ಪ್ರಕೃತಿಯ ಮಡಿಲಲ್ಲಿದೆ ‘ನೋನಿ’ಯೆಂಬ ಸಂಜೀವಿನಿ

🖊️ ಸಂಪಾದಕೀಯ

ನಮ್ಮ ಪರಿಸರದಲ್ಲಿ ಅದೆಷ್ಟು ಔಷಧೀಯ ಗುಣಗಳಿರುವ ಸಸ್ಯ ಪ್ರಭೇದಗಳಿವೆ. ಪ್ರಭೇದಗಳನ್ನು ಗುರುತಿಸಿ ಅವುಗಳಲ್ಲಿ ಔಷಧೀಯ ಗುಣಗಳಿವೆ ಎಂಬುದನ್ನು ನಾವು ತಿಳಿದುಕೊಂಡಿರುವುದಿಲ್ಲ. ಆರೋಗ್ಯವನ್ನು ಕಾಪಾಡುವಲ್ಲಿ ಹಣ್ಣುಗಳು ಸಹ ಮುಖ್ಯ ಪಾತ್ರವಹಿಸಿವೆ. ಕೆಲವೊಂದು ಹಣ್ಣುಗಳನ್ನು ತಿಂದರೆ ಕೆಲವೊಂದು ಕಾಯಿಲೆಗಳು ದೂರವಾಗುತ್ತದೆ. ಇದರಂತೆ ನೋನಿ ಹಣ್ಣು ಸೇವಿಸಿದರೆ ಆರೋಗ್ಯ ವೃದ್ಧಿಸುವುದು ಖಂಡಿತ.

ನೋನಿ ಹಣ್ಣು ಮೂಲತಃ ಭಾರತದ ಔಷಧೀಯ ಹಣ್ಣುಗಳಲ್ಲಿ ಒಂದು. ಪ್ರಕೃತಿಯಲ್ಲಿ ದೊರೆಯುವ ಅದ್ಭುತ ಆರೋಗ್ಯ ಹಾಗೂ ರೋಗನಿರೋಧಕ ಹಣ್ಣು ಇದಾಗಿದ್ದು ಈ ಹಣ್ಣು ಮೋರಿಂಡ ಸಿಕ್ರೆ ಪೋಲಿಯ ಎಂಬ ಸಸ್ಯ ಪ್ರಭೇದಕ್ಕೆ ಸೇರಿದೆ.

ಸುಮಾರು 150ಕ್ಕೂ ಹೆಚ್ಚಿನ ಪೋಷಕಾಂಶಗಳನ್ನು ಹೊಂದಿರುವ ನೋನಿ ಕಾಯಿಯು ಹಲವು ಕಾಯಿಲೆಗಳ ಶಮನಕ್ಕೆ ಉಪಯುಕ್ತವಾಗಿದೆ ಮಾನಸಿಕ ಒತ್ತಡ ಅಲರ್ಜಿ ಅಸ್ತಮಾ ಕ್ಯಾನ್ಸರ್ ಗಂಟಲು ನೋವು ಕೂದಲು ಉದರುವಿಕೆ ಸಕ್ಕರೆಕಾಯಿಲೆ ಮೂತ್ರಜನಕಾಂಗದ ಕಾಯಿಲೆ ಚರ್ಮರೋಗ ಕೆಮ್ಮು ಜ್ವರಗಳಂಥ ಕಾಯಿಲೆಗಳಿಗೂ ಕೂಡ ರಾಮಬಾಣವಾಗಿದೆ. ವಿಟಮಿನ್ ಸಿ, ಎ, ಬಿ ಮತ್ತು ಕಬ್ಬಿಣದ ಅಂಶಗಳನ್ನು ಹೊಂದಿರುವ ನೋನಿ ಹಣ್ಣಿನ ಬಳಕೆಯಿಂದ ಆರೋಗ್ಯಕ್ಕೆ ಹಲವಾರು ಪ್ರಯೋಜನಗಳಿವೆ.

ಔಷಧೀಯ ಗುಣವನ್ನು ಹೊಂದಿರುವ ಈ ನೋನಿಯ ಜೊತೆ ನೀರು, ಬೆಲ್ಲ, ಏಲಕ್ಕಿ ಸೇರಿಸಿ ಜ್ಯೂಸ್ ಮಾಡಿದಾಗ ಹಾಲಿನಂತೆ ನೋರೆಯು ಬರುತ್ತದೆ. ಕುಡಿಯಲು ರುಚಿಕರವಾಗಿರುವ ನೋನಿ ಹಣ್ಣುಗಳನ್ನು ನಿತ್ಯವೂ ಸೇವನೆ ಮಾಡುವುದರಿಂದ ಆರೋಗ್ಯಕ್ಕೆ ಹೊಸ ಚೈತನ್ಯವನ್ನು ಪಡೆಯಬಹುದು.

ನೋನಿ ಹಣ್ಣಿನಲ್ಲಿರುವ ಔಷಧೀಯ ಗುಣಗಳ ಬಗ್ಗೆ ವಿಶ್ವವಿದ್ಯಾನಿಲಯದ ಸಂಶೋಧನೆಯಿಂದಲೂ ದೃಢಪಟ್ಟಿದೆ. ರೋಗನಿರೋಧಕ ಶಕ್ತಿಯನ್ನು ವೃದ್ಧಿಸಲು, ಮಾನಸಿಕ ಒತ್ತಡದಿಂದ ಮುಕ್ತರಾಗಲು, ನಿದ್ರೆಯ ಸಮಸ್ಯೆ ಇರುವವರು, ಸುಸ್ತು ಕಾಡುತ್ತಿರುವವರು, ಉಸಿರಾಟದ ಸಮಸ್ಯೆ ಇರುವವರು, ಮಲಬದ್ಧತೆ, ರಕ್ತದೊತ್ತಡ, ಕೀಲುನೋವು, ಹೃದಯಸಂಬಂಧಿ ಕಾಯಿಲೆಗಳು, ಖಿನ್ನತೆಯಿಂದ ಬಳಲುತ್ತಿರುವವರು ಹಾಗೂ ಪಿತ್ತಜನಕಾಂಗ ಮೂತ್ರಜನಕಾಂಗದ ನಿರ್ವಹಣೆಗೆ ಸುಗಮವಾಗುವಂತೆ ನೋಡಿಕೊಳ್ಳಲು ನೋನಿ ಹಣ್ಣು ನೆರವಾಗುತ್ತದೆ.

ನೋನಿಯನ್ನು ಔಷಧಿಯಾಗಿ ಸೇವಿಸುವರು ಮೊದಲ ಮೂರು ದಿನ ಬೆಳಗಿನ ಉಪಹಾರಕ್ಕೆ ಮುಂಚಿತವಾಗಿ ಒಂದು ಟೀ ಸ್ಪೂನ್ ಸೇವಿಸಬೇಕು. ಒಂದು ತಿಂಗಳ ಸೇವನೆಯ ನಂತರ ಉಪಹಾರಕ್ಕೆ ಮುಂಚೆ ಎರಡು ಸ್ಪೂನ್, ಮಧ್ಯಾಹ್ನ ಊಟಕ್ಕಿಂತ ಮೊದಲು 2 ಸ್ಪೂನ್ ರಸವನ್ನು ಸೇವಿಸಬೇಕು. ಕೇವಲ ಹಣ್ಣು ಮಾತ್ರವಲ್ಲದೇ ನೋನಿಯ ಎಲೆಗಳು ಕೂಡ ಬಹಳಷ್ಟು ಉಪಯುಕ್ತವಾಗಿದ್ದು ಎಲೆಯಿಂದ ತೆಗೆದ ರಸ ಅನೇಕ ರೀತಿಯ ಚರ್ಮರೋಗಗಳನ್ನು ನಿವಾರಿಸುತ್ತದೆ. ಅದ್ರಲ್ಲೂ ನೋನಿ ಎಲೆಯ ಕಷಾಯವನ್ನು ಜ್ವರ ನಿವಾರಕವಾಗಿಯೂ ಬಳಸಬಹುದು.

Spread the love
  • Related Posts

    ಬೆಳ್ತಂಗಡಿ : ಎಸ್ಐಟಿ ಎಸ್ಪಿ ಪ್ರಯಾಣಿಸುತ್ತಿದ್ದ ಇನೋವಾ ಕಾರು ಪಲ್ಟಿ, ಎಸ್ಪಿ ಸಹಿತ ನಾಲ್ವರು ಅಪಾಯದಿಂದ ಪಾರು

    ಬೆಳ್ತಂಗಡಿ : ಬುರುಡೆ ಪ್ರಕರಣದ ಎಸ್ಐಟಿ ತಂಡದ ಎಸ್ಪಿ ಮತ್ತು ಇತರ ಅಧಿಕಾರಿಗಳು ಪ್ರಯಾಣಿಸುತ್ತಿದ್ದ ಇನೋವಾ ಕಾರು ಚಾರ್ಮಾಡಿಯಲ್ಲಿ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಬೆಳ್ತಂಗಡಿ ಎಸ್ಐಟಿ ಕಚೇರಿಯಿಂದ ಎಸ್ಪಿ ಸಿ.ಎ.ಸೈಮನ್ , ಇನ್ಸ್‌ಪೆಕ್ಟರ್ ಕುಸುಮಾಧರ್, ಸಿಬ್ಬಂದಿ ಮಂಜುನಾಥ್ ಸೇರಿ ಚಿಕ್ಕಮಗಳೂರು ಜಿಲ್ಲಾ…

    Spread the love

    ದೇವಸ್ಥಾನಗಳು ಭಜನೆ, ಸಂಸ್ಕಾರ ಮತ್ತು ಭಕ್ತಿಯ ಕೇಂದ್ರವಾಗಲಿ : ಡಾ. ನವೀನ್ ಚಂದ್ರ ಶೆಟ್ಟಿ

    ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಮಡಬಲು ಶ್ರೀ ಬೀರಲಿಂಗೇಶ್ವರ ಸ್ವಾಮಿ ದೇವಸ್ಥಾನದ ಜೀರ್ಣೋದ್ಧಾರ ಕಾರ್ಯಕ್ಕೆ ₹2 ಲಕ್ಷ ಅನುದಾನ ವಿತರಣೆ ಸಕಲೇಶಪುರ: ತಾಲೂಕಿನ ಮಡಬಲು ಗ್ರಾಮದ ಐತಿಹಾಸಿಕ ಹಾಗೂ ಭಕ್ತರ ಆರಾಧನಾ ಕೇಂದ್ರವಾಗಿರುವ ಶ್ರೀ ಬೀರಲಿಂಗೇಶ್ವರ ಸ್ವಾಮಿ ದೇವಸ್ಥಾನದ ಜೀರ್ಣೋದ್ಧಾರ ಕಾರ್ಯಕ್ಕಾಗಿ ಶ್ರೀ…

    Spread the love

    You Missed

    ಬೆಳ್ತಂಗಡಿ : ಎಸ್ಐಟಿ ಎಸ್ಪಿ ಪ್ರಯಾಣಿಸುತ್ತಿದ್ದ ಇನೋವಾ ಕಾರು ಪಲ್ಟಿ, ಎಸ್ಪಿ ಸಹಿತ ನಾಲ್ವರು ಅಪಾಯದಿಂದ ಪಾರು

    • By admin
    • June 16, 2026
    • 78 views
    ಬೆಳ್ತಂಗಡಿ : ಎಸ್ಐಟಿ ಎಸ್ಪಿ ಪ್ರಯಾಣಿಸುತ್ತಿದ್ದ ಇನೋವಾ ಕಾರು ಪಲ್ಟಿ, ಎಸ್ಪಿ ಸಹಿತ ನಾಲ್ವರು ಅಪಾಯದಿಂದ ಪಾರು

    ದೇವಸ್ಥಾನಗಳು ಭಜನೆ, ಸಂಸ್ಕಾರ ಮತ್ತು ಭಕ್ತಿಯ ಕೇಂದ್ರವಾಗಲಿ : ಡಾ. ನವೀನ್ ಚಂದ್ರ ಶೆಟ್ಟಿ

    • By admin
    • June 16, 2026
    • 32 views
    ದೇವಸ್ಥಾನಗಳು ಭಜನೆ, ಸಂಸ್ಕಾರ ಮತ್ತು ಭಕ್ತಿಯ ಕೇಂದ್ರವಾಗಲಿ : ಡಾ. ನವೀನ್ ಚಂದ್ರ ಶೆಟ್ಟಿ

    ಐಸ್ ಹಾಕಿ ರಾಷ್ಟ್ರೀಯ ಚಾಂಪಿಯನ್‌ಶಿಪ್: ಕುತ್ಲೂರಿನ ನಿಷ್ಕ್ ಹರೀಶ್ ಸಾಲಿಯಾನ್‌ಗೆ ರಾಷ್ಟ್ರೀಯ ಬೆಳ್ಳಿ ಪದಕ

    • By admin
    • June 15, 2026
    • 103 views
    ಐಸ್ ಹಾಕಿ ರಾಷ್ಟ್ರೀಯ ಚಾಂಪಿಯನ್‌ಶಿಪ್: ಕುತ್ಲೂರಿನ ನಿಷ್ಕ್ ಹರೀಶ್ ಸಾಲಿಯಾನ್‌ಗೆ ರಾಷ್ಟ್ರೀಯ ಬೆಳ್ಳಿ ಪದಕ

    ಬೆಳ್ತಂಗಡಿ: ಚಾರ್ಮಾಡಿ ಗ್ರಾಮ ಪಂಚಾಯತ್ ಕಾರ್ಯದರ್ಶಿ ಜಯಕೀರ್ತಿ HB ನಿಧನ

    • By admin
    • June 15, 2026
    • 73 views
    ಬೆಳ್ತಂಗಡಿ: ಚಾರ್ಮಾಡಿ ಗ್ರಾಮ ಪಂಚಾಯತ್ ಕಾರ್ಯದರ್ಶಿ ಜಯಕೀರ್ತಿ HB ನಿಧನ

    ಬೆಳ್ತಂಗಡಿ ನೂತನ ನ್ಯಾಯಾಲಯ ಸಂಕೀರ್ಣದ ಶಂಕುಸ್ಥಾಪನೆ

    • By admin
    • June 14, 2026
    • 46 views
    ಬೆಳ್ತಂಗಡಿ ನೂತನ ನ್ಯಾಯಾಲಯ ಸಂಕೀರ್ಣದ ಶಂಕುಸ್ಥಾಪನೆ

    ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ಬೆಳ್ತಂಗಡಿ ತಾಲೂಕು ಘಟಕ ರಚನೆ: ನಿಶಾನ್ ಬಂಗೇರ ನಾರ್ಯ ಅಧ್ಯಕ್ಷರಾಗಿ ಆಯ್ಕೆ

    • By admin
    • June 13, 2026
    • 82 views
    ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ಬೆಳ್ತಂಗಡಿ ತಾಲೂಕು ಘಟಕ ರಚನೆ: ನಿಶಾನ್ ಬಂಗೇರ ನಾರ್ಯ ಅಧ್ಯಕ್ಷರಾಗಿ ಆಯ್ಕೆ