ಪ್ರಕೃತಿಯ ಮಡಿಲಲ್ಲಿದೆ ‘ನೋನಿ’ಯೆಂಬ ಸಂಜೀವಿನಿ

🖊️ ಸಂಪಾದಕೀಯ

ನಮ್ಮ ಪರಿಸರದಲ್ಲಿ ಅದೆಷ್ಟು ಔಷಧೀಯ ಗುಣಗಳಿರುವ ಸಸ್ಯ ಪ್ರಭೇದಗಳಿವೆ. ಪ್ರಭೇದಗಳನ್ನು ಗುರುತಿಸಿ ಅವುಗಳಲ್ಲಿ ಔಷಧೀಯ ಗುಣಗಳಿವೆ ಎಂಬುದನ್ನು ನಾವು ತಿಳಿದುಕೊಂಡಿರುವುದಿಲ್ಲ. ಆರೋಗ್ಯವನ್ನು ಕಾಪಾಡುವಲ್ಲಿ ಹಣ್ಣುಗಳು ಸಹ ಮುಖ್ಯ ಪಾತ್ರವಹಿಸಿವೆ. ಕೆಲವೊಂದು ಹಣ್ಣುಗಳನ್ನು ತಿಂದರೆ ಕೆಲವೊಂದು ಕಾಯಿಲೆಗಳು ದೂರವಾಗುತ್ತದೆ. ಇದರಂತೆ ನೋನಿ ಹಣ್ಣು ಸೇವಿಸಿದರೆ ಆರೋಗ್ಯ ವೃದ್ಧಿಸುವುದು ಖಂಡಿತ.

ನೋನಿ ಹಣ್ಣು ಮೂಲತಃ ಭಾರತದ ಔಷಧೀಯ ಹಣ್ಣುಗಳಲ್ಲಿ ಒಂದು. ಪ್ರಕೃತಿಯಲ್ಲಿ ದೊರೆಯುವ ಅದ್ಭುತ ಆರೋಗ್ಯ ಹಾಗೂ ರೋಗನಿರೋಧಕ ಹಣ್ಣು ಇದಾಗಿದ್ದು ಈ ಹಣ್ಣು ಮೋರಿಂಡ ಸಿಕ್ರೆ ಪೋಲಿಯ ಎಂಬ ಸಸ್ಯ ಪ್ರಭೇದಕ್ಕೆ ಸೇರಿದೆ.

ಸುಮಾರು 150ಕ್ಕೂ ಹೆಚ್ಚಿನ ಪೋಷಕಾಂಶಗಳನ್ನು ಹೊಂದಿರುವ ನೋನಿ ಕಾಯಿಯು ಹಲವು ಕಾಯಿಲೆಗಳ ಶಮನಕ್ಕೆ ಉಪಯುಕ್ತವಾಗಿದೆ ಮಾನಸಿಕ ಒತ್ತಡ ಅಲರ್ಜಿ ಅಸ್ತಮಾ ಕ್ಯಾನ್ಸರ್ ಗಂಟಲು ನೋವು ಕೂದಲು ಉದರುವಿಕೆ ಸಕ್ಕರೆಕಾಯಿಲೆ ಮೂತ್ರಜನಕಾಂಗದ ಕಾಯಿಲೆ ಚರ್ಮರೋಗ ಕೆಮ್ಮು ಜ್ವರಗಳಂಥ ಕಾಯಿಲೆಗಳಿಗೂ ಕೂಡ ರಾಮಬಾಣವಾಗಿದೆ. ವಿಟಮಿನ್ ಸಿ, ಎ, ಬಿ ಮತ್ತು ಕಬ್ಬಿಣದ ಅಂಶಗಳನ್ನು ಹೊಂದಿರುವ ನೋನಿ ಹಣ್ಣಿನ ಬಳಕೆಯಿಂದ ಆರೋಗ್ಯಕ್ಕೆ ಹಲವಾರು ಪ್ರಯೋಜನಗಳಿವೆ.

ಔಷಧೀಯ ಗುಣವನ್ನು ಹೊಂದಿರುವ ಈ ನೋನಿಯ ಜೊತೆ ನೀರು, ಬೆಲ್ಲ, ಏಲಕ್ಕಿ ಸೇರಿಸಿ ಜ್ಯೂಸ್ ಮಾಡಿದಾಗ ಹಾಲಿನಂತೆ ನೋರೆಯು ಬರುತ್ತದೆ. ಕುಡಿಯಲು ರುಚಿಕರವಾಗಿರುವ ನೋನಿ ಹಣ್ಣುಗಳನ್ನು ನಿತ್ಯವೂ ಸೇವನೆ ಮಾಡುವುದರಿಂದ ಆರೋಗ್ಯಕ್ಕೆ ಹೊಸ ಚೈತನ್ಯವನ್ನು ಪಡೆಯಬಹುದು.

ನೋನಿ ಹಣ್ಣಿನಲ್ಲಿರುವ ಔಷಧೀಯ ಗುಣಗಳ ಬಗ್ಗೆ ವಿಶ್ವವಿದ್ಯಾನಿಲಯದ ಸಂಶೋಧನೆಯಿಂದಲೂ ದೃಢಪಟ್ಟಿದೆ. ರೋಗನಿರೋಧಕ ಶಕ್ತಿಯನ್ನು ವೃದ್ಧಿಸಲು, ಮಾನಸಿಕ ಒತ್ತಡದಿಂದ ಮುಕ್ತರಾಗಲು, ನಿದ್ರೆಯ ಸಮಸ್ಯೆ ಇರುವವರು, ಸುಸ್ತು ಕಾಡುತ್ತಿರುವವರು, ಉಸಿರಾಟದ ಸಮಸ್ಯೆ ಇರುವವರು, ಮಲಬದ್ಧತೆ, ರಕ್ತದೊತ್ತಡ, ಕೀಲುನೋವು, ಹೃದಯಸಂಬಂಧಿ ಕಾಯಿಲೆಗಳು, ಖಿನ್ನತೆಯಿಂದ ಬಳಲುತ್ತಿರುವವರು ಹಾಗೂ ಪಿತ್ತಜನಕಾಂಗ ಮೂತ್ರಜನಕಾಂಗದ ನಿರ್ವಹಣೆಗೆ ಸುಗಮವಾಗುವಂತೆ ನೋಡಿಕೊಳ್ಳಲು ನೋನಿ ಹಣ್ಣು ನೆರವಾಗುತ್ತದೆ.

ನೋನಿಯನ್ನು ಔಷಧಿಯಾಗಿ ಸೇವಿಸುವರು ಮೊದಲ ಮೂರು ದಿನ ಬೆಳಗಿನ ಉಪಹಾರಕ್ಕೆ ಮುಂಚಿತವಾಗಿ ಒಂದು ಟೀ ಸ್ಪೂನ್ ಸೇವಿಸಬೇಕು. ಒಂದು ತಿಂಗಳ ಸೇವನೆಯ ನಂತರ ಉಪಹಾರಕ್ಕೆ ಮುಂಚೆ ಎರಡು ಸ್ಪೂನ್, ಮಧ್ಯಾಹ್ನ ಊಟಕ್ಕಿಂತ ಮೊದಲು 2 ಸ್ಪೂನ್ ರಸವನ್ನು ಸೇವಿಸಬೇಕು. ಕೇವಲ ಹಣ್ಣು ಮಾತ್ರವಲ್ಲದೇ ನೋನಿಯ ಎಲೆಗಳು ಕೂಡ ಬಹಳಷ್ಟು ಉಪಯುಕ್ತವಾಗಿದ್ದು ಎಲೆಯಿಂದ ತೆಗೆದ ರಸ ಅನೇಕ ರೀತಿಯ ಚರ್ಮರೋಗಗಳನ್ನು ನಿವಾರಿಸುತ್ತದೆ. ಅದ್ರಲ್ಲೂ ನೋನಿ ಎಲೆಯ ಕಷಾಯವನ್ನು ಜ್ವರ ನಿವಾರಕವಾಗಿಯೂ ಬಳಸಬಹುದು.

Spread the love
  • Related Posts

    ಪಹಲ್ಗಾಮ್ ಭಯೋತ್ಪಾದಕ ದಾಳಿಗೆ ಪೂರಕವಾಗಿ ಅಟ್ಟಾರಿ ಗಡಿ ಮುಚ್ಚುವಿಕೆ, ಸಿಂಧೂ ಜಲ ಒಪ್ಪಂದಕ್ಕೆ ತಡೆ ಸೇರಿದಂತೆ ಕೇಂದ್ರ ಸರ್ಕಾರದಿಂದ 5 ಪ್ರಮುಖ ನಿರ್ಧಾರ

    ಹೊಸದಿಲ್ಲಿ: ಪಹಲ್ಗಾಮ್ ಭಯೋತ್ಪಾದಕ ದಾಳಿಯ ಕುರಿತು ಬುಧವಾರ ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ಭದ್ರತಾ ಸಂಪುಟ ಸಮಿತಿಯ (ಸಿಸಿಎಸ್) ಉನ್ನತ ಮಟ್ಟದ ಸಭೆ ನಡೆಯಿತು. ಅಟ್ಟಾರಿ ಗಡಿ ಮುಚ್ಚುವಿಕೆ, ಸಿಂಧೂ ಜಲ ಒಪ್ಪಂದಕ್ಕೆ ತಡೆ ಸೇರಿದಂತೆ 5 ಪ್ರಮುಖ ನಿರ್ಧಾರದೊಂದಿಗೆ ಪಹಲ್ಗಾಮ್…

    Spread the love

    ಬೆಳ್ತಂಗಡಿ : ಉಜಿರೆಯಲ್ಲಿ ರಾಮೋತ್ಸವ ಕಾರ್ಯಕ್ರಮ ಹಿನ್ನಲೆ ಕಾರ್ಯಕ್ರಮಕ್ಕೆ ಬರುತ್ತಿದ್ದ ಪುನೀತ್ ಕೆರೆಹಳ್ಳಿಯನ್ನು ತಡೆದ ಪೊಲೀಸರು!!!

    ಬೆಳ್ತಂಗಡಿ : ಉಜಿರೆ ಕೃಷ್ಣಾನುಗ್ರಹದ ಸಭಾಭವನದಲ್ಲಿ ವಿಶ್ವ ಹಿಂದೂ ಪರಿಷತ್ ಬೆಳ್ತಂಗಡಿ ಪ್ರಖಂಡ ಏ.19 ರಂದು ಸಂಜೆ ಆಯೋಜಿಸಲಾಗಿದ್ದ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ಚಕ್ರವರ್ತಿ ಸೂಲಿಬೆಲೆ ಆಗಮಿತಿ ಭಾಷಣ ಮಾಡಲಿದ್ದಾರೆ. ಈ ಕಾರ್ಯಕ್ರಮ ವೀಕ್ಷಿಸಲು ಹಿಂದೂ ಗೋ ರಕ್ಷಕ ಪುನೀತ್ ಕೆರೆಹಳ್ಳಿ…

    Spread the love

    You Missed

    ಪಹಲ್ಗಾಮ್ ಭಯೋತ್ಪಾದಕ ದಾಳಿಗೆ ಪೂರಕವಾಗಿ ಅಟ್ಟಾರಿ ಗಡಿ ಮುಚ್ಚುವಿಕೆ, ಸಿಂಧೂ ಜಲ ಒಪ್ಪಂದಕ್ಕೆ ತಡೆ ಸೇರಿದಂತೆ ಕೇಂದ್ರ ಸರ್ಕಾರದಿಂದ 5 ಪ್ರಮುಖ ನಿರ್ಧಾರ

    • By admin
    • April 23, 2025
    • 105 views
    ಪಹಲ್ಗಾಮ್ ಭಯೋತ್ಪಾದಕ ದಾಳಿಗೆ ಪೂರಕವಾಗಿ ಅಟ್ಟಾರಿ ಗಡಿ ಮುಚ್ಚುವಿಕೆ, ಸಿಂಧೂ ಜಲ ಒಪ್ಪಂದಕ್ಕೆ ತಡೆ ಸೇರಿದಂತೆ ಕೇಂದ್ರ ಸರ್ಕಾರದಿಂದ 5 ಪ್ರಮುಖ ನಿರ್ಧಾರ

    ಟೀಕೆಗಳು ಸಾಯುತ್ತದೆ ನಾವು ಮಾಡೋ ಕೆಲಸಗಳು ಶಾಶ್ವತವಾಗಿ ಉಳಿಯುತ್ತದೆ: ಡಿ.ಕೆ.ಶಿ

    • By admin
    • April 20, 2025
    • 64 views
    ಟೀಕೆಗಳು ಸಾಯುತ್ತದೆ ನಾವು ಮಾಡೋ ಕೆಲಸಗಳು ಶಾಶ್ವತವಾಗಿ ಉಳಿಯುತ್ತದೆ: ಡಿ.ಕೆ.ಶಿ

    ಬೆಳ್ತಂಗಡಿ : ಉಜಿರೆಯಲ್ಲಿ ರಾಮೋತ್ಸವ ಕಾರ್ಯಕ್ರಮ ಹಿನ್ನಲೆ ಕಾರ್ಯಕ್ರಮಕ್ಕೆ ಬರುತ್ತಿದ್ದ ಪುನೀತ್ ಕೆರೆಹಳ್ಳಿಯನ್ನು ತಡೆದ ಪೊಲೀಸರು!!!

    • By admin
    • April 19, 2025
    • 194 views
    ಬೆಳ್ತಂಗಡಿ : ಉಜಿರೆಯಲ್ಲಿ ರಾಮೋತ್ಸವ ಕಾರ್ಯಕ್ರಮ ಹಿನ್ನಲೆ ಕಾರ್ಯಕ್ರಮಕ್ಕೆ ಬರುತ್ತಿದ್ದ ಪುನೀತ್ ಕೆರೆಹಳ್ಳಿಯನ್ನು ತಡೆದ ಪೊಲೀಸರು!!!

    ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಕಾಮಗಾರಿ ನಡೆಯುತ್ತಿರುವ ಚರಂಡಿಗೆ ಬಿದ್ದ ಆಟೋ, ಚಾಲಕ ಪವಾಡ ಸದೃಶ ಪಾರು

    • By admin
    • April 18, 2025
    • 198 views
    ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಕಾಮಗಾರಿ ನಡೆಯುತ್ತಿರುವ ಚರಂಡಿಗೆ ಬಿದ್ದ ಆಟೋ, ಚಾಲಕ ಪವಾಡ ಸದೃಶ ಪಾರು

    ಮಂಗಳೂರಿನ ಹಳೇ ಬಂದರಿನಿಂದ ಲಕ್ಷದೀಪಕ್ಕೆ ಹೈ ಸ್ಪೀಡ್ ಫೇರೀ ಪ್ರಾಯೋಗಿಕ ಸಂಚಾರ ಪುನರಾರಂಭ

    • By admin
    • April 9, 2025
    • 100 views
    ಮಂಗಳೂರಿನ ಹಳೇ ಬಂದರಿನಿಂದ ಲಕ್ಷದೀಪಕ್ಕೆ ಹೈ ಸ್ಪೀಡ್ ಫೇರೀ ಪ್ರಾಯೋಗಿಕ ಸಂಚಾರ ಪುನರಾರಂಭ

    ಪಿಯುಸಿ ಫಲಿತಾಂಶ ಪ್ರಕಟ ಉಡುಪಿಗೆ ಮೊದಲ ಸ್ಥಾನ

    • By admin
    • April 8, 2025
    • 118 views
    ಪಿಯುಸಿ ಫಲಿತಾಂಶ ಪ್ರಕಟ ಉಡುಪಿಗೆ ಮೊದಲ ಸ್ಥಾನ