ಪ್ರಕೃತಿಯ ಮಡಿಲಲ್ಲಿದೆ ‘ನೋನಿ’ಯೆಂಬ ಸಂಜೀವಿನಿ

🖊️ ಸಂಪಾದಕೀಯ

ನಮ್ಮ ಪರಿಸರದಲ್ಲಿ ಅದೆಷ್ಟು ಔಷಧೀಯ ಗುಣಗಳಿರುವ ಸಸ್ಯ ಪ್ರಭೇದಗಳಿವೆ. ಪ್ರಭೇದಗಳನ್ನು ಗುರುತಿಸಿ ಅವುಗಳಲ್ಲಿ ಔಷಧೀಯ ಗುಣಗಳಿವೆ ಎಂಬುದನ್ನು ನಾವು ತಿಳಿದುಕೊಂಡಿರುವುದಿಲ್ಲ. ಆರೋಗ್ಯವನ್ನು ಕಾಪಾಡುವಲ್ಲಿ ಹಣ್ಣುಗಳು ಸಹ ಮುಖ್ಯ ಪಾತ್ರವಹಿಸಿವೆ. ಕೆಲವೊಂದು ಹಣ್ಣುಗಳನ್ನು ತಿಂದರೆ ಕೆಲವೊಂದು ಕಾಯಿಲೆಗಳು ದೂರವಾಗುತ್ತದೆ. ಇದರಂತೆ ನೋನಿ ಹಣ್ಣು ಸೇವಿಸಿದರೆ ಆರೋಗ್ಯ ವೃದ್ಧಿಸುವುದು ಖಂಡಿತ.

ನೋನಿ ಹಣ್ಣು ಮೂಲತಃ ಭಾರತದ ಔಷಧೀಯ ಹಣ್ಣುಗಳಲ್ಲಿ ಒಂದು. ಪ್ರಕೃತಿಯಲ್ಲಿ ದೊರೆಯುವ ಅದ್ಭುತ ಆರೋಗ್ಯ ಹಾಗೂ ರೋಗನಿರೋಧಕ ಹಣ್ಣು ಇದಾಗಿದ್ದು ಈ ಹಣ್ಣು ಮೋರಿಂಡ ಸಿಕ್ರೆ ಪೋಲಿಯ ಎಂಬ ಸಸ್ಯ ಪ್ರಭೇದಕ್ಕೆ ಸೇರಿದೆ.

ಸುಮಾರು 150ಕ್ಕೂ ಹೆಚ್ಚಿನ ಪೋಷಕಾಂಶಗಳನ್ನು ಹೊಂದಿರುವ ನೋನಿ ಕಾಯಿಯು ಹಲವು ಕಾಯಿಲೆಗಳ ಶಮನಕ್ಕೆ ಉಪಯುಕ್ತವಾಗಿದೆ ಮಾನಸಿಕ ಒತ್ತಡ ಅಲರ್ಜಿ ಅಸ್ತಮಾ ಕ್ಯಾನ್ಸರ್ ಗಂಟಲು ನೋವು ಕೂದಲು ಉದರುವಿಕೆ ಸಕ್ಕರೆಕಾಯಿಲೆ ಮೂತ್ರಜನಕಾಂಗದ ಕಾಯಿಲೆ ಚರ್ಮರೋಗ ಕೆಮ್ಮು ಜ್ವರಗಳಂಥ ಕಾಯಿಲೆಗಳಿಗೂ ಕೂಡ ರಾಮಬಾಣವಾಗಿದೆ. ವಿಟಮಿನ್ ಸಿ, ಎ, ಬಿ ಮತ್ತು ಕಬ್ಬಿಣದ ಅಂಶಗಳನ್ನು ಹೊಂದಿರುವ ನೋನಿ ಹಣ್ಣಿನ ಬಳಕೆಯಿಂದ ಆರೋಗ್ಯಕ್ಕೆ ಹಲವಾರು ಪ್ರಯೋಜನಗಳಿವೆ.

ಔಷಧೀಯ ಗುಣವನ್ನು ಹೊಂದಿರುವ ಈ ನೋನಿಯ ಜೊತೆ ನೀರು, ಬೆಲ್ಲ, ಏಲಕ್ಕಿ ಸೇರಿಸಿ ಜ್ಯೂಸ್ ಮಾಡಿದಾಗ ಹಾಲಿನಂತೆ ನೋರೆಯು ಬರುತ್ತದೆ. ಕುಡಿಯಲು ರುಚಿಕರವಾಗಿರುವ ನೋನಿ ಹಣ್ಣುಗಳನ್ನು ನಿತ್ಯವೂ ಸೇವನೆ ಮಾಡುವುದರಿಂದ ಆರೋಗ್ಯಕ್ಕೆ ಹೊಸ ಚೈತನ್ಯವನ್ನು ಪಡೆಯಬಹುದು.

ನೋನಿ ಹಣ್ಣಿನಲ್ಲಿರುವ ಔಷಧೀಯ ಗುಣಗಳ ಬಗ್ಗೆ ವಿಶ್ವವಿದ್ಯಾನಿಲಯದ ಸಂಶೋಧನೆಯಿಂದಲೂ ದೃಢಪಟ್ಟಿದೆ. ರೋಗನಿರೋಧಕ ಶಕ್ತಿಯನ್ನು ವೃದ್ಧಿಸಲು, ಮಾನಸಿಕ ಒತ್ತಡದಿಂದ ಮುಕ್ತರಾಗಲು, ನಿದ್ರೆಯ ಸಮಸ್ಯೆ ಇರುವವರು, ಸುಸ್ತು ಕಾಡುತ್ತಿರುವವರು, ಉಸಿರಾಟದ ಸಮಸ್ಯೆ ಇರುವವರು, ಮಲಬದ್ಧತೆ, ರಕ್ತದೊತ್ತಡ, ಕೀಲುನೋವು, ಹೃದಯಸಂಬಂಧಿ ಕಾಯಿಲೆಗಳು, ಖಿನ್ನತೆಯಿಂದ ಬಳಲುತ್ತಿರುವವರು ಹಾಗೂ ಪಿತ್ತಜನಕಾಂಗ ಮೂತ್ರಜನಕಾಂಗದ ನಿರ್ವಹಣೆಗೆ ಸುಗಮವಾಗುವಂತೆ ನೋಡಿಕೊಳ್ಳಲು ನೋನಿ ಹಣ್ಣು ನೆರವಾಗುತ್ತದೆ.

ನೋನಿಯನ್ನು ಔಷಧಿಯಾಗಿ ಸೇವಿಸುವರು ಮೊದಲ ಮೂರು ದಿನ ಬೆಳಗಿನ ಉಪಹಾರಕ್ಕೆ ಮುಂಚಿತವಾಗಿ ಒಂದು ಟೀ ಸ್ಪೂನ್ ಸೇವಿಸಬೇಕು. ಒಂದು ತಿಂಗಳ ಸೇವನೆಯ ನಂತರ ಉಪಹಾರಕ್ಕೆ ಮುಂಚೆ ಎರಡು ಸ್ಪೂನ್, ಮಧ್ಯಾಹ್ನ ಊಟಕ್ಕಿಂತ ಮೊದಲು 2 ಸ್ಪೂನ್ ರಸವನ್ನು ಸೇವಿಸಬೇಕು. ಕೇವಲ ಹಣ್ಣು ಮಾತ್ರವಲ್ಲದೇ ನೋನಿಯ ಎಲೆಗಳು ಕೂಡ ಬಹಳಷ್ಟು ಉಪಯುಕ್ತವಾಗಿದ್ದು ಎಲೆಯಿಂದ ತೆಗೆದ ರಸ ಅನೇಕ ರೀತಿಯ ಚರ್ಮರೋಗಗಳನ್ನು ನಿವಾರಿಸುತ್ತದೆ. ಅದ್ರಲ್ಲೂ ನೋನಿ ಎಲೆಯ ಕಷಾಯವನ್ನು ಜ್ವರ ನಿವಾರಕವಾಗಿಯೂ ಬಳಸಬಹುದು.

Spread the love
  • Related Posts

    ಒಟ್ಲ ಶ್ರೀ ಧರ್ಮರಸು ಉಳ್ಳಾಕ್ಲು ಬ್ರಹ್ಮಬೈದೇರುಗಳ ಗರಡಿ ಹಾಗೂ ಪರಿವಾರ ದೈವಗಳ ಕ್ಷೇತ್ರದಲ್ಲಿ ವರ್ಷಾವಧಿ ಜಾತ್ರೆ

    ಶಿಶಿಲ: ಒಟ್ಲ ಶ್ರೀ ಧರ್ಮರಸು ಉಳ್ಳಾಕ್ಲು ಬ್ರಹ್ಮಬೈದೇರುಗಳ ಗರಡಿ ಹಾಗೂ ಪರಿವಾರ ದೈವಗಳ ಕ್ಷೇತ್ರದಲ್ಲಿ ವರ್ಷಾವಧಿ ಜಾತ್ರೆಯು 07/02/2026 ಶನಿವಾರದಿಂದ 10/02/2026ಮಂಗಳವಾರದವರೆಗೆ ನಡೆಯಲಿದೆ. Spread the love

    Spread the love

    ಸಿ.ಎಸ್. ಫಲಿತಾಂಶ ಪ್ರಕಟ: ಎಕ್ಸೆಲ್ ವಿದ್ಯಾರ್ಥಿಗಳು ರಾಜ್ಯದಲ್ಲೇ ಅಭೂತಪೂರ್ವ ಸಾಧನೆ, ಭವೇಶ್ ಸೀರ್ವಿ ರಾಜ್ಯಕ್ಕೆ ಪ್ರಥಮ ಸ್ಥಾನ

    ಗುರುವಾಯನಕೆರೆ: ರಾಷ್ಟ್ರಮಟ್ಟದಲ್ಲಿ ಇನ್ಸಿಟ್ಯೂಟ್ ಆಫ್‌ ಕಂಪನಿ ಸೆಕ್ರೆಟರಿಸ್ ಆಫ್ ಇಂಡಿಯಾ ನಡೆಸುವ ಕಂಪನಿ ಸೆಕ್ರೆಟರಿ ಪರೀಕ್ಷೆಯ ಎರಡನೇ ಆವೃತ್ತಿಯಲ್ಲಿ ಗುರುವಾಯನಕೆರೆ ಎಕ್ಸೆಲ್ ಪದವಿ ಪೂರ್ವ ಕಾಲೇಜಿನ ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳು ಅಭೂತಪೂರ್ವ ಸಾಧನೆ ಮಾಡಿದ್ದಾರೆ. 200 ಅಂಕಗಳ ಪರೀಕ್ಷೆಯಲ್ಲಿ 183 ಅಂಕಗಳನ್ನು…

    Spread the love

    You Missed

    ಒಟ್ಲ ಶ್ರೀ ಧರ್ಮರಸು ಉಳ್ಳಾಕ್ಲು ಬ್ರಹ್ಮಬೈದೇರುಗಳ ಗರಡಿ ಹಾಗೂ ಪರಿವಾರ ದೈವಗಳ ಕ್ಷೇತ್ರದಲ್ಲಿ ವರ್ಷಾವಧಿ ಜಾತ್ರೆ

    • By admin
    • January 28, 2026
    • 63 views
    ಒಟ್ಲ ಶ್ರೀ ಧರ್ಮರಸು ಉಳ್ಳಾಕ್ಲು ಬ್ರಹ್ಮಬೈದೇರುಗಳ ಗರಡಿ ಹಾಗೂ ಪರಿವಾರ ದೈವಗಳ ಕ್ಷೇತ್ರದಲ್ಲಿ ವರ್ಷಾವಧಿ ಜಾತ್ರೆ

    ಸಿ.ಎಸ್. ಫಲಿತಾಂಶ ಪ್ರಕಟ: ಎಕ್ಸೆಲ್ ವಿದ್ಯಾರ್ಥಿಗಳು ರಾಜ್ಯದಲ್ಲೇ ಅಭೂತಪೂರ್ವ ಸಾಧನೆ, ಭವೇಶ್ ಸೀರ್ವಿ ರಾಜ್ಯಕ್ಕೆ ಪ್ರಥಮ ಸ್ಥಾನ

    • By admin
    • January 20, 2026
    • 306 views
    ಸಿ.ಎಸ್. ಫಲಿತಾಂಶ ಪ್ರಕಟ: ಎಕ್ಸೆಲ್ ವಿದ್ಯಾರ್ಥಿಗಳು ರಾಜ್ಯದಲ್ಲೇ ಅಭೂತಪೂರ್ವ ಸಾಧನೆ,  ಭವೇಶ್ ಸೀರ್ವಿ ರಾಜ್ಯಕ್ಕೆ ಪ್ರಥಮ ಸ್ಥಾನ

    ಆಮಂತ್ರಣ ಪರಿವಾರದ ದಶಮಾನೋತ್ಸವದ ರಾಜ್ಯಮಟ್ಟದ ಚಿತ್ರಕಲಾ ಸ್ಪರ್ಧೆಯಲ್ಲಿ ಪುಷ್ಟಿ ಮುಂಡಾಜೆ ಪ್ರಥಮ

    • By admin
    • January 20, 2026
    • 103 views
    ಆಮಂತ್ರಣ ಪರಿವಾರದ ದಶಮಾನೋತ್ಸವದ ರಾಜ್ಯಮಟ್ಟದ ಚಿತ್ರಕಲಾ ಸ್ಪರ್ಧೆಯಲ್ಲಿ ಪುಷ್ಟಿ ಮುಂಡಾಜೆ ಪ್ರಥಮ

    ಹಳ್ಳಿ ಹೈದ ಗಿಲ್ಲಿ ನಟನಿಗೆ ‘ಬಿಗ್’ ಕಿರೀಟ ಕರಾವಳಿಯ ಬೆಡಗಿ ರಕ್ಷಿತಾ ಶೆಟ್ಟಿ ರನ್ನರ್ ಆಫ್

    • By admin
    • January 18, 2026
    • 97 views
    ಹಳ್ಳಿ ಹೈದ ಗಿಲ್ಲಿ ನಟನಿಗೆ ‘ಬಿಗ್’ ಕಿರೀಟ ಕರಾವಳಿಯ ಬೆಡಗಿ ರಕ್ಷಿತಾ ಶೆಟ್ಟಿ ರನ್ನರ್ ಆಫ್

    ಚಾರ್ಮಾಡಿ ಘಾಟಿಯಲ್ಲಿ ಹಬ್ಬಿದ ಕಾಡ್ಗಿಚ್ಚು ಅಪಾರ ಸಸ್ಯ ಪ್ರಬೇಧಗಳು, ಪ್ರಾಣಿ ಸಂಕುಲಕ್ಕೆ ಹಾನಿ ಸಾಧ್ಯತೆ!!! ನಿರಂತರ ಕಾಡ್ಗಿಚ್ಚಿಗೆ ಶಾಶ್ವತ ಪರಿಹಾರ ಯಾವಾಗ???

    • By admin
    • January 18, 2026
    • 89 views
    ಚಾರ್ಮಾಡಿ ಘಾಟಿಯಲ್ಲಿ ಹಬ್ಬಿದ ಕಾಡ್ಗಿಚ್ಚು ಅಪಾರ ಸಸ್ಯ ಪ್ರಬೇಧಗಳು, ಪ್ರಾಣಿ ಸಂಕುಲಕ್ಕೆ ಹಾನಿ ಸಾಧ್ಯತೆ!!! ನಿರಂತರ ಕಾಡ್ಗಿಚ್ಚಿಗೆ ಶಾಶ್ವತ ಪರಿಹಾರ ಯಾವಾಗ???

    ಚಾರ್ಮಾಡಿ ಘಾಟಿಯ ತುತ್ತ ತುದಿಯಲ್ಲಿ ಕಾಣಿಸಿಕೊಂಡ ಬೆಂಕಿ ಇದು ಆಕಸ್ಮಿಕವೋ‼️ ಅಥವಾ ದುಷ್ಟರ ಕೃತ್ಯವೋ⁉️

    • By admin
    • January 18, 2026
    • 69 views
    ಚಾರ್ಮಾಡಿ ಘಾಟಿಯ ತುತ್ತ ತುದಿಯಲ್ಲಿ ಕಾಣಿಸಿಕೊಂಡ ಬೆಂಕಿ ಇದು ಆಕಸ್ಮಿಕವೋ‼️ ಅಥವಾ ದುಷ್ಟರ ಕೃತ್ಯವೋ⁉️