ಪ್ರಕೃತಿಯ ಮಡಿಲಲ್ಲಿದೆ ‘ನೋನಿ’ಯೆಂಬ ಸಂಜೀವಿನಿ

🖊️ ಸಂಪಾದಕೀಯ

ನಮ್ಮ ಪರಿಸರದಲ್ಲಿ ಅದೆಷ್ಟು ಔಷಧೀಯ ಗುಣಗಳಿರುವ ಸಸ್ಯ ಪ್ರಭೇದಗಳಿವೆ. ಪ್ರಭೇದಗಳನ್ನು ಗುರುತಿಸಿ ಅವುಗಳಲ್ಲಿ ಔಷಧೀಯ ಗುಣಗಳಿವೆ ಎಂಬುದನ್ನು ನಾವು ತಿಳಿದುಕೊಂಡಿರುವುದಿಲ್ಲ. ಆರೋಗ್ಯವನ್ನು ಕಾಪಾಡುವಲ್ಲಿ ಹಣ್ಣುಗಳು ಸಹ ಮುಖ್ಯ ಪಾತ್ರವಹಿಸಿವೆ. ಕೆಲವೊಂದು ಹಣ್ಣುಗಳನ್ನು ತಿಂದರೆ ಕೆಲವೊಂದು ಕಾಯಿಲೆಗಳು ದೂರವಾಗುತ್ತದೆ. ಇದರಂತೆ ನೋನಿ ಹಣ್ಣು ಸೇವಿಸಿದರೆ ಆರೋಗ್ಯ ವೃದ್ಧಿಸುವುದು ಖಂಡಿತ.

ನೋನಿ ಹಣ್ಣು ಮೂಲತಃ ಭಾರತದ ಔಷಧೀಯ ಹಣ್ಣುಗಳಲ್ಲಿ ಒಂದು. ಪ್ರಕೃತಿಯಲ್ಲಿ ದೊರೆಯುವ ಅದ್ಭುತ ಆರೋಗ್ಯ ಹಾಗೂ ರೋಗನಿರೋಧಕ ಹಣ್ಣು ಇದಾಗಿದ್ದು ಈ ಹಣ್ಣು ಮೋರಿಂಡ ಸಿಕ್ರೆ ಪೋಲಿಯ ಎಂಬ ಸಸ್ಯ ಪ್ರಭೇದಕ್ಕೆ ಸೇರಿದೆ.

ಸುಮಾರು 150ಕ್ಕೂ ಹೆಚ್ಚಿನ ಪೋಷಕಾಂಶಗಳನ್ನು ಹೊಂದಿರುವ ನೋನಿ ಕಾಯಿಯು ಹಲವು ಕಾಯಿಲೆಗಳ ಶಮನಕ್ಕೆ ಉಪಯುಕ್ತವಾಗಿದೆ ಮಾನಸಿಕ ಒತ್ತಡ ಅಲರ್ಜಿ ಅಸ್ತಮಾ ಕ್ಯಾನ್ಸರ್ ಗಂಟಲು ನೋವು ಕೂದಲು ಉದರುವಿಕೆ ಸಕ್ಕರೆಕಾಯಿಲೆ ಮೂತ್ರಜನಕಾಂಗದ ಕಾಯಿಲೆ ಚರ್ಮರೋಗ ಕೆಮ್ಮು ಜ್ವರಗಳಂಥ ಕಾಯಿಲೆಗಳಿಗೂ ಕೂಡ ರಾಮಬಾಣವಾಗಿದೆ. ವಿಟಮಿನ್ ಸಿ, ಎ, ಬಿ ಮತ್ತು ಕಬ್ಬಿಣದ ಅಂಶಗಳನ್ನು ಹೊಂದಿರುವ ನೋನಿ ಹಣ್ಣಿನ ಬಳಕೆಯಿಂದ ಆರೋಗ್ಯಕ್ಕೆ ಹಲವಾರು ಪ್ರಯೋಜನಗಳಿವೆ.

ಔಷಧೀಯ ಗುಣವನ್ನು ಹೊಂದಿರುವ ಈ ನೋನಿಯ ಜೊತೆ ನೀರು, ಬೆಲ್ಲ, ಏಲಕ್ಕಿ ಸೇರಿಸಿ ಜ್ಯೂಸ್ ಮಾಡಿದಾಗ ಹಾಲಿನಂತೆ ನೋರೆಯು ಬರುತ್ತದೆ. ಕುಡಿಯಲು ರುಚಿಕರವಾಗಿರುವ ನೋನಿ ಹಣ್ಣುಗಳನ್ನು ನಿತ್ಯವೂ ಸೇವನೆ ಮಾಡುವುದರಿಂದ ಆರೋಗ್ಯಕ್ಕೆ ಹೊಸ ಚೈತನ್ಯವನ್ನು ಪಡೆಯಬಹುದು.

ನೋನಿ ಹಣ್ಣಿನಲ್ಲಿರುವ ಔಷಧೀಯ ಗುಣಗಳ ಬಗ್ಗೆ ವಿಶ್ವವಿದ್ಯಾನಿಲಯದ ಸಂಶೋಧನೆಯಿಂದಲೂ ದೃಢಪಟ್ಟಿದೆ. ರೋಗನಿರೋಧಕ ಶಕ್ತಿಯನ್ನು ವೃದ್ಧಿಸಲು, ಮಾನಸಿಕ ಒತ್ತಡದಿಂದ ಮುಕ್ತರಾಗಲು, ನಿದ್ರೆಯ ಸಮಸ್ಯೆ ಇರುವವರು, ಸುಸ್ತು ಕಾಡುತ್ತಿರುವವರು, ಉಸಿರಾಟದ ಸಮಸ್ಯೆ ಇರುವವರು, ಮಲಬದ್ಧತೆ, ರಕ್ತದೊತ್ತಡ, ಕೀಲುನೋವು, ಹೃದಯಸಂಬಂಧಿ ಕಾಯಿಲೆಗಳು, ಖಿನ್ನತೆಯಿಂದ ಬಳಲುತ್ತಿರುವವರು ಹಾಗೂ ಪಿತ್ತಜನಕಾಂಗ ಮೂತ್ರಜನಕಾಂಗದ ನಿರ್ವಹಣೆಗೆ ಸುಗಮವಾಗುವಂತೆ ನೋಡಿಕೊಳ್ಳಲು ನೋನಿ ಹಣ್ಣು ನೆರವಾಗುತ್ತದೆ.

ನೋನಿಯನ್ನು ಔಷಧಿಯಾಗಿ ಸೇವಿಸುವರು ಮೊದಲ ಮೂರು ದಿನ ಬೆಳಗಿನ ಉಪಹಾರಕ್ಕೆ ಮುಂಚಿತವಾಗಿ ಒಂದು ಟೀ ಸ್ಪೂನ್ ಸೇವಿಸಬೇಕು. ಒಂದು ತಿಂಗಳ ಸೇವನೆಯ ನಂತರ ಉಪಹಾರಕ್ಕೆ ಮುಂಚೆ ಎರಡು ಸ್ಪೂನ್, ಮಧ್ಯಾಹ್ನ ಊಟಕ್ಕಿಂತ ಮೊದಲು 2 ಸ್ಪೂನ್ ರಸವನ್ನು ಸೇವಿಸಬೇಕು. ಕೇವಲ ಹಣ್ಣು ಮಾತ್ರವಲ್ಲದೇ ನೋನಿಯ ಎಲೆಗಳು ಕೂಡ ಬಹಳಷ್ಟು ಉಪಯುಕ್ತವಾಗಿದ್ದು ಎಲೆಯಿಂದ ತೆಗೆದ ರಸ ಅನೇಕ ರೀತಿಯ ಚರ್ಮರೋಗಗಳನ್ನು ನಿವಾರಿಸುತ್ತದೆ. ಅದ್ರಲ್ಲೂ ನೋನಿ ಎಲೆಯ ಕಷಾಯವನ್ನು ಜ್ವರ ನಿವಾರಕವಾಗಿಯೂ ಬಳಸಬಹುದು.

Spread the love
  • Related Posts

    ಬೆಳ್ತಂಗಡಿ ತಾಲೂಕಿನಾದ್ಯಂತ ಗುಡುಗು-ಸಿಡಿಲು ಸಹಿತ ಮಳೆ: ನಿಡ್ಲೆ–ಕಳೆಂಜ ರಸ್ತೆಯಲ್ಲಿ ಮರ ಬಿದ್ದು ವಿದ್ಯುತ್ ಲೈನ್ ಹಾನಿ

    Belthangady: ತಾಲೂಕಿನ ಹಲವೆಡೆ ಶನಿವಾರ ಸಂಜೆ ಉತ್ತಮ ಮಳೆಯಾಗಿದೆ.Shishila, Kokkada, Dharmasthala, Arasinamakki, Ujire ಹಾಗೂ Nidle ಮೊದಲಾದ ಕಡೆಗಳಲ್ಲಿ ಗುಡುಗು-ಸಿಡಿಲು ಸಹಿತ ಉತ್ತಮ ಮಳೆ ಸುರಿದಿದೆ. ಉಳಿದ ಕೆಲವು ಪ್ರದೇಶಗಳಲ್ಲಿ ತುಂತುರು ಹಾಗೂ ಸಾಮಾನ್ಯ ಮಳೆಯಾಗಿದೆ.ತಾಲೂಕಿನಲ್ಲಿ ಫೆಬ್ರವರಿ 21ರಂದು ಕೆಲವೆಡೆ…

    Spread the love

    “ಬಂಗಾಡಿ ಕೊಲ್ಲಿ” 28ನೇ ವರ್ಷದ ‘ಸೂರ್ಯ – ಚಂದ್ರ’ ಜೋಡುಕರೆ ಕಂಬಳ

    ಬಂಗಾಡಿ: ಸೂರ್ಯ-ಚಂದ್ರ ಹೋಡುಕರೆ ಕಂಬಳ ಸಮಿತಿ ನೇತೃತ್ವದಲ್ಲಿ ಕರ್ನಾಟಕ ರಾಜ್ಯ ಕಂಬಳ ಅಸೋಸಿಯೇಶನ್, ಕರ್ನಾಟಕ ಸರಕಾರ ಮತ್ತು ಯುವಜನ ಸಬಲೀಕರಣ ಹಾಗೂ ಕ್ರೀಡಾ ಇಲಾಖೆಯ ಸಹಭಾಗಿತ್ವದೊಂದಿಗೆ 28ನೇ ವರ್ಷದ ಹೊನಲು ಬೆಳಕಿನ ಸೂರ್ಯ-ಚಂದ್ರ ಜೋಡುಕರೆ “ಬಂಗಾಡಿ ಕೊಲ್ಲಿ” ಬಯಲು ಕಂಬಳವು ಶ್ರೀ…

    Spread the love

    You Missed

    ಬೆಳ್ತಂಗಡಿ ತಾಲೂಕಿನಾದ್ಯಂತ ಗುಡುಗು-ಸಿಡಿಲು ಸಹಿತ ಮಳೆ: ನಿಡ್ಲೆ–ಕಳೆಂಜ ರಸ್ತೆಯಲ್ಲಿ ಮರ ಬಿದ್ದು ವಿದ್ಯುತ್ ಲೈನ್ ಹಾನಿ

    • By admin
    • March 15, 2026
    • 62 views
    ಬೆಳ್ತಂಗಡಿ ತಾಲೂಕಿನಾದ್ಯಂತ ಗುಡುಗು-ಸಿಡಿಲು ಸಹಿತ ಮಳೆ: ನಿಡ್ಲೆ–ಕಳೆಂಜ ರಸ್ತೆಯಲ್ಲಿ ಮರ ಬಿದ್ದು ವಿದ್ಯುತ್ ಲೈನ್ ಹಾನಿ

    “ಬಂಗಾಡಿ ಕೊಲ್ಲಿ” 28ನೇ ವರ್ಷದ ‘ಸೂರ್ಯ – ಚಂದ್ರ’ ಜೋಡುಕರೆ ಕಂಬಳ

    • By admin
    • March 14, 2026
    • 102 views
    “ಬಂಗಾಡಿ ಕೊಲ್ಲಿ” 28ನೇ ವರ್ಷದ ‘ಸೂರ್ಯ – ಚಂದ್ರ’ ಜೋಡುಕರೆ ಕಂಬಳ

    ಹಾವು ಕಡಿತಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಕಾರೆಗುಡ್ಡೆಯ ಮಹೇಶ್ ಮನೆಗೆ ಡಿ.ಕಿರಣ್ ಚಂದ್ರ ಪುಷ್ಪಗಿರಿ ಭೇಟಿ

    • By admin
    • March 14, 2026
    • 43 views
    ಹಾವು ಕಡಿತಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಕಾರೆಗುಡ್ಡೆಯ ಮಹೇಶ್ ಮನೆಗೆ  ಡಿ.ಕಿರಣ್ ಚಂದ್ರ ಪುಷ್ಪಗಿರಿ ಭೇಟಿ

    KSRTC ಬಸ್ ಹಾಗೂ ಕಾರಿನ ನಡುವೆ ಭೀಕರ ರಸ್ತೆ ಅಪಘಾತ ಮೂವರು ಸಾವು

    • By admin
    • March 13, 2026
    • 610 views
    KSRTC ಬಸ್ ಹಾಗೂ ಕಾರಿನ ನಡುವೆ ಭೀಕರ ರಸ್ತೆ ಅಪಘಾತ ಮೂವರು ಸಾವು

    ಎಕ್ಸೆಲ್ ಪಿ.ಯು ಕಾಲೇಜಿನಲ್ಲಿ ಎಲೆಕ್ಟ್ರಿಷಿಯನ್ ಮತ್ತು ಪ್ಲಂಬರ್ ಹುದ್ದೆಗಳಿಗೆ ಅರ್ಜಿ ಆಹ್ವಾನ

    • By admin
    • March 10, 2026
    • 150 views
    ಎಕ್ಸೆಲ್ ಪಿ.ಯು ಕಾಲೇಜಿನಲ್ಲಿ ಎಲೆಕ್ಟ್ರಿಷಿಯನ್ ಮತ್ತು ಪ್ಲಂಬರ್ ಹುದ್ದೆಗಳಿಗೆ  ಅರ್ಜಿ ಆಹ್ವಾನ

    ಗುರುವಾಯನಕೆರೆ ಎಕ್ಸೆಲ್ ಟೆಕ್ ಶಾಲೆಯಲ್ಲಿ ಕೆ.ಜಿ ಮಕ್ಕಳ ಘಟಿಕೋತ್ಸವ

    • By admin
    • March 10, 2026
    • 63 views
    ಗುರುವಾಯನಕೆರೆ ಎಕ್ಸೆಲ್ ಟೆಕ್ ಶಾಲೆಯಲ್ಲಿ ಕೆ.ಜಿ ಮಕ್ಕಳ ಘಟಿಕೋತ್ಸವ