ಪ್ರಕೃತಿಯ ಮಡಿಲಲ್ಲಿದೆ ‘ನೋನಿ’ಯೆಂಬ ಸಂಜೀವಿನಿ

🖊️ ಸಂಪಾದಕೀಯ

ನಮ್ಮ ಪರಿಸರದಲ್ಲಿ ಅದೆಷ್ಟು ಔಷಧೀಯ ಗುಣಗಳಿರುವ ಸಸ್ಯ ಪ್ರಭೇದಗಳಿವೆ. ಪ್ರಭೇದಗಳನ್ನು ಗುರುತಿಸಿ ಅವುಗಳಲ್ಲಿ ಔಷಧೀಯ ಗುಣಗಳಿವೆ ಎಂಬುದನ್ನು ನಾವು ತಿಳಿದುಕೊಂಡಿರುವುದಿಲ್ಲ. ಆರೋಗ್ಯವನ್ನು ಕಾಪಾಡುವಲ್ಲಿ ಹಣ್ಣುಗಳು ಸಹ ಮುಖ್ಯ ಪಾತ್ರವಹಿಸಿವೆ. ಕೆಲವೊಂದು ಹಣ್ಣುಗಳನ್ನು ತಿಂದರೆ ಕೆಲವೊಂದು ಕಾಯಿಲೆಗಳು ದೂರವಾಗುತ್ತದೆ. ಇದರಂತೆ ನೋನಿ ಹಣ್ಣು ಸೇವಿಸಿದರೆ ಆರೋಗ್ಯ ವೃದ್ಧಿಸುವುದು ಖಂಡಿತ.

ನೋನಿ ಹಣ್ಣು ಮೂಲತಃ ಭಾರತದ ಔಷಧೀಯ ಹಣ್ಣುಗಳಲ್ಲಿ ಒಂದು. ಪ್ರಕೃತಿಯಲ್ಲಿ ದೊರೆಯುವ ಅದ್ಭುತ ಆರೋಗ್ಯ ಹಾಗೂ ರೋಗನಿರೋಧಕ ಹಣ್ಣು ಇದಾಗಿದ್ದು ಈ ಹಣ್ಣು ಮೋರಿಂಡ ಸಿಕ್ರೆ ಪೋಲಿಯ ಎಂಬ ಸಸ್ಯ ಪ್ರಭೇದಕ್ಕೆ ಸೇರಿದೆ.

ಸುಮಾರು 150ಕ್ಕೂ ಹೆಚ್ಚಿನ ಪೋಷಕಾಂಶಗಳನ್ನು ಹೊಂದಿರುವ ನೋನಿ ಕಾಯಿಯು ಹಲವು ಕಾಯಿಲೆಗಳ ಶಮನಕ್ಕೆ ಉಪಯುಕ್ತವಾಗಿದೆ ಮಾನಸಿಕ ಒತ್ತಡ ಅಲರ್ಜಿ ಅಸ್ತಮಾ ಕ್ಯಾನ್ಸರ್ ಗಂಟಲು ನೋವು ಕೂದಲು ಉದರುವಿಕೆ ಸಕ್ಕರೆಕಾಯಿಲೆ ಮೂತ್ರಜನಕಾಂಗದ ಕಾಯಿಲೆ ಚರ್ಮರೋಗ ಕೆಮ್ಮು ಜ್ವರಗಳಂಥ ಕಾಯಿಲೆಗಳಿಗೂ ಕೂಡ ರಾಮಬಾಣವಾಗಿದೆ. ವಿಟಮಿನ್ ಸಿ, ಎ, ಬಿ ಮತ್ತು ಕಬ್ಬಿಣದ ಅಂಶಗಳನ್ನು ಹೊಂದಿರುವ ನೋನಿ ಹಣ್ಣಿನ ಬಳಕೆಯಿಂದ ಆರೋಗ್ಯಕ್ಕೆ ಹಲವಾರು ಪ್ರಯೋಜನಗಳಿವೆ.

ಔಷಧೀಯ ಗುಣವನ್ನು ಹೊಂದಿರುವ ಈ ನೋನಿಯ ಜೊತೆ ನೀರು, ಬೆಲ್ಲ, ಏಲಕ್ಕಿ ಸೇರಿಸಿ ಜ್ಯೂಸ್ ಮಾಡಿದಾಗ ಹಾಲಿನಂತೆ ನೋರೆಯು ಬರುತ್ತದೆ. ಕುಡಿಯಲು ರುಚಿಕರವಾಗಿರುವ ನೋನಿ ಹಣ್ಣುಗಳನ್ನು ನಿತ್ಯವೂ ಸೇವನೆ ಮಾಡುವುದರಿಂದ ಆರೋಗ್ಯಕ್ಕೆ ಹೊಸ ಚೈತನ್ಯವನ್ನು ಪಡೆಯಬಹುದು.

ನೋನಿ ಹಣ್ಣಿನಲ್ಲಿರುವ ಔಷಧೀಯ ಗುಣಗಳ ಬಗ್ಗೆ ವಿಶ್ವವಿದ್ಯಾನಿಲಯದ ಸಂಶೋಧನೆಯಿಂದಲೂ ದೃಢಪಟ್ಟಿದೆ. ರೋಗನಿರೋಧಕ ಶಕ್ತಿಯನ್ನು ವೃದ್ಧಿಸಲು, ಮಾನಸಿಕ ಒತ್ತಡದಿಂದ ಮುಕ್ತರಾಗಲು, ನಿದ್ರೆಯ ಸಮಸ್ಯೆ ಇರುವವರು, ಸುಸ್ತು ಕಾಡುತ್ತಿರುವವರು, ಉಸಿರಾಟದ ಸಮಸ್ಯೆ ಇರುವವರು, ಮಲಬದ್ಧತೆ, ರಕ್ತದೊತ್ತಡ, ಕೀಲುನೋವು, ಹೃದಯಸಂಬಂಧಿ ಕಾಯಿಲೆಗಳು, ಖಿನ್ನತೆಯಿಂದ ಬಳಲುತ್ತಿರುವವರು ಹಾಗೂ ಪಿತ್ತಜನಕಾಂಗ ಮೂತ್ರಜನಕಾಂಗದ ನಿರ್ವಹಣೆಗೆ ಸುಗಮವಾಗುವಂತೆ ನೋಡಿಕೊಳ್ಳಲು ನೋನಿ ಹಣ್ಣು ನೆರವಾಗುತ್ತದೆ.

ನೋನಿಯನ್ನು ಔಷಧಿಯಾಗಿ ಸೇವಿಸುವರು ಮೊದಲ ಮೂರು ದಿನ ಬೆಳಗಿನ ಉಪಹಾರಕ್ಕೆ ಮುಂಚಿತವಾಗಿ ಒಂದು ಟೀ ಸ್ಪೂನ್ ಸೇವಿಸಬೇಕು. ಒಂದು ತಿಂಗಳ ಸೇವನೆಯ ನಂತರ ಉಪಹಾರಕ್ಕೆ ಮುಂಚೆ ಎರಡು ಸ್ಪೂನ್, ಮಧ್ಯಾಹ್ನ ಊಟಕ್ಕಿಂತ ಮೊದಲು 2 ಸ್ಪೂನ್ ರಸವನ್ನು ಸೇವಿಸಬೇಕು. ಕೇವಲ ಹಣ್ಣು ಮಾತ್ರವಲ್ಲದೇ ನೋನಿಯ ಎಲೆಗಳು ಕೂಡ ಬಹಳಷ್ಟು ಉಪಯುಕ್ತವಾಗಿದ್ದು ಎಲೆಯಿಂದ ತೆಗೆದ ರಸ ಅನೇಕ ರೀತಿಯ ಚರ್ಮರೋಗಗಳನ್ನು ನಿವಾರಿಸುತ್ತದೆ. ಅದ್ರಲ್ಲೂ ನೋನಿ ಎಲೆಯ ಕಷಾಯವನ್ನು ಜ್ವರ ನಿವಾರಕವಾಗಿಯೂ ಬಳಸಬಹುದು.

Spread the love
  • Related Posts

    ಕನ್ಯಾಡಿಯ ಸೇವಾನಿಕೇತನಕ್ಕೆ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಭೇಟಿ:

    ಕನ್ಯಾಡಿ : ದಕ್ಷಿಣ ಕನ್ನಡ ಜಿಲ್ಲೆಯ ಲೋಕಸಭಾ ಸದಸ್ಯರಾಗಿರುವ ಶ್ರೀ ಕ್ಯಾಪ್ಟನ್ ಬ್ರಿಜೇಶ್ ಚೌಟ ತಂಡವು ಕನ್ಯಾಡಿಯ ಸೇವಾನಿಕೇತನಕ್ಕೆ ಫೆಬ್ರವರಿ 8 ರಂದು ಭೇಟಿ ನೀಡಿದರು. ಸೇವಾಭಾರತಿ ಸಂಸ್ಥೆಯ ಸಂಸ್ಥಾಪಕರಾದ ಶ್ರೀ ಕೆ. ವಿನಾಯಕ ರಾವ್ ಸಂಸ್ಥೆಯ ಬಗ್ಗೆ ಮಾತನಾಡಿ, ಬೆನ್ನುಹುರಿ…

    Spread the love

    ಯುವ ಸಿರಿ ರೈತ ಭಾರತದ ಐಸಿರಿ ಎಂಬ ಪರಿಕಲ್ಪನೆಯೊಂದಿಗೆ ಏಕಕಾಲದಲ್ಲಿ 1000ಕ್ಕೂ ಮಿಕ್ಕಿ ಯುವ ಜನತೆಯಿಂದ ಭತ್ತ ಕಟಾವು ಕಾರ್ಯಕ್ರಮ

    ಉಜಿರೆ: ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವಿರೇಂದ್ರ ಹೆಗ್ಗಡೆಯವರ ಹಾಗೂ ಮಾತೃ ಶ್ರೀ ಹೇಮಾವತಿ.ವಿ.ಹೆಗ್ಗಡೆಯವರ ಮಾರ್ಗದರ್ಶನದೊಂದಿಗೆ ಶ್ರೀ.ಧ.ಮಂ.ಕಾಲೇಜು(ಸ್ವಾಯತ್ತ) ಉಜಿರೆ, ಶ್ರೀ.ಧ.ಮಂ.ಕಾಲೇಜು ರಾಷ್ಟ್ರೀಯ ಸೇವಾ ಯೋಜನಾ ಘಟಕಗಳು, ಶ್ರೀ.ಧ.ಮಂ.ಸ್ಪೋರ್ಟ್ಸ್ ಕ್ಲಬ್ ಉಜಿರೆ, ರೋಟರಿ ಕ್ಲಬ್ ಬೆಳ್ತಂಗಡಿ, ಬೆಳ್ತಂಗಡಿ ತಾಲೂಕು ಪತ್ರಕರ್ತರ ಸಂಘ(ರಿ) ಬೆಳ್ತಂಗಡಿ, ವ್ಯವಸ್ಥಾಪನಾ ಸಮಿತಿ…

    Spread the love

    You Missed

    ಕನ್ಯಾಡಿಯ ಸೇವಾನಿಕೇತನಕ್ಕೆ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಭೇಟಿ:

    • By admin
    • February 9, 2025
    • 16 views
    ಕನ್ಯಾಡಿಯ ಸೇವಾನಿಕೇತನಕ್ಕೆ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಭೇಟಿ:

    ಯುವ ಸಿರಿ ರೈತ ಭಾರತದ ಐಸಿರಿ ಎಂಬ ಪರಿಕಲ್ಪನೆಯೊಂದಿಗೆ ಏಕಕಾಲದಲ್ಲಿ 1000ಕ್ಕೂ ಮಿಕ್ಕಿ ಯುವ ಜನತೆಯಿಂದ ಭತ್ತ ಕಟಾವು ಕಾರ್ಯಕ್ರಮ

    • By admin
    • February 9, 2025
    • 15 views
    ಯುವ ಸಿರಿ ರೈತ ಭಾರತದ ಐಸಿರಿ ಎಂಬ ಪರಿಕಲ್ಪನೆಯೊಂದಿಗೆ ಏಕಕಾಲದಲ್ಲಿ 1000ಕ್ಕೂ ಮಿಕ್ಕಿ ಯುವ ಜನತೆಯಿಂದ ಭತ್ತ ಕಟಾವು ಕಾರ್ಯಕ್ರಮ

    ರಾಷ್ಟ್ರಮಟ್ಟದ ರಸ್ತೆ ಸುರಕ್ಷತಾ ಕಾರ್ಟೂನ್ ಸ್ಪರ್ಧೆಯಲ್ಲಿ ವಿಶೇಷ ಬಹುಮಾನ ಪಡೆದ ಶೈಲೇಶ್ ಉಜಿರೆ

    • By admin
    • February 7, 2025
    • 46 views
    ರಾಷ್ಟ್ರಮಟ್ಟದ ರಸ್ತೆ ಸುರಕ್ಷತಾ ಕಾರ್ಟೂನ್ ಸ್ಪರ್ಧೆಯಲ್ಲಿ ವಿಶೇಷ ಬಹುಮಾನ ಪಡೆದ ಶೈಲೇಶ್ ಉಜಿರೆ

    ಮೈಕ್ರೋ ಫೈನಾನ್ಸ್ ವಿರುದ್ಧದ ಸುಗ್ರೀವಾಜ್ಞೆಗಿಲ್ಲ ರಾಜ್ಯಪಾಲರ ಅಂಕಿತ

    • By admin
    • February 7, 2025
    • 35 views
    ಮೈಕ್ರೋ ಫೈನಾನ್ಸ್ ವಿರುದ್ಧದ ಸುಗ್ರೀವಾಜ್ಞೆಗಿಲ್ಲ ರಾಜ್ಯಪಾಲರ ಅಂಕಿತ

    ಒಟ್ಲ ಶ್ರೀ ಧರ್ಮರಸು ಉಳ್ಳಾಕ್ಲು ಬ್ರಹ್ಮ ಬೈದೇರುಗಳ ಗರಡಿ ಹಾಗೂ ಪರಿವಾರ ದೈವಗಳ ಕ್ಷೇತ್ರ ಶಿಶಿಲದಲ್ಲಿ ವರ್ಷಾವಧಿ ಜಾತ್ರಾ ಮಹೋತ್ಸವ

    • By admin
    • February 2, 2025
    • 85 views
    ಒಟ್ಲ ಶ್ರೀ ಧರ್ಮರಸು ಉಳ್ಳಾಕ್ಲು ಬ್ರಹ್ಮ ಬೈದೇರುಗಳ ಗರಡಿ ಹಾಗೂ ಪರಿವಾರ ದೈವಗಳ ಕ್ಷೇತ್ರ ಶಿಶಿಲದಲ್ಲಿ ವರ್ಷಾವಧಿ ಜಾತ್ರಾ ಮಹೋತ್ಸವ

    ಉಪ್ಪಿನಂಗಡಿ ಸಹಕಾರಿ ವ್ಯವಸಾಯಿಕ ಸಂಘ (ನಿ.) ಆಡಳಿತ ಮಂಡಳಿ ಚುನಾವಣೆಯಲ್ಲಿ ಸಹಕಾರ ಭಾರತೀಯ ಅಭ್ಯರ್ಥಿಗಳ ಪ್ರಚಂಡ ಗೆಲುವು

    • By admin
    • February 2, 2025
    • 276 views
    ಉಪ್ಪಿನಂಗಡಿ ಸಹಕಾರಿ ವ್ಯವಸಾಯಿಕ ಸಂಘ (ನಿ.) ಆಡಳಿತ ಮಂಡಳಿ ಚುನಾವಣೆಯಲ್ಲಿ   ಸಹಕಾರ ಭಾರತೀಯ ಅಭ್ಯರ್ಥಿಗಳ ಪ್ರಚಂಡ ಗೆಲುವು