ಪ್ರಕೃತಿಯ ಮಡಿಲಲ್ಲಿದೆ ‘ನೋನಿ’ಯೆಂಬ ಸಂಜೀವಿನಿ

🖊️ ಸಂಪಾದಕೀಯ

ನಮ್ಮ ಪರಿಸರದಲ್ಲಿ ಅದೆಷ್ಟು ಔಷಧೀಯ ಗುಣಗಳಿರುವ ಸಸ್ಯ ಪ್ರಭೇದಗಳಿವೆ. ಪ್ರಭೇದಗಳನ್ನು ಗುರುತಿಸಿ ಅವುಗಳಲ್ಲಿ ಔಷಧೀಯ ಗುಣಗಳಿವೆ ಎಂಬುದನ್ನು ನಾವು ತಿಳಿದುಕೊಂಡಿರುವುದಿಲ್ಲ. ಆರೋಗ್ಯವನ್ನು ಕಾಪಾಡುವಲ್ಲಿ ಹಣ್ಣುಗಳು ಸಹ ಮುಖ್ಯ ಪಾತ್ರವಹಿಸಿವೆ. ಕೆಲವೊಂದು ಹಣ್ಣುಗಳನ್ನು ತಿಂದರೆ ಕೆಲವೊಂದು ಕಾಯಿಲೆಗಳು ದೂರವಾಗುತ್ತದೆ. ಇದರಂತೆ ನೋನಿ ಹಣ್ಣು ಸೇವಿಸಿದರೆ ಆರೋಗ್ಯ ವೃದ್ಧಿಸುವುದು ಖಂಡಿತ.

ನೋನಿ ಹಣ್ಣು ಮೂಲತಃ ಭಾರತದ ಔಷಧೀಯ ಹಣ್ಣುಗಳಲ್ಲಿ ಒಂದು. ಪ್ರಕೃತಿಯಲ್ಲಿ ದೊರೆಯುವ ಅದ್ಭುತ ಆರೋಗ್ಯ ಹಾಗೂ ರೋಗನಿರೋಧಕ ಹಣ್ಣು ಇದಾಗಿದ್ದು ಈ ಹಣ್ಣು ಮೋರಿಂಡ ಸಿಕ್ರೆ ಪೋಲಿಯ ಎಂಬ ಸಸ್ಯ ಪ್ರಭೇದಕ್ಕೆ ಸೇರಿದೆ.

ಸುಮಾರು 150ಕ್ಕೂ ಹೆಚ್ಚಿನ ಪೋಷಕಾಂಶಗಳನ್ನು ಹೊಂದಿರುವ ನೋನಿ ಕಾಯಿಯು ಹಲವು ಕಾಯಿಲೆಗಳ ಶಮನಕ್ಕೆ ಉಪಯುಕ್ತವಾಗಿದೆ ಮಾನಸಿಕ ಒತ್ತಡ ಅಲರ್ಜಿ ಅಸ್ತಮಾ ಕ್ಯಾನ್ಸರ್ ಗಂಟಲು ನೋವು ಕೂದಲು ಉದರುವಿಕೆ ಸಕ್ಕರೆಕಾಯಿಲೆ ಮೂತ್ರಜನಕಾಂಗದ ಕಾಯಿಲೆ ಚರ್ಮರೋಗ ಕೆಮ್ಮು ಜ್ವರಗಳಂಥ ಕಾಯಿಲೆಗಳಿಗೂ ಕೂಡ ರಾಮಬಾಣವಾಗಿದೆ. ವಿಟಮಿನ್ ಸಿ, ಎ, ಬಿ ಮತ್ತು ಕಬ್ಬಿಣದ ಅಂಶಗಳನ್ನು ಹೊಂದಿರುವ ನೋನಿ ಹಣ್ಣಿನ ಬಳಕೆಯಿಂದ ಆರೋಗ್ಯಕ್ಕೆ ಹಲವಾರು ಪ್ರಯೋಜನಗಳಿವೆ.

ಔಷಧೀಯ ಗುಣವನ್ನು ಹೊಂದಿರುವ ಈ ನೋನಿಯ ಜೊತೆ ನೀರು, ಬೆಲ್ಲ, ಏಲಕ್ಕಿ ಸೇರಿಸಿ ಜ್ಯೂಸ್ ಮಾಡಿದಾಗ ಹಾಲಿನಂತೆ ನೋರೆಯು ಬರುತ್ತದೆ. ಕುಡಿಯಲು ರುಚಿಕರವಾಗಿರುವ ನೋನಿ ಹಣ್ಣುಗಳನ್ನು ನಿತ್ಯವೂ ಸೇವನೆ ಮಾಡುವುದರಿಂದ ಆರೋಗ್ಯಕ್ಕೆ ಹೊಸ ಚೈತನ್ಯವನ್ನು ಪಡೆಯಬಹುದು.

ನೋನಿ ಹಣ್ಣಿನಲ್ಲಿರುವ ಔಷಧೀಯ ಗುಣಗಳ ಬಗ್ಗೆ ವಿಶ್ವವಿದ್ಯಾನಿಲಯದ ಸಂಶೋಧನೆಯಿಂದಲೂ ದೃಢಪಟ್ಟಿದೆ. ರೋಗನಿರೋಧಕ ಶಕ್ತಿಯನ್ನು ವೃದ್ಧಿಸಲು, ಮಾನಸಿಕ ಒತ್ತಡದಿಂದ ಮುಕ್ತರಾಗಲು, ನಿದ್ರೆಯ ಸಮಸ್ಯೆ ಇರುವವರು, ಸುಸ್ತು ಕಾಡುತ್ತಿರುವವರು, ಉಸಿರಾಟದ ಸಮಸ್ಯೆ ಇರುವವರು, ಮಲಬದ್ಧತೆ, ರಕ್ತದೊತ್ತಡ, ಕೀಲುನೋವು, ಹೃದಯಸಂಬಂಧಿ ಕಾಯಿಲೆಗಳು, ಖಿನ್ನತೆಯಿಂದ ಬಳಲುತ್ತಿರುವವರು ಹಾಗೂ ಪಿತ್ತಜನಕಾಂಗ ಮೂತ್ರಜನಕಾಂಗದ ನಿರ್ವಹಣೆಗೆ ಸುಗಮವಾಗುವಂತೆ ನೋಡಿಕೊಳ್ಳಲು ನೋನಿ ಹಣ್ಣು ನೆರವಾಗುತ್ತದೆ.

ನೋನಿಯನ್ನು ಔಷಧಿಯಾಗಿ ಸೇವಿಸುವರು ಮೊದಲ ಮೂರು ದಿನ ಬೆಳಗಿನ ಉಪಹಾರಕ್ಕೆ ಮುಂಚಿತವಾಗಿ ಒಂದು ಟೀ ಸ್ಪೂನ್ ಸೇವಿಸಬೇಕು. ಒಂದು ತಿಂಗಳ ಸೇವನೆಯ ನಂತರ ಉಪಹಾರಕ್ಕೆ ಮುಂಚೆ ಎರಡು ಸ್ಪೂನ್, ಮಧ್ಯಾಹ್ನ ಊಟಕ್ಕಿಂತ ಮೊದಲು 2 ಸ್ಪೂನ್ ರಸವನ್ನು ಸೇವಿಸಬೇಕು. ಕೇವಲ ಹಣ್ಣು ಮಾತ್ರವಲ್ಲದೇ ನೋನಿಯ ಎಲೆಗಳು ಕೂಡ ಬಹಳಷ್ಟು ಉಪಯುಕ್ತವಾಗಿದ್ದು ಎಲೆಯಿಂದ ತೆಗೆದ ರಸ ಅನೇಕ ರೀತಿಯ ಚರ್ಮರೋಗಗಳನ್ನು ನಿವಾರಿಸುತ್ತದೆ. ಅದ್ರಲ್ಲೂ ನೋನಿ ಎಲೆಯ ಕಷಾಯವನ್ನು ಜ್ವರ ನಿವಾರಕವಾಗಿಯೂ ಬಳಸಬಹುದು.

Spread the love
  • Related Posts

    ನಾಡಿನೆಲ್ಲೆಡೆ ಗಣಪನ ಹಬ್ಬದ ಸಡಗರ ಸಂಭ್ರಮ ಬೆಳ್ತಂಗಡಿ ತಾಲೂಕಿನಾದ್ಯಂತ 2026ರಲ್ಲಿ ವಿವಿಧೆಡೆ ಆಚರಿಸಲ್ಪಟ ಗಣಪನ ನೋಡಬನ್ನಿ

    ನಾಡಿನೆಲ್ಲೆಡೆ ಗಣಪನ ಹಬ್ಬದ ಸಡಗರ ಸಂಭ್ರಮ 2026ರಲ್ಲಿ ವಿವಿಧ ಗಣಪನ ಅಲಂಕಾರ ನೋಡೋಣ ಬನ್ನಿ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಮುಂಡಾಜೆ ಇದರ ವತಿಯಿಂದ ಮುಂಡಾಜೆ ದೇವಸ್ಥಾನದಲ್ಲಿ ಆರಾಧಿಸಲ್ಪಟ್ಟ ಸುವರ್ಣ ಸಂಭ್ರಮದ ಗಣಪತಿ. ಗುರುವಾಯನಕೆರೆ ಎಕ್ಸೆಲ್ ಪದವಿ ಪೂರ್ವ ಕಾಲೇಜಿನಲ್ಲಿ ಆರಾಧಿಸಲ್ಪಟ್ಟ…

    Spread the love

    ಕಡಿರುದ್ಯಾವರ: ಗ್ರಾಮೀಣ ರಸ್ತೆಯಲ್ಲಿ ಮರ ಸಾಗಾಟದ ಲಾರಿಗಳ ಹಾವಳಿ — ರಸ್ತೆ ಹಾಳಾಗುತ್ತಿರುವ ಆರೋಪ

    ಕಾನರ್ಪ ನೂಜಿ ರಸ್ತೆಯಲ್ಲಿ ತಡರಾತ್ರಿ ರಸ್ತೆ ಮಧ್ಯೆ ಲಾರಿ ಬಾಕಿ; ಸ್ಥಳೀಯರಿಂದ ಪ್ರತಿಭಟನೆ ಕಡಿರುದ್ಯಾವರ: ಗ್ರಾಮೀಣ ಪ್ರದೇಶದ ರಸ್ತೆಗಳಲ್ಲಿ ನಿರಂತರವಾಗಿ ಮರ ಸಾಗಾಟದ ಲಾರಿಗಳು ಸಂಚರಿಸುತ್ತಿರುವುದರಿಂದ ರಸ್ತೆಗಳು ಸಂಪೂರ್ಣ ಹಾಳಾಗುತ್ತಿವೆ ಎಂದು ಸ್ಥಳೀಯರು ಆರೋಪಿಸಿದ್ದಾರೆ. ಕಾನರ್ಪದಲ್ಲಿ ತಡರಾತ್ರಿ ಮರ ಸಾಗಾಟ ಮಾಡುತ್ತಿದ್ದ…

    Spread the love

    You Missed

    ಆಟಿಡೊಂಜಿದಿನ ಧರ್ಮಸ್ಥಳ ಕನ್ಯಾಡಿ 2

    • By admin
    • September 15, 2026
    • 7 views

    ನಾಡಿನೆಲ್ಲೆಡೆ ಗಣಪನ ಹಬ್ಬದ ಸಡಗರ ಸಂಭ್ರಮ ಬೆಳ್ತಂಗಡಿ ತಾಲೂಕಿನಾದ್ಯಂತ 2026ರಲ್ಲಿ ವಿವಿಧೆಡೆ ಆಚರಿಸಲ್ಪಟ ಗಣಪನ ನೋಡಬನ್ನಿ

    • By admin
    • September 15, 2026
    • 19 views
    ನಾಡಿನೆಲ್ಲೆಡೆ ಗಣಪನ ಹಬ್ಬದ ಸಡಗರ ಸಂಭ್ರಮ ಬೆಳ್ತಂಗಡಿ ತಾಲೂಕಿನಾದ್ಯಂತ 2026ರಲ್ಲಿ ವಿವಿಧೆಡೆ ಆಚರಿಸಲ್ಪಟ ಗಣಪನ ನೋಡಬನ್ನಿ

    ಕಡಿರುದ್ಯಾವರ: ಗ್ರಾಮೀಣ ರಸ್ತೆಯಲ್ಲಿ ಮರ ಸಾಗಾಟದ ಲಾರಿಗಳ ಹಾವಳಿ — ರಸ್ತೆ ಹಾಳಾಗುತ್ತಿರುವ ಆರೋಪ

    • By admin
    • September 13, 2026
    • 9 views
    ಕಡಿರುದ್ಯಾವರ: ಗ್ರಾಮೀಣ ರಸ್ತೆಯಲ್ಲಿ ಮರ ಸಾಗಾಟದ ಲಾರಿಗಳ ಹಾವಳಿ — ರಸ್ತೆ ಹಾಳಾಗುತ್ತಿರುವ ಆರೋಪ

    ಪದ್ಮುಂಜ: ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣಾ ಸಮಿತಿ ವತಿಯಿಂದ ಮೊಸರು ಕುಡಿಕೆ ಉತ್ಸವ, ಸಾಧಕರಿಗೆ ಸನ್ಮಾನ,ಬಹುಮಾನ ವಿತರಣೆ ಕಾರ್ಯಕ್ರಮ

    • By admin
    • September 13, 2026
    • 14 views
    ಪದ್ಮುಂಜ: ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣಾ ಸಮಿತಿ ವತಿಯಿಂದ ಮೊಸರು ಕುಡಿಕೆ ಉತ್ಸವ, ಸಾಧಕರಿಗೆ ಸನ್ಮಾನ,ಬಹುಮಾನ ವಿತರಣೆ ಕಾರ್ಯಕ್ರಮ

    ಕೊಕ್ಕಡ ಸಮೀಪ ಭೀಕರ ಅಪಘಾತ: ಸರ್ಕಾರಿ ಬಸ್–ಕಾರು ಡಿಕ್ಕಿ

    • By admin
    • September 12, 2026
    • 11 views
    ಕೊಕ್ಕಡ ಸಮೀಪ ಭೀಕರ ಅಪಘಾತ: ಸರ್ಕಾರಿ ಬಸ್–ಕಾರು ಡಿಕ್ಕಿ

    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಿರುದ್ಧ ದ ಆರೋಪ ಆಧಾರರಹಿತ: ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ವಜಾ

    • By admin
    • September 8, 2026
    • 15 views
    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಿರುದ್ಧ ದ ಆರೋಪ ಆಧಾರರಹಿತ: ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ವಜಾ