ರಾಜ್ಯ ರಸ್ತೆ ಸಾರಿಗೆ ನಿಗಮಗಳ ನೌಕರರ ಒಕ್ಕೂಟದಿಂದ ನವೆಂಬರ್ 05 ರಂದು ಬೃಹತ್ ಪ್ರತಿಭಟನೆ ಸಾಧ್ಯತೆ!

ಬೆಂಗಳೂರು: ರಾಜ್ಯ ರಸ್ತೆ ಸಾರಿಗೆ ನಿಗಮಗಳ ನೌಕರರ ಫೆಡರೇಷನ್ (ಸಿಐಟಿಯು) ನೇತೃತ್ವದಲ್ಲಿ ಸ್ವಾತಂತ್ರ ಉದ್ಯಾನದಲ್ಲಿ ನವೆಂಬರ್ 5ರಂದು ಪ್ರತಿಭಟನೆ ನಡೆಸುವ ಸಾಧ್ಯತೆಯಿದ್ದು, ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಸರ್ಕಾರದ ಮೇಲೆ ಒತ್ತಡ ಹಾಕಲು ಸಾರಿಗೆ ನೌಕರರು ಪ್ರತಿಭಟನೆ ನಡೆಸಲಿದ್ದಾರೆ. ನೌಕರರ ಪ್ರತಿಭಟನೆಯಿಂದಾಗಿ ಬಸ್ ಸಂಚಾರಕ್ಕೆ ತೊಂದರೆ ಉಂಟಾಗುವ ಸಾಧ್ಯತೆ ಇದೆ.

ಕೋವಿಡ್‌ನಿಂದ ಮೃತಪಟ್ಟ ಸಾರಿಗೆ ನೌಕರರ ಕುಟುಂಬಕ್ಕೆ 30 ಲಕ್ಷ ರೂ. ಪರಿಹಾರ ನೀಡಬೇಕು ಎಂಬುವುದು ಪ್ರಮುಖ ಬೇಡಿಕೆಯಾಗಿದೆ.

ಲಾಕ್ ಡೌನ್ ಬಳಿಕ ಸಾರಿಗೆ ನೌಕರರು ಕರ್ತವ್ಯಕ್ಕೆ ವಾಪಸ್ ಆಗಿದ್ದು ಪರಿಪೂರ್ಣ ಪ್ರಮಾಣದ ಕೆಲಸ ಅವರಿಗೆ ಸಿಗುತ್ತಿಲ್ಲ. ಒಂದು ವೇಳೆ ಕೆಲಸ ಬೇಕಾದರೆ ಘಟಕದ ಅಧಿಕಾರಿಗಳಿಗೆ ಲಂಚ ನೀಡಬೇಕು ಎಂದು ನೌಕರರು ಆರೋಪಿಸಿದ್ದಾರೆ.

ಲಾಕ್ ಡೌನ್ ಅವಧಿಯಲ್ಲಿ ವೇತನ ನೀಡುವುದಕ್ಕೆ ನೌಕರರ ರಜೆ ಕಡಿತಗೊಳಿಸಲಾಗಿದೆ. ಹಲವು ಭತ್ಯೆಗಳನ್ನು ರದ್ದು ಮಾಡಲಾಗಿದೆ ಎಂದು ನೌಕರರು ಆರೋಪ ಮಾಡಿದ್ದಾರೆ.

ಕೋವಿಡ್‌ನಿಂದಾಗಿ ಸಾರಿಗೆ ನೌಕರರು ಮೃತಪಟ್ಟರೆ 30 ಲಕ್ಷ ರೂ. ನೀಡುವುದಾಗಿ ಈ ಹಿಂದೆ ಸಾರಿಗೆ ಸಚಿವ ಲಕ್ಷ್ಮಣ ಸವದಿ ಘೋಷಣೆ ಮಾಡಿದ್ದರು. ಇದುವರೆಗೆ ಅದನ್ನು ನೀಡಲು ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ನೌಕರರು ದೂರಿದ್ದಾರೆ.

ರಾಜ್ಯ ರಸ್ತೆ ಸಾರಿಗೆ ನಿಗಮಗಳ ನೌಕರರ ಫೆಡರೇಷನ್ ಕರೆ ನೀಡಿರುವ ಪ್ರತಿಭಟನೆಯಲ್ಲಿ ಬಿಎಂಟಿಸಿ, ಕೆಎಸ್‌ಆರ್‌ಟಿಸಿ ನೌಕರರು ಪಾಲ್ಗೊಳ್ಳುವ ಸಾಧ್ಯತೆ ಇದ್ದು, ಇದರಿಂದಾಗಿ ಬಸ್ ಸಂಚಾರದಲ್ಲಿ ವ್ಯತ್ಯಯ ಉಂಟಾಗುವ ಸಾಧ್ಯತೆ ಇದೆ.

Spread the love
  • Related Posts

    ಬೆಳ್ತಂಗಡಿ: ‘ಡ್ರಗ್ಸ್ ಮುಕ್ತ ಬೆಳ್ತಂಗಡಿ’ ಜಾಗೃತಿ ಅಭಿಯಾನಕ್ಕೆ ಯುವ ಕಾಂಗ್ರೆಸ್ ಚಾಲನೆ

    ಬೆಳ್ತಂಗಡಿ:ಮಾದಕ ವಸ್ತುಗಳ ದುಷ್ಪರಿಣಾಮಗಳ ಕುರಿತು ಯುವಜನರಲ್ಲಿ ಜಾಗೃತಿ ಮೂಡಿಸುವ ಹಾಗೂ ಬೆಳ್ತಂಗಡಿ ತಾಲೂಕನ್ನು ಮಾದಕ ವಸ್ತು ಮುಕ್ತಗೊಳಿಸುವ ಉದ್ದೇಶದಿಂದ ಯುವ ಕಾಂಗ್ರೆಸ್ ಬೆಳ್ತಂಗಡಿ ವತಿಯಿಂದ ‘ಡ್ರಗ್ಸ್ ಮುಕ್ತ ಬೆಳ್ತಂಗಡಿ’ ಜಾಗೃತಿ ಅಭಿಯಾನ ಹಮ್ಮಿಕೊಳ್ಳಲಾಗಿದೆ. “ನಶೆ ಬೇಡ… ನಾಳೆಯ ಭವಿಷ್ಯ ಬೇಕು” ಹಾಗೂ…

    Spread the love

    ಚಾರ್ಮಾಡಿ ಘಾಟಿಯಲ್ಲಿ ನಿರಂತರವಾಗಿ ಕಾಣಿಸಿಕೊಳ್ಳುತ್ತಿರುವ ಏಕದಂತ

    ಬೆಳ್ತಂಗಡಿ: ಚಾರ್ಮಾಡಿ ಘಾಟಿಯಲ್ಲಿ ಭಾನುವಾರ ರಾತ್ರಿ ಮತ್ತೆ ದೈತ್ಯ ಗಾತ್ರದ ಕಾಡಾನೆ ಕಂಡುಬಂದಿದೆ. ಘಾಟಿ ಭಾಗದಲ್ಲಿ ಆಗಾಗ ಕಾಣಸಿಗುವ ಈ ಕಾಡಾನೆ ರಸ್ತೆ ಬದಿ ನಿಂತಿದ್ದು ವಾಹನ ಸಂಚಾರಕ್ಕೆ ವ್ಯತ್ಯಯ ಉಂಟಾಗಿದೆ. ಸ್ಥಳಕ್ಕೆ ಅರಣ್ಯ ಇಲಾಖೆ ಸಿಬ್ಬಂದಿ ತೆರಳಿದ್ದು ಕಾಡಾನೆಯನ್ನು ಕಾಡಿಗಟ್ಟುವ…

    Spread the love

    You Missed

    ಬೆಳ್ತಂಗಡಿ: ‘ಡ್ರಗ್ಸ್ ಮುಕ್ತ ಬೆಳ್ತಂಗಡಿ’ ಜಾಗೃತಿ ಅಭಿಯಾನಕ್ಕೆ ಯುವ ಕಾಂಗ್ರೆಸ್ ಚಾಲನೆ

    • By admin
    • August 10, 2026
    • 4 views
    ಬೆಳ್ತಂಗಡಿ: ‘ಡ್ರಗ್ಸ್ ಮುಕ್ತ ಬೆಳ್ತಂಗಡಿ’ ಜಾಗೃತಿ ಅಭಿಯಾನಕ್ಕೆ ಯುವ ಕಾಂಗ್ರೆಸ್ ಚಾಲನೆ

    ಚಾರ್ಮಾಡಿ ಘಾಟಿಯಲ್ಲಿ ನಿರಂತರವಾಗಿ ಕಾಣಿಸಿಕೊಳ್ಳುತ್ತಿರುವ ಏಕದಂತ

    • By admin
    • August 10, 2026
    • 7 views
    ಚಾರ್ಮಾಡಿ ಘಾಟಿಯಲ್ಲಿ ನಿರಂತರವಾಗಿ ಕಾಣಿಸಿಕೊಳ್ಳುತ್ತಿರುವ ಏಕದಂತ

    ಪಶ್ಚಿಮ ಘಟ್ಟದ ಪ್ರಕೃತಿ ಮಡಿಲಿನ ‘ನೇತ್ರಾವತಿ ಹೋಂ ಸ್ಟೇ’ – ಪ್ರವಾಸಿಗರಿಗಾಗಿ ಪರಿಪೂರ್ಣ ತಾಣ

    • By admin
    • August 9, 2026
    • 6 views

    ಬೆಳ್ತಂಗಡಿ: ಅನಾರೋಗ್ಯದಿಂದ ಬಳಲುತ್ತಿರುವ 2 ತಿಂಗಳ ಮಗುವಿನ ಚಿಕಿತ್ಸೆಗೆ ಸಹೃದಯಿಗಳ ತುರ್ತು ನೆರವಿನ ಹಸ್ತ ಅಗತ್ಯ

    • By admin
    • August 8, 2026
    • 12 views
    ಬೆಳ್ತಂಗಡಿ: ಅನಾರೋಗ್ಯದಿಂದ ಬಳಲುತ್ತಿರುವ 2 ತಿಂಗಳ ಮಗುವಿನ ಚಿಕಿತ್ಸೆಗೆ ಸಹೃದಯಿಗಳ ತುರ್ತು ನೆರವಿನ ಹಸ್ತ ಅಗತ್ಯ

    “ಬೆಳಾಲು ಶ್ರೀ ಧ.ಮಂ. ಪ್ರೌಢಶಾಲೆಯಲ್ಲಿ ಪರಿಸರ ಜಾಗೃತಿ ಕಾರ್ಯಕ್ರಮ: ವಿದ್ಯಾರ್ಥಿಗಳಲ್ಲಿ ಪರಿಸರ ಕಾಳಜಿ ಬೆಳೆಸಿದ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ”

    • By admin
    • August 8, 2026
    • 9 views
    “ಬೆಳಾಲು ಶ್ರೀ ಧ.ಮಂ. ಪ್ರೌಢಶಾಲೆಯಲ್ಲಿ ಪರಿಸರ ಜಾಗೃತಿ ಕಾರ್ಯಕ್ರಮ: ವಿದ್ಯಾರ್ಥಿಗಳಲ್ಲಿ ಪರಿಸರ ಕಾಳಜಿ ಬೆಳೆಸಿದ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ”

    ಭಾರಿ ಮಳೆ ಹಿನ್ನೆಲೆ: ಪುತ್ತೂರು ಉಪವಿಭಾಗದ ವ್ಯಾಪ್ತಿಯ ಶಾಲಾ-ಕಾಲೇಜುಗಳಿಗೆ ನಾಳೆ ರಜೆ ಘೋಷಣೆ

    • By admin
    • August 7, 2026
    • 12 views
    ಭಾರಿ ಮಳೆ ಹಿನ್ನೆಲೆ: ಪುತ್ತೂರು ಉಪವಿಭಾಗದ ವ್ಯಾಪ್ತಿಯ ಶಾಲಾ-ಕಾಲೇಜುಗಳಿಗೆ ನಾಳೆ ರಜೆ ಘೋಷಣೆ