ನಾಳೆಯಿಂದ 9ನೇಯ ಅಖಿಲ ಭಾರತೀಯ ಹಿಂದೂ ರಾಷ್ಟ್ರ ಅಧಿವೇಶನವು ಆನ್‌ಲೈನ್ ನಲ್ಲಿ ಪ್ರಸಾರ

ಮಂಗಳೂರು: ಮೋದಿ ಸರಕಾರ ಕೇಂದ್ರದಲ್ಲಿ ಎರಡನೆಯ ಬಾರಿಗೆ ಬಂದ ಬಳಿಕ ಕಾಶ್ಮೀರಿ ಹಿಂದೂಗಳ ಪುನರ್ವಸತಿಯ ದೃಷ್ಟಿಯಿಂದ ಕಲಮ್ ೩೭೦ ರದ್ದುಗೊಳಿಸುವುದು, ಪೌರತ್ವ ತಿದ್ದುಪಡಿ ಕಾನೂನು (ಸಿ.ಎ.ಎ.), ಸರ್ವೋಚ್ಚ ನ್ಯಾಯಾಲಯವು ರಾಮಮಂದಿರದ ಪರವಾಗಿ ನೀಡಿರುವ ಐತಿಹಾಸಿಕ ತೀರ್ಪು, ಅಲ್ಲದೇ ೫ ಆಗಸ್ಟ್ ೨೦೨೦ ರಂದು ಆಯೋಜಿಸಲಾಗಿರುವ ರಾಮಮಂದಿರದ ಭೂಮಿಪೂಜೆ ಮುಂತಾದ ಸಕಾರಾತ್ಮಕ ವಿಷಯಗಳು ಘಟಿಸುತ್ತಿವೆ. ಇದರಲ್ಲಿ ಪೌರತ್ವ ತಿದ್ದುಪಡಿ ಕಾನೂನು ‘ಅಖಿಲ ಭಾರತೀಯ ಹಿಂದೂ ರಾಷ್ಟ್ರ ಅಧಿವೇಶನದ ಫಲಶ್ರುತಿಯಾಗಿದೆ. ೨೦೧೪ ನೇ ಇಸವಿಯಲ್ಲಿ ‘ಹಿಂದೂ ರಾಷ್ಟ್ರ ಅಧಿವೇಶನದಲ್ಲಿ ಆ ರೀತಿಯ ಠರಾವನ್ನು ಅಂಗೀಕರಿಸಲಾಗಿತ್ತು. ‘ಸೆಕ್ಯುಲರ್ (ಜಾತ್ಯತೀತ) ಪಕ್ಷಗಳ ಅಧಿಕಾರವಿರುವ ರಾಜ್ಯಗಳಲ್ಲಿ ‘ಸಿ.ಎ.ಎ. ಕಾನೂನು ಜಾರಿಗೊಳಿಸದಿರಲು ನಿರ್ಧರಿಸುವುದು ಮತ್ತು ಹಿಂದೂಬಹುಸಂಖ್ಯಾತ ಭಾರತದಲ್ಲಿ ನೊಂದ ಹಿಂದೂಗಳಿಗೆ ನ್ಯಾಯ ಸಿಗದಿರುವುದು, ಇದು ಮಾನವತೆಯ ಹಾಗೆಯೇ ಪ್ರಜಾಪ್ರಭುತ್ವದ ವೈಫಲ್ಯವಾಗಿದೆ.

೨೦೧೧ ರ ಜನಗಣತಿಗನುಸಾರ ‘೨೦೬೧ ರಲ್ಲಿ ಭಾರತದಲ್ಲಿ ಹಿಂದೂಗಳು ಅಲ್ಪಸಂಖ್ಯಾತರಾಗುವರು ಎನ್ನುವಂತಹ ಸ್ಥಿತಿಯಿದೆ. ಈ ಹಿನ್ನೆಲೆಯಲ್ಲಿ ಹಿಂದೂಗಳಿಗೆ ಅವರ ನ್ಯಾಯಯುತವಾದ ಹಕ್ಕು ದೊರಕಲು ಭಾರತವನ್ನು ‘ಹಿಂದೂ ರಾಷ್ಟ್ರವೆಂದು ಘೋಷಿಸಬೇಕು, ಈ ಪ್ರಮುಖ ಬೇಡಿಕೆಗಳಿಗಾಗಿ ‘೯ ನೆಯ ಅಖಿಲ ಭಾರತೀಯ ಹಿಂದೂ ರಾಷ್ಟ್ರ ಅಧಿವೇಶನವನ್ನು ಆಯೋಜಿಸಲಾಗಿದೆ, ಎಂಬ ಮಾಹಿತಿಯನ್ನು ಹಿಂದೂ ಜನಜಾಗೃತಿ ಸಮಿತಿಯ ರಾಷ್ಟ್ರೀಯ ಮಾರ್ಗದರ್ಶಕರಾದ ಸದ್ಗುರು (ಡಾ.) ಚಾರುದತ್ತ ಪಿಂಗಳೆಯವರು ನೀಡಿದರು. ಅವರು ‘೯ ನೆಯ ಅಖಿಲ ಭಾರತೀಯ ಹಿಂದೂ ರಾಷ್ಟ್ರ ಅಧಿವೇಶನದ ಮಾಹಿತಿಯನ್ನು ನೀಡಲು ಆಯೋಜಿಸಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡುತ್ತಿದ್ದರು.


ಸದ್ಗುರು(ಡಾ.) ಪಿಂಗಳೆಯವರು ಮುಂದೆ ಮಾತನಾಡುತ್ತಾ, “ಈ ಅಧಿವೇಶನ ೩೦ ಜುಲೈ ರಿಂದ ೨ ಆಗಸ್ಟ್ ಮತ್ತು ೬ ರಿಂದ ೯ ಆಗಸ್ಟ್ ೨೦೨೦ ಈ ಕಾಲಾವಧಿಯಲ್ಲಿ ಸಾಯಂಕಾಲ ೬.೩೦ ರಿಂದ ೮.೩೦ ಈ ಸಮಯದಲ್ಲಿ ‘ಆನ್‌ಲೈನ್ ಪದ್ಧತಿಯಲ್ಲಿ ನಡೆಸಲಾಗುವುದು. ೯ ನೆಯ ಅಖಿಲ ಭಾರತೀಯ ಹಿಂದೂ ರಾಷ್ಟ್ರ ಅಧಿವೇಶನದಲ್ಲಿ ದೇಶ-ವಿದೇಶಗಳಿಂದ ವಿವಿಧ ಹಿಂದುತ್ವನಿಷ್ಠ ಸಂಘಟನೆಗಳ ಮುಖಂಡರು, ಕಾರ್ಯಕರ್ತರು, ನ್ಯಾಯವಾದಿಗಳು, ವಿಚಾರವಂತರು, ಸಂಪಾದಕರು, ಉದ್ಯಮಿಗಳು ಮುಂತಾದವರು ಬೃಹತ್ ಸಂಖ್ಯೆಯಲ್ಲಿ ‘ಆನ್‌ಲೈನ್ ಪದ್ಧತಿಯಲ್ಲಿ ಭಾಗವಹಿಸಲಿದ್ದಾರೆ ಎಂದು ತಿಳಿಸಿದರು.


ಅಧಿವೇಶನದ ಬಗ್ಗೆ ಹೆಚ್ಚಿನ ಮಾಹಿತಿಯನ್ನು ನೀಡಿದ ಹಿಂದೂ ಜನಜಾಗೃತಿ ಸಮಿತಿಯ ರಾಷ್ಟ್ರೀಯ ವಕ್ತಾರರಾದ ಶ್ರೀ. ರಮೇಶ ಶಿಂದೆಯವರು, ‘ಕಳೆದ ೮ ವರ್ಷಗಳಿಂದ ಗೋವಾದಲ್ಲಿ ನಡೆಯುತ್ತಿರುವ ಈ ಅಧಿವೇಶನಕ್ಕೆ ಅತ್ಯುತ್ತಮ ಸ್ಪಂದನೆ ದೊರಕಿತು; ಆದರೆ ‘ಕೋವಿಡ್-೧೯ರ ವಿಪತ್ತಿನಿಂದಾಗಿ ಈ ಬಾರಿಯ ಅಧಿವೇಶನವನ್ನು ಆನ್‌ಲೈನ್ ಪದ್ಧತಿಯಲ್ಲಿ ನಡೆಸಬೇಕಾಗಿದೆ. ಅಯೋಧ್ಯೆಯಲ್ಲಿ ರಾಮಮಂದಿರದ ಭೂಮಿಪೂಜೆಗೆ ಕೆಲವು ‘ಸೆಕ್ಯುಲರ್(ಜಾತ್ಯತೀತ)ವಾದಿಗಳು ಅಡ್ಡಿ ಪಡಿಸುತ್ತಿದ್ದಾರೆ. ತದ್ವಿರುದ್ಧ ಪಾಕಿಸ್ತಾನದಲ್ಲಿ ಒಂದು ದೇವಸ್ಥಾನವನ್ನು ಕಟ್ಟುವುದೂ ಸಾಧ್ಯವಿಲ್ಲದ ಪರಿಸ್ಥಿತಿಯಿದೆ. ಪಾಕಿಸ್ತಾನದಲ್ಲಿ ದೇವಸ್ಥಾನಕ್ಕೆ ಸ್ಥಾನವಿಲ್ಲ ಎಂದು ಅಲ್ಲಿಯ ಜನರು ಹೇಳುತ್ತಿದ್ದಾರೆ. ಹಿಂದೂಬಹುಸಂಖ್ಯಾತ ಭಾರತದಲ್ಲಿ ಮಾತ್ರ ಮಸೀದಿಗಳ ಸಂಖ್ಯೆ ಹೆಚ್ಚಳವಾಗುತ್ತಿದೆ. ಆದುದರಿಂದ ಭಾರತವು ಈಗಲಾದರೂ ‘ಹಿಂದೂ ರಾಷ್ಟ್ರವೆಂದು ಘೋಷಿಸಲ್ಪಡಬೇಕು. ಹಿಂದೂ ಸಂಘಟನೆ ಮತ್ತು ಸಂಪ್ರದಾಯಕ್ಕಾಗಿ ಅಂದರೆ ರಾಷ್ಟ್ರಹಿತ ಮತ್ತು ಧರ್ಮಹಿತಕ್ಕಾಗಿ ಯೋಗದಾನ ನೀಡುವುದು ಹಾಗೂ ಸಮಾನ ಕೃತಿಯ ಕಾರ್ಯಕ್ರಮವನ್ನು ನಿರ್ಧರಿಸುವುದು ಅದರೊಂದಿಗೆ ಹಿಂದೂಹಿತದ ನಿರ್ಣಯವನ್ನು ಅಂಗೀಕರಿಸುವುದು ಈ ‘ಆನ್‌ಲೈನ್’ ಅಧಿವೇಶನದ ಸ್ವರೂಪವಾಗಿರಲಿದೆ ಎಂದು ತಿಳಿಸಿದರು.


ಈ ಸಂದರ್ಭದಲ್ಲಿ ಸನಾತನ ಸಂಸ್ಥೆಯ ರಾಷ್ಟ್ರೀಯ ವಕ್ತಾರರಾದ ಶ್ರೀ. ಚೇತನ ರಾಜಹಂಸ ಇವರು ಮಾತನಾಡುತ್ತಾ, “ಮುಂಬರುವ ಆಪತ್ಕಾಲದ ದೃಷ್ಟಿಯಿಂದ ಹಿಂದೂಗಳಿಗೆ ಸಹಾಯ ಮಾಡಲು ಹಿಂದುತ್ವನಿಷ್ಠರಿಗೆ ವಿವಿಧ ಕೌಶಲ್ಯಗಳನ್ನು ಅಭಿವೃದ್ಧಿಪಡಿಸಿಕೊಳ್ಳಬೇಕಾಗಿದೆ. ಈ ಸೇವಾಕಾರ್ಯದ ತರಬೇತಿಯನ್ನು ನೀಡಲು ‘ಹಿಂದೂ ರಾಷ್ಟ್ರ ಸಂಘಟಕ ಅಧಿವೇಶನವನ್ನು ೧೩ ರಿಂದ ೧೬ ಆಗಸ್ಟ್ ಈ ಕಾಲಾವಧಿಯಲ್ಲಿ ಆಯೋಜಿಸಲಾಗಿದೆ, ಎಂದರು.

ಈ ಅಧಿವೇಶನವನ್ನು ಈ ಕೆಳಗಿನ ‘ಲಿಂಕ್ಗಳಲ್ಲಿ ನೇರಪ್ರಸಾರ ಮಾಡಲಾಗುತ್ತಿದ್ದು ಇದನ್ನು ಎಲ್ಲರೂ ವೀಕ್ಷಿಸಬಹುದಾಗಿದೆ. ಹಿಂದುತ್ವನಿಷ್ಠರು ಇದರ ಲಾಭವನ್ನು ಪಡೆದುಕೊಳ್ಳಬೇಕು http://www.youtube.com/HinduJagruti

https://www.facebook.com/HinduAdhiveshan

Spread the love
  • Related Posts

    ನ್ಯಾಯವಾದಿಗಳ ಸೌಹಾರ್ದ ಸಹಕಾರಿ ಸಂಘ ನಿಯಮಿತ ಇದರ ಬಂಟ್ವಾಳದ ನೂತನ ಶಾಖೆ ಉದ್ಘಾಟನೆ

    ಮಂಗಳೂರು: ನ್ಯಾಯವಾದಿಗಳ ಸೌಹಾರ್ದ ಸಹಕಾರಿ ಸಂಘ ನಿಯಮಿತ ಇದರ ಬಂಟ್ವಾಳದ ನೂತನ ಶಾಖೆಯು ಬಂಟ್ವಾಳದ ನ್ಯಾಯಾಲಯದ ಆವರಣದಲ್ಲಿ ಇಂದು ಉದ್ಘಾಟನೆಗೊಂಡಿದ್ದು, ಬಂಟ್ವಾಳದ ನೂತನ ಶಾಖೆಯ ಕಚೇರಿಯನ್ನು ಮಂಗಳೂರು ವಕೀಲರ ಸಂಘದ ಮಾಜಿ ಅಧ್ಯಕ್ಷರಾದ ಶ್ರೀ ಎಸ್ ಪಿ ಚಂಗಪ್ಪ ರವರು ಉದ್ಘಾಟಿಸಿದರು.…

    Spread the love

    ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ 54ನೇ ವರ್ಷದ ಉಚಿತ ಸಾಮೂಹಿಕ ವಿವಾಹ ಸಮಾರಂಭದ ವೈಭವ,106ಜೋಡಿ ಸಪ್ತಪದಿ ತುಳಿದು ದಾಂಪತ್ಯ ಜೀವನಕ್ಕೆ ಪಾದಾರ್ಪಣೆ

    ಧರ್ಮಸ್ಥಳ: ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಬುಧವಾರ ಸಂಜೆ ಗಂಟೆ 6.40ರ ಗೋಧೂಳಿ ಲಗ್ನ ಸುಮುಹೂರ್ತದಲ್ಲಿ ಅಮೃತವರ್ಷಿಣಿ ಸಭಾಭವನದಲ್ಲಿ ನಡೆದ 54ನೇ ವರ್ಷದ ಉಚಿತ ಸಾಮೂಹಿಕ ವಿವಾಹ ಸಮಾರಂಭದಲ್ಲಿ 106 ಜೊತೆ ವಧೂ-ವರರು ದಾಂಪತ್ಯ ಜೀವನಕ್ಕೆ ಪಾದಾರ್ಪಣೆ ಮಾಡಿದರು. ಬುಧವಾರ ಬೆಳಿಗ್ಗೆ ಧರ್ಮಾಧಿಕಾರಿ…

    Spread the love

    You Missed

    ನ್ಯಾಯವಾದಿಗಳ ಸೌಹಾರ್ದ ಸಹಕಾರಿ ಸಂಘ ನಿಯಮಿತ ಇದರ ಬಂಟ್ವಾಳದ ನೂತನ ಶಾಖೆ ಉದ್ಘಾಟನೆ

    • By admin
    • April 30, 2026
    • 35 views
    ನ್ಯಾಯವಾದಿಗಳ ಸೌಹಾರ್ದ ಸಹಕಾರಿ ಸಂಘ ನಿಯಮಿತ ಇದರ ಬಂಟ್ವಾಳದ ನೂತನ ಶಾಖೆ ಉದ್ಘಾಟನೆ

    ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ 54ನೇ ವರ್ಷದ ಉಚಿತ ಸಾಮೂಹಿಕ ವಿವಾಹ ಸಮಾರಂಭದ ವೈಭವ,106ಜೋಡಿ ಸಪ್ತಪದಿ ತುಳಿದು ದಾಂಪತ್ಯ ಜೀವನಕ್ಕೆ ಪಾದಾರ್ಪಣೆ

    • By admin
    • April 29, 2026
    • 23 views
    ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ 54ನೇ ವರ್ಷದ ಉಚಿತ ಸಾಮೂಹಿಕ ವಿವಾಹ ಸಮಾರಂಭದ ವೈಭವ,106ಜೋಡಿ ಸಪ್ತಪದಿ ತುಳಿದು ದಾಂಪತ್ಯ ಜೀವನಕ್ಕೆ ಪಾದಾರ್ಪಣೆ

    ಬೆಂಗಳೂರಿನಲ್ಲಿ ಘನಘೋರ ದುರಂತ ಬೌರಿಂಗ್ ಆಸ್ಪತ್ರೆಯ ಕೌಂಪೌಂಡು ಕುಸಿದು ಮೂವರು ಮಕ್ಕಳ ಸಹಿತ 8ಮಂದಿಯ ದುರ್ಮರಣ

    • By admin
    • April 29, 2026
    • 46 views
    ಬೆಂಗಳೂರಿನಲ್ಲಿ ಘನಘೋರ ದುರಂತ ಬೌರಿಂಗ್ ಆಸ್ಪತ್ರೆಯ ಕೌಂಪೌಂಡು ಕುಸಿದು ಮೂವರು ಮಕ್ಕಳ ಸಹಿತ 8ಮಂದಿಯ   ದುರ್ಮರಣ

    ಕುಂಟುತ್ತಿರುವ ಕಾಮಗಾರಿಯಿಂದ ಬಿಸಿಲ ಬೇಗೆಗೆ ಬೆಂಡಾದ ಜನ: ಟ್ರಾಫಿಕ್ ಜಾಮ್ ನಿಂದ ಹೈರಾಣಾದ ಜನ

    • By admin
    • April 29, 2026
    • 96 views
    ಕುಂಟುತ್ತಿರುವ ಕಾಮಗಾರಿಯಿಂದ ಬಿಸಿಲ ಬೇಗೆಗೆ ಬೆಂಡಾದ ಜನ: ಟ್ರಾಫಿಕ್ ಜಾಮ್ ನಿಂದ ಹೈರಾಣಾದ ಜನ

    ಬಿರು ಬಿಸಿಲಿನಲ್ಲಿ ಪ್ರಾಣಿ–ಪಕ್ಷಿಗಳಿಗೆ ನೀರುಣಿಸುವ ಮಹತ್ವದ ಕಾರ್ಯಕ್ಕೆ ಮುಂದಾಗೋಣ

    • By admin
    • April 29, 2026
    • 45 views
    ಬಿರು ಬಿಸಿಲಿನಲ್ಲಿ ಪ್ರಾಣಿ–ಪಕ್ಷಿಗಳಿಗೆ ನೀರುಣಿಸುವ ಮಹತ್ವದ ಕಾರ್ಯಕ್ಕೆ ಮುಂದಾಗೋಣ

    ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸೇವಾ ಟ್ರಸ್ಟ್ (ರಿ) ಬೆಳ್ತಂಗಡಿ ಇದರ ವತಿಯಿಂದ ಕು.ಪ್ರಾಪ್ತಿ ಎಂ ಗೌಡರಿಗೆ ಗೌರವ ಸನ್ಮಾನ

    • By admin
    • April 28, 2026
    • 84 views
    ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸೇವಾ ಟ್ರಸ್ಟ್ (ರಿ) ಬೆಳ್ತಂಗಡಿ ಇದರ ವತಿಯಿಂದ ಕು.ಪ್ರಾಪ್ತಿ ಎಂ ಗೌಡರಿಗೆ ಗೌರವ ಸನ್ಮಾನ