬಳ

    ಬಂಗಾಡಿ: ಸೂರ್ಯ-ಚಂದ್ರ ಹೋಡುಕರೆ ಕಂಬಳ ಸಮಿತಿ ನೇತೃತ್ವದಲ್ಲಿ ಕರ್ನಾಟಕ ರಾಜ್ಯ ಕಂಬಳ ಅಸೋಸಿಯೇಶನ್, ಕರ್ನಾಟಕ ಸರಕಾರ ಮತ್ತು ಯುವಜನ ಸಬಲೀಕರಣ ಹಾಗೂ ಕ್ರೀಡಾ ಇಲಾಖೆಯ ಸಹಭಾಗಿತ್ವದೊಂದಿಗೆ 28ನೇ ವರ್ಷದ ಹೊನಲು ಬೆಳಕಿನ ಸೂರ್ಯ-ಚಂದ್ರ ಜೋಡುಕರೆ “ಬಂಗಾಡಿ ಕೊಲ್ಲಿ” ಬಯಲು ಕಂಬಳವು ಶ್ರೀ…

    Spread the love

    You Missed

    ಬೆಳ್ತಂಗಡಿ ತಾಲೂಕಿನಾದ್ಯಂತ ಗುಡುಗು-ಸಿಡಿಲು ಸಹಿತ ಮಳೆ: ನಿಡ್ಲೆ–ಕಳೆಂಜ ರಸ್ತೆಯಲ್ಲಿ ಮರ ಬಿದ್ದು ವಿದ್ಯುತ್ ಲೈನ್ ಹಾನಿ

    • By admin
    • March 15, 2026
    • 60 views
    ಬೆಳ್ತಂಗಡಿ ತಾಲೂಕಿನಾದ್ಯಂತ ಗುಡುಗು-ಸಿಡಿಲು ಸಹಿತ ಮಳೆ: ನಿಡ್ಲೆ–ಕಳೆಂಜ ರಸ್ತೆಯಲ್ಲಿ ಮರ ಬಿದ್ದು ವಿದ್ಯುತ್ ಲೈನ್ ಹಾನಿ

    “ಬಂಗಾಡಿ ಕೊಲ್ಲಿ” 28ನೇ ವರ್ಷದ ‘ಸೂರ್ಯ – ಚಂದ್ರ’ ಜೋಡುಕರೆ ಕಂಬಳ

    • By admin
    • March 14, 2026
    • 101 views
    “ಬಂಗಾಡಿ ಕೊಲ್ಲಿ” 28ನೇ ವರ್ಷದ ‘ಸೂರ್ಯ – ಚಂದ್ರ’ ಜೋಡುಕರೆ ಕಂಬಳ

    ಹಾವು ಕಡಿತಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಕಾರೆಗುಡ್ಡೆಯ ಮಹೇಶ್ ಮನೆಗೆ ಡಿ.ಕಿರಣ್ ಚಂದ್ರ ಪುಷ್ಪಗಿರಿ ಭೇಟಿ

    • By admin
    • March 14, 2026
    • 43 views
    ಹಾವು ಕಡಿತಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಕಾರೆಗುಡ್ಡೆಯ ಮಹೇಶ್ ಮನೆಗೆ  ಡಿ.ಕಿರಣ್ ಚಂದ್ರ ಪುಷ್ಪಗಿರಿ ಭೇಟಿ

    KSRTC ಬಸ್ ಹಾಗೂ ಕಾರಿನ ನಡುವೆ ಭೀಕರ ರಸ್ತೆ ಅಪಘಾತ ಮೂವರು ಸಾವು

    • By admin
    • March 13, 2026
    • 610 views
    KSRTC ಬಸ್ ಹಾಗೂ ಕಾರಿನ ನಡುವೆ ಭೀಕರ ರಸ್ತೆ ಅಪಘಾತ ಮೂವರು ಸಾವು

    ಎಕ್ಸೆಲ್ ಪಿ.ಯು ಕಾಲೇಜಿನಲ್ಲಿ ಎಲೆಕ್ಟ್ರಿಷಿಯನ್ ಮತ್ತು ಪ್ಲಂಬರ್ ಹುದ್ದೆಗಳಿಗೆ ಅರ್ಜಿ ಆಹ್ವಾನ

    • By admin
    • March 10, 2026
    • 150 views
    ಎಕ್ಸೆಲ್ ಪಿ.ಯು ಕಾಲೇಜಿನಲ್ಲಿ ಎಲೆಕ್ಟ್ರಿಷಿಯನ್ ಮತ್ತು ಪ್ಲಂಬರ್ ಹುದ್ದೆಗಳಿಗೆ  ಅರ್ಜಿ ಆಹ್ವಾನ

    ಗುರುವಾಯನಕೆರೆ ಎಕ್ಸೆಲ್ ಟೆಕ್ ಶಾಲೆಯಲ್ಲಿ ಕೆ.ಜಿ ಮಕ್ಕಳ ಘಟಿಕೋತ್ಸವ

    • By admin
    • March 10, 2026
    • 63 views
    ಗುರುವಾಯನಕೆರೆ ಎಕ್ಸೆಲ್ ಟೆಕ್ ಶಾಲೆಯಲ್ಲಿ ಕೆ.ಜಿ ಮಕ್ಕಳ ಘಟಿಕೋತ್ಸವ