ಪ್ರಕೃತಿಯ ಮಡಿಲಲ್ಲಿದೆ ‘ನೋನಿ’ಯೆಂಬ ಸಂಜೀವಿನಿ

🖊️ ಸಂಪಾದಕೀಯ

ನಮ್ಮ ಪರಿಸರದಲ್ಲಿ ಅದೆಷ್ಟು ಔಷಧೀಯ ಗುಣಗಳಿರುವ ಸಸ್ಯ ಪ್ರಭೇದಗಳಿವೆ. ಪ್ರಭೇದಗಳನ್ನು ಗುರುತಿಸಿ ಅವುಗಳಲ್ಲಿ ಔಷಧೀಯ ಗುಣಗಳಿವೆ ಎಂಬುದನ್ನು ನಾವು ತಿಳಿದುಕೊಂಡಿರುವುದಿಲ್ಲ. ಆರೋಗ್ಯವನ್ನು ಕಾಪಾಡುವಲ್ಲಿ ಹಣ್ಣುಗಳು ಸಹ ಮುಖ್ಯ ಪಾತ್ರವಹಿಸಿವೆ. ಕೆಲವೊಂದು ಹಣ್ಣುಗಳನ್ನು ತಿಂದರೆ ಕೆಲವೊಂದು ಕಾಯಿಲೆಗಳು ದೂರವಾಗುತ್ತದೆ. ಇದರಂತೆ ನೋನಿ ಹಣ್ಣು ಸೇವಿಸಿದರೆ ಆರೋಗ್ಯ ವೃದ್ಧಿಸುವುದು ಖಂಡಿತ.

ನೋನಿ ಹಣ್ಣು ಮೂಲತಃ ಭಾರತದ ಔಷಧೀಯ ಹಣ್ಣುಗಳಲ್ಲಿ ಒಂದು. ಪ್ರಕೃತಿಯಲ್ಲಿ ದೊರೆಯುವ ಅದ್ಭುತ ಆರೋಗ್ಯ ಹಾಗೂ ರೋಗನಿರೋಧಕ ಹಣ್ಣು ಇದಾಗಿದ್ದು ಈ ಹಣ್ಣು ಮೋರಿಂಡ ಸಿಕ್ರೆ ಪೋಲಿಯ ಎಂಬ ಸಸ್ಯ ಪ್ರಭೇದಕ್ಕೆ ಸೇರಿದೆ.

ಸುಮಾರು 150ಕ್ಕೂ ಹೆಚ್ಚಿನ ಪೋಷಕಾಂಶಗಳನ್ನು ಹೊಂದಿರುವ ನೋನಿ ಕಾಯಿಯು ಹಲವು ಕಾಯಿಲೆಗಳ ಶಮನಕ್ಕೆ ಉಪಯುಕ್ತವಾಗಿದೆ ಮಾನಸಿಕ ಒತ್ತಡ ಅಲರ್ಜಿ ಅಸ್ತಮಾ ಕ್ಯಾನ್ಸರ್ ಗಂಟಲು ನೋವು ಕೂದಲು ಉದರುವಿಕೆ ಸಕ್ಕರೆಕಾಯಿಲೆ ಮೂತ್ರಜನಕಾಂಗದ ಕಾಯಿಲೆ ಚರ್ಮರೋಗ ಕೆಮ್ಮು ಜ್ವರಗಳಂಥ ಕಾಯಿಲೆಗಳಿಗೂ ಕೂಡ ರಾಮಬಾಣವಾಗಿದೆ. ವಿಟಮಿನ್ ಸಿ, ಎ, ಬಿ ಮತ್ತು ಕಬ್ಬಿಣದ ಅಂಶಗಳನ್ನು ಹೊಂದಿರುವ ನೋನಿ ಹಣ್ಣಿನ ಬಳಕೆಯಿಂದ ಆರೋಗ್ಯಕ್ಕೆ ಹಲವಾರು ಪ್ರಯೋಜನಗಳಿವೆ.

ಔಷಧೀಯ ಗುಣವನ್ನು ಹೊಂದಿರುವ ಈ ನೋನಿಯ ಜೊತೆ ನೀರು, ಬೆಲ್ಲ, ಏಲಕ್ಕಿ ಸೇರಿಸಿ ಜ್ಯೂಸ್ ಮಾಡಿದಾಗ ಹಾಲಿನಂತೆ ನೋರೆಯು ಬರುತ್ತದೆ. ಕುಡಿಯಲು ರುಚಿಕರವಾಗಿರುವ ನೋನಿ ಹಣ್ಣುಗಳನ್ನು ನಿತ್ಯವೂ ಸೇವನೆ ಮಾಡುವುದರಿಂದ ಆರೋಗ್ಯಕ್ಕೆ ಹೊಸ ಚೈತನ್ಯವನ್ನು ಪಡೆಯಬಹುದು.

ನೋನಿ ಹಣ್ಣಿನಲ್ಲಿರುವ ಔಷಧೀಯ ಗುಣಗಳ ಬಗ್ಗೆ ವಿಶ್ವವಿದ್ಯಾನಿಲಯದ ಸಂಶೋಧನೆಯಿಂದಲೂ ದೃಢಪಟ್ಟಿದೆ. ರೋಗನಿರೋಧಕ ಶಕ್ತಿಯನ್ನು ವೃದ್ಧಿಸಲು, ಮಾನಸಿಕ ಒತ್ತಡದಿಂದ ಮುಕ್ತರಾಗಲು, ನಿದ್ರೆಯ ಸಮಸ್ಯೆ ಇರುವವರು, ಸುಸ್ತು ಕಾಡುತ್ತಿರುವವರು, ಉಸಿರಾಟದ ಸಮಸ್ಯೆ ಇರುವವರು, ಮಲಬದ್ಧತೆ, ರಕ್ತದೊತ್ತಡ, ಕೀಲುನೋವು, ಹೃದಯಸಂಬಂಧಿ ಕಾಯಿಲೆಗಳು, ಖಿನ್ನತೆಯಿಂದ ಬಳಲುತ್ತಿರುವವರು ಹಾಗೂ ಪಿತ್ತಜನಕಾಂಗ ಮೂತ್ರಜನಕಾಂಗದ ನಿರ್ವಹಣೆಗೆ ಸುಗಮವಾಗುವಂತೆ ನೋಡಿಕೊಳ್ಳಲು ನೋನಿ ಹಣ್ಣು ನೆರವಾಗುತ್ತದೆ.

ನೋನಿಯನ್ನು ಔಷಧಿಯಾಗಿ ಸೇವಿಸುವರು ಮೊದಲ ಮೂರು ದಿನ ಬೆಳಗಿನ ಉಪಹಾರಕ್ಕೆ ಮುಂಚಿತವಾಗಿ ಒಂದು ಟೀ ಸ್ಪೂನ್ ಸೇವಿಸಬೇಕು. ಒಂದು ತಿಂಗಳ ಸೇವನೆಯ ನಂತರ ಉಪಹಾರಕ್ಕೆ ಮುಂಚೆ ಎರಡು ಸ್ಪೂನ್, ಮಧ್ಯಾಹ್ನ ಊಟಕ್ಕಿಂತ ಮೊದಲು 2 ಸ್ಪೂನ್ ರಸವನ್ನು ಸೇವಿಸಬೇಕು. ಕೇವಲ ಹಣ್ಣು ಮಾತ್ರವಲ್ಲದೇ ನೋನಿಯ ಎಲೆಗಳು ಕೂಡ ಬಹಳಷ್ಟು ಉಪಯುಕ್ತವಾಗಿದ್ದು ಎಲೆಯಿಂದ ತೆಗೆದ ರಸ ಅನೇಕ ರೀತಿಯ ಚರ್ಮರೋಗಗಳನ್ನು ನಿವಾರಿಸುತ್ತದೆ. ಅದ್ರಲ್ಲೂ ನೋನಿ ಎಲೆಯ ಕಷಾಯವನ್ನು ಜ್ವರ ನಿವಾರಕವಾಗಿಯೂ ಬಳಸಬಹುದು.

Spread the love
  • Related Posts

    ನ್ಯಾಯವಾದಿಗಳ ಸೌಹಾರ್ದ ಸಹಕಾರಿ ಸಂಘ ನಿಯಮಿತ ಇದರ ಬಂಟ್ವಾಳದ ನೂತನ ಶಾಖೆ ಉದ್ಘಾಟನೆ

    ಮಂಗಳೂರು: ನ್ಯಾಯವಾದಿಗಳ ಸೌಹಾರ್ದ ಸಹಕಾರಿ ಸಂಘ ನಿಯಮಿತ ಇದರ ಬಂಟ್ವಾಳದ ನೂತನ ಶಾಖೆಯು ಬಂಟ್ವಾಳದ ನ್ಯಾಯಾಲಯದ ಆವರಣದಲ್ಲಿ ಇಂದು ಉದ್ಘಾಟನೆಗೊಂಡಿದ್ದು, ಬಂಟ್ವಾಳದ ನೂತನ ಶಾಖೆಯ ಕಚೇರಿಯನ್ನು ಮಂಗಳೂರು ವಕೀಲರ ಸಂಘದ ಮಾಜಿ ಅಧ್ಯಕ್ಷರಾದ ಶ್ರೀ ಎಸ್ ಪಿ ಚಂಗಪ್ಪ ರವರು ಉದ್ಘಾಟಿಸಿದರು.…

    Spread the love

    ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ 54ನೇ ವರ್ಷದ ಉಚಿತ ಸಾಮೂಹಿಕ ವಿವಾಹ ಸಮಾರಂಭದ ವೈಭವ,106ಜೋಡಿ ಸಪ್ತಪದಿ ತುಳಿದು ದಾಂಪತ್ಯ ಜೀವನಕ್ಕೆ ಪಾದಾರ್ಪಣೆ

    ಧರ್ಮಸ್ಥಳ: ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಬುಧವಾರ ಸಂಜೆ ಗಂಟೆ 6.40ರ ಗೋಧೂಳಿ ಲಗ್ನ ಸುಮುಹೂರ್ತದಲ್ಲಿ ಅಮೃತವರ್ಷಿಣಿ ಸಭಾಭವನದಲ್ಲಿ ನಡೆದ 54ನೇ ವರ್ಷದ ಉಚಿತ ಸಾಮೂಹಿಕ ವಿವಾಹ ಸಮಾರಂಭದಲ್ಲಿ 106 ಜೊತೆ ವಧೂ-ವರರು ದಾಂಪತ್ಯ ಜೀವನಕ್ಕೆ ಪಾದಾರ್ಪಣೆ ಮಾಡಿದರು. ಬುಧವಾರ ಬೆಳಿಗ್ಗೆ ಧರ್ಮಾಧಿಕಾರಿ…

    Spread the love

    You Missed

    ನ್ಯಾಯವಾದಿಗಳ ಸೌಹಾರ್ದ ಸಹಕಾರಿ ಸಂಘ ನಿಯಮಿತ ಇದರ ಬಂಟ್ವಾಳದ ನೂತನ ಶಾಖೆ ಉದ್ಘಾಟನೆ

    • By admin
    • April 30, 2026
    • 200 views
    ನ್ಯಾಯವಾದಿಗಳ ಸೌಹಾರ್ದ ಸಹಕಾರಿ ಸಂಘ ನಿಯಮಿತ ಇದರ ಬಂಟ್ವಾಳದ ನೂತನ ಶಾಖೆ ಉದ್ಘಾಟನೆ

    ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ 54ನೇ ವರ್ಷದ ಉಚಿತ ಸಾಮೂಹಿಕ ವಿವಾಹ ಸಮಾರಂಭದ ವೈಭವ,106ಜೋಡಿ ಸಪ್ತಪದಿ ತುಳಿದು ದಾಂಪತ್ಯ ಜೀವನಕ್ಕೆ ಪಾದಾರ್ಪಣೆ

    • By admin
    • April 29, 2026
    • 44 views
    ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ 54ನೇ ವರ್ಷದ ಉಚಿತ ಸಾಮೂಹಿಕ ವಿವಾಹ ಸಮಾರಂಭದ ವೈಭವ,106ಜೋಡಿ ಸಪ್ತಪದಿ ತುಳಿದು ದಾಂಪತ್ಯ ಜೀವನಕ್ಕೆ ಪಾದಾರ್ಪಣೆ

    ಬೆಂಗಳೂರಿನಲ್ಲಿ ಘನಘೋರ ದುರಂತ ಬೌರಿಂಗ್ ಆಸ್ಪತ್ರೆಯ ಕೌಂಪೌಂಡು ಕುಸಿದು ಮೂವರು ಮಕ್ಕಳ ಸಹಿತ 8ಮಂದಿಯ ದುರ್ಮರಣ

    • By admin
    • April 29, 2026
    • 50 views
    ಬೆಂಗಳೂರಿನಲ್ಲಿ ಘನಘೋರ ದುರಂತ ಬೌರಿಂಗ್ ಆಸ್ಪತ್ರೆಯ ಕೌಂಪೌಂಡು ಕುಸಿದು ಮೂವರು ಮಕ್ಕಳ ಸಹಿತ 8ಮಂದಿಯ   ದುರ್ಮರಣ

    ಕುಂಟುತ್ತಿರುವ ಕಾಮಗಾರಿಯಿಂದ ಬಿಸಿಲ ಬೇಗೆಗೆ ಬೆಂಡಾದ ಜನ: ಟ್ರಾಫಿಕ್ ಜಾಮ್ ನಿಂದ ಹೈರಾಣಾದ ಜನ

    • By admin
    • April 29, 2026
    • 109 views
    ಕುಂಟುತ್ತಿರುವ ಕಾಮಗಾರಿಯಿಂದ ಬಿಸಿಲ ಬೇಗೆಗೆ ಬೆಂಡಾದ ಜನ: ಟ್ರಾಫಿಕ್ ಜಾಮ್ ನಿಂದ ಹೈರಾಣಾದ ಜನ

    ಬಿರು ಬಿಸಿಲಿನಲ್ಲಿ ಪ್ರಾಣಿ–ಪಕ್ಷಿಗಳಿಗೆ ನೀರುಣಿಸುವ ಮಹತ್ವದ ಕಾರ್ಯಕ್ಕೆ ಮುಂದಾಗೋಣ

    • By admin
    • April 29, 2026
    • 46 views
    ಬಿರು ಬಿಸಿಲಿನಲ್ಲಿ ಪ್ರಾಣಿ–ಪಕ್ಷಿಗಳಿಗೆ ನೀರುಣಿಸುವ ಮಹತ್ವದ ಕಾರ್ಯಕ್ಕೆ ಮುಂದಾಗೋಣ

    ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸೇವಾ ಟ್ರಸ್ಟ್ (ರಿ) ಬೆಳ್ತಂಗಡಿ ಇದರ ವತಿಯಿಂದ ಕು.ಪ್ರಾಪ್ತಿ ಎಂ ಗೌಡರಿಗೆ ಗೌರವ ಸನ್ಮಾನ

    • By admin
    • April 28, 2026
    • 88 views
    ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸೇವಾ ಟ್ರಸ್ಟ್ (ರಿ) ಬೆಳ್ತಂಗಡಿ ಇದರ ವತಿಯಿಂದ ಕು.ಪ್ರಾಪ್ತಿ ಎಂ ಗೌಡರಿಗೆ ಗೌರವ ಸನ್ಮಾನ