ಪ್ರಕೃತಿಯ ಮಡಿಲಲ್ಲಿದೆ ‘ನೋನಿ’ಯೆಂಬ ಸಂಜೀವಿನಿ

🖊️ ಸಂಪಾದಕೀಯ

ನಮ್ಮ ಪರಿಸರದಲ್ಲಿ ಅದೆಷ್ಟು ಔಷಧೀಯ ಗುಣಗಳಿರುವ ಸಸ್ಯ ಪ್ರಭೇದಗಳಿವೆ. ಪ್ರಭೇದಗಳನ್ನು ಗುರುತಿಸಿ ಅವುಗಳಲ್ಲಿ ಔಷಧೀಯ ಗುಣಗಳಿವೆ ಎಂಬುದನ್ನು ನಾವು ತಿಳಿದುಕೊಂಡಿರುವುದಿಲ್ಲ. ಆರೋಗ್ಯವನ್ನು ಕಾಪಾಡುವಲ್ಲಿ ಹಣ್ಣುಗಳು ಸಹ ಮುಖ್ಯ ಪಾತ್ರವಹಿಸಿವೆ. ಕೆಲವೊಂದು ಹಣ್ಣುಗಳನ್ನು ತಿಂದರೆ ಕೆಲವೊಂದು ಕಾಯಿಲೆಗಳು ದೂರವಾಗುತ್ತದೆ. ಇದರಂತೆ ನೋನಿ ಹಣ್ಣು ಸೇವಿಸಿದರೆ ಆರೋಗ್ಯ ವೃದ್ಧಿಸುವುದು ಖಂಡಿತ.

ನೋನಿ ಹಣ್ಣು ಮೂಲತಃ ಭಾರತದ ಔಷಧೀಯ ಹಣ್ಣುಗಳಲ್ಲಿ ಒಂದು. ಪ್ರಕೃತಿಯಲ್ಲಿ ದೊರೆಯುವ ಅದ್ಭುತ ಆರೋಗ್ಯ ಹಾಗೂ ರೋಗನಿರೋಧಕ ಹಣ್ಣು ಇದಾಗಿದ್ದು ಈ ಹಣ್ಣು ಮೋರಿಂಡ ಸಿಕ್ರೆ ಪೋಲಿಯ ಎಂಬ ಸಸ್ಯ ಪ್ರಭೇದಕ್ಕೆ ಸೇರಿದೆ.

ಸುಮಾರು 150ಕ್ಕೂ ಹೆಚ್ಚಿನ ಪೋಷಕಾಂಶಗಳನ್ನು ಹೊಂದಿರುವ ನೋನಿ ಕಾಯಿಯು ಹಲವು ಕಾಯಿಲೆಗಳ ಶಮನಕ್ಕೆ ಉಪಯುಕ್ತವಾಗಿದೆ ಮಾನಸಿಕ ಒತ್ತಡ ಅಲರ್ಜಿ ಅಸ್ತಮಾ ಕ್ಯಾನ್ಸರ್ ಗಂಟಲು ನೋವು ಕೂದಲು ಉದರುವಿಕೆ ಸಕ್ಕರೆಕಾಯಿಲೆ ಮೂತ್ರಜನಕಾಂಗದ ಕಾಯಿಲೆ ಚರ್ಮರೋಗ ಕೆಮ್ಮು ಜ್ವರಗಳಂಥ ಕಾಯಿಲೆಗಳಿಗೂ ಕೂಡ ರಾಮಬಾಣವಾಗಿದೆ. ವಿಟಮಿನ್ ಸಿ, ಎ, ಬಿ ಮತ್ತು ಕಬ್ಬಿಣದ ಅಂಶಗಳನ್ನು ಹೊಂದಿರುವ ನೋನಿ ಹಣ್ಣಿನ ಬಳಕೆಯಿಂದ ಆರೋಗ್ಯಕ್ಕೆ ಹಲವಾರು ಪ್ರಯೋಜನಗಳಿವೆ.

ಔಷಧೀಯ ಗುಣವನ್ನು ಹೊಂದಿರುವ ಈ ನೋನಿಯ ಜೊತೆ ನೀರು, ಬೆಲ್ಲ, ಏಲಕ್ಕಿ ಸೇರಿಸಿ ಜ್ಯೂಸ್ ಮಾಡಿದಾಗ ಹಾಲಿನಂತೆ ನೋರೆಯು ಬರುತ್ತದೆ. ಕುಡಿಯಲು ರುಚಿಕರವಾಗಿರುವ ನೋನಿ ಹಣ್ಣುಗಳನ್ನು ನಿತ್ಯವೂ ಸೇವನೆ ಮಾಡುವುದರಿಂದ ಆರೋಗ್ಯಕ್ಕೆ ಹೊಸ ಚೈತನ್ಯವನ್ನು ಪಡೆಯಬಹುದು.

ನೋನಿ ಹಣ್ಣಿನಲ್ಲಿರುವ ಔಷಧೀಯ ಗುಣಗಳ ಬಗ್ಗೆ ವಿಶ್ವವಿದ್ಯಾನಿಲಯದ ಸಂಶೋಧನೆಯಿಂದಲೂ ದೃಢಪಟ್ಟಿದೆ. ರೋಗನಿರೋಧಕ ಶಕ್ತಿಯನ್ನು ವೃದ್ಧಿಸಲು, ಮಾನಸಿಕ ಒತ್ತಡದಿಂದ ಮುಕ್ತರಾಗಲು, ನಿದ್ರೆಯ ಸಮಸ್ಯೆ ಇರುವವರು, ಸುಸ್ತು ಕಾಡುತ್ತಿರುವವರು, ಉಸಿರಾಟದ ಸಮಸ್ಯೆ ಇರುವವರು, ಮಲಬದ್ಧತೆ, ರಕ್ತದೊತ್ತಡ, ಕೀಲುನೋವು, ಹೃದಯಸಂಬಂಧಿ ಕಾಯಿಲೆಗಳು, ಖಿನ್ನತೆಯಿಂದ ಬಳಲುತ್ತಿರುವವರು ಹಾಗೂ ಪಿತ್ತಜನಕಾಂಗ ಮೂತ್ರಜನಕಾಂಗದ ನಿರ್ವಹಣೆಗೆ ಸುಗಮವಾಗುವಂತೆ ನೋಡಿಕೊಳ್ಳಲು ನೋನಿ ಹಣ್ಣು ನೆರವಾಗುತ್ತದೆ.

ನೋನಿಯನ್ನು ಔಷಧಿಯಾಗಿ ಸೇವಿಸುವರು ಮೊದಲ ಮೂರು ದಿನ ಬೆಳಗಿನ ಉಪಹಾರಕ್ಕೆ ಮುಂಚಿತವಾಗಿ ಒಂದು ಟೀ ಸ್ಪೂನ್ ಸೇವಿಸಬೇಕು. ಒಂದು ತಿಂಗಳ ಸೇವನೆಯ ನಂತರ ಉಪಹಾರಕ್ಕೆ ಮುಂಚೆ ಎರಡು ಸ್ಪೂನ್, ಮಧ್ಯಾಹ್ನ ಊಟಕ್ಕಿಂತ ಮೊದಲು 2 ಸ್ಪೂನ್ ರಸವನ್ನು ಸೇವಿಸಬೇಕು. ಕೇವಲ ಹಣ್ಣು ಮಾತ್ರವಲ್ಲದೇ ನೋನಿಯ ಎಲೆಗಳು ಕೂಡ ಬಹಳಷ್ಟು ಉಪಯುಕ್ತವಾಗಿದ್ದು ಎಲೆಯಿಂದ ತೆಗೆದ ರಸ ಅನೇಕ ರೀತಿಯ ಚರ್ಮರೋಗಗಳನ್ನು ನಿವಾರಿಸುತ್ತದೆ. ಅದ್ರಲ್ಲೂ ನೋನಿ ಎಲೆಯ ಕಷಾಯವನ್ನು ಜ್ವರ ನಿವಾರಕವಾಗಿಯೂ ಬಳಸಬಹುದು.

Spread the love
  • Related Posts

    ಕಾಡಾನೆ ದಾಳಿಗೆ ವ್ಯಕ್ತಿ ಬಲಿ: ಬೆಳ್ತಂಗಡಿ ತಾಲೂಕಿನ ರೆಖ್ಯ ಗ್ರಾಮದ ಮುಚ್ಚಿರಡ್ಕದಲ್ಲಿ ದಾರುಣ ಘಟನೆ

    ನೆಲ್ಯಾಡಿ: ಬೆಳ್ತಂಗಡಿ ತಾಲೂಕಿನ ರೆಖ್ಯ ಗ್ರಾಮದ ನೇಲಡ್ಕ ಸಮೀಪದ ಮುಚ್ಚಿರಡ್ಕದಲ್ಲಿ ಕಾಡಾನೆ ದಾಳಿಗೆ ವ್ಯಕ್ತಿಯೊಬ್ಬರು ಮೃತಪಟ್ಟಿರುವ ದಾರುಣ ಘಟನೆ ಶನಿವಾರ ಸಂಜೆ ಸಂಭವಿಸಿದೆ.ಮೃತರನ್ನು ಇಡ್ಯಾಲು ನಿವಾಸಿ ಬಾಲಕೃಷ್ಣ ಗೌಡ (55) ಎಂದು ಗುರುತಿಸಲಾಗಿದೆ. ಬಾಲಕೃಷ್ಣ ಗೌಡ ಅವರು ಎಂದಿನಂತೆ ಕೆಲಸಕ್ಕೆ ತೆರಳಿದ್ದು,…

    Spread the love

    ಬೆಳ್ತಂಗಡಿಯಲ್ಲಿ ಭಾರಿ ಮಾದಕವಸ್ತು ಬೇಟೆ: ₹15.41 ಲಕ್ಷ ಮೌಲ್ಯದ ಗಾಂಜಾ, ಎಂಡಿಎಂಎ ಜಪ್ತಿ – ದುಬೈಗೆ ತೆರಳಬೇಕಿದ್ದ ಯುವಕ ಜೈಲುಪಾಲು

    ಬೆಳ್ತಂಗಡಿ, ಜು.30: ಬೆಳ್ತಂಗಡಿ ತಾಲೂಕಿನ ಕುವೆಟ್ಟು ಗ್ರಾಮದ ಪಿಲಿಚಂಡಿಕಲ್ಲು ಪ್ರದೇಶದಲ್ಲಿ ಬೆಳ್ತಂಗಡಿ ಪೊಲೀಸರು ನಡೆಸಿದ ಕಾರ್ಯಾಚರಣೆಯಲ್ಲಿ ₹15.41 ಲಕ್ಷ ಮೌಲ್ಯದ ಗಾಂಜಾ, ಎಂಡಿಎಂಎ (MDMA), ಕಾರು, ಆಟೋ ರಿಕ್ಷಾ ಹಾಗೂ ಮೊಬೈಲ್ ಸೇರಿದಂತೆ ವಿವಿಧ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವ…

    Spread the love

    You Missed

    ಕಾಡಾನೆ ದಾಳಿಗೆ ವ್ಯಕ್ತಿ ಬಲಿ: ಬೆಳ್ತಂಗಡಿ ತಾಲೂಕಿನ ರೆಖ್ಯ ಗ್ರಾಮದ ಮುಚ್ಚಿರಡ್ಕದಲ್ಲಿ ದಾರುಣ ಘಟನೆ

    • By admin
    • August 1, 2026
    • 3 views
    ಕಾಡಾನೆ ದಾಳಿಗೆ ವ್ಯಕ್ತಿ ಬಲಿ: ಬೆಳ್ತಂಗಡಿ ತಾಲೂಕಿನ ರೆಖ್ಯ ಗ್ರಾಮದ ಮುಚ್ಚಿರಡ್ಕದಲ್ಲಿ ದಾರುಣ ಘಟನೆ

    ಬೆಳ್ತಂಗಡಿಯಲ್ಲಿ ಭಾರಿ ಮಾದಕವಸ್ತು ಬೇಟೆ: ₹15.41 ಲಕ್ಷ ಮೌಲ್ಯದ ಗಾಂಜಾ, ಎಂಡಿಎಂಎ ಜಪ್ತಿ – ದುಬೈಗೆ ತೆರಳಬೇಕಿದ್ದ ಯುವಕ ಜೈಲುಪಾಲು

    • By admin
    • July 30, 2026
    • 6 views
    ಬೆಳ್ತಂಗಡಿಯಲ್ಲಿ ಭಾರಿ ಮಾದಕವಸ್ತು ಬೇಟೆ: ₹15.41 ಲಕ್ಷ ಮೌಲ್ಯದ ಗಾಂಜಾ, ಎಂಡಿಎಂಎ ಜಪ್ತಿ – ದುಬೈಗೆ ತೆರಳಬೇಕಿದ್ದ ಯುವಕ ಜೈಲುಪಾಲು

    ಐಸಿಯುನಲ್ಲಿ ಜೀವನ್ಮರಣ ಹೋರಾಟ ನಡೆಸುತ್ತಿರುವ ವಸಂತ ಗೌಡರ ತುರ್ತು ಚಿಕಿತ್ಸೆಗೆ ನೆರವಿಗಾಗಿ ಮನವಿ

    • By admin
    • July 30, 2026
    • 13 views
    ಐಸಿಯುನಲ್ಲಿ ಜೀವನ್ಮರಣ ಹೋರಾಟ ನಡೆಸುತ್ತಿರುವ ವಸಂತ ಗೌಡರ ತುರ್ತು ಚಿಕಿತ್ಸೆಗೆ  ನೆರವಿಗಾಗಿ ಮನವಿ

    ಬೆಳ್ತಂಗಡಿ ಕ್ಷೇತ್ರದ ಧಾರ್ಮಿಕ-ಐತಿಹಾಸಿಕ ಕ್ಷೇತ್ರಗಳ ಸಮಗ್ರ ಅಭಿವೃದ್ಧಿಗೆ ಉಪಮುಖ್ಯಮಂತ್ರಿಗೆ ಶಾಸಕ ಹರೀಶ್ ಪೂಂಜಾರವರಿಂದ ಮನವಿ

    • By admin
    • July 30, 2026
    • 11 views
    ಬೆಳ್ತಂಗಡಿ ಕ್ಷೇತ್ರದ ಧಾರ್ಮಿಕ-ಐತಿಹಾಸಿಕ ಕ್ಷೇತ್ರಗಳ ಸಮಗ್ರ ಅಭಿವೃದ್ಧಿಗೆ ಉಪಮುಖ್ಯಮಂತ್ರಿಗೆ ಶಾಸಕ ಹರೀಶ್ ಪೂಂಜಾರವರಿಂದ ಮನವಿ

    ಬೆಳ್ತಂಗಡಿ: ಗುರುವಾಯನಕೆರೆ-ವೇಣೂರಿನ ಹದಗೆಟ್ಟ ರಸ್ತೆಯ ತುರ್ತು ದುರಸ್ತಿ ಕಾರ್ಯ, ಶಾಸಕರ ತುರ್ತು ಸ್ಪಂದನೆ

    • By admin
    • July 29, 2026
    • 12 views
    ಬೆಳ್ತಂಗಡಿ: ಗುರುವಾಯನಕೆರೆ-ವೇಣೂರಿನ  ಹದಗೆಟ್ಟ ರಸ್ತೆಯ ತುರ್ತು ದುರಸ್ತಿ ಕಾರ್ಯ, ಶಾಸಕರ ತುರ್ತು ಸ್ಪಂದನೆ

    30 ವರ್ಷಗಳಿಂದ ಶಾಪಗ್ರಸ್ತವಾಗಿರುವ ಮುಂಡಾಜೆ ಗ್ರಾಮದ ಸೀಟು–ಕಾಯರ್ತೋಡಿ–ಕೊಡಂಗೆ–ಮೂಲಾರು ಕುಡೆಂಚಿ ರಸ್ತೆ: ಚುನಾವಣೆ ಬಂದಾಗ ಶಿಲಾನ್ಯಾಸ, ಬಳಿಕ ಮರೆತುಬಿಡುವ ಆರೋಪ

    • By admin
    • July 29, 2026
    • 12 views
    30 ವರ್ಷಗಳಿಂದ ಶಾಪಗ್ರಸ್ತವಾಗಿರುವ ಮುಂಡಾಜೆ ಗ್ರಾಮದ ಸೀಟು–ಕಾಯರ್ತೋಡಿ–ಕೊಡಂಗೆ–ಮೂಲಾರು ಕುಡೆಂಚಿ ರಸ್ತೆ: ಚುನಾವಣೆ ಬಂದಾಗ ಶಿಲಾನ್ಯಾಸ, ಬಳಿಕ ಮರೆತುಬಿಡುವ ಆರೋಪ