ಪ್ರಕೃತಿಯ ಮಡಿಲಲ್ಲಿದೆ ‘ನೋನಿ’ಯೆಂಬ ಸಂಜೀವಿನಿ

🖊️ ಸಂಪಾದಕೀಯ

ನಮ್ಮ ಪರಿಸರದಲ್ಲಿ ಅದೆಷ್ಟು ಔಷಧೀಯ ಗುಣಗಳಿರುವ ಸಸ್ಯ ಪ್ರಭೇದಗಳಿವೆ. ಪ್ರಭೇದಗಳನ್ನು ಗುರುತಿಸಿ ಅವುಗಳಲ್ಲಿ ಔಷಧೀಯ ಗುಣಗಳಿವೆ ಎಂಬುದನ್ನು ನಾವು ತಿಳಿದುಕೊಂಡಿರುವುದಿಲ್ಲ. ಆರೋಗ್ಯವನ್ನು ಕಾಪಾಡುವಲ್ಲಿ ಹಣ್ಣುಗಳು ಸಹ ಮುಖ್ಯ ಪಾತ್ರವಹಿಸಿವೆ. ಕೆಲವೊಂದು ಹಣ್ಣುಗಳನ್ನು ತಿಂದರೆ ಕೆಲವೊಂದು ಕಾಯಿಲೆಗಳು ದೂರವಾಗುತ್ತದೆ. ಇದರಂತೆ ನೋನಿ ಹಣ್ಣು ಸೇವಿಸಿದರೆ ಆರೋಗ್ಯ ವೃದ್ಧಿಸುವುದು ಖಂಡಿತ.

ನೋನಿ ಹಣ್ಣು ಮೂಲತಃ ಭಾರತದ ಔಷಧೀಯ ಹಣ್ಣುಗಳಲ್ಲಿ ಒಂದು. ಪ್ರಕೃತಿಯಲ್ಲಿ ದೊರೆಯುವ ಅದ್ಭುತ ಆರೋಗ್ಯ ಹಾಗೂ ರೋಗನಿರೋಧಕ ಹಣ್ಣು ಇದಾಗಿದ್ದು ಈ ಹಣ್ಣು ಮೋರಿಂಡ ಸಿಕ್ರೆ ಪೋಲಿಯ ಎಂಬ ಸಸ್ಯ ಪ್ರಭೇದಕ್ಕೆ ಸೇರಿದೆ.

ಸುಮಾರು 150ಕ್ಕೂ ಹೆಚ್ಚಿನ ಪೋಷಕಾಂಶಗಳನ್ನು ಹೊಂದಿರುವ ನೋನಿ ಕಾಯಿಯು ಹಲವು ಕಾಯಿಲೆಗಳ ಶಮನಕ್ಕೆ ಉಪಯುಕ್ತವಾಗಿದೆ ಮಾನಸಿಕ ಒತ್ತಡ ಅಲರ್ಜಿ ಅಸ್ತಮಾ ಕ್ಯಾನ್ಸರ್ ಗಂಟಲು ನೋವು ಕೂದಲು ಉದರುವಿಕೆ ಸಕ್ಕರೆಕಾಯಿಲೆ ಮೂತ್ರಜನಕಾಂಗದ ಕಾಯಿಲೆ ಚರ್ಮರೋಗ ಕೆಮ್ಮು ಜ್ವರಗಳಂಥ ಕಾಯಿಲೆಗಳಿಗೂ ಕೂಡ ರಾಮಬಾಣವಾಗಿದೆ. ವಿಟಮಿನ್ ಸಿ, ಎ, ಬಿ ಮತ್ತು ಕಬ್ಬಿಣದ ಅಂಶಗಳನ್ನು ಹೊಂದಿರುವ ನೋನಿ ಹಣ್ಣಿನ ಬಳಕೆಯಿಂದ ಆರೋಗ್ಯಕ್ಕೆ ಹಲವಾರು ಪ್ರಯೋಜನಗಳಿವೆ.

ಔಷಧೀಯ ಗುಣವನ್ನು ಹೊಂದಿರುವ ಈ ನೋನಿಯ ಜೊತೆ ನೀರು, ಬೆಲ್ಲ, ಏಲಕ್ಕಿ ಸೇರಿಸಿ ಜ್ಯೂಸ್ ಮಾಡಿದಾಗ ಹಾಲಿನಂತೆ ನೋರೆಯು ಬರುತ್ತದೆ. ಕುಡಿಯಲು ರುಚಿಕರವಾಗಿರುವ ನೋನಿ ಹಣ್ಣುಗಳನ್ನು ನಿತ್ಯವೂ ಸೇವನೆ ಮಾಡುವುದರಿಂದ ಆರೋಗ್ಯಕ್ಕೆ ಹೊಸ ಚೈತನ್ಯವನ್ನು ಪಡೆಯಬಹುದು.

ನೋನಿ ಹಣ್ಣಿನಲ್ಲಿರುವ ಔಷಧೀಯ ಗುಣಗಳ ಬಗ್ಗೆ ವಿಶ್ವವಿದ್ಯಾನಿಲಯದ ಸಂಶೋಧನೆಯಿಂದಲೂ ದೃಢಪಟ್ಟಿದೆ. ರೋಗನಿರೋಧಕ ಶಕ್ತಿಯನ್ನು ವೃದ್ಧಿಸಲು, ಮಾನಸಿಕ ಒತ್ತಡದಿಂದ ಮುಕ್ತರಾಗಲು, ನಿದ್ರೆಯ ಸಮಸ್ಯೆ ಇರುವವರು, ಸುಸ್ತು ಕಾಡುತ್ತಿರುವವರು, ಉಸಿರಾಟದ ಸಮಸ್ಯೆ ಇರುವವರು, ಮಲಬದ್ಧತೆ, ರಕ್ತದೊತ್ತಡ, ಕೀಲುನೋವು, ಹೃದಯಸಂಬಂಧಿ ಕಾಯಿಲೆಗಳು, ಖಿನ್ನತೆಯಿಂದ ಬಳಲುತ್ತಿರುವವರು ಹಾಗೂ ಪಿತ್ತಜನಕಾಂಗ ಮೂತ್ರಜನಕಾಂಗದ ನಿರ್ವಹಣೆಗೆ ಸುಗಮವಾಗುವಂತೆ ನೋಡಿಕೊಳ್ಳಲು ನೋನಿ ಹಣ್ಣು ನೆರವಾಗುತ್ತದೆ.

ನೋನಿಯನ್ನು ಔಷಧಿಯಾಗಿ ಸೇವಿಸುವರು ಮೊದಲ ಮೂರು ದಿನ ಬೆಳಗಿನ ಉಪಹಾರಕ್ಕೆ ಮುಂಚಿತವಾಗಿ ಒಂದು ಟೀ ಸ್ಪೂನ್ ಸೇವಿಸಬೇಕು. ಒಂದು ತಿಂಗಳ ಸೇವನೆಯ ನಂತರ ಉಪಹಾರಕ್ಕೆ ಮುಂಚೆ ಎರಡು ಸ್ಪೂನ್, ಮಧ್ಯಾಹ್ನ ಊಟಕ್ಕಿಂತ ಮೊದಲು 2 ಸ್ಪೂನ್ ರಸವನ್ನು ಸೇವಿಸಬೇಕು. ಕೇವಲ ಹಣ್ಣು ಮಾತ್ರವಲ್ಲದೇ ನೋನಿಯ ಎಲೆಗಳು ಕೂಡ ಬಹಳಷ್ಟು ಉಪಯುಕ್ತವಾಗಿದ್ದು ಎಲೆಯಿಂದ ತೆಗೆದ ರಸ ಅನೇಕ ರೀತಿಯ ಚರ್ಮರೋಗಗಳನ್ನು ನಿವಾರಿಸುತ್ತದೆ. ಅದ್ರಲ್ಲೂ ನೋನಿ ಎಲೆಯ ಕಷಾಯವನ್ನು ಜ್ವರ ನಿವಾರಕವಾಗಿಯೂ ಬಳಸಬಹುದು.

Spread the love
  • Related Posts

    ಇಂಗ್ಲೆಂಡ್ ವಿರುದ್ಧ ಗೆದ್ದು ಫೈನಲ್‌ಗೆ ಭಾರತ ಪ್ರವೇಶ

    ಮುಂಬೈ: ಐಸಿಸಿ ಟಿ–20 ವಿಶ್ವಕಪ್ ಸೆಮಿಫೈನಲ್ ಪಂದ್ಯದಲ್ಲಿ ಭಾರತ ತಂಡ ಇಂಗ್ಲೆಂಡ್ ವಿರುದ್ಧ ಭರ್ಜರಿ ಜಯ ಸಾಧಿಸಿ ಫೈನಲ್‌ಗೆ ಪ್ರವೇಶಿಸಿದೆ. ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಭಾರತ ಸಮಗ್ರ ಆಟದ ಪ್ರದರ್ಶನ ನೀಡಿತು. ಮೊದಲು ಬ್ಯಾಟಿಂಗ್ ಮಾಡಿದ ಭಾರತ ತಂಡ…

    Spread the love

    ಶ್ರೀರಾಮಚಂದ್ರಾಪುರ ಮಠದ ರಾಘವೇಶ್ವರ ಭಾರತೀ ಮಹಾಸ್ವಾಮಿಗಳಿಂದ ಶಾಸಕ ಹರೀಶ್ ಪೂಂಜಾ ರವರ ನಿವಾಸ ಮಿಥಿಲಾಗೆ ಭೇಟಿ

    ಬೆಳ್ತಂಗಡಿ: ಶ್ರೀರಾಮಚಂದ್ರಾಪುರ ಮಠದ ಪೀಠಾಧಿಪತಿಗಳಾದ ಪೂಜ್ಯ ಶ್ರೀ ಶ್ರೀ ಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮಿಗಳು ಇಂದು ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ರವರ ನಿವಾಸ ಮಿಥಿಲಾಗೆ ಭೇಟಿ ನೀಡಿ ಆಶೀರ್ವದಿಸಿದರು. ಈ ಸಂದರ್ಭದಲ್ಲಿ ಶ್ರೀರಾಮಚಂದ್ರಾಪುರ ಮಠದ ಪೀಠಾಧಿಪತಿಗಳಾದ ಮಹಾಸ್ವಾಮಿಗಳು ಶಾಸಕ ಹರೀಶ್…

    Spread the love

    You Missed

    ಇಂಗ್ಲೆಂಡ್ ವಿರುದ್ಧ ಗೆದ್ದು ಫೈನಲ್‌ಗೆ ಭಾರತ ಪ್ರವೇಶ

    • By admin
    • March 5, 2026
    • 12 views
    ಇಂಗ್ಲೆಂಡ್ ವಿರುದ್ಧ ಗೆದ್ದು ಫೈನಲ್‌ಗೆ ಭಾರತ ಪ್ರವೇಶ

    ಶ್ರೀರಾಮಚಂದ್ರಾಪುರ ಮಠದ ರಾಘವೇಶ್ವರ ಭಾರತೀ ಮಹಾಸ್ವಾಮಿಗಳಿಂದ ಶಾಸಕ ಹರೀಶ್ ಪೂಂಜಾ ರವರ ನಿವಾಸ ಮಿಥಿಲಾಗೆ ಭೇಟಿ

    • By admin
    • March 5, 2026
    • 36 views
    ಶ್ರೀರಾಮಚಂದ್ರಾಪುರ ಮಠದ ರಾಘವೇಶ್ವರ ಭಾರತೀ ಮಹಾಸ್ವಾಮಿಗಳಿಂದ ಶಾಸಕ ಹರೀಶ್ ಪೂಂಜಾ ರವರ ನಿವಾಸ ಮಿಥಿಲಾಗೆ ಭೇಟಿ

    ಬೆಳ್ತಂಗಡಿ : ಕಡಿರುದ್ಯಾವರ ಅಕ್ರಮ ಮರಳು ಸಾಗಾಟಕ್ಕೆ ಯತ್ನ, ಬೆಳ್ತಂಗಡಿ ಪೊಲೀಸರಿಂದ ಇಬ್ಬರ ವಿರುದ್ಧ ಪ್ರಕರಣ ದಾಖಲು

    • By admin
    • March 5, 2026
    • 50 views
    ಬೆಳ್ತಂಗಡಿ : ಕಡಿರುದ್ಯಾವರ ಅಕ್ರಮ ಮರಳು ಸಾಗಾಟಕ್ಕೆ ಯತ್ನ, ಬೆಳ್ತಂಗಡಿ ಪೊಲೀಸರಿಂದ ಇಬ್ಬರ ವಿರುದ್ಧ ಪ್ರಕರಣ ದಾಖಲು

    ಉಜಿರೆ ಶ್ರೀ ಜನಾರ್ದನ ಸ್ವಾಮಿ ದೇವಸ್ಥಾನದ ವಿಜಯಗೋಪುರ ಲೋಕಾರ್ಪಣೆ, ಊರಿನ ಧಾರ್ಮಿಕ ಕ್ಷೇತ್ರಗಳನ್ನು ನೋಡಿದಾಗ ಊರಿನ ಸ್ಥಿತಿಯನ್ನು ಅರಿಯಬಹುದು: ಡಾ.ಹೆಗ್ಗಡೆ

    • By admin
    • March 5, 2026
    • 23 views
    ಉಜಿರೆ ಶ್ರೀ ಜನಾರ್ದನ ಸ್ವಾಮಿ ದೇವಸ್ಥಾನದ ವಿಜಯಗೋಪುರ ಲೋಕಾರ್ಪಣೆ,  ಊರಿನ ಧಾರ್ಮಿಕ ಕ್ಷೇತ್ರಗಳನ್ನು ನೋಡಿದಾಗ ಊರಿನ ಸ್ಥಿತಿಯನ್ನು ಅರಿಯಬಹುದು: ಡಾ.ಹೆಗ್ಗಡೆ

    ರಾಜಸ್ಥಾನದಲ್ಲಿ ಅಖಿಲ ಭಾರತ ಮಟ್ಟದ ಬೈಠಕ್

    • By admin
    • March 5, 2026
    • 15 views
    ರಾಜಸ್ಥಾನದಲ್ಲಿ ಅಖಿಲ ಭಾರತ ಮಟ್ಟದ ಬೈಠಕ್

    ಕಡಿರುದ್ಯಾವರ ಗ್ರಾಮದ ಕುಕ್ಕುದಡಿಯಲ್ಲಿ ಸೇತುವೆ ಸಹಿತ ಕಿಂಡಿ ಅಣೆಕಟ್ಟು ನಿರ್ಮಾಣಕ್ಕೆ ರೂ.1.00 ಕೋಟಿ ಅನುದಾನ– ಶಾಸಕ ಹರೀಶ್ ಪೂಂಜ

    • By admin
    • March 4, 2026
    • 20 views
    ಕಡಿರುದ್ಯಾವರ ಗ್ರಾಮದ ಕುಕ್ಕುದಡಿಯಲ್ಲಿ ಸೇತುವೆ ಸಹಿತ ಕಿಂಡಿ ಅಣೆಕಟ್ಟು ನಿರ್ಮಾಣಕ್ಕೆ ರೂ.1.00 ಕೋಟಿ ಅನುದಾನ– ಶಾಸಕ ಹರೀಶ್ ಪೂಂಜ